Homeಚಳವಳಿಜನರ ಉಸಿರಾಗಿರುವ ಹಸಿರು ’ನಲ್ಲಮಲ’ ಕಾಡಿನ ಮೇಲೆ ಕೇಂದ್ರ, ರಾಜ್ಯ ಸರ್ಕಾರದ ಕೆಂಗಣ್ಣು..

ಜನರ ಉಸಿರಾಗಿರುವ ಹಸಿರು ’ನಲ್ಲಮಲ’ ಕಾಡಿನ ಮೇಲೆ ಕೇಂದ್ರ, ರಾಜ್ಯ ಸರ್ಕಾರದ ಕೆಂಗಣ್ಣು..

- Advertisement -
- Advertisement -

‘ನಲ್ಲಮಲ’ ಒಂದು ಕಾಡಿನ ಹೆಸರು. ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ ಉಸಿರಿನಂತಿರುವ ಹಸಿರ ಹೊದಿಕೆಯ ದಟ್ಟಾರಣ್ಯ ಇದು. ಇಲ್ಲಿ ವಿವಿಧ ಬುಡಕಟ್ಟು ಜನಾಂಗಗಳು ಈಗಲೂ ಸಹ ತಮ್ಮ ಜೀವನವನ್ನ ಸಾಗಿಸುತ್ತಾ ಬಂದಿದ್ದಾರೆ. ಚೆಂಚು ಎಂಬ ಬುಡಕಟ್ಟು ಜನಾಂಗ ಇಲ್ಲಿ ತಲೆ ತಲೆಮಾರುಗಳಿಂದ ಜೀವಿಸುತ್ತಾ ಬಂದಿದ್ದಾರೆ. ಸದಾ ಹಚ್ಚ ಹಸಿರಿನಿಂದ ಕೂಡಿರುವ ಈ ಕಾಡು ಎರಡು ರಾಜ್ಯಗಳ ಮಳೆ, ಬೆಳೆ ಮತ್ತು ವಾತಾವರಣ ಸಮತೋಲನಕ್ಕೆ ಪ್ರಮುಖ ಪಾತ್ರವಹಿಸುತ್ತದೆ.

ನಲ್ಲಮಲ ಕಾಡು ಜೀವಜಂತುಗಳ ವೈವಿಧ್ಯತೆಯಿಂದ ಕೂಡಿದ್ದು ಇಲ್ಲಿ 600ಕ್ಕೂ ವಿವಿಧ ಜಾತಿಯ ಮರಗಳು, 300 ರೀತಿಯ ಪಕ್ಷಿಗಳು, ವಿಶೇಷವಾಗಿ ವಿನಾಶದ ಅಂಚಿನಲ್ಲಿರುವ ಹುಲಿಗಳು, ಚಿರತೆ, ಆನೆ, ಕೃಷ್ಣಮೃಗ, ಮುಂತಾದ 70ಕ್ಕೂ ಅಧಿಕ ಜಾತಿಯ ಪ್ರಾಣಿಗಳು ಇಲ್ಲಿವೆ. ಇಂತಹ ಜೀವ ವೈವಿಧ್ಯತೆಯ ತಾಣಕ್ಕೆ ಈಗ ಗಂಡಾಂತರ ಬಂದೊದಗಿದೆ. ಅದೇನೆಂದರೆ ನಲ್ಲಮಲ ಕಾಡಿನಲ್ಲಿ ಯುರೇನಿಯಂ ಇದೆಯೆಂದು ಕೆಲವು ಸಂಶೋಧನೆಗಳಿಂದ ತಿಳಿದು ಬಂದಿದ್ದು, ಇಲ್ಲಿ ಕೇಂದ್ರ ಸರ್ಕಾರ ರಾಜ್ಯಸರ್ಕಾರದ ಸಹಕಾರದೊಂದಿಗೆ ಯುರೇನಿಯಂ ಗಣಿಗಾರಿಕೆಯನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ.

ಜಗತ್ತನ್ನೆ ನಾಶ ಮಾಡಲು ಶಕ್ತಿಯುಳ್ಳ ಅಣು ಬಾಂಬ್ ತಯಾರಿಕೆಯಲ್ಲಿ ಬಳಸುವ ‘ಯುರೇನಿಯಂ’ ನಲ್ಲಮಲ ಕಾಡಿನಲ್ಲಿ ಸಿಗಲಿದೆ ಎಂದಿದ್ದೆ ತಡ ಹಿಂದೆ ಮುಂದೆ ನೋಡದೆ ಕೇಂದ್ರ ಮತ್ತು ತೆಲಂಗಾಣ ರಾಜ್ಯ ಸರ್ಕಾರ ಕಾಡನ್ನು ಬಗೆಯಲು ವಿವೇಚನ ರಹಿತವಾಗಿ ಹೊರಟಿವೆ. ಇದನ್ನು ಸ್ಥಳೀಯ ಜನಪರ ಹೋರಾಟಗಾರರು ಮತ್ತು ಪ್ರಜ್ಞಾವಂತರು ತೀವ್ರವಾಗಿ ಖಂಡಿಸುತ್ತಿದ್ದಾರೆ. ರಾಜ್ಯ ಸರ್ಕಾರ ಸ್ವಲ್ಫ ಹಿಂದೇಟು ಹಾಕುತ್ತಿದ್ದರು ಸಹ ಕೇಂದ್ರ ಸರ್ಕಾರ ಸ್ಥಳೀಯ ಗ್ರಾಮಪಂಚಾಯಿತಿಯ ಅನುಮತಿ ಪಡೆಯದೆ ‘ಯುರೇನಿಯಂ ಕಾರ್ಪೋರೇಷನ್’ (ಯು.ಸಿ.ಎಲ್) ಗೆ ಅನುಮತಿ ನೀಡಿ ಗಣಿಗಾರಿಕೆ ಶುರು ಮಾಡುವ ಆತುರದಲ್ಲಿದೆ. ಮೇಲ್ನೋಟಕ್ಕೆ ಇದನ್ನು ವಿರೋಧಿಸುವಂತೆ ಮಾತನಾಡುವ ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಸರ್ಕಾರ, ಕೇಂದ್ರ ಸರ್ಕಾರ ಮಾಡುತ್ತಿರುವ ಕೆಲಸಕ್ಕೆ ಯಾವುದೇ ವಿರೋಧ ವ್ಯಕ್ತಪಡಿಸುತ್ತಿಲ್ಲ.

ಯುರೇನಿಯಂನ್ನು ಇತ್ತಿಚಿಗೆ ಅಣು ವಿದ್ಯುತ್ ಉತ್ಪಾದನೆಗೂ ಬಳಸುತ್ತಾರೆ. ಇದು ಬಹಳ ಅಪಾಯಕಾರಿಯಾದ ಖನಿಜವಾಗಿದೆ. ಇದನ್ನು ಸರಿಯಾಗಿ ನಿವರ್ಹಣೆ ಮಾಡದೆ ಹೋದರೆ ಈ ಗಣಿಗಾರಿಕೆ ನಡೆಯುವ ಸುತ್ತಲಿನ ಪ್ರದೇಶ ವಿಷಮಯವಾಗುವ ಎಲ್ಲಾ ಸಾಧ್ಯತೆ ಇದೆ. ಯುರೇನಿಯಂನ್ನು ಇಂಧನವಾಗಿ ಬಳಸುವ ಅಣು ವಿದ್ಯುತ್ ಕೇಂದ್ರಗಳು ಅವಘಡಗಳಾಗಿ ಸ್ಫೋಟಗಳ್ಳದೆ ಇರುವ ಸಮಯದಲ್ಲೂ ಸಹ ಅಣು ವಿದ್ಯುತ್ ಕೇಂದ್ರದ ಮೂಲಕ ಅಲ್ಫಾ, ಬೀಟಾ, ಗಾಮಾ ವಿಕಿರಣಗಳು ಹೋರಸೂಸುತ್ತಲೇ ಇರುತ್ತವೆ. ಕ್ಯಾನ್ಸರ್ ಮತ್ತು ತಲೆಮಾರುಗಳವರೆಗೂ ವಿವಿಧ ಅಂಗ ವೈಕಲ್ಯ ಸೃಷ್ಟಿಸುವ ಅಪಾಯ ಇದರಿಂದಾಗುತ್ತದೆ.

ಇಪ್ಪತ್ತು ಮೂವತ್ತು ವರ್ಷ ಮಾತ್ರ ಇರುವ ಯುರೇನಿಯಂ ಅನ್ನು ಬಳಸಬಹುದು ನಂತರ ಅವು ಕೆಲಸಕ್ಕೆ ಬರೆದೆ ಹೋಗುತ್ತವೆ. ತದ ನಂತರವು ಅವು ಹೊರ ಸೂಸುವ ಕಿರಣಗಳಿಂದ ಅತ್ಯಂತ ಘೋರವಾದ ಪರಿಸರ ಮತ್ತು ಜೀವ ನಾಶವಾಗಲಿದೆ. ಇದೇ ಭಾಗದಲ್ಲಿ ಕೃಷ್ಣಾನದಿ, ಶ್ರೀ ಶೈಲಂ, ನಾಗಾರ್ಜುನ ಸಾಗರ ಜಲಾಶಯಗಳು ಇವೆ. ಇಲ್ಲಿಂದ  ಕುಡಿಯಲು ಮತ್ತು ಬೆಳೆಯಲು ಈ ನೀರನ್ನು ಬಳಸುವುದರಿಂದ ಸ್ವಲ್ಫ ಹೆಚ್ಚುಕಮ್ಮಿ ಆದರೂ ಸಹ ವಿಕಿರಣಗಳು ಈ ನೀರಿನಲ್ಲಿ ಸೇರಿದರೆ ಜನಸಾಮಾನ್ಯರು ಮತ್ತು ಜೀವ ಸಂಕುಲಕ್ಕೆ ಕುತ್ತು ಬರಲಿದೆ.

ಈಗ ಸರ್ಕಾರದ ಮುಂದೆ ಇರುವ ಪ್ರಶ್ನೆ ಅಪಾಯಕಾರಿ ಖನಿಜವನ್ನು ಬಳಸಿ ವಿದ್ಯುತ್ ಉತ್ಫಾದನೆ ಮಾಡುವ ಅವಶ್ಯಕತೆಯಾದರೂ ಎನಿದೆ? ಈಗಾಗಲೆ ನಮ್ಮಲ್ಲಿ ಸೌರ ಮತ್ತು ಪವನ ವಿದ್ಯುತ್ ಅತ್ಯಂತ ಯಶಸ್ವಿಯಾಗಿ ಉತ್ಫಾದನೆ ಮಾಡಲಾಗುತ್ತಿದೆ. ಇಂತಹ ಮರುಬಳಕೆಯ ಸಂಪನ್ಮೂಲವನ್ನು ಬಳಸಿ ವಿದ್ಯುತ್ ಉತ್ಫಾದನೆ ಮಾಡುವುದನ್ನು ಬಿಟ್ಟು ಯುರೇನಿಯಂನ್ನು ಬಳಸಿ ಅಣು ವಿದ್ಯುತ್ ಅನ್ನೇ ಉತ್ಫಾದಿಸುತ್ತೆವೆ ಎಂಬ ಸರ್ಕಾರದ ಹುನ್ನಾರವೇನು? ಇದು ಬರಿ ಅಣು ವಿದ್ಯುತ್‌ಗೆ ನಿಲ್ಲದೇ ಅಣುಬಾಂಬ್ ತಯಾರಿಕೆಯವರೆಗೂ ವಿಸ್ತರಿಸುವ ಸಾಧ್ಯತೆ ಹೆಚ್ಚಿದೆ. ಈ ರೀತಿಯ ನಡೆಗಳು ಮುಂದುವರೆದ ದೇಶಗಳೆನಿಸಿಕೊಂಡ ಅಮೆರಿಕಾ, ಕೆನಡಾ, ಇಂಗ್ಲೆಂಡ್, ಫ್ರಾನ್ಸ್ ಮುಂತಾದ ದೇಶಗಳ ಪ್ರಯತ್ನಗಳ ವಿರುದ್ಧ ಅಲ್ಲಿನ ಜನಸಾಮಾನ್ಯರು ಬೃಹತ್‍ಮಟ್ಟದ ಹೋರಾಟಗಳನ್ನು ಮಾಡಿ ಬೀದಿಯಲ್ಲಿ ಪ್ರತಿಭಟಿಸಿದ್ದಾರೆ.

ಇಪ್ಪತ್ತು ಸಾವಿರ ಟನ್ನುನಷ್ಟು ಯುರೇನಿಯಂ ಇರಬಹುದೆಂದು ಅಂದಾಜು ಮಾಡಲಾಗಿದೆ. ಇದನ್ನು ತೆಗೆಯಲು ಅನುಕೂಲವಾಗುವಂತೆ ಸುಮಾರು ನಾಲ್ಕು ಸಾವಿರ ಬೋರ್‍ವೆಲ್‍ಗಳನ್ನು ಕೊರೆಯಬೇಕಾಗುತ್ತದೆ ಎನ್ನಲಾಗುತ್ತಿದೆ. 2030ರ ಹೊತ್ತಿಗೆ 40ಸಾವಿರ ಮೆಗಾವ್ಯಾಟ್‌ಗಳ ಅಣುವಿದ್ಯುತ್ ಉತ್ಫಾದನೆ ಮಾಡಬೇಕೆಂಬ ಗುರಿ ಇಟ್ಟುಕೊಳ್ಳಲಾಗಿದ್ದು, ಸರ್ಕಾರ ಮಾಡುತ್ತಿರುವ ಆತುರಕ್ಕೆ ಬಹುರಾಷ್ಟ್ರಿಯ ಕಂಪನಿಗೆಳ ಒತ್ತಡ ಕಾರಣವಾಗಿದೆ ಎಂದು ಕೆಲವು ಜನಪರ ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ರಾಜ್ಯ ಸಚಿವ ಕೆಟಿಆರ್ ಸಂಪುಟದಲ್ಲಿ ‘ನಲ್ಲಮಲ’ ಯರೇನಿಯಂ ಗಣಿ ಯೋಜನೆಗೆ ವಿರುದ್ಧವಾಗಿ ಬಿಲ್ ಮಂಡಿಸಿದ್ದಾರೆ. ಮತ್ತು ಸಿನೆಮಾ ನಿರ್ದೇಶಕ ಪೂರಿ ಜಗನ್ನಾತ್, ನಟ ಪವನ್ ಕಲ್ಯಾಣ್, ವಿಜಯ್ ದೇವರಕೊಂಡ, ನಟಿ ಸಮಂತ ಮತ್ತಿತರರು ಕೂಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಯೋಜನೆಯನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ಧಾರೆ. ಈ ಟ್ವಿಟ್ಟರ್‍ ಅಭಿಯಾನವನ್ನು ಡಿವೈಎಫ್‍ಐ ಸಂಘಟನೆ ಫ್ರಾರಂಬಿಸಿದ್ದು ಟ್ರೆಂಡ್ ಆಗಿತ್ತು.

ಬೆಲ್ಲ ಇದ್ದ ಕಡೆ ಇರುವೆಯ ಜಾಡು ಮೂಡುವ ಹಾಗೆ ಬಹುರಾಷ್ಟ್ರೀಯ ಕಂಪನಿಗಳು ಸದಾ ನೈಸರ್ಗಿಕ ಸಂಪನ್ಮೂಲಗಳಿರುವ ಕಡೆ ಕಣ್ಣು ಹಾಕಿರುತ್ತಾರೆ. ಅವರಿಗೆ ಪೂರಕವಾದ ಸರ್ಕಾರಗಳಿದ್ದರಂತು ಮುಗಿದೆ ಹೋಯಿತು. ಕಡಿಮೆ ಸಮಯದಲ್ಲಿ ಹೆಚ್ಚು ತಿಂದು ತೇಗಲು ಬೇಕಾದ ವಾತಾವರಣ ರೂಪಿಸಿಕೊಂಡು ಕಾರ್ಯಕ್ಕಿಳಿಯುತ್ತವೆ. ಇತ್ತಿಚಿಗೆ ಅಮೇಜಾನ್ ಕಾಡು ಮನುಷ್ಯನ ದುರಂಹಾಕರಕ್ಕೆ ಹೊತ್ತಿ ಉರಿದ ಹಾಗೆ ನಲ್ಲಮಲ ಕಾಡು ಮನುಷ್ಯನ ದುರಾಸೆಗೆ ಬಲಿಯಾಗದೆ ಇರಲಿ. ಅಲ್ಲಿನ ಮೂಲ ನಿವಾಸಿಗಳಾದ ‘ಚೆಂಚು’, ’ಕೋಯಾ’ ಬುಡಕಟ್ಟು ಜನಾಂಗಗಳು ಇದುವರೆಗೂ ಆ ಕಾಡನ್ನು ನಾಶವಾಗದೆ ಕಾಪಾಡಿಕೊಂಡು ಬಂದಿದ್ಧಾರೆ. ಸರ್ಕಾರದ ಈ ಆತುರದ ತೀರ್ಮಾನಗಳಿಂದ ಈ ಜನಾಂಗ ನಾಶವಾಗದಂತೆ ಕಪಾಡಿಕೊಳ್ಳಬೇಕಾಗಿದೆ.

ಅದಕ್ಕಾಗಿ ನಲ್ಲಮಲ್ಲ ಕಾಡು ಉಳಿಸಲು ನಡೆಸುತ್ತಿರುವ ಹೋರಾಟ ಮತ್ತಷ್ಟು ದೃಢಗೊಳ್ಳಬೇಕಿದೆ. ಬೀದಿಯಲ್ಲಿ ನಡೆಯುವ ಹೋರಾಟಕ್ಕೆ ಸಿನಿಮಾ ತಾರೆಯರು ಜೊತೆಗೂಡಬೇಕಿದೆ ಮತ್ತು ನಾವೆಲ್ಲರೂ ಬೆಂಬಲಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...