Homeಮುಖಪುಟರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಇದಕ್ಕೂ ಮೊದಲು ಪ್ರತಿಪಕ್ಷದ ಸದಸ್ಯರು, ಕೃಷಿ ಮಸೂದೆಗಳ ವಿರುದ್ಧ ತಮ್ಮ ಮುಂದಿನ ಕಾರ್ಯತಂತ್ರವನ್ನು ರೂಪಿಸಲು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರ ಕಛೇರಿಯಲ್ಲಿ ಸಭೆ ನಡೆಸಿದರು.

- Advertisement -
- Advertisement -

ಇತ್ತೀಚೆಗೆ ಕೇಂದ್ರ ಸರ್ಕಾರ ಅಂಗೀಕರಿಸಿದ ವಿವಾದಾತ್ಮಕ ಕೃಷಿ ಮಸೂದೆಗಳ ವಿರುದ್ಧ ವಿವಿಧ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದವು.

ಪ್ರತಿಭಟನಾ ನಿರತ ಸಂಸದರು ಮಹಾತ್ಮ ಗಾಂಧಿ ಪ್ರತಿಮೆಯಿಂದ ಸಂಸತ್ತು ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯವರೆಗಿನ ಮೆರವಣಿಗೆಯಲ್ಲಿ “ರೈತರನ್ನು ಉಳಿಸಿ, ಕಾರ್ಮಿಕರನ್ನು ಉಳಿಸಿ, ಪ್ರಜಾಪ್ರಭುತ್ವವನ್ನು ಉಳಿಸಿ” ಎಂಬ ಸಂದೇಶಗಳುಳ್ಳ ಫಲಕಗಳನ್ನು ಪ್ರದರ್ಶಿಸಿ ಪ್ರತಿಭಟಿಸಿದರು.

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ-ಎಂ, ಡಿಎಂಕೆ, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಆಮ್ ಆದ್ಮಿ ಪಕ್ಷ (ಎಎಪಿ), ಸಮಾಜವಾದಿ ಪಕ್ಷ ಮತ್ತು ಎನ್‌ಸಿಪಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸಿ ಸೆ.25ಕ್ಕೆ ಕರ್ನಾಟಕ ಬಂದ್: ಕರವೇ ಬೆಂಬಲ

“ಕಾಂಗ್ರೆಸ್‌ನ ಎಲ್ಲಾ ಸಂಸದರು ಮತ್ತು ಸಮಾನ ಮನಸ್ಕ ಪಕ್ಷಗಳು ಸಂಸತ್ತಿನಲ್ಲಿ ಗಾಂಧಿ ಪ್ರತಿಮೆಯಿಂದ ಅಂಬೇಡ್ಕರ್ ಪ್ರತಿಮೆಯವರೆಗೆ ಮೌನ ಮೆರವಣಿಗೆ ನಡೆಸುತ್ತಿವೆ. ಈ ಮೂಲಕ, ಮೋದಿ ಸರ್ಕಾರವು ಸಂಸತ್ತಿನಲ್ಲಿ ರಬ್ಬರ್ ಸ್ಟ್ಯಾಂಪ್ ಮಾಡಿರುವ ರೈತ ವಿರೋಧಿ, ಕಾರ್ಮಿಕ ವಿರೋಧಿ ಮಸೂದೆಗಳನ್ನು ಪ್ರತಿಭಟಿಸುತ್ತಿದ್ದೇವೆ” ಎಂದು ಕಾಂಗ್ರೆಸ್ ಮುಖ್ಯಸ್ಥ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೃಷಿ ಮಸೂದೆಗಳ ವಿರುದ್ಧ ತಮ್ಮ ಮುಂದಿನ ಕಾರ್ಯತಂತ್ರವನ್ನು ರೂಪಿಸಲು ಪ್ರತಿಪಕ್ಷದ ಸದಸ್ಯರು ಇದಕ್ಕೂ ಮೊದಲು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರ ಕಛೇರಿಯಲ್ಲಿ ಸಭೆ ನಡೆಸಿದರು.

ವಿವಿಧ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಕೃಷಿ ಮಸೂದೆಗಳನ್ನು ಅಂಗೀಕರಿಸುವುದನ್ನು ವಿರೋಧಿಸಿ, ಉಭಯ ಸದನಗಳ ವಿಚಾರಣೆಯನ್ನು ಬಹಿಷ್ಕರಿಸಿವೆ.

ವಿವಾದಾತ್ಮಕ ಮಸೂದೆಗಳಿಗೆ ಸಹಿ ಮಾಡದಂತೆ ಒತ್ತಾಯಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರತಿಪಕ್ಷಗಳು ಪತ್ರ ಬರೆದು, ಮತಗಳ ವಿಭಜನೆಯಿಲ್ಲದೇ ಈ ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಆರೋಪಿಸಿವೆ.

ಈ ಕುರಿತು ಮಾತನಾಡಲು ಗುಲಾಂ ನಬಿ ಆಜಾದ್ ಇಂದು ಸಂಜೆ 5 ಗಂಟೆಗೆ ರಾಷ್ಟ್ರಪತಿಯವರನ್ನು ಭೇಟಿಯಾಗಲಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...