HomeUncategorized'ನಾಡ ಉಳಿಸಿ ಸಮಾವೇಶ': ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ - ಬಡಗಲಪುರ...

‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

- Advertisement -
- Advertisement -

ದೇವನಹಳ್ಳಿ, ಬೆಂಗಳೂರು: ವಿಶ್ವ ವ್ಯಾಪಾರ ಒಪ್ಪಂದಗಳ ಪರಿಣಾಮವಾಗಿ ಕಾರ್ಪೊರೇಟ್ ಯೋಜನೆಗಳು ರೈತರು ಮತ್ತು ಜನಚಳವಳಿಗಳ ಹಕ್ಕುಗಳನ್ನು ಹತ್ತಿಕ್ಕಲು ಯತ್ನಿಸುತ್ತಿವೆ ಎಂದು ಬಡಗಲಪುರ ನಾಗೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನಾಡ ಉಳಿಸಿ ಸಮಾವೇಶ’ದಲ್ಲಿ ಇಂದು (ಜುಲೈ 4) ಮಾತನಾಡಿದ ಅವರು, ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯದ ಇತಿಹಾಸದಲ್ಲಿ ‘ಐತಿಹಾಸಿಕ ದಾಖಲೆ’ ಎಂದು ಬಣ್ಣಿಸಿ, ಸರ್ಕಾರವು ಬ್ರಿಟಿಷರ ಪದ್ಧತಿಗಳನ್ನೇ ಮುಂದುವರೆಸುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

“ನಾವು ‘ನೇಗಿಲ ಯೋಗಿ’ಯ ಹಾಡನ್ನು ಕೇಳಿದ್ದೇವೆ. ಆ ಸಂದರ್ಭದಲ್ಲಿ ನಾಡಿನ ಜನಚಳವಳಿಗಳಲ್ಲಿ ಹಸಿರು, ನೀಲಿ, ಕೆಂಪು ಬಾವುಟುಗಳು ಒಂದಾಗಿದ್ದವು. ಈಗಲೂ ಅದೇ ಐಕ್ಯತೆ ಇದೆ” ಎಂದು ನಾಗೇಂದ್ರ ಸ್ಮರಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ನೀತಿಗಳನ್ನು ಅನುಸರಿಸಿ ರೈತರ ಭೂಮಿಗೆ ಕೈ ಹಾಕುತ್ತಿವೆ ಎಂದು ಅವರು ಆರೋಪಿಸಿದರು.

ಐತಿಹಾಸಿಕ ದೇವನಹಳ್ಳಿ ಹೋರಾಟ – 1184 ದಿನಗಳ ಕೆಚ್ಚೆದೆಯ ಸತ್ಯಾಗ್ರಹ: ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಚಳವಳಿ 384 ದಿನಗಳ ಕಾಲ ನಡೆದಿತ್ತು. ಆದರೆ, ದೇವನಹಳ್ಳಿ ಹೋರಾಟ ಈಗಾಗಲೇ 1184 ದಿನಗಳನ್ನು ದಾಟಿದೆ. ಇದು ಸರಕಾರದ ವಿರುದ್ಧ ನಡೆದ ದಿಟ್ಟ ಹೋರಾಟವಾಗಿದೆ ಎಂದು ನಾಗೇಂದ್ರ ಒತ್ತಿ ಹೇಳಿದರು. “ಸಂಯುಕ್ತ ಹೋರಾಟವು ಈ ಚಳವಳಿಗೆ ಬೆನ್ನೆಲುಬಾಗಿ ನಿಂತು, ರಾಜ್ಯ ಹಾಗೂ ರಾಷ್ಟ್ರಮಟ್ಟದ ಹೋರಾಟವನ್ನಾಗಿಸಿದೆ. ರೈತರ ಮತ್ತು ಭೂಮಿಯ ವಿಷಯದಲ್ಲಿ ರಾಜ್ಯದ ಎಲ್ಲ ವರ್ಗಗಳೂ ಒಂದಾಗಿರುವುದು ವಿಶಿಷ್ಟವಾಗಿದೆ” ಎಂದರು.

ಈ ಹೋರಾಟವು ನಾಡಿನ ಜಲ ಮತ್ತು ಸಂಪತ್ತನ್ನು ಉಳಿಸುವಲ್ಲಿ ರೂಪುಗೊಂಡ ಅಪರೂಪದ ಚಳವಳಿಯಾಗಿದೆ. ಇದು ಭವಿಷ್ಯದಲ್ಲಿ ಅನಿಷ್ಟ ದುಷ್ಟಕೂಟಗಳನ್ನು ನಾಶಮಾಡಲು ನಾಂದಿಯಾಗುತ್ತದೆ ಎಂದು ಬಡಗಲಪುರ ನಾಗೇಂದ್ರ ಭವಿಷ್ಯ ನುಡಿದರು.

ಬಿಜೆಪಿ-ಕಾಂಗ್ರೆಸ್ ಕಾರ್ಪೊರೇಟ್‌ಗಳ ‘ಒಂದೇ ನಾಣ್ಯದ ಎರಡು ಮುಖಗಳು’: “ಒಂದು ಕಡೆ ಮೋದಿ ಸರಕಾರ, ಮತ್ತೊಂದು ಕಡೆ ಸಿದ್ದರಾಮಯ್ಯ ಸರಕಾರ. ಎರಡು ಬೇರೆ ಬೇರೆ ಪಕ್ಷಗಳು, ಆದರೆ ಅವುಗಳ ನೀತಿಗಳು ಒಂದೇ. ಇವೆರಡೂ ಕಾರ್ಪೊರೇಟ್‌ ನೀತಿಗಳನ್ನು ಮುಂದುವರೆಸುತ್ತಿವೆ. ಆ ನಿಟ್ಟಿನಲ್ಲಿ ಭೂಮಿಗೆ ಕೈ ಹಾಕಕ್ಕೆ ಬಂದಿವೆ” ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇವನಹಳ್ಳಿ ಹೋರಾಟವು ಸರ್ಕಾರಗಳಿಗೆ ‘ಬಿಸಿ ಮುಟ್ಟಿಸಿದೆ’. “ಈಗ 10 ದಿನಗಳು ಸಮಯ ತೆಗೆದುಕೊಂಡು ಬ್ರಿಟಿಷರ ಪದ್ಧತಿಯನ್ನು ಮುಂದುವರೆಸಲು ಹೊರಟಿದೆ” ಎಂದು ಅವರು ತೀವ್ರವಾಗಿ ಖಂಡಿಸಿದರು.

ರೈತರು, ದಲಿತರು, ಕಾರ್ಮಿಕರ ಸ್ಪಷ್ಟ ಎಚ್ಚರಿಕೆ: “ಇದು ಬಸವಣ್ಣ, ಸಂಗೊಳ್ಳಿ ರಾಯಣ್ಣ, ಟಿಪ್ಪು ಸುಲ್ತಾನ, ಕಿತ್ತೂರು ರಾಣಿ ಚೆನ್ನಮ್ಮನ ನಾಡು. ಇಲ್ಲಿ ಸಾಧು-ಸಂತರು, ಸೂಫಿಗಳು ತಿರುಗಾಡಿದ ನೆಲ. ರೈತರು ಈಗ ಕೃಷಿ ಸಂಸ್ಕೃತಿಯನ್ನು ಉಳಿಸಲು ಹೊರಟಿದ್ದಾರೆ. ದಲಿತರು, ರೈತರು, ಕಾರ್ಮಿಕರು, ಕಲಾವಿದರು, ಸಾಹಿತಿಗಳು ನಾವೆಲ್ಲರೂ ಸರಕಾರಕ್ಕೆ ಸ್ಪಷ್ಟ ಸಂದೇಶ ಕೊಡುತ್ತಿದ್ದೇವೆ” ಎಂದು ನಾಗೇಂದ್ರ ಗುಡುಗಿದರು.

“ಸರಕಾರಕ್ಕೆ ಹೇಳುವುದು ಒಂದೇ, ನಾವು ಕೈಗಾರಿಕೆಗಳಿಗೆ ಭೂಮಿಯನ್ನು ಕೊಡುವುದಿಲ್ಲ. ಬಲವಂತದಿಂದ ಕಿತ್ತುಕೊಳ್ಳಲು ಪ್ರಯತ್ನ ಮಾಡಲು ಮುಂದಾದರೆ, ಒಂದಿಂಚು ಕೂಡ ಕೊಡುವುದಿಲ್ಲ. ಸಿದ್ದರಾಮಯ್ಯ ನಮ್ಮ ಭೂಮಿ ನಮಗೆ ನೀಡುವ ಭರವಸೆ ಇದೆ” ಎಂದು ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯಗೆ ನೇರ ಸವಾಲು: ‘ಭೂಮಿ ತಂಟೆಗೆ ಬಂದರೆ ರಸ್ತೆಯಲ್ಲಿ ತಿರುಗಾಡಲು ಸಾಧ್ಯವಿಲ್ಲ!’ “ನಂಜುಂಡಸ್ವಾಮಿ ಅವರ ಶಿಷ್ಯರಾಗಿರುವುದರಿಂದ ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ ಇದೆ. ಆ ನಂಬಿಕೆಯನ್ನು ಉಳಿಸಿಕೊಳ್ಳಿ. ಎಂ.ಬಿ. ಪಾಟೀಲ್ ಮುಖ್ಯಮಂತ್ರಿ ಆಗಬೇಕೆನ್ನುವ ವಿಶ್ವಾಸದಲ್ಲಿ ನೀವು ಇದ್ದೀರಿ. ಆದರೆ, ಇದೀಗ ಭೂಮಿಯನ್ನು ಕೈ ಬಿಡದಿದ್ದರೆ, ಮುಂದೆ ನೀವು ವಿಧಾನ ಸೌಧಕ್ಕೆ ಆಯ್ಕೆ ಆಗುವುದಕ್ಕೂ ಸಾಧ್ಯವಿಲ್ಲ. ಭೂಮಿ ತಂಟೆಗೆ ಬಂದರೆ, ನೀವು ರಸ್ತೆಯಲ್ಲಿ ಸುಲಭವಾಗಿ ತಿರುಗಾಡುವುದಕ್ಕೆ ಸಾಧ್ಯವಿಲ್ಲ” ಎಂದು ನಾಗೇಂದ್ರ ನೇರವಾಗಿ ಸವಾಲು ಹಾಕಿದರು.

“ನಮ್ಮ ಭೂಮಿ ನಮಗೆ ಸಿಗುವ ತನಕ ಹೋರಾಟ ನಿಲ್ಲಿಸುವುದಿಲ್ಲ, ನಾವು ಇಲ್ಲಿಂದ ಹೊರಡುವುದಿಲ್ಲ” ಎಂದು ದೃಢವಾಗಿ ಹೇಳಿದರು.

ವೇದಿಕೆಯಲ್ಲಿ ಮಾರೇಗೌಡ, ಗೋಪಿನಾಥ್, ರಮೇಶ್ ಚೀಮಾಚನಹಳ್ಳಿ, ಅಶ್ವಥ್ಥಪ್ಪ, ಪ್ರಭಾ ಬೆಳವಂಗಲ, ರಘು, ಸಂಯುಕ್ತ ಹೋರಾಟ ಕರ್ನಾಟಕದ ಪ್ರತಿನಿಧಿಗಳಾದ ಬಡಗಲಪುರ ನಾಗೇಂದ್ರ, ಎಸ್ ವರಲಕ್ಷ್ಮೀ, ನೂರ್ ಶ್ರೀಧರ್, ಎಚ್.ಆರ್.ಬಸವರಾಜಪ್ಪ, ಎಸ್ ಮೀನಾಕ್ಷಿ ಸುಂದರಂ, ಡಾ.ಸಿದ್ದನಗೌಡ ಪಾಟೀಲ್, ಗುರುಪ್ರಸಾದ್ ಕೆರಗೋಡು, ಯು ಬಸವರಾಜ, ಚುಕ್ಕಿ ನಂಜುಂಡಸ್ವಾಮಿ, ವಿ ನಾಗರಾಜ್, ಪಿ ಪಿ ಅಪ್ಪಣ್ಣ, ಡಿ.ಎಚ್.ಪೂಜಾರ್, ಕೆ.ವಿ.ಭಟ್, ಮಾವಳ್ಳಿ ಶಂಕರ್‌, ರಾಷ್ಟ್ರೀಯ ನಾಯಕಾರ ದರ್ಶನ್‌ ಪಾಲ್‌, ಯುದ್‌ವೀರ್‌ ಸಿಂಗ್‌, ರಾಕೇಶ್‌ ಟಿಕಾಯತ್‌, ಡಾ.ಸುನೀಲಮ್‌, ವಿಜು ಕೃಷ್ಣನ್‌, ಪಿ,ಟಿ.ಜಾನ್‌, ನಟ ಪ್ರಕಾಶ್ ರಾಜ್, ಪತ್ರಕರ್ತ ಇಂದೂಧರ ಹೊನ್ನಾಪುರ, ಚಿಂತಕ ಎಸ್.ಆರ್.ಹಿರೇಮಠ್‌ ಉಪಸ್ಥಿತರಿದ್ದರು.

ದೇವನಹಳ್ಳಿ: ಭೂಸ್ವಾಧೀನ ಅಧಿಸೂಚನೆ  ರದ್ದುಗೊಳಿಸಿ; ಸರಕಾರಕ್ಕೆ ಗುಜರಾತ್‌ನ ಪ್ರಮುಖ ಟ್ರೇಡ್ ಯೂನಿಯನ್ ಮಜೂರ್ ಅಧಿಕಾರ್ ಮಂಚ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...