Homeಮುಖಪುಟ'ದೊಡ್ಡವರನ್ನು ಉಳಿಸಲು' ಮಾಧಬಿ ಬುಚ್‌ರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್ ಆರೋಪ

‘ದೊಡ್ಡವರನ್ನು ಉಳಿಸಲು’ ಮಾಧಬಿ ಬುಚ್‌ರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್ ಆರೋಪ

- Advertisement -
- Advertisement -

ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ(ಸೆಬಿ) ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗೆ ಗೈರಾದ ಎರಡು ದಿನಗಳ ನಂತರ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ದಾಳಿ ಮಾಡಿದ್ದು, “ಈ ಪ್ರಕರಣದಲ್ಲಿ ದೊಡ್ಡವರನ್ನು ಉಳಿಸಲು ಕೇಂದ್ರ ಸರ್ಕಾರದ ಪ್ರಯತ್ನಿಸುತ್ತಿದೆ” ಎಂದು ಶನಿವಾರ ಆರೋಪಿಸಿದೆ.

ಆಗಸ್ಟ್‌ನಲ್ಲಿ ಬುಚ್‌ ವಿರುದ್ಧ ಅದಾನಿ ಗ್ರೂಪ್‌ನಿಂದ ಹಣಕಾಸಿನ ದುರುಪಯೋಗಕ್ಕೆ ಸಂಬಂಧಿಸಿದ ಆರೋಪ ಮಾಡಲಾಗಿತ್ತು. ಈ ಹಗರಣದಲ್ಲಿ ಅವರಿಗೆ ಸಂಸದೀಯ ಸಮಿತಿ ಸಮನ್ಸ್‌ ನೀಡಿತ್ತು. ಆದಾಗ್ಯೂ, ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಸಮಿತಿ ಮುಂದೆ ಹಾಜರಾಗಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮುಂದೆ ಸೆಬಿ ಮುಖ್ಯಸ್ಥರು “ಪ್ರಶ್ನೆಗಳಿಗೆ ಉತ್ತರಿಸಲು ಯಾಕೆ ಹಿಂಜರಿಯುತ್ತಿದ್ದಾರೆ. ಸಂಸದೀಯ ಸಮಿತಿಗೆ ಉತ್ತರದಾಯಿಯಾಗದಂತೆ ಅವರನ್ನು ರಕ್ಷಿಸುತ್ತಿರುವ ಯೋಜನೆಯ ಹಿಂದೆ ಯಾರಿದ್ದಾರೆ?” ” ಎಂದು ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಶನಿವಾರ ಪ್ರಶ್ನಿಸಿದ್ದಾರೆ.

“ಕೋಟ್ಯಂತರ ಸಣ್ಣ-ಮಧ್ಯಮ ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹೂಡಿಕೆಯನ್ನು ಅಪಾಯಕ್ಕೆ ಸಿಲುಕಿಸಲು ಮತ್ತು ಮೋದಿ ಅವರ ಆತ್ಮೀಯ ಸ್ನೇಹಿತ [ಕೈಗಾರಿಕಾ ಉದ್ಯಮಿ ಗೌತಮ್] ಅದಾನಿಗೆ ಲಾಭ ಪಡೆಯಲು ಮಾಡಿದ ಪಿತೂರಿ ಇದರ ಹಿಂದೆ ಇದೆಯೇ?” ಎಂದು ಅವರು ಕೇಳಿದ್ದಾರೆ.

ಅದಾನಿ ಗ್ರೂಪ್‌ನ ಸ್ಟಾಕ್ ಬೆಲೆ ತಿದ್ದುಪಡಿ ಮಾಡುವಲ್ಲಿ ಮತ್ತು ವಿದೇಶಗಳಲ್ಲಿ ನಡೆದ ಮನಿ ಲಾಂಡರಿಂಗ್‌ಗೆ ಸಂಬಂಧಿಸಿದ ಪ್ರಕಣದಲ್ಲಿ ಸೆಬಿ ಮುಖ್ಯಸ್ಥೆ ಮತ್ತು ಅವರ ಪತಿ ಧವಲ್ ಬುಚ್ ಅವರ ಕೈವಾಡ ಇದೆ ಎಂದು ಆಗಸ್ಟ್‌ನಲ್ಲಿ ಅಮೇರಿಕನ್ ಹೂಡಿಕೆ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಆರೋಪಿಸಿತ್ತು. ಅದಾಗ್ಯೂ, ಮಾಧಬಿ ಬುಚ್‌ ಮತ್ತು ಧವಲ್ ಬುಚ್ ಈ ಆರೋಪಗಳನ್ನು ನಿರಾಕರಿಸಿದರು.

ಅದಾನಿ ಗ್ರೂಪ್ ತೆರಿಗೆ ಲಾಭವಾಗುವ ದೇಶಗಳಲ್ಲಿ ಲೆಕ್ಕಪತ್ರ ವಂಚನೆ ನಡೆಸಿ ಮನಿ ಲಾಂಡರಿಂಗ್‌ನಲ್ಲಿ ತೊಡಗಿದೆ ಎಂದು ಹಿಂಡೆನ್‌ಬರ್ಗ್ ರಿಸರ್ಚ್ ಈ ಹಿಂದೆ ಕೂಡಾ ಆರೋಪಿಸಿತ್ತು. ಅದಾನಿ ನಿಧಿಯಲ್ಲಿ ಮಾಧಬಿ ಬುಚ್ ಪಾಲು ಹೊಂದಿರುವುದರಿಂದ ಈ ಹಗರಣದಲ್ಲಿ ತನಿಖೆ ನಡೆಯುತ್ತಿಲ್ಲ ಎಂದು ವರದಿ ಹೇಳಿತ್ತು

“ಈ ಸರ್ಕಾರವು ಭಾರತದ ಹೂಡಿಕೆದಾರರನ್ನು ದುರ್ಬಲಗೊಳಿಸಿದೆ. ಅವರ ಉಳಿತಾಯ ಮತ್ತು ಆಕಾಂಕ್ಷೆಗಳನ್ನು ರಕ್ಷಿಸಲು ಉದ್ದೇಶಿಸಿರುವ ಸಂಸ್ಥೆಯಾದ ಸೆಬಿ ಈಗ ರಾಜಿ ಮಾಡಿದೆ. ಹೂಡಿಕೆ ವಲಯದಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುವ ಕ್ರಮಗಳನ್ನು ಆಚರಣೆಗೆ ತರಲು ಸೆಬಿ ವಿಫಲವಾಗಿದೆ” ಎಂದು ಪವನ್ ಖೇರ ಶನಿವಾರ ಆರೋಪಿಸಿದ್ದಾರೆ. ದೊಡ್ಡವರನ್ನು ಉಳಿಸಲು

ಬುಚ್ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ಆಪಾದಿತ ಗುಂಪನ್ನು ಪಕ್ಷವು ಶೀಘ್ರದಲ್ಲೇ ಬಹಿರಂಗಪಡಿಸಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಗುಂಪು ಬುಚ್ ಅವರನ್ನು ಸಂಸದೀಯ ಸಮಿತಿಯ ಉತ್ತರಿಸುವುದರಿಂದ, ಅವರ ಸ್ಥಾನಕ್ಕೆ ರಾಜೀನಾಮೆ ನೀಡುವುದರಿಂದ ಮತ್ತು ಅದಾನಿ ಗ್ರೂಪ್‌ನೊಂದಿಗೆ ವ್ಯವಹರಿಸುವಾಗ ಅವರು ಮಾಡಿದ್ದಾರೆ ಎನ್ನಲಾದ ಅಕ್ರಮಗಳ ತನಿಖೆಯಿಂದ ಅವರನ್ನು ರಕ್ಷಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಅದಾನಿ ಹಗರಣ’ ನಿಧಿಯಲ್ಲಿ ಸೆಬಿ ಮುಖ್ಯಸ್ಥರು ಪಾಲು ಹೊಂದಿದ್ದಾರೆ” ಹಿಂಡೆನ್‌ಬರ್ಗ್ ಆರೋಪ

‘ಅದಾನಿ ಹಗರಣ’ ನಿಧಿಯಲ್ಲಿ ಸೆಬಿ ಮುಖ್ಯಸ್ಥರು ಪಾಲು ಹೊಂದಿದ್ದಾರೆ” ಹಿಂಡೆನ್‌ಬರ್ಗ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...