Homeಮುಖಪುಟರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಇದಕ್ಕೂ ಮೊದಲು ಪ್ರತಿಪಕ್ಷದ ಸದಸ್ಯರು, ಕೃಷಿ ಮಸೂದೆಗಳ ವಿರುದ್ಧ ತಮ್ಮ ಮುಂದಿನ ಕಾರ್ಯತಂತ್ರವನ್ನು ರೂಪಿಸಲು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರ ಕಛೇರಿಯಲ್ಲಿ ಸಭೆ ನಡೆಸಿದರು.

- Advertisement -
- Advertisement -

ಇತ್ತೀಚೆಗೆ ಕೇಂದ್ರ ಸರ್ಕಾರ ಅಂಗೀಕರಿಸಿದ ವಿವಾದಾತ್ಮಕ ಕೃಷಿ ಮಸೂದೆಗಳ ವಿರುದ್ಧ ವಿವಿಧ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದವು.

ಪ್ರತಿಭಟನಾ ನಿರತ ಸಂಸದರು ಮಹಾತ್ಮ ಗಾಂಧಿ ಪ್ರತಿಮೆಯಿಂದ ಸಂಸತ್ತು ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯವರೆಗಿನ ಮೆರವಣಿಗೆಯಲ್ಲಿ “ರೈತರನ್ನು ಉಳಿಸಿ, ಕಾರ್ಮಿಕರನ್ನು ಉಳಿಸಿ, ಪ್ರಜಾಪ್ರಭುತ್ವವನ್ನು ಉಳಿಸಿ” ಎಂಬ ಸಂದೇಶಗಳುಳ್ಳ ಫಲಕಗಳನ್ನು ಪ್ರದರ್ಶಿಸಿ ಪ್ರತಿಭಟಿಸಿದರು.

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ-ಎಂ, ಡಿಎಂಕೆ, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಆಮ್ ಆದ್ಮಿ ಪಕ್ಷ (ಎಎಪಿ), ಸಮಾಜವಾದಿ ಪಕ್ಷ ಮತ್ತು ಎನ್‌ಸಿಪಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸಿ ಸೆ.25ಕ್ಕೆ ಕರ್ನಾಟಕ ಬಂದ್: ಕರವೇ ಬೆಂಬಲ

“ಕಾಂಗ್ರೆಸ್‌ನ ಎಲ್ಲಾ ಸಂಸದರು ಮತ್ತು ಸಮಾನ ಮನಸ್ಕ ಪಕ್ಷಗಳು ಸಂಸತ್ತಿನಲ್ಲಿ ಗಾಂಧಿ ಪ್ರತಿಮೆಯಿಂದ ಅಂಬೇಡ್ಕರ್ ಪ್ರತಿಮೆಯವರೆಗೆ ಮೌನ ಮೆರವಣಿಗೆ ನಡೆಸುತ್ತಿವೆ. ಈ ಮೂಲಕ, ಮೋದಿ ಸರ್ಕಾರವು ಸಂಸತ್ತಿನಲ್ಲಿ ರಬ್ಬರ್ ಸ್ಟ್ಯಾಂಪ್ ಮಾಡಿರುವ ರೈತ ವಿರೋಧಿ, ಕಾರ್ಮಿಕ ವಿರೋಧಿ ಮಸೂದೆಗಳನ್ನು ಪ್ರತಿಭಟಿಸುತ್ತಿದ್ದೇವೆ” ಎಂದು ಕಾಂಗ್ರೆಸ್ ಮುಖ್ಯಸ್ಥ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೃಷಿ ಮಸೂದೆಗಳ ವಿರುದ್ಧ ತಮ್ಮ ಮುಂದಿನ ಕಾರ್ಯತಂತ್ರವನ್ನು ರೂಪಿಸಲು ಪ್ರತಿಪಕ್ಷದ ಸದಸ್ಯರು ಇದಕ್ಕೂ ಮೊದಲು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರ ಕಛೇರಿಯಲ್ಲಿ ಸಭೆ ನಡೆಸಿದರು.

ವಿವಿಧ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಕೃಷಿ ಮಸೂದೆಗಳನ್ನು ಅಂಗೀಕರಿಸುವುದನ್ನು ವಿರೋಧಿಸಿ, ಉಭಯ ಸದನಗಳ ವಿಚಾರಣೆಯನ್ನು ಬಹಿಷ್ಕರಿಸಿವೆ.

ವಿವಾದಾತ್ಮಕ ಮಸೂದೆಗಳಿಗೆ ಸಹಿ ಮಾಡದಂತೆ ಒತ್ತಾಯಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರತಿಪಕ್ಷಗಳು ಪತ್ರ ಬರೆದು, ಮತಗಳ ವಿಭಜನೆಯಿಲ್ಲದೇ ಈ ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಆರೋಪಿಸಿವೆ.

ಈ ಕುರಿತು ಮಾತನಾಡಲು ಗುಲಾಂ ನಬಿ ಆಜಾದ್ ಇಂದು ಸಂಜೆ 5 ಗಂಟೆಗೆ ರಾಷ್ಟ್ರಪತಿಯವರನ್ನು ಭೇಟಿಯಾಗಲಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...