HomeUncategorized'ನಾಡ ಉಳಿಸಿ ಸಮಾವೇಶ': ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ - ಬಡಗಲಪುರ...

‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

- Advertisement -
- Advertisement -

ದೇವನಹಳ್ಳಿ, ಬೆಂಗಳೂರು: ವಿಶ್ವ ವ್ಯಾಪಾರ ಒಪ್ಪಂದಗಳ ಪರಿಣಾಮವಾಗಿ ಕಾರ್ಪೊರೇಟ್ ಯೋಜನೆಗಳು ರೈತರು ಮತ್ತು ಜನಚಳವಳಿಗಳ ಹಕ್ಕುಗಳನ್ನು ಹತ್ತಿಕ್ಕಲು ಯತ್ನಿಸುತ್ತಿವೆ ಎಂದು ಬಡಗಲಪುರ ನಾಗೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನಾಡ ಉಳಿಸಿ ಸಮಾವೇಶ’ದಲ್ಲಿ ಇಂದು (ಜುಲೈ 4) ಮಾತನಾಡಿದ ಅವರು, ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯದ ಇತಿಹಾಸದಲ್ಲಿ ‘ಐತಿಹಾಸಿಕ ದಾಖಲೆ’ ಎಂದು ಬಣ್ಣಿಸಿ, ಸರ್ಕಾರವು ಬ್ರಿಟಿಷರ ಪದ್ಧತಿಗಳನ್ನೇ ಮುಂದುವರೆಸುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

“ನಾವು ‘ನೇಗಿಲ ಯೋಗಿ’ಯ ಹಾಡನ್ನು ಕೇಳಿದ್ದೇವೆ. ಆ ಸಂದರ್ಭದಲ್ಲಿ ನಾಡಿನ ಜನಚಳವಳಿಗಳಲ್ಲಿ ಹಸಿರು, ನೀಲಿ, ಕೆಂಪು ಬಾವುಟುಗಳು ಒಂದಾಗಿದ್ದವು. ಈಗಲೂ ಅದೇ ಐಕ್ಯತೆ ಇದೆ” ಎಂದು ನಾಗೇಂದ್ರ ಸ್ಮರಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ನೀತಿಗಳನ್ನು ಅನುಸರಿಸಿ ರೈತರ ಭೂಮಿಗೆ ಕೈ ಹಾಕುತ್ತಿವೆ ಎಂದು ಅವರು ಆರೋಪಿಸಿದರು.

ಐತಿಹಾಸಿಕ ದೇವನಹಳ್ಳಿ ಹೋರಾಟ – 1184 ದಿನಗಳ ಕೆಚ್ಚೆದೆಯ ಸತ್ಯಾಗ್ರಹ: ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಚಳವಳಿ 384 ದಿನಗಳ ಕಾಲ ನಡೆದಿತ್ತು. ಆದರೆ, ದೇವನಹಳ್ಳಿ ಹೋರಾಟ ಈಗಾಗಲೇ 1184 ದಿನಗಳನ್ನು ದಾಟಿದೆ. ಇದು ಸರಕಾರದ ವಿರುದ್ಧ ನಡೆದ ದಿಟ್ಟ ಹೋರಾಟವಾಗಿದೆ ಎಂದು ನಾಗೇಂದ್ರ ಒತ್ತಿ ಹೇಳಿದರು. “ಸಂಯುಕ್ತ ಹೋರಾಟವು ಈ ಚಳವಳಿಗೆ ಬೆನ್ನೆಲುಬಾಗಿ ನಿಂತು, ರಾಜ್ಯ ಹಾಗೂ ರಾಷ್ಟ್ರಮಟ್ಟದ ಹೋರಾಟವನ್ನಾಗಿಸಿದೆ. ರೈತರ ಮತ್ತು ಭೂಮಿಯ ವಿಷಯದಲ್ಲಿ ರಾಜ್ಯದ ಎಲ್ಲ ವರ್ಗಗಳೂ ಒಂದಾಗಿರುವುದು ವಿಶಿಷ್ಟವಾಗಿದೆ” ಎಂದರು.

ಈ ಹೋರಾಟವು ನಾಡಿನ ಜಲ ಮತ್ತು ಸಂಪತ್ತನ್ನು ಉಳಿಸುವಲ್ಲಿ ರೂಪುಗೊಂಡ ಅಪರೂಪದ ಚಳವಳಿಯಾಗಿದೆ. ಇದು ಭವಿಷ್ಯದಲ್ಲಿ ಅನಿಷ್ಟ ದುಷ್ಟಕೂಟಗಳನ್ನು ನಾಶಮಾಡಲು ನಾಂದಿಯಾಗುತ್ತದೆ ಎಂದು ಬಡಗಲಪುರ ನಾಗೇಂದ್ರ ಭವಿಷ್ಯ ನುಡಿದರು.

ಬಿಜೆಪಿ-ಕಾಂಗ್ರೆಸ್ ಕಾರ್ಪೊರೇಟ್‌ಗಳ ‘ಒಂದೇ ನಾಣ್ಯದ ಎರಡು ಮುಖಗಳು’: “ಒಂದು ಕಡೆ ಮೋದಿ ಸರಕಾರ, ಮತ್ತೊಂದು ಕಡೆ ಸಿದ್ದರಾಮಯ್ಯ ಸರಕಾರ. ಎರಡು ಬೇರೆ ಬೇರೆ ಪಕ್ಷಗಳು, ಆದರೆ ಅವುಗಳ ನೀತಿಗಳು ಒಂದೇ. ಇವೆರಡೂ ಕಾರ್ಪೊರೇಟ್‌ ನೀತಿಗಳನ್ನು ಮುಂದುವರೆಸುತ್ತಿವೆ. ಆ ನಿಟ್ಟಿನಲ್ಲಿ ಭೂಮಿಗೆ ಕೈ ಹಾಕಕ್ಕೆ ಬಂದಿವೆ” ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇವನಹಳ್ಳಿ ಹೋರಾಟವು ಸರ್ಕಾರಗಳಿಗೆ ‘ಬಿಸಿ ಮುಟ್ಟಿಸಿದೆ’. “ಈಗ 10 ದಿನಗಳು ಸಮಯ ತೆಗೆದುಕೊಂಡು ಬ್ರಿಟಿಷರ ಪದ್ಧತಿಯನ್ನು ಮುಂದುವರೆಸಲು ಹೊರಟಿದೆ” ಎಂದು ಅವರು ತೀವ್ರವಾಗಿ ಖಂಡಿಸಿದರು.

ರೈತರು, ದಲಿತರು, ಕಾರ್ಮಿಕರ ಸ್ಪಷ್ಟ ಎಚ್ಚರಿಕೆ: “ಇದು ಬಸವಣ್ಣ, ಸಂಗೊಳ್ಳಿ ರಾಯಣ್ಣ, ಟಿಪ್ಪು ಸುಲ್ತಾನ, ಕಿತ್ತೂರು ರಾಣಿ ಚೆನ್ನಮ್ಮನ ನಾಡು. ಇಲ್ಲಿ ಸಾಧು-ಸಂತರು, ಸೂಫಿಗಳು ತಿರುಗಾಡಿದ ನೆಲ. ರೈತರು ಈಗ ಕೃಷಿ ಸಂಸ್ಕೃತಿಯನ್ನು ಉಳಿಸಲು ಹೊರಟಿದ್ದಾರೆ. ದಲಿತರು, ರೈತರು, ಕಾರ್ಮಿಕರು, ಕಲಾವಿದರು, ಸಾಹಿತಿಗಳು ನಾವೆಲ್ಲರೂ ಸರಕಾರಕ್ಕೆ ಸ್ಪಷ್ಟ ಸಂದೇಶ ಕೊಡುತ್ತಿದ್ದೇವೆ” ಎಂದು ನಾಗೇಂದ್ರ ಗುಡುಗಿದರು.

“ಸರಕಾರಕ್ಕೆ ಹೇಳುವುದು ಒಂದೇ, ನಾವು ಕೈಗಾರಿಕೆಗಳಿಗೆ ಭೂಮಿಯನ್ನು ಕೊಡುವುದಿಲ್ಲ. ಬಲವಂತದಿಂದ ಕಿತ್ತುಕೊಳ್ಳಲು ಪ್ರಯತ್ನ ಮಾಡಲು ಮುಂದಾದರೆ, ಒಂದಿಂಚು ಕೂಡ ಕೊಡುವುದಿಲ್ಲ. ಸಿದ್ದರಾಮಯ್ಯ ನಮ್ಮ ಭೂಮಿ ನಮಗೆ ನೀಡುವ ಭರವಸೆ ಇದೆ” ಎಂದು ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯಗೆ ನೇರ ಸವಾಲು: ‘ಭೂಮಿ ತಂಟೆಗೆ ಬಂದರೆ ರಸ್ತೆಯಲ್ಲಿ ತಿರುಗಾಡಲು ಸಾಧ್ಯವಿಲ್ಲ!’ “ನಂಜುಂಡಸ್ವಾಮಿ ಅವರ ಶಿಷ್ಯರಾಗಿರುವುದರಿಂದ ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ ಇದೆ. ಆ ನಂಬಿಕೆಯನ್ನು ಉಳಿಸಿಕೊಳ್ಳಿ. ಎಂ.ಬಿ. ಪಾಟೀಲ್ ಮುಖ್ಯಮಂತ್ರಿ ಆಗಬೇಕೆನ್ನುವ ವಿಶ್ವಾಸದಲ್ಲಿ ನೀವು ಇದ್ದೀರಿ. ಆದರೆ, ಇದೀಗ ಭೂಮಿಯನ್ನು ಕೈ ಬಿಡದಿದ್ದರೆ, ಮುಂದೆ ನೀವು ವಿಧಾನ ಸೌಧಕ್ಕೆ ಆಯ್ಕೆ ಆಗುವುದಕ್ಕೂ ಸಾಧ್ಯವಿಲ್ಲ. ಭೂಮಿ ತಂಟೆಗೆ ಬಂದರೆ, ನೀವು ರಸ್ತೆಯಲ್ಲಿ ಸುಲಭವಾಗಿ ತಿರುಗಾಡುವುದಕ್ಕೆ ಸಾಧ್ಯವಿಲ್ಲ” ಎಂದು ನಾಗೇಂದ್ರ ನೇರವಾಗಿ ಸವಾಲು ಹಾಕಿದರು.

“ನಮ್ಮ ಭೂಮಿ ನಮಗೆ ಸಿಗುವ ತನಕ ಹೋರಾಟ ನಿಲ್ಲಿಸುವುದಿಲ್ಲ, ನಾವು ಇಲ್ಲಿಂದ ಹೊರಡುವುದಿಲ್ಲ” ಎಂದು ದೃಢವಾಗಿ ಹೇಳಿದರು.

ವೇದಿಕೆಯಲ್ಲಿ ಮಾರೇಗೌಡ, ಗೋಪಿನಾಥ್, ರಮೇಶ್ ಚೀಮಾಚನಹಳ್ಳಿ, ಅಶ್ವಥ್ಥಪ್ಪ, ಪ್ರಭಾ ಬೆಳವಂಗಲ, ರಘು, ಸಂಯುಕ್ತ ಹೋರಾಟ ಕರ್ನಾಟಕದ ಪ್ರತಿನಿಧಿಗಳಾದ ಬಡಗಲಪುರ ನಾಗೇಂದ್ರ, ಎಸ್ ವರಲಕ್ಷ್ಮೀ, ನೂರ್ ಶ್ರೀಧರ್, ಎಚ್.ಆರ್.ಬಸವರಾಜಪ್ಪ, ಎಸ್ ಮೀನಾಕ್ಷಿ ಸುಂದರಂ, ಡಾ.ಸಿದ್ದನಗೌಡ ಪಾಟೀಲ್, ಗುರುಪ್ರಸಾದ್ ಕೆರಗೋಡು, ಯು ಬಸವರಾಜ, ಚುಕ್ಕಿ ನಂಜುಂಡಸ್ವಾಮಿ, ವಿ ನಾಗರಾಜ್, ಪಿ ಪಿ ಅಪ್ಪಣ್ಣ, ಡಿ.ಎಚ್.ಪೂಜಾರ್, ಕೆ.ವಿ.ಭಟ್, ಮಾವಳ್ಳಿ ಶಂಕರ್‌, ರಾಷ್ಟ್ರೀಯ ನಾಯಕಾರ ದರ್ಶನ್‌ ಪಾಲ್‌, ಯುದ್‌ವೀರ್‌ ಸಿಂಗ್‌, ರಾಕೇಶ್‌ ಟಿಕಾಯತ್‌, ಡಾ.ಸುನೀಲಮ್‌, ವಿಜು ಕೃಷ್ಣನ್‌, ಪಿ,ಟಿ.ಜಾನ್‌, ನಟ ಪ್ರಕಾಶ್ ರಾಜ್, ಪತ್ರಕರ್ತ ಇಂದೂಧರ ಹೊನ್ನಾಪುರ, ಚಿಂತಕ ಎಸ್.ಆರ್.ಹಿರೇಮಠ್‌ ಉಪಸ್ಥಿತರಿದ್ದರು.

ದೇವನಹಳ್ಳಿ: ಭೂಸ್ವಾಧೀನ ಅಧಿಸೂಚನೆ  ರದ್ದುಗೊಳಿಸಿ; ಸರಕಾರಕ್ಕೆ ಗುಜರಾತ್‌ನ ಪ್ರಮುಖ ಟ್ರೇಡ್ ಯೂನಿಯನ್ ಮಜೂರ್ ಅಧಿಕಾರ್ ಮಂಚ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...