Homeಕರ್ನಾಟಕಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

- Advertisement -
- Advertisement -

ಗುಜರಾತ್ ಮೂಲಕ ಅಮುಲ್ ಹಾಲು ಮತ್ತು ಮೊಸರಿನ ಉತ್ಪನ್ನಗಳು ಬೆಂಗಳೂರು ಮಾರುಕಟ್ಟೆಗೆ ಲಗ್ಗೆ ಹಿಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದರಿಂದಾಗಿ ನಮ್ಮ ನಂದಿನಿ ಹಾಲಿನ ಮಾರುಕಟ್ಟೆ ಮೇಲೆ ನಕರಾತ್ಮಕ ಪರಿಣಾಮ ಬೀರಲಿದ್ದು, ರೈತರಿಗೆ ಅನ್ಯಾಯವಾಗಲಿದೆ ಎಂಬ ಆತಂಕ ವ್ಯಕ್ತವಾಗಿದೆ. ಹಾಗಾಗಿ ಕನ್ನಡಿಗರು ಟ್ವಿಟರ್‌ನಲ್ಲಿ #SaveNandini #SaveKMF ಹ್ಯಾಸ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿದ್ದಾರೆ.

ಈ ಹಿಂದೆ ಮಂಡ್ಯದಲ್ಲಿ ಅಮಿತ್ ಶಾರವರು ಕೆಎಂಎಫ್‌ನೊಂದಿಗೆ ಅಮುಲ್ ವಿಲೀನ ಮಾಡುವುದಾಗಿ ಹೇಳಿದ್ದಾಗಲೂ ಭಾರೀ ವಿರೋಧ ಕೇಳಿಬಂದಿತ್ತು. ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ಪಕ್ಷಗಳು ಸಹ ಅಮುಲ್ ಆಗಮನಕ್ಕೆ ವಿರೋಧ ವ್ಯಕ್ತಪಡಿಸಿವೆ.

“ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ….” ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.

ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ ಎಂದು ಅವರು ಆರೋಪಿಸಿದ್ದಾರೆ.

ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ? ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರವು ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿತ್ತು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಕಾರಣವೇನು? ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಹಾಯಧನಕ್ಕಾಗಿ ರೈತರಿಗೆ ಕೊಟ್ಟಿದ್ದೆವು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1200 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಒದಗಿಸಿ ರೈತರಿಗೆ ಅನ್ಯಾಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ. ಹಿಂದಿ ಹೇರಿಕೆಯ ಮೂಲಕ ನಡೆಸುತ್ತಿರುವ ಭಾಷಾದ್ರೋಹ ಮತ್ತು ರಾಜ್ಯದ ಗಡಿಯೊಳಗೆ ಅತಿಕ್ರಮಿಸುವ ಮೂಲಕ ನಡೆಸುತ್ತಿರುವ ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ ಎಂದು ಕಿಡಿಕಾರಿದ್ದಾರೆ.

ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಕ್ಷಣ ಮಧ್ಯಪ್ರವೇಶಿಸಿ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವ ಅಮುಲ್ ಸಂಸ್ಥೆಯನ್ನು ತಡೆಯಬೇಕಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ರಾಜ್ಯದ ಜನಾಭಿಪ್ರಾಯವನ್ನು ಗಮನಕ್ಕೆ ತಂದು ಈ ದ್ರೋಹ ಚಿಂತನೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಜೆಡಿಎಸ್ ಪಕ್ಷ ಸಹ ಅಮುಲ್‌ಗೆ ವಿರೋಧ ವ್ಯಕ್ತಪಡಿಸಿದೆ. “ರಾಜ್ಯದೆಲ್ಲೆಡೆ ಕೆಎಂಎಫ್ ನಂದಿನಿಯ ಹಾಲು, ತುಪ್ಪ, ಬೆಣ್ಣೆ ಸಮರ್ಪಕವಾಗಿ ಸಿಗದೇ ಇರುವ ಸನ್ನಿವೇಶದಲ್ಲಿ ಗುಜರಾತ್ ನ ಅಮುಲ್ ಸಂಸ್ಥೆಯು ಆನ್ ಲೈನ್ ಮಾರುಕಟ್ಟೆಗೆ ಮುಂದಾಗಿರುವ ಈ ಬೆಳವಣಿಗೆ ಏನನ್ನು ಸೂಚಿಸುತ್ತಿದೆ? ನಂದಿನಿ ಹಾಲು ನಂಬಿ ಬದುಕುತ್ತಿರುವ ಅಸಂಖ್ಯ ಕನ್ನಡಿಗರ ಕೆಲಸದ ಮೇಲೆ ಇದು ಕರಿನೆರಳಿನಂತೆ ಭಾಸವಾಗುವುದಿಲ್ಲವೆ” ಎಂದು ಪ್ರಶ್ನಿಸಿದೆ.

ಕೆಎಂಎಫ್ ನಂದಿನಿ ಎಂಬ ನಮ್ಮ ನಾಡಿನ ಹೆಮ್ಮೆಯ ಸಂಸ್ಥೆಯನ್ನು ಹಂತ ಹಂತವಾಗಿ ಮುಗಿಸುವ ದುಷ್ಟ ಯೋಜನೆಯ ಭಾಗವಾಗಿ ಈ ಬೆಳವಣಿಗೆ ಕಾಣುತ್ತಿದೆ. ನೇರವಾಗಿ ವಿಲೀನ ಮಾಡಲು ಸಾಧ್ಯವಿಲ್ಲದಾಗ, ಈ ರೀತಿಯ ಕುತಂತ್ರಗಳು ಶುರುವಾಗುತ್ತವೆ. ದೈತ್ಯ ಸಂಸ್ಥೆ ಜತೆ ಸ್ಪರ್ಧೆ ಇದು ಎಂದು ಸುಮ್ಮನೆ ಕುಳಿತರೆ, ಭವಿಷ್ಯ ಅಯೋಮಯವಾಗಲಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...