Homeಕರ್ನಾಟಕಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

- Advertisement -
- Advertisement -

ಗುಜರಾತ್ ಮೂಲಕ ಅಮುಲ್ ಹಾಲು ಮತ್ತು ಮೊಸರಿನ ಉತ್ಪನ್ನಗಳು ಬೆಂಗಳೂರು ಮಾರುಕಟ್ಟೆಗೆ ಲಗ್ಗೆ ಹಿಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದರಿಂದಾಗಿ ನಮ್ಮ ನಂದಿನಿ ಹಾಲಿನ ಮಾರುಕಟ್ಟೆ ಮೇಲೆ ನಕರಾತ್ಮಕ ಪರಿಣಾಮ ಬೀರಲಿದ್ದು, ರೈತರಿಗೆ ಅನ್ಯಾಯವಾಗಲಿದೆ ಎಂಬ ಆತಂಕ ವ್ಯಕ್ತವಾಗಿದೆ. ಹಾಗಾಗಿ ಕನ್ನಡಿಗರು ಟ್ವಿಟರ್‌ನಲ್ಲಿ #SaveNandini #SaveKMF ಹ್ಯಾಸ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿದ್ದಾರೆ.

ಈ ಹಿಂದೆ ಮಂಡ್ಯದಲ್ಲಿ ಅಮಿತ್ ಶಾರವರು ಕೆಎಂಎಫ್‌ನೊಂದಿಗೆ ಅಮುಲ್ ವಿಲೀನ ಮಾಡುವುದಾಗಿ ಹೇಳಿದ್ದಾಗಲೂ ಭಾರೀ ವಿರೋಧ ಕೇಳಿಬಂದಿತ್ತು. ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ಪಕ್ಷಗಳು ಸಹ ಅಮುಲ್ ಆಗಮನಕ್ಕೆ ವಿರೋಧ ವ್ಯಕ್ತಪಡಿಸಿವೆ.

“ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ….” ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.

ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ ಎಂದು ಅವರು ಆರೋಪಿಸಿದ್ದಾರೆ.

ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ? ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರವು ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿತ್ತು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಕಾರಣವೇನು? ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಹಾಯಧನಕ್ಕಾಗಿ ರೈತರಿಗೆ ಕೊಟ್ಟಿದ್ದೆವು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1200 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಒದಗಿಸಿ ರೈತರಿಗೆ ಅನ್ಯಾಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ. ಹಿಂದಿ ಹೇರಿಕೆಯ ಮೂಲಕ ನಡೆಸುತ್ತಿರುವ ಭಾಷಾದ್ರೋಹ ಮತ್ತು ರಾಜ್ಯದ ಗಡಿಯೊಳಗೆ ಅತಿಕ್ರಮಿಸುವ ಮೂಲಕ ನಡೆಸುತ್ತಿರುವ ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ ಎಂದು ಕಿಡಿಕಾರಿದ್ದಾರೆ.

ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಕ್ಷಣ ಮಧ್ಯಪ್ರವೇಶಿಸಿ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವ ಅಮುಲ್ ಸಂಸ್ಥೆಯನ್ನು ತಡೆಯಬೇಕಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ರಾಜ್ಯದ ಜನಾಭಿಪ್ರಾಯವನ್ನು ಗಮನಕ್ಕೆ ತಂದು ಈ ದ್ರೋಹ ಚಿಂತನೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಜೆಡಿಎಸ್ ಪಕ್ಷ ಸಹ ಅಮುಲ್‌ಗೆ ವಿರೋಧ ವ್ಯಕ್ತಪಡಿಸಿದೆ. “ರಾಜ್ಯದೆಲ್ಲೆಡೆ ಕೆಎಂಎಫ್ ನಂದಿನಿಯ ಹಾಲು, ತುಪ್ಪ, ಬೆಣ್ಣೆ ಸಮರ್ಪಕವಾಗಿ ಸಿಗದೇ ಇರುವ ಸನ್ನಿವೇಶದಲ್ಲಿ ಗುಜರಾತ್ ನ ಅಮುಲ್ ಸಂಸ್ಥೆಯು ಆನ್ ಲೈನ್ ಮಾರುಕಟ್ಟೆಗೆ ಮುಂದಾಗಿರುವ ಈ ಬೆಳವಣಿಗೆ ಏನನ್ನು ಸೂಚಿಸುತ್ತಿದೆ? ನಂದಿನಿ ಹಾಲು ನಂಬಿ ಬದುಕುತ್ತಿರುವ ಅಸಂಖ್ಯ ಕನ್ನಡಿಗರ ಕೆಲಸದ ಮೇಲೆ ಇದು ಕರಿನೆರಳಿನಂತೆ ಭಾಸವಾಗುವುದಿಲ್ಲವೆ” ಎಂದು ಪ್ರಶ್ನಿಸಿದೆ.

ಕೆಎಂಎಫ್ ನಂದಿನಿ ಎಂಬ ನಮ್ಮ ನಾಡಿನ ಹೆಮ್ಮೆಯ ಸಂಸ್ಥೆಯನ್ನು ಹಂತ ಹಂತವಾಗಿ ಮುಗಿಸುವ ದುಷ್ಟ ಯೋಜನೆಯ ಭಾಗವಾಗಿ ಈ ಬೆಳವಣಿಗೆ ಕಾಣುತ್ತಿದೆ. ನೇರವಾಗಿ ವಿಲೀನ ಮಾಡಲು ಸಾಧ್ಯವಿಲ್ಲದಾಗ, ಈ ರೀತಿಯ ಕುತಂತ್ರಗಳು ಶುರುವಾಗುತ್ತವೆ. ದೈತ್ಯ ಸಂಸ್ಥೆ ಜತೆ ಸ್ಪರ್ಧೆ ಇದು ಎಂದು ಸುಮ್ಮನೆ ಕುಳಿತರೆ, ಭವಿಷ್ಯ ಅಯೋಮಯವಾಗಲಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...