HomeUncategorized'ನಾಡ ಉಳಿಸಿ ಸಮಾವೇಶ': ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ - ಬಡಗಲಪುರ...

‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

- Advertisement -
- Advertisement -

ದೇವನಹಳ್ಳಿ, ಬೆಂಗಳೂರು: ವಿಶ್ವ ವ್ಯಾಪಾರ ಒಪ್ಪಂದಗಳ ಪರಿಣಾಮವಾಗಿ ಕಾರ್ಪೊರೇಟ್ ಯೋಜನೆಗಳು ರೈತರು ಮತ್ತು ಜನಚಳವಳಿಗಳ ಹಕ್ಕುಗಳನ್ನು ಹತ್ತಿಕ್ಕಲು ಯತ್ನಿಸುತ್ತಿವೆ ಎಂದು ಬಡಗಲಪುರ ನಾಗೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನಾಡ ಉಳಿಸಿ ಸಮಾವೇಶ’ದಲ್ಲಿ ಇಂದು (ಜುಲೈ 4) ಮಾತನಾಡಿದ ಅವರು, ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯದ ಇತಿಹಾಸದಲ್ಲಿ ‘ಐತಿಹಾಸಿಕ ದಾಖಲೆ’ ಎಂದು ಬಣ್ಣಿಸಿ, ಸರ್ಕಾರವು ಬ್ರಿಟಿಷರ ಪದ್ಧತಿಗಳನ್ನೇ ಮುಂದುವರೆಸುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

“ನಾವು ‘ನೇಗಿಲ ಯೋಗಿ’ಯ ಹಾಡನ್ನು ಕೇಳಿದ್ದೇವೆ. ಆ ಸಂದರ್ಭದಲ್ಲಿ ನಾಡಿನ ಜನಚಳವಳಿಗಳಲ್ಲಿ ಹಸಿರು, ನೀಲಿ, ಕೆಂಪು ಬಾವುಟುಗಳು ಒಂದಾಗಿದ್ದವು. ಈಗಲೂ ಅದೇ ಐಕ್ಯತೆ ಇದೆ” ಎಂದು ನಾಗೇಂದ್ರ ಸ್ಮರಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ನೀತಿಗಳನ್ನು ಅನುಸರಿಸಿ ರೈತರ ಭೂಮಿಗೆ ಕೈ ಹಾಕುತ್ತಿವೆ ಎಂದು ಅವರು ಆರೋಪಿಸಿದರು.

ಐತಿಹಾಸಿಕ ದೇವನಹಳ್ಳಿ ಹೋರಾಟ – 1184 ದಿನಗಳ ಕೆಚ್ಚೆದೆಯ ಸತ್ಯಾಗ್ರಹ: ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಚಳವಳಿ 384 ದಿನಗಳ ಕಾಲ ನಡೆದಿತ್ತು. ಆದರೆ, ದೇವನಹಳ್ಳಿ ಹೋರಾಟ ಈಗಾಗಲೇ 1184 ದಿನಗಳನ್ನು ದಾಟಿದೆ. ಇದು ಸರಕಾರದ ವಿರುದ್ಧ ನಡೆದ ದಿಟ್ಟ ಹೋರಾಟವಾಗಿದೆ ಎಂದು ನಾಗೇಂದ್ರ ಒತ್ತಿ ಹೇಳಿದರು. “ಸಂಯುಕ್ತ ಹೋರಾಟವು ಈ ಚಳವಳಿಗೆ ಬೆನ್ನೆಲುಬಾಗಿ ನಿಂತು, ರಾಜ್ಯ ಹಾಗೂ ರಾಷ್ಟ್ರಮಟ್ಟದ ಹೋರಾಟವನ್ನಾಗಿಸಿದೆ. ರೈತರ ಮತ್ತು ಭೂಮಿಯ ವಿಷಯದಲ್ಲಿ ರಾಜ್ಯದ ಎಲ್ಲ ವರ್ಗಗಳೂ ಒಂದಾಗಿರುವುದು ವಿಶಿಷ್ಟವಾಗಿದೆ” ಎಂದರು.

ಈ ಹೋರಾಟವು ನಾಡಿನ ಜಲ ಮತ್ತು ಸಂಪತ್ತನ್ನು ಉಳಿಸುವಲ್ಲಿ ರೂಪುಗೊಂಡ ಅಪರೂಪದ ಚಳವಳಿಯಾಗಿದೆ. ಇದು ಭವಿಷ್ಯದಲ್ಲಿ ಅನಿಷ್ಟ ದುಷ್ಟಕೂಟಗಳನ್ನು ನಾಶಮಾಡಲು ನಾಂದಿಯಾಗುತ್ತದೆ ಎಂದು ಬಡಗಲಪುರ ನಾಗೇಂದ್ರ ಭವಿಷ್ಯ ನುಡಿದರು.

ಬಿಜೆಪಿ-ಕಾಂಗ್ರೆಸ್ ಕಾರ್ಪೊರೇಟ್‌ಗಳ ‘ಒಂದೇ ನಾಣ್ಯದ ಎರಡು ಮುಖಗಳು’: “ಒಂದು ಕಡೆ ಮೋದಿ ಸರಕಾರ, ಮತ್ತೊಂದು ಕಡೆ ಸಿದ್ದರಾಮಯ್ಯ ಸರಕಾರ. ಎರಡು ಬೇರೆ ಬೇರೆ ಪಕ್ಷಗಳು, ಆದರೆ ಅವುಗಳ ನೀತಿಗಳು ಒಂದೇ. ಇವೆರಡೂ ಕಾರ್ಪೊರೇಟ್‌ ನೀತಿಗಳನ್ನು ಮುಂದುವರೆಸುತ್ತಿವೆ. ಆ ನಿಟ್ಟಿನಲ್ಲಿ ಭೂಮಿಗೆ ಕೈ ಹಾಕಕ್ಕೆ ಬಂದಿವೆ” ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇವನಹಳ್ಳಿ ಹೋರಾಟವು ಸರ್ಕಾರಗಳಿಗೆ ‘ಬಿಸಿ ಮುಟ್ಟಿಸಿದೆ’. “ಈಗ 10 ದಿನಗಳು ಸಮಯ ತೆಗೆದುಕೊಂಡು ಬ್ರಿಟಿಷರ ಪದ್ಧತಿಯನ್ನು ಮುಂದುವರೆಸಲು ಹೊರಟಿದೆ” ಎಂದು ಅವರು ತೀವ್ರವಾಗಿ ಖಂಡಿಸಿದರು.

ರೈತರು, ದಲಿತರು, ಕಾರ್ಮಿಕರ ಸ್ಪಷ್ಟ ಎಚ್ಚರಿಕೆ: “ಇದು ಬಸವಣ್ಣ, ಸಂಗೊಳ್ಳಿ ರಾಯಣ್ಣ, ಟಿಪ್ಪು ಸುಲ್ತಾನ, ಕಿತ್ತೂರು ರಾಣಿ ಚೆನ್ನಮ್ಮನ ನಾಡು. ಇಲ್ಲಿ ಸಾಧು-ಸಂತರು, ಸೂಫಿಗಳು ತಿರುಗಾಡಿದ ನೆಲ. ರೈತರು ಈಗ ಕೃಷಿ ಸಂಸ್ಕೃತಿಯನ್ನು ಉಳಿಸಲು ಹೊರಟಿದ್ದಾರೆ. ದಲಿತರು, ರೈತರು, ಕಾರ್ಮಿಕರು, ಕಲಾವಿದರು, ಸಾಹಿತಿಗಳು ನಾವೆಲ್ಲರೂ ಸರಕಾರಕ್ಕೆ ಸ್ಪಷ್ಟ ಸಂದೇಶ ಕೊಡುತ್ತಿದ್ದೇವೆ” ಎಂದು ನಾಗೇಂದ್ರ ಗುಡುಗಿದರು.

“ಸರಕಾರಕ್ಕೆ ಹೇಳುವುದು ಒಂದೇ, ನಾವು ಕೈಗಾರಿಕೆಗಳಿಗೆ ಭೂಮಿಯನ್ನು ಕೊಡುವುದಿಲ್ಲ. ಬಲವಂತದಿಂದ ಕಿತ್ತುಕೊಳ್ಳಲು ಪ್ರಯತ್ನ ಮಾಡಲು ಮುಂದಾದರೆ, ಒಂದಿಂಚು ಕೂಡ ಕೊಡುವುದಿಲ್ಲ. ಸಿದ್ದರಾಮಯ್ಯ ನಮ್ಮ ಭೂಮಿ ನಮಗೆ ನೀಡುವ ಭರವಸೆ ಇದೆ” ಎಂದು ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯಗೆ ನೇರ ಸವಾಲು: ‘ಭೂಮಿ ತಂಟೆಗೆ ಬಂದರೆ ರಸ್ತೆಯಲ್ಲಿ ತಿರುಗಾಡಲು ಸಾಧ್ಯವಿಲ್ಲ!’ “ನಂಜುಂಡಸ್ವಾಮಿ ಅವರ ಶಿಷ್ಯರಾಗಿರುವುದರಿಂದ ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ ಇದೆ. ಆ ನಂಬಿಕೆಯನ್ನು ಉಳಿಸಿಕೊಳ್ಳಿ. ಎಂ.ಬಿ. ಪಾಟೀಲ್ ಮುಖ್ಯಮಂತ್ರಿ ಆಗಬೇಕೆನ್ನುವ ವಿಶ್ವಾಸದಲ್ಲಿ ನೀವು ಇದ್ದೀರಿ. ಆದರೆ, ಇದೀಗ ಭೂಮಿಯನ್ನು ಕೈ ಬಿಡದಿದ್ದರೆ, ಮುಂದೆ ನೀವು ವಿಧಾನ ಸೌಧಕ್ಕೆ ಆಯ್ಕೆ ಆಗುವುದಕ್ಕೂ ಸಾಧ್ಯವಿಲ್ಲ. ಭೂಮಿ ತಂಟೆಗೆ ಬಂದರೆ, ನೀವು ರಸ್ತೆಯಲ್ಲಿ ಸುಲಭವಾಗಿ ತಿರುಗಾಡುವುದಕ್ಕೆ ಸಾಧ್ಯವಿಲ್ಲ” ಎಂದು ನಾಗೇಂದ್ರ ನೇರವಾಗಿ ಸವಾಲು ಹಾಕಿದರು.

“ನಮ್ಮ ಭೂಮಿ ನಮಗೆ ಸಿಗುವ ತನಕ ಹೋರಾಟ ನಿಲ್ಲಿಸುವುದಿಲ್ಲ, ನಾವು ಇಲ್ಲಿಂದ ಹೊರಡುವುದಿಲ್ಲ” ಎಂದು ದೃಢವಾಗಿ ಹೇಳಿದರು.

ವೇದಿಕೆಯಲ್ಲಿ ಮಾರೇಗೌಡ, ಗೋಪಿನಾಥ್, ರಮೇಶ್ ಚೀಮಾಚನಹಳ್ಳಿ, ಅಶ್ವಥ್ಥಪ್ಪ, ಪ್ರಭಾ ಬೆಳವಂಗಲ, ರಘು, ಸಂಯುಕ್ತ ಹೋರಾಟ ಕರ್ನಾಟಕದ ಪ್ರತಿನಿಧಿಗಳಾದ ಬಡಗಲಪುರ ನಾಗೇಂದ್ರ, ಎಸ್ ವರಲಕ್ಷ್ಮೀ, ನೂರ್ ಶ್ರೀಧರ್, ಎಚ್.ಆರ್.ಬಸವರಾಜಪ್ಪ, ಎಸ್ ಮೀನಾಕ್ಷಿ ಸುಂದರಂ, ಡಾ.ಸಿದ್ದನಗೌಡ ಪಾಟೀಲ್, ಗುರುಪ್ರಸಾದ್ ಕೆರಗೋಡು, ಯು ಬಸವರಾಜ, ಚುಕ್ಕಿ ನಂಜುಂಡಸ್ವಾಮಿ, ವಿ ನಾಗರಾಜ್, ಪಿ ಪಿ ಅಪ್ಪಣ್ಣ, ಡಿ.ಎಚ್.ಪೂಜಾರ್, ಕೆ.ವಿ.ಭಟ್, ಮಾವಳ್ಳಿ ಶಂಕರ್‌, ರಾಷ್ಟ್ರೀಯ ನಾಯಕಾರ ದರ್ಶನ್‌ ಪಾಲ್‌, ಯುದ್‌ವೀರ್‌ ಸಿಂಗ್‌, ರಾಕೇಶ್‌ ಟಿಕಾಯತ್‌, ಡಾ.ಸುನೀಲಮ್‌, ವಿಜು ಕೃಷ್ಣನ್‌, ಪಿ,ಟಿ.ಜಾನ್‌, ನಟ ಪ್ರಕಾಶ್ ರಾಜ್, ಪತ್ರಕರ್ತ ಇಂದೂಧರ ಹೊನ್ನಾಪುರ, ಚಿಂತಕ ಎಸ್.ಆರ್.ಹಿರೇಮಠ್‌ ಉಪಸ್ಥಿತರಿದ್ದರು.

ದೇವನಹಳ್ಳಿ: ಭೂಸ್ವಾಧೀನ ಅಧಿಸೂಚನೆ  ರದ್ದುಗೊಳಿಸಿ; ಸರಕಾರಕ್ಕೆ ಗುಜರಾತ್‌ನ ಪ್ರಮುಖ ಟ್ರೇಡ್ ಯೂನಿಯನ್ ಮಜೂರ್ ಅಧಿಕಾರ್ ಮಂಚ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...