Homeಕರ್ನಾಟಕಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

- Advertisement -
- Advertisement -

ಗುಜರಾತ್ ಮೂಲಕ ಅಮುಲ್ ಹಾಲು ಮತ್ತು ಮೊಸರಿನ ಉತ್ಪನ್ನಗಳು ಬೆಂಗಳೂರು ಮಾರುಕಟ್ಟೆಗೆ ಲಗ್ಗೆ ಹಿಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದರಿಂದಾಗಿ ನಮ್ಮ ನಂದಿನಿ ಹಾಲಿನ ಮಾರುಕಟ್ಟೆ ಮೇಲೆ ನಕರಾತ್ಮಕ ಪರಿಣಾಮ ಬೀರಲಿದ್ದು, ರೈತರಿಗೆ ಅನ್ಯಾಯವಾಗಲಿದೆ ಎಂಬ ಆತಂಕ ವ್ಯಕ್ತವಾಗಿದೆ. ಹಾಗಾಗಿ ಕನ್ನಡಿಗರು ಟ್ವಿಟರ್‌ನಲ್ಲಿ #SaveNandini #SaveKMF ಹ್ಯಾಸ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿದ್ದಾರೆ.

ಈ ಹಿಂದೆ ಮಂಡ್ಯದಲ್ಲಿ ಅಮಿತ್ ಶಾರವರು ಕೆಎಂಎಫ್‌ನೊಂದಿಗೆ ಅಮುಲ್ ವಿಲೀನ ಮಾಡುವುದಾಗಿ ಹೇಳಿದ್ದಾಗಲೂ ಭಾರೀ ವಿರೋಧ ಕೇಳಿಬಂದಿತ್ತು. ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ಪಕ್ಷಗಳು ಸಹ ಅಮುಲ್ ಆಗಮನಕ್ಕೆ ವಿರೋಧ ವ್ಯಕ್ತಪಡಿಸಿವೆ.

“ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ….” ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.

ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ ಎಂದು ಅವರು ಆರೋಪಿಸಿದ್ದಾರೆ.

ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ? ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರವು ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿತ್ತು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಕಾರಣವೇನು? ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಹಾಯಧನಕ್ಕಾಗಿ ರೈತರಿಗೆ ಕೊಟ್ಟಿದ್ದೆವು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1200 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಒದಗಿಸಿ ರೈತರಿಗೆ ಅನ್ಯಾಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ. ಹಿಂದಿ ಹೇರಿಕೆಯ ಮೂಲಕ ನಡೆಸುತ್ತಿರುವ ಭಾಷಾದ್ರೋಹ ಮತ್ತು ರಾಜ್ಯದ ಗಡಿಯೊಳಗೆ ಅತಿಕ್ರಮಿಸುವ ಮೂಲಕ ನಡೆಸುತ್ತಿರುವ ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ ಎಂದು ಕಿಡಿಕಾರಿದ್ದಾರೆ.

ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಕ್ಷಣ ಮಧ್ಯಪ್ರವೇಶಿಸಿ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವ ಅಮುಲ್ ಸಂಸ್ಥೆಯನ್ನು ತಡೆಯಬೇಕಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ರಾಜ್ಯದ ಜನಾಭಿಪ್ರಾಯವನ್ನು ಗಮನಕ್ಕೆ ತಂದು ಈ ದ್ರೋಹ ಚಿಂತನೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಜೆಡಿಎಸ್ ಪಕ್ಷ ಸಹ ಅಮುಲ್‌ಗೆ ವಿರೋಧ ವ್ಯಕ್ತಪಡಿಸಿದೆ. “ರಾಜ್ಯದೆಲ್ಲೆಡೆ ಕೆಎಂಎಫ್ ನಂದಿನಿಯ ಹಾಲು, ತುಪ್ಪ, ಬೆಣ್ಣೆ ಸಮರ್ಪಕವಾಗಿ ಸಿಗದೇ ಇರುವ ಸನ್ನಿವೇಶದಲ್ಲಿ ಗುಜರಾತ್ ನ ಅಮುಲ್ ಸಂಸ್ಥೆಯು ಆನ್ ಲೈನ್ ಮಾರುಕಟ್ಟೆಗೆ ಮುಂದಾಗಿರುವ ಈ ಬೆಳವಣಿಗೆ ಏನನ್ನು ಸೂಚಿಸುತ್ತಿದೆ? ನಂದಿನಿ ಹಾಲು ನಂಬಿ ಬದುಕುತ್ತಿರುವ ಅಸಂಖ್ಯ ಕನ್ನಡಿಗರ ಕೆಲಸದ ಮೇಲೆ ಇದು ಕರಿನೆರಳಿನಂತೆ ಭಾಸವಾಗುವುದಿಲ್ಲವೆ” ಎಂದು ಪ್ರಶ್ನಿಸಿದೆ.

ಕೆಎಂಎಫ್ ನಂದಿನಿ ಎಂಬ ನಮ್ಮ ನಾಡಿನ ಹೆಮ್ಮೆಯ ಸಂಸ್ಥೆಯನ್ನು ಹಂತ ಹಂತವಾಗಿ ಮುಗಿಸುವ ದುಷ್ಟ ಯೋಜನೆಯ ಭಾಗವಾಗಿ ಈ ಬೆಳವಣಿಗೆ ಕಾಣುತ್ತಿದೆ. ನೇರವಾಗಿ ವಿಲೀನ ಮಾಡಲು ಸಾಧ್ಯವಿಲ್ಲದಾಗ, ಈ ರೀತಿಯ ಕುತಂತ್ರಗಳು ಶುರುವಾಗುತ್ತವೆ. ದೈತ್ಯ ಸಂಸ್ಥೆ ಜತೆ ಸ್ಪರ್ಧೆ ಇದು ಎಂದು ಸುಮ್ಮನೆ ಕುಳಿತರೆ, ಭವಿಷ್ಯ ಅಯೋಮಯವಾಗಲಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...