Homeಮುಖಪುಟ'ದೊಡ್ಡವರನ್ನು ಉಳಿಸಲು' ಮಾಧಬಿ ಬುಚ್‌ರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್ ಆರೋಪ

‘ದೊಡ್ಡವರನ್ನು ಉಳಿಸಲು’ ಮಾಧಬಿ ಬುಚ್‌ರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್ ಆರೋಪ

- Advertisement -
- Advertisement -

ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ(ಸೆಬಿ) ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗೆ ಗೈರಾದ ಎರಡು ದಿನಗಳ ನಂತರ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ದಾಳಿ ಮಾಡಿದ್ದು, “ಈ ಪ್ರಕರಣದಲ್ಲಿ ದೊಡ್ಡವರನ್ನು ಉಳಿಸಲು ಕೇಂದ್ರ ಸರ್ಕಾರದ ಪ್ರಯತ್ನಿಸುತ್ತಿದೆ” ಎಂದು ಶನಿವಾರ ಆರೋಪಿಸಿದೆ.

ಆಗಸ್ಟ್‌ನಲ್ಲಿ ಬುಚ್‌ ವಿರುದ್ಧ ಅದಾನಿ ಗ್ರೂಪ್‌ನಿಂದ ಹಣಕಾಸಿನ ದುರುಪಯೋಗಕ್ಕೆ ಸಂಬಂಧಿಸಿದ ಆರೋಪ ಮಾಡಲಾಗಿತ್ತು. ಈ ಹಗರಣದಲ್ಲಿ ಅವರಿಗೆ ಸಂಸದೀಯ ಸಮಿತಿ ಸಮನ್ಸ್‌ ನೀಡಿತ್ತು. ಆದಾಗ್ಯೂ, ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಸಮಿತಿ ಮುಂದೆ ಹಾಜರಾಗಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮುಂದೆ ಸೆಬಿ ಮುಖ್ಯಸ್ಥರು “ಪ್ರಶ್ನೆಗಳಿಗೆ ಉತ್ತರಿಸಲು ಯಾಕೆ ಹಿಂಜರಿಯುತ್ತಿದ್ದಾರೆ. ಸಂಸದೀಯ ಸಮಿತಿಗೆ ಉತ್ತರದಾಯಿಯಾಗದಂತೆ ಅವರನ್ನು ರಕ್ಷಿಸುತ್ತಿರುವ ಯೋಜನೆಯ ಹಿಂದೆ ಯಾರಿದ್ದಾರೆ?” ” ಎಂದು ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಶನಿವಾರ ಪ್ರಶ್ನಿಸಿದ್ದಾರೆ.

“ಕೋಟ್ಯಂತರ ಸಣ್ಣ-ಮಧ್ಯಮ ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹೂಡಿಕೆಯನ್ನು ಅಪಾಯಕ್ಕೆ ಸಿಲುಕಿಸಲು ಮತ್ತು ಮೋದಿ ಅವರ ಆತ್ಮೀಯ ಸ್ನೇಹಿತ [ಕೈಗಾರಿಕಾ ಉದ್ಯಮಿ ಗೌತಮ್] ಅದಾನಿಗೆ ಲಾಭ ಪಡೆಯಲು ಮಾಡಿದ ಪಿತೂರಿ ಇದರ ಹಿಂದೆ ಇದೆಯೇ?” ಎಂದು ಅವರು ಕೇಳಿದ್ದಾರೆ.

ಅದಾನಿ ಗ್ರೂಪ್‌ನ ಸ್ಟಾಕ್ ಬೆಲೆ ತಿದ್ದುಪಡಿ ಮಾಡುವಲ್ಲಿ ಮತ್ತು ವಿದೇಶಗಳಲ್ಲಿ ನಡೆದ ಮನಿ ಲಾಂಡರಿಂಗ್‌ಗೆ ಸಂಬಂಧಿಸಿದ ಪ್ರಕಣದಲ್ಲಿ ಸೆಬಿ ಮುಖ್ಯಸ್ಥೆ ಮತ್ತು ಅವರ ಪತಿ ಧವಲ್ ಬುಚ್ ಅವರ ಕೈವಾಡ ಇದೆ ಎಂದು ಆಗಸ್ಟ್‌ನಲ್ಲಿ ಅಮೇರಿಕನ್ ಹೂಡಿಕೆ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಆರೋಪಿಸಿತ್ತು. ಅದಾಗ್ಯೂ, ಮಾಧಬಿ ಬುಚ್‌ ಮತ್ತು ಧವಲ್ ಬುಚ್ ಈ ಆರೋಪಗಳನ್ನು ನಿರಾಕರಿಸಿದರು.

ಅದಾನಿ ಗ್ರೂಪ್ ತೆರಿಗೆ ಲಾಭವಾಗುವ ದೇಶಗಳಲ್ಲಿ ಲೆಕ್ಕಪತ್ರ ವಂಚನೆ ನಡೆಸಿ ಮನಿ ಲಾಂಡರಿಂಗ್‌ನಲ್ಲಿ ತೊಡಗಿದೆ ಎಂದು ಹಿಂಡೆನ್‌ಬರ್ಗ್ ರಿಸರ್ಚ್ ಈ ಹಿಂದೆ ಕೂಡಾ ಆರೋಪಿಸಿತ್ತು. ಅದಾನಿ ನಿಧಿಯಲ್ಲಿ ಮಾಧಬಿ ಬುಚ್ ಪಾಲು ಹೊಂದಿರುವುದರಿಂದ ಈ ಹಗರಣದಲ್ಲಿ ತನಿಖೆ ನಡೆಯುತ್ತಿಲ್ಲ ಎಂದು ವರದಿ ಹೇಳಿತ್ತು

“ಈ ಸರ್ಕಾರವು ಭಾರತದ ಹೂಡಿಕೆದಾರರನ್ನು ದುರ್ಬಲಗೊಳಿಸಿದೆ. ಅವರ ಉಳಿತಾಯ ಮತ್ತು ಆಕಾಂಕ್ಷೆಗಳನ್ನು ರಕ್ಷಿಸಲು ಉದ್ದೇಶಿಸಿರುವ ಸಂಸ್ಥೆಯಾದ ಸೆಬಿ ಈಗ ರಾಜಿ ಮಾಡಿದೆ. ಹೂಡಿಕೆ ವಲಯದಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುವ ಕ್ರಮಗಳನ್ನು ಆಚರಣೆಗೆ ತರಲು ಸೆಬಿ ವಿಫಲವಾಗಿದೆ” ಎಂದು ಪವನ್ ಖೇರ ಶನಿವಾರ ಆರೋಪಿಸಿದ್ದಾರೆ. ದೊಡ್ಡವರನ್ನು ಉಳಿಸಲು

ಬುಚ್ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ಆಪಾದಿತ ಗುಂಪನ್ನು ಪಕ್ಷವು ಶೀಘ್ರದಲ್ಲೇ ಬಹಿರಂಗಪಡಿಸಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಗುಂಪು ಬುಚ್ ಅವರನ್ನು ಸಂಸದೀಯ ಸಮಿತಿಯ ಉತ್ತರಿಸುವುದರಿಂದ, ಅವರ ಸ್ಥಾನಕ್ಕೆ ರಾಜೀನಾಮೆ ನೀಡುವುದರಿಂದ ಮತ್ತು ಅದಾನಿ ಗ್ರೂಪ್‌ನೊಂದಿಗೆ ವ್ಯವಹರಿಸುವಾಗ ಅವರು ಮಾಡಿದ್ದಾರೆ ಎನ್ನಲಾದ ಅಕ್ರಮಗಳ ತನಿಖೆಯಿಂದ ಅವರನ್ನು ರಕ್ಷಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಅದಾನಿ ಹಗರಣ’ ನಿಧಿಯಲ್ಲಿ ಸೆಬಿ ಮುಖ್ಯಸ್ಥರು ಪಾಲು ಹೊಂದಿದ್ದಾರೆ” ಹಿಂಡೆನ್‌ಬರ್ಗ್ ಆರೋಪ

‘ಅದಾನಿ ಹಗರಣ’ ನಿಧಿಯಲ್ಲಿ ಸೆಬಿ ಮುಖ್ಯಸ್ಥರು ಪಾಲು ಹೊಂದಿದ್ದಾರೆ” ಹಿಂಡೆನ್‌ಬರ್ಗ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...