HomeUncategorized'ನಾಡ ಉಳಿಸಿ ಸಮಾವೇಶ': ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ - ಬಡಗಲಪುರ...

‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

- Advertisement -
- Advertisement -

ದೇವನಹಳ್ಳಿ, ಬೆಂಗಳೂರು: ವಿಶ್ವ ವ್ಯಾಪಾರ ಒಪ್ಪಂದಗಳ ಪರಿಣಾಮವಾಗಿ ಕಾರ್ಪೊರೇಟ್ ಯೋಜನೆಗಳು ರೈತರು ಮತ್ತು ಜನಚಳವಳಿಗಳ ಹಕ್ಕುಗಳನ್ನು ಹತ್ತಿಕ್ಕಲು ಯತ್ನಿಸುತ್ತಿವೆ ಎಂದು ಬಡಗಲಪುರ ನಾಗೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನಾಡ ಉಳಿಸಿ ಸಮಾವೇಶ’ದಲ್ಲಿ ಇಂದು (ಜುಲೈ 4) ಮಾತನಾಡಿದ ಅವರು, ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯದ ಇತಿಹಾಸದಲ್ಲಿ ‘ಐತಿಹಾಸಿಕ ದಾಖಲೆ’ ಎಂದು ಬಣ್ಣಿಸಿ, ಸರ್ಕಾರವು ಬ್ರಿಟಿಷರ ಪದ್ಧತಿಗಳನ್ನೇ ಮುಂದುವರೆಸುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

“ನಾವು ‘ನೇಗಿಲ ಯೋಗಿ’ಯ ಹಾಡನ್ನು ಕೇಳಿದ್ದೇವೆ. ಆ ಸಂದರ್ಭದಲ್ಲಿ ನಾಡಿನ ಜನಚಳವಳಿಗಳಲ್ಲಿ ಹಸಿರು, ನೀಲಿ, ಕೆಂಪು ಬಾವುಟುಗಳು ಒಂದಾಗಿದ್ದವು. ಈಗಲೂ ಅದೇ ಐಕ್ಯತೆ ಇದೆ” ಎಂದು ನಾಗೇಂದ್ರ ಸ್ಮರಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ನೀತಿಗಳನ್ನು ಅನುಸರಿಸಿ ರೈತರ ಭೂಮಿಗೆ ಕೈ ಹಾಕುತ್ತಿವೆ ಎಂದು ಅವರು ಆರೋಪಿಸಿದರು.

ಐತಿಹಾಸಿಕ ದೇವನಹಳ್ಳಿ ಹೋರಾಟ – 1184 ದಿನಗಳ ಕೆಚ್ಚೆದೆಯ ಸತ್ಯಾಗ್ರಹ: ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಚಳವಳಿ 384 ದಿನಗಳ ಕಾಲ ನಡೆದಿತ್ತು. ಆದರೆ, ದೇವನಹಳ್ಳಿ ಹೋರಾಟ ಈಗಾಗಲೇ 1184 ದಿನಗಳನ್ನು ದಾಟಿದೆ. ಇದು ಸರಕಾರದ ವಿರುದ್ಧ ನಡೆದ ದಿಟ್ಟ ಹೋರಾಟವಾಗಿದೆ ಎಂದು ನಾಗೇಂದ್ರ ಒತ್ತಿ ಹೇಳಿದರು. “ಸಂಯುಕ್ತ ಹೋರಾಟವು ಈ ಚಳವಳಿಗೆ ಬೆನ್ನೆಲುಬಾಗಿ ನಿಂತು, ರಾಜ್ಯ ಹಾಗೂ ರಾಷ್ಟ್ರಮಟ್ಟದ ಹೋರಾಟವನ್ನಾಗಿಸಿದೆ. ರೈತರ ಮತ್ತು ಭೂಮಿಯ ವಿಷಯದಲ್ಲಿ ರಾಜ್ಯದ ಎಲ್ಲ ವರ್ಗಗಳೂ ಒಂದಾಗಿರುವುದು ವಿಶಿಷ್ಟವಾಗಿದೆ” ಎಂದರು.

ಈ ಹೋರಾಟವು ನಾಡಿನ ಜಲ ಮತ್ತು ಸಂಪತ್ತನ್ನು ಉಳಿಸುವಲ್ಲಿ ರೂಪುಗೊಂಡ ಅಪರೂಪದ ಚಳವಳಿಯಾಗಿದೆ. ಇದು ಭವಿಷ್ಯದಲ್ಲಿ ಅನಿಷ್ಟ ದುಷ್ಟಕೂಟಗಳನ್ನು ನಾಶಮಾಡಲು ನಾಂದಿಯಾಗುತ್ತದೆ ಎಂದು ಬಡಗಲಪುರ ನಾಗೇಂದ್ರ ಭವಿಷ್ಯ ನುಡಿದರು.

ಬಿಜೆಪಿ-ಕಾಂಗ್ರೆಸ್ ಕಾರ್ಪೊರೇಟ್‌ಗಳ ‘ಒಂದೇ ನಾಣ್ಯದ ಎರಡು ಮುಖಗಳು’: “ಒಂದು ಕಡೆ ಮೋದಿ ಸರಕಾರ, ಮತ್ತೊಂದು ಕಡೆ ಸಿದ್ದರಾಮಯ್ಯ ಸರಕಾರ. ಎರಡು ಬೇರೆ ಬೇರೆ ಪಕ್ಷಗಳು, ಆದರೆ ಅವುಗಳ ನೀತಿಗಳು ಒಂದೇ. ಇವೆರಡೂ ಕಾರ್ಪೊರೇಟ್‌ ನೀತಿಗಳನ್ನು ಮುಂದುವರೆಸುತ್ತಿವೆ. ಆ ನಿಟ್ಟಿನಲ್ಲಿ ಭೂಮಿಗೆ ಕೈ ಹಾಕಕ್ಕೆ ಬಂದಿವೆ” ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇವನಹಳ್ಳಿ ಹೋರಾಟವು ಸರ್ಕಾರಗಳಿಗೆ ‘ಬಿಸಿ ಮುಟ್ಟಿಸಿದೆ’. “ಈಗ 10 ದಿನಗಳು ಸಮಯ ತೆಗೆದುಕೊಂಡು ಬ್ರಿಟಿಷರ ಪದ್ಧತಿಯನ್ನು ಮುಂದುವರೆಸಲು ಹೊರಟಿದೆ” ಎಂದು ಅವರು ತೀವ್ರವಾಗಿ ಖಂಡಿಸಿದರು.

ರೈತರು, ದಲಿತರು, ಕಾರ್ಮಿಕರ ಸ್ಪಷ್ಟ ಎಚ್ಚರಿಕೆ: “ಇದು ಬಸವಣ್ಣ, ಸಂಗೊಳ್ಳಿ ರಾಯಣ್ಣ, ಟಿಪ್ಪು ಸುಲ್ತಾನ, ಕಿತ್ತೂರು ರಾಣಿ ಚೆನ್ನಮ್ಮನ ನಾಡು. ಇಲ್ಲಿ ಸಾಧು-ಸಂತರು, ಸೂಫಿಗಳು ತಿರುಗಾಡಿದ ನೆಲ. ರೈತರು ಈಗ ಕೃಷಿ ಸಂಸ್ಕೃತಿಯನ್ನು ಉಳಿಸಲು ಹೊರಟಿದ್ದಾರೆ. ದಲಿತರು, ರೈತರು, ಕಾರ್ಮಿಕರು, ಕಲಾವಿದರು, ಸಾಹಿತಿಗಳು ನಾವೆಲ್ಲರೂ ಸರಕಾರಕ್ಕೆ ಸ್ಪಷ್ಟ ಸಂದೇಶ ಕೊಡುತ್ತಿದ್ದೇವೆ” ಎಂದು ನಾಗೇಂದ್ರ ಗುಡುಗಿದರು.

“ಸರಕಾರಕ್ಕೆ ಹೇಳುವುದು ಒಂದೇ, ನಾವು ಕೈಗಾರಿಕೆಗಳಿಗೆ ಭೂಮಿಯನ್ನು ಕೊಡುವುದಿಲ್ಲ. ಬಲವಂತದಿಂದ ಕಿತ್ತುಕೊಳ್ಳಲು ಪ್ರಯತ್ನ ಮಾಡಲು ಮುಂದಾದರೆ, ಒಂದಿಂಚು ಕೂಡ ಕೊಡುವುದಿಲ್ಲ. ಸಿದ್ದರಾಮಯ್ಯ ನಮ್ಮ ಭೂಮಿ ನಮಗೆ ನೀಡುವ ಭರವಸೆ ಇದೆ” ಎಂದು ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯಗೆ ನೇರ ಸವಾಲು: ‘ಭೂಮಿ ತಂಟೆಗೆ ಬಂದರೆ ರಸ್ತೆಯಲ್ಲಿ ತಿರುಗಾಡಲು ಸಾಧ್ಯವಿಲ್ಲ!’ “ನಂಜುಂಡಸ್ವಾಮಿ ಅವರ ಶಿಷ್ಯರಾಗಿರುವುದರಿಂದ ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ ಇದೆ. ಆ ನಂಬಿಕೆಯನ್ನು ಉಳಿಸಿಕೊಳ್ಳಿ. ಎಂ.ಬಿ. ಪಾಟೀಲ್ ಮುಖ್ಯಮಂತ್ರಿ ಆಗಬೇಕೆನ್ನುವ ವಿಶ್ವಾಸದಲ್ಲಿ ನೀವು ಇದ್ದೀರಿ. ಆದರೆ, ಇದೀಗ ಭೂಮಿಯನ್ನು ಕೈ ಬಿಡದಿದ್ದರೆ, ಮುಂದೆ ನೀವು ವಿಧಾನ ಸೌಧಕ್ಕೆ ಆಯ್ಕೆ ಆಗುವುದಕ್ಕೂ ಸಾಧ್ಯವಿಲ್ಲ. ಭೂಮಿ ತಂಟೆಗೆ ಬಂದರೆ, ನೀವು ರಸ್ತೆಯಲ್ಲಿ ಸುಲಭವಾಗಿ ತಿರುಗಾಡುವುದಕ್ಕೆ ಸಾಧ್ಯವಿಲ್ಲ” ಎಂದು ನಾಗೇಂದ್ರ ನೇರವಾಗಿ ಸವಾಲು ಹಾಕಿದರು.

“ನಮ್ಮ ಭೂಮಿ ನಮಗೆ ಸಿಗುವ ತನಕ ಹೋರಾಟ ನಿಲ್ಲಿಸುವುದಿಲ್ಲ, ನಾವು ಇಲ್ಲಿಂದ ಹೊರಡುವುದಿಲ್ಲ” ಎಂದು ದೃಢವಾಗಿ ಹೇಳಿದರು.

ವೇದಿಕೆಯಲ್ಲಿ ಮಾರೇಗೌಡ, ಗೋಪಿನಾಥ್, ರಮೇಶ್ ಚೀಮಾಚನಹಳ್ಳಿ, ಅಶ್ವಥ್ಥಪ್ಪ, ಪ್ರಭಾ ಬೆಳವಂಗಲ, ರಘು, ಸಂಯುಕ್ತ ಹೋರಾಟ ಕರ್ನಾಟಕದ ಪ್ರತಿನಿಧಿಗಳಾದ ಬಡಗಲಪುರ ನಾಗೇಂದ್ರ, ಎಸ್ ವರಲಕ್ಷ್ಮೀ, ನೂರ್ ಶ್ರೀಧರ್, ಎಚ್.ಆರ್.ಬಸವರಾಜಪ್ಪ, ಎಸ್ ಮೀನಾಕ್ಷಿ ಸುಂದರಂ, ಡಾ.ಸಿದ್ದನಗೌಡ ಪಾಟೀಲ್, ಗುರುಪ್ರಸಾದ್ ಕೆರಗೋಡು, ಯು ಬಸವರಾಜ, ಚುಕ್ಕಿ ನಂಜುಂಡಸ್ವಾಮಿ, ವಿ ನಾಗರಾಜ್, ಪಿ ಪಿ ಅಪ್ಪಣ್ಣ, ಡಿ.ಎಚ್.ಪೂಜಾರ್, ಕೆ.ವಿ.ಭಟ್, ಮಾವಳ್ಳಿ ಶಂಕರ್‌, ರಾಷ್ಟ್ರೀಯ ನಾಯಕಾರ ದರ್ಶನ್‌ ಪಾಲ್‌, ಯುದ್‌ವೀರ್‌ ಸಿಂಗ್‌, ರಾಕೇಶ್‌ ಟಿಕಾಯತ್‌, ಡಾ.ಸುನೀಲಮ್‌, ವಿಜು ಕೃಷ್ಣನ್‌, ಪಿ,ಟಿ.ಜಾನ್‌, ನಟ ಪ್ರಕಾಶ್ ರಾಜ್, ಪತ್ರಕರ್ತ ಇಂದೂಧರ ಹೊನ್ನಾಪುರ, ಚಿಂತಕ ಎಸ್.ಆರ್.ಹಿರೇಮಠ್‌ ಉಪಸ್ಥಿತರಿದ್ದರು.

ದೇವನಹಳ್ಳಿ: ಭೂಸ್ವಾಧೀನ ಅಧಿಸೂಚನೆ  ರದ್ದುಗೊಳಿಸಿ; ಸರಕಾರಕ್ಕೆ ಗುಜರಾತ್‌ನ ಪ್ರಮುಖ ಟ್ರೇಡ್ ಯೂನಿಯನ್ ಮಜೂರ್ ಅಧಿಕಾರ್ ಮಂಚ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...