Homeಚಳವಳಿಜನರ ಉಸಿರಾಗಿರುವ ಹಸಿರು ’ನಲ್ಲಮಲ’ ಕಾಡಿನ ಮೇಲೆ ಕೇಂದ್ರ, ರಾಜ್ಯ ಸರ್ಕಾರದ ಕೆಂಗಣ್ಣು..

ಜನರ ಉಸಿರಾಗಿರುವ ಹಸಿರು ’ನಲ್ಲಮಲ’ ಕಾಡಿನ ಮೇಲೆ ಕೇಂದ್ರ, ರಾಜ್ಯ ಸರ್ಕಾರದ ಕೆಂಗಣ್ಣು..

- Advertisement -
- Advertisement -

‘ನಲ್ಲಮಲ’ ಒಂದು ಕಾಡಿನ ಹೆಸರು. ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ ಉಸಿರಿನಂತಿರುವ ಹಸಿರ ಹೊದಿಕೆಯ ದಟ್ಟಾರಣ್ಯ ಇದು. ಇಲ್ಲಿ ವಿವಿಧ ಬುಡಕಟ್ಟು ಜನಾಂಗಗಳು ಈಗಲೂ ಸಹ ತಮ್ಮ ಜೀವನವನ್ನ ಸಾಗಿಸುತ್ತಾ ಬಂದಿದ್ದಾರೆ. ಚೆಂಚು ಎಂಬ ಬುಡಕಟ್ಟು ಜನಾಂಗ ಇಲ್ಲಿ ತಲೆ ತಲೆಮಾರುಗಳಿಂದ ಜೀವಿಸುತ್ತಾ ಬಂದಿದ್ದಾರೆ. ಸದಾ ಹಚ್ಚ ಹಸಿರಿನಿಂದ ಕೂಡಿರುವ ಈ ಕಾಡು ಎರಡು ರಾಜ್ಯಗಳ ಮಳೆ, ಬೆಳೆ ಮತ್ತು ವಾತಾವರಣ ಸಮತೋಲನಕ್ಕೆ ಪ್ರಮುಖ ಪಾತ್ರವಹಿಸುತ್ತದೆ.

ನಲ್ಲಮಲ ಕಾಡು ಜೀವಜಂತುಗಳ ವೈವಿಧ್ಯತೆಯಿಂದ ಕೂಡಿದ್ದು ಇಲ್ಲಿ 600ಕ್ಕೂ ವಿವಿಧ ಜಾತಿಯ ಮರಗಳು, 300 ರೀತಿಯ ಪಕ್ಷಿಗಳು, ವಿಶೇಷವಾಗಿ ವಿನಾಶದ ಅಂಚಿನಲ್ಲಿರುವ ಹುಲಿಗಳು, ಚಿರತೆ, ಆನೆ, ಕೃಷ್ಣಮೃಗ, ಮುಂತಾದ 70ಕ್ಕೂ ಅಧಿಕ ಜಾತಿಯ ಪ್ರಾಣಿಗಳು ಇಲ್ಲಿವೆ. ಇಂತಹ ಜೀವ ವೈವಿಧ್ಯತೆಯ ತಾಣಕ್ಕೆ ಈಗ ಗಂಡಾಂತರ ಬಂದೊದಗಿದೆ. ಅದೇನೆಂದರೆ ನಲ್ಲಮಲ ಕಾಡಿನಲ್ಲಿ ಯುರೇನಿಯಂ ಇದೆಯೆಂದು ಕೆಲವು ಸಂಶೋಧನೆಗಳಿಂದ ತಿಳಿದು ಬಂದಿದ್ದು, ಇಲ್ಲಿ ಕೇಂದ್ರ ಸರ್ಕಾರ ರಾಜ್ಯಸರ್ಕಾರದ ಸಹಕಾರದೊಂದಿಗೆ ಯುರೇನಿಯಂ ಗಣಿಗಾರಿಕೆಯನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ.

ಜಗತ್ತನ್ನೆ ನಾಶ ಮಾಡಲು ಶಕ್ತಿಯುಳ್ಳ ಅಣು ಬಾಂಬ್ ತಯಾರಿಕೆಯಲ್ಲಿ ಬಳಸುವ ‘ಯುರೇನಿಯಂ’ ನಲ್ಲಮಲ ಕಾಡಿನಲ್ಲಿ ಸಿಗಲಿದೆ ಎಂದಿದ್ದೆ ತಡ ಹಿಂದೆ ಮುಂದೆ ನೋಡದೆ ಕೇಂದ್ರ ಮತ್ತು ತೆಲಂಗಾಣ ರಾಜ್ಯ ಸರ್ಕಾರ ಕಾಡನ್ನು ಬಗೆಯಲು ವಿವೇಚನ ರಹಿತವಾಗಿ ಹೊರಟಿವೆ. ಇದನ್ನು ಸ್ಥಳೀಯ ಜನಪರ ಹೋರಾಟಗಾರರು ಮತ್ತು ಪ್ರಜ್ಞಾವಂತರು ತೀವ್ರವಾಗಿ ಖಂಡಿಸುತ್ತಿದ್ದಾರೆ. ರಾಜ್ಯ ಸರ್ಕಾರ ಸ್ವಲ್ಫ ಹಿಂದೇಟು ಹಾಕುತ್ತಿದ್ದರು ಸಹ ಕೇಂದ್ರ ಸರ್ಕಾರ ಸ್ಥಳೀಯ ಗ್ರಾಮಪಂಚಾಯಿತಿಯ ಅನುಮತಿ ಪಡೆಯದೆ ‘ಯುರೇನಿಯಂ ಕಾರ್ಪೋರೇಷನ್’ (ಯು.ಸಿ.ಎಲ್) ಗೆ ಅನುಮತಿ ನೀಡಿ ಗಣಿಗಾರಿಕೆ ಶುರು ಮಾಡುವ ಆತುರದಲ್ಲಿದೆ. ಮೇಲ್ನೋಟಕ್ಕೆ ಇದನ್ನು ವಿರೋಧಿಸುವಂತೆ ಮಾತನಾಡುವ ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಸರ್ಕಾರ, ಕೇಂದ್ರ ಸರ್ಕಾರ ಮಾಡುತ್ತಿರುವ ಕೆಲಸಕ್ಕೆ ಯಾವುದೇ ವಿರೋಧ ವ್ಯಕ್ತಪಡಿಸುತ್ತಿಲ್ಲ.

ಯುರೇನಿಯಂನ್ನು ಇತ್ತಿಚಿಗೆ ಅಣು ವಿದ್ಯುತ್ ಉತ್ಪಾದನೆಗೂ ಬಳಸುತ್ತಾರೆ. ಇದು ಬಹಳ ಅಪಾಯಕಾರಿಯಾದ ಖನಿಜವಾಗಿದೆ. ಇದನ್ನು ಸರಿಯಾಗಿ ನಿವರ್ಹಣೆ ಮಾಡದೆ ಹೋದರೆ ಈ ಗಣಿಗಾರಿಕೆ ನಡೆಯುವ ಸುತ್ತಲಿನ ಪ್ರದೇಶ ವಿಷಮಯವಾಗುವ ಎಲ್ಲಾ ಸಾಧ್ಯತೆ ಇದೆ. ಯುರೇನಿಯಂನ್ನು ಇಂಧನವಾಗಿ ಬಳಸುವ ಅಣು ವಿದ್ಯುತ್ ಕೇಂದ್ರಗಳು ಅವಘಡಗಳಾಗಿ ಸ್ಫೋಟಗಳ್ಳದೆ ಇರುವ ಸಮಯದಲ್ಲೂ ಸಹ ಅಣು ವಿದ್ಯುತ್ ಕೇಂದ್ರದ ಮೂಲಕ ಅಲ್ಫಾ, ಬೀಟಾ, ಗಾಮಾ ವಿಕಿರಣಗಳು ಹೋರಸೂಸುತ್ತಲೇ ಇರುತ್ತವೆ. ಕ್ಯಾನ್ಸರ್ ಮತ್ತು ತಲೆಮಾರುಗಳವರೆಗೂ ವಿವಿಧ ಅಂಗ ವೈಕಲ್ಯ ಸೃಷ್ಟಿಸುವ ಅಪಾಯ ಇದರಿಂದಾಗುತ್ತದೆ.

ಇಪ್ಪತ್ತು ಮೂವತ್ತು ವರ್ಷ ಮಾತ್ರ ಇರುವ ಯುರೇನಿಯಂ ಅನ್ನು ಬಳಸಬಹುದು ನಂತರ ಅವು ಕೆಲಸಕ್ಕೆ ಬರೆದೆ ಹೋಗುತ್ತವೆ. ತದ ನಂತರವು ಅವು ಹೊರ ಸೂಸುವ ಕಿರಣಗಳಿಂದ ಅತ್ಯಂತ ಘೋರವಾದ ಪರಿಸರ ಮತ್ತು ಜೀವ ನಾಶವಾಗಲಿದೆ. ಇದೇ ಭಾಗದಲ್ಲಿ ಕೃಷ್ಣಾನದಿ, ಶ್ರೀ ಶೈಲಂ, ನಾಗಾರ್ಜುನ ಸಾಗರ ಜಲಾಶಯಗಳು ಇವೆ. ಇಲ್ಲಿಂದ  ಕುಡಿಯಲು ಮತ್ತು ಬೆಳೆಯಲು ಈ ನೀರನ್ನು ಬಳಸುವುದರಿಂದ ಸ್ವಲ್ಫ ಹೆಚ್ಚುಕಮ್ಮಿ ಆದರೂ ಸಹ ವಿಕಿರಣಗಳು ಈ ನೀರಿನಲ್ಲಿ ಸೇರಿದರೆ ಜನಸಾಮಾನ್ಯರು ಮತ್ತು ಜೀವ ಸಂಕುಲಕ್ಕೆ ಕುತ್ತು ಬರಲಿದೆ.

ಈಗ ಸರ್ಕಾರದ ಮುಂದೆ ಇರುವ ಪ್ರಶ್ನೆ ಅಪಾಯಕಾರಿ ಖನಿಜವನ್ನು ಬಳಸಿ ವಿದ್ಯುತ್ ಉತ್ಫಾದನೆ ಮಾಡುವ ಅವಶ್ಯಕತೆಯಾದರೂ ಎನಿದೆ? ಈಗಾಗಲೆ ನಮ್ಮಲ್ಲಿ ಸೌರ ಮತ್ತು ಪವನ ವಿದ್ಯುತ್ ಅತ್ಯಂತ ಯಶಸ್ವಿಯಾಗಿ ಉತ್ಫಾದನೆ ಮಾಡಲಾಗುತ್ತಿದೆ. ಇಂತಹ ಮರುಬಳಕೆಯ ಸಂಪನ್ಮೂಲವನ್ನು ಬಳಸಿ ವಿದ್ಯುತ್ ಉತ್ಫಾದನೆ ಮಾಡುವುದನ್ನು ಬಿಟ್ಟು ಯುರೇನಿಯಂನ್ನು ಬಳಸಿ ಅಣು ವಿದ್ಯುತ್ ಅನ್ನೇ ಉತ್ಫಾದಿಸುತ್ತೆವೆ ಎಂಬ ಸರ್ಕಾರದ ಹುನ್ನಾರವೇನು? ಇದು ಬರಿ ಅಣು ವಿದ್ಯುತ್‌ಗೆ ನಿಲ್ಲದೇ ಅಣುಬಾಂಬ್ ತಯಾರಿಕೆಯವರೆಗೂ ವಿಸ್ತರಿಸುವ ಸಾಧ್ಯತೆ ಹೆಚ್ಚಿದೆ. ಈ ರೀತಿಯ ನಡೆಗಳು ಮುಂದುವರೆದ ದೇಶಗಳೆನಿಸಿಕೊಂಡ ಅಮೆರಿಕಾ, ಕೆನಡಾ, ಇಂಗ್ಲೆಂಡ್, ಫ್ರಾನ್ಸ್ ಮುಂತಾದ ದೇಶಗಳ ಪ್ರಯತ್ನಗಳ ವಿರುದ್ಧ ಅಲ್ಲಿನ ಜನಸಾಮಾನ್ಯರು ಬೃಹತ್‍ಮಟ್ಟದ ಹೋರಾಟಗಳನ್ನು ಮಾಡಿ ಬೀದಿಯಲ್ಲಿ ಪ್ರತಿಭಟಿಸಿದ್ದಾರೆ.

ಇಪ್ಪತ್ತು ಸಾವಿರ ಟನ್ನುನಷ್ಟು ಯುರೇನಿಯಂ ಇರಬಹುದೆಂದು ಅಂದಾಜು ಮಾಡಲಾಗಿದೆ. ಇದನ್ನು ತೆಗೆಯಲು ಅನುಕೂಲವಾಗುವಂತೆ ಸುಮಾರು ನಾಲ್ಕು ಸಾವಿರ ಬೋರ್‍ವೆಲ್‍ಗಳನ್ನು ಕೊರೆಯಬೇಕಾಗುತ್ತದೆ ಎನ್ನಲಾಗುತ್ತಿದೆ. 2030ರ ಹೊತ್ತಿಗೆ 40ಸಾವಿರ ಮೆಗಾವ್ಯಾಟ್‌ಗಳ ಅಣುವಿದ್ಯುತ್ ಉತ್ಫಾದನೆ ಮಾಡಬೇಕೆಂಬ ಗುರಿ ಇಟ್ಟುಕೊಳ್ಳಲಾಗಿದ್ದು, ಸರ್ಕಾರ ಮಾಡುತ್ತಿರುವ ಆತುರಕ್ಕೆ ಬಹುರಾಷ್ಟ್ರಿಯ ಕಂಪನಿಗೆಳ ಒತ್ತಡ ಕಾರಣವಾಗಿದೆ ಎಂದು ಕೆಲವು ಜನಪರ ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ರಾಜ್ಯ ಸಚಿವ ಕೆಟಿಆರ್ ಸಂಪುಟದಲ್ಲಿ ‘ನಲ್ಲಮಲ’ ಯರೇನಿಯಂ ಗಣಿ ಯೋಜನೆಗೆ ವಿರುದ್ಧವಾಗಿ ಬಿಲ್ ಮಂಡಿಸಿದ್ದಾರೆ. ಮತ್ತು ಸಿನೆಮಾ ನಿರ್ದೇಶಕ ಪೂರಿ ಜಗನ್ನಾತ್, ನಟ ಪವನ್ ಕಲ್ಯಾಣ್, ವಿಜಯ್ ದೇವರಕೊಂಡ, ನಟಿ ಸಮಂತ ಮತ್ತಿತರರು ಕೂಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಯೋಜನೆಯನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ಧಾರೆ. ಈ ಟ್ವಿಟ್ಟರ್‍ ಅಭಿಯಾನವನ್ನು ಡಿವೈಎಫ್‍ಐ ಸಂಘಟನೆ ಫ್ರಾರಂಬಿಸಿದ್ದು ಟ್ರೆಂಡ್ ಆಗಿತ್ತು.

ಬೆಲ್ಲ ಇದ್ದ ಕಡೆ ಇರುವೆಯ ಜಾಡು ಮೂಡುವ ಹಾಗೆ ಬಹುರಾಷ್ಟ್ರೀಯ ಕಂಪನಿಗಳು ಸದಾ ನೈಸರ್ಗಿಕ ಸಂಪನ್ಮೂಲಗಳಿರುವ ಕಡೆ ಕಣ್ಣು ಹಾಕಿರುತ್ತಾರೆ. ಅವರಿಗೆ ಪೂರಕವಾದ ಸರ್ಕಾರಗಳಿದ್ದರಂತು ಮುಗಿದೆ ಹೋಯಿತು. ಕಡಿಮೆ ಸಮಯದಲ್ಲಿ ಹೆಚ್ಚು ತಿಂದು ತೇಗಲು ಬೇಕಾದ ವಾತಾವರಣ ರೂಪಿಸಿಕೊಂಡು ಕಾರ್ಯಕ್ಕಿಳಿಯುತ್ತವೆ. ಇತ್ತಿಚಿಗೆ ಅಮೇಜಾನ್ ಕಾಡು ಮನುಷ್ಯನ ದುರಂಹಾಕರಕ್ಕೆ ಹೊತ್ತಿ ಉರಿದ ಹಾಗೆ ನಲ್ಲಮಲ ಕಾಡು ಮನುಷ್ಯನ ದುರಾಸೆಗೆ ಬಲಿಯಾಗದೆ ಇರಲಿ. ಅಲ್ಲಿನ ಮೂಲ ನಿವಾಸಿಗಳಾದ ‘ಚೆಂಚು’, ’ಕೋಯಾ’ ಬುಡಕಟ್ಟು ಜನಾಂಗಗಳು ಇದುವರೆಗೂ ಆ ಕಾಡನ್ನು ನಾಶವಾಗದೆ ಕಾಪಾಡಿಕೊಂಡು ಬಂದಿದ್ಧಾರೆ. ಸರ್ಕಾರದ ಈ ಆತುರದ ತೀರ್ಮಾನಗಳಿಂದ ಈ ಜನಾಂಗ ನಾಶವಾಗದಂತೆ ಕಪಾಡಿಕೊಳ್ಳಬೇಕಾಗಿದೆ.

ಅದಕ್ಕಾಗಿ ನಲ್ಲಮಲ್ಲ ಕಾಡು ಉಳಿಸಲು ನಡೆಸುತ್ತಿರುವ ಹೋರಾಟ ಮತ್ತಷ್ಟು ದೃಢಗೊಳ್ಳಬೇಕಿದೆ. ಬೀದಿಯಲ್ಲಿ ನಡೆಯುವ ಹೋರಾಟಕ್ಕೆ ಸಿನಿಮಾ ತಾರೆಯರು ಜೊತೆಗೂಡಬೇಕಿದೆ ಮತ್ತು ನಾವೆಲ್ಲರೂ ಬೆಂಬಲಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...