HomeUncategorized'ನಾಡ ಉಳಿಸಿ ಸಮಾವೇಶ': ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ - ಬಡಗಲಪುರ...

‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

- Advertisement -
- Advertisement -

ದೇವನಹಳ್ಳಿ, ಬೆಂಗಳೂರು: ವಿಶ್ವ ವ್ಯಾಪಾರ ಒಪ್ಪಂದಗಳ ಪರಿಣಾಮವಾಗಿ ಕಾರ್ಪೊರೇಟ್ ಯೋಜನೆಗಳು ರೈತರು ಮತ್ತು ಜನಚಳವಳಿಗಳ ಹಕ್ಕುಗಳನ್ನು ಹತ್ತಿಕ್ಕಲು ಯತ್ನಿಸುತ್ತಿವೆ ಎಂದು ಬಡಗಲಪುರ ನಾಗೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನಾಡ ಉಳಿಸಿ ಸಮಾವೇಶ’ದಲ್ಲಿ ಇಂದು (ಜುಲೈ 4) ಮಾತನಾಡಿದ ಅವರು, ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯದ ಇತಿಹಾಸದಲ್ಲಿ ‘ಐತಿಹಾಸಿಕ ದಾಖಲೆ’ ಎಂದು ಬಣ್ಣಿಸಿ, ಸರ್ಕಾರವು ಬ್ರಿಟಿಷರ ಪದ್ಧತಿಗಳನ್ನೇ ಮುಂದುವರೆಸುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

“ನಾವು ‘ನೇಗಿಲ ಯೋಗಿ’ಯ ಹಾಡನ್ನು ಕೇಳಿದ್ದೇವೆ. ಆ ಸಂದರ್ಭದಲ್ಲಿ ನಾಡಿನ ಜನಚಳವಳಿಗಳಲ್ಲಿ ಹಸಿರು, ನೀಲಿ, ಕೆಂಪು ಬಾವುಟುಗಳು ಒಂದಾಗಿದ್ದವು. ಈಗಲೂ ಅದೇ ಐಕ್ಯತೆ ಇದೆ” ಎಂದು ನಾಗೇಂದ್ರ ಸ್ಮರಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ನೀತಿಗಳನ್ನು ಅನುಸರಿಸಿ ರೈತರ ಭೂಮಿಗೆ ಕೈ ಹಾಕುತ್ತಿವೆ ಎಂದು ಅವರು ಆರೋಪಿಸಿದರು.

ಐತಿಹಾಸಿಕ ದೇವನಹಳ್ಳಿ ಹೋರಾಟ – 1184 ದಿನಗಳ ಕೆಚ್ಚೆದೆಯ ಸತ್ಯಾಗ್ರಹ: ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಚಳವಳಿ 384 ದಿನಗಳ ಕಾಲ ನಡೆದಿತ್ತು. ಆದರೆ, ದೇವನಹಳ್ಳಿ ಹೋರಾಟ ಈಗಾಗಲೇ 1184 ದಿನಗಳನ್ನು ದಾಟಿದೆ. ಇದು ಸರಕಾರದ ವಿರುದ್ಧ ನಡೆದ ದಿಟ್ಟ ಹೋರಾಟವಾಗಿದೆ ಎಂದು ನಾಗೇಂದ್ರ ಒತ್ತಿ ಹೇಳಿದರು. “ಸಂಯುಕ್ತ ಹೋರಾಟವು ಈ ಚಳವಳಿಗೆ ಬೆನ್ನೆಲುಬಾಗಿ ನಿಂತು, ರಾಜ್ಯ ಹಾಗೂ ರಾಷ್ಟ್ರಮಟ್ಟದ ಹೋರಾಟವನ್ನಾಗಿಸಿದೆ. ರೈತರ ಮತ್ತು ಭೂಮಿಯ ವಿಷಯದಲ್ಲಿ ರಾಜ್ಯದ ಎಲ್ಲ ವರ್ಗಗಳೂ ಒಂದಾಗಿರುವುದು ವಿಶಿಷ್ಟವಾಗಿದೆ” ಎಂದರು.

ಈ ಹೋರಾಟವು ನಾಡಿನ ಜಲ ಮತ್ತು ಸಂಪತ್ತನ್ನು ಉಳಿಸುವಲ್ಲಿ ರೂಪುಗೊಂಡ ಅಪರೂಪದ ಚಳವಳಿಯಾಗಿದೆ. ಇದು ಭವಿಷ್ಯದಲ್ಲಿ ಅನಿಷ್ಟ ದುಷ್ಟಕೂಟಗಳನ್ನು ನಾಶಮಾಡಲು ನಾಂದಿಯಾಗುತ್ತದೆ ಎಂದು ಬಡಗಲಪುರ ನಾಗೇಂದ್ರ ಭವಿಷ್ಯ ನುಡಿದರು.

ಬಿಜೆಪಿ-ಕಾಂಗ್ರೆಸ್ ಕಾರ್ಪೊರೇಟ್‌ಗಳ ‘ಒಂದೇ ನಾಣ್ಯದ ಎರಡು ಮುಖಗಳು’: “ಒಂದು ಕಡೆ ಮೋದಿ ಸರಕಾರ, ಮತ್ತೊಂದು ಕಡೆ ಸಿದ್ದರಾಮಯ್ಯ ಸರಕಾರ. ಎರಡು ಬೇರೆ ಬೇರೆ ಪಕ್ಷಗಳು, ಆದರೆ ಅವುಗಳ ನೀತಿಗಳು ಒಂದೇ. ಇವೆರಡೂ ಕಾರ್ಪೊರೇಟ್‌ ನೀತಿಗಳನ್ನು ಮುಂದುವರೆಸುತ್ತಿವೆ. ಆ ನಿಟ್ಟಿನಲ್ಲಿ ಭೂಮಿಗೆ ಕೈ ಹಾಕಕ್ಕೆ ಬಂದಿವೆ” ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇವನಹಳ್ಳಿ ಹೋರಾಟವು ಸರ್ಕಾರಗಳಿಗೆ ‘ಬಿಸಿ ಮುಟ್ಟಿಸಿದೆ’. “ಈಗ 10 ದಿನಗಳು ಸಮಯ ತೆಗೆದುಕೊಂಡು ಬ್ರಿಟಿಷರ ಪದ್ಧತಿಯನ್ನು ಮುಂದುವರೆಸಲು ಹೊರಟಿದೆ” ಎಂದು ಅವರು ತೀವ್ರವಾಗಿ ಖಂಡಿಸಿದರು.

ರೈತರು, ದಲಿತರು, ಕಾರ್ಮಿಕರ ಸ್ಪಷ್ಟ ಎಚ್ಚರಿಕೆ: “ಇದು ಬಸವಣ್ಣ, ಸಂಗೊಳ್ಳಿ ರಾಯಣ್ಣ, ಟಿಪ್ಪು ಸುಲ್ತಾನ, ಕಿತ್ತೂರು ರಾಣಿ ಚೆನ್ನಮ್ಮನ ನಾಡು. ಇಲ್ಲಿ ಸಾಧು-ಸಂತರು, ಸೂಫಿಗಳು ತಿರುಗಾಡಿದ ನೆಲ. ರೈತರು ಈಗ ಕೃಷಿ ಸಂಸ್ಕೃತಿಯನ್ನು ಉಳಿಸಲು ಹೊರಟಿದ್ದಾರೆ. ದಲಿತರು, ರೈತರು, ಕಾರ್ಮಿಕರು, ಕಲಾವಿದರು, ಸಾಹಿತಿಗಳು ನಾವೆಲ್ಲರೂ ಸರಕಾರಕ್ಕೆ ಸ್ಪಷ್ಟ ಸಂದೇಶ ಕೊಡುತ್ತಿದ್ದೇವೆ” ಎಂದು ನಾಗೇಂದ್ರ ಗುಡುಗಿದರು.

“ಸರಕಾರಕ್ಕೆ ಹೇಳುವುದು ಒಂದೇ, ನಾವು ಕೈಗಾರಿಕೆಗಳಿಗೆ ಭೂಮಿಯನ್ನು ಕೊಡುವುದಿಲ್ಲ. ಬಲವಂತದಿಂದ ಕಿತ್ತುಕೊಳ್ಳಲು ಪ್ರಯತ್ನ ಮಾಡಲು ಮುಂದಾದರೆ, ಒಂದಿಂಚು ಕೂಡ ಕೊಡುವುದಿಲ್ಲ. ಸಿದ್ದರಾಮಯ್ಯ ನಮ್ಮ ಭೂಮಿ ನಮಗೆ ನೀಡುವ ಭರವಸೆ ಇದೆ” ಎಂದು ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯಗೆ ನೇರ ಸವಾಲು: ‘ಭೂಮಿ ತಂಟೆಗೆ ಬಂದರೆ ರಸ್ತೆಯಲ್ಲಿ ತಿರುಗಾಡಲು ಸಾಧ್ಯವಿಲ್ಲ!’ “ನಂಜುಂಡಸ್ವಾಮಿ ಅವರ ಶಿಷ್ಯರಾಗಿರುವುದರಿಂದ ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ ಇದೆ. ಆ ನಂಬಿಕೆಯನ್ನು ಉಳಿಸಿಕೊಳ್ಳಿ. ಎಂ.ಬಿ. ಪಾಟೀಲ್ ಮುಖ್ಯಮಂತ್ರಿ ಆಗಬೇಕೆನ್ನುವ ವಿಶ್ವಾಸದಲ್ಲಿ ನೀವು ಇದ್ದೀರಿ. ಆದರೆ, ಇದೀಗ ಭೂಮಿಯನ್ನು ಕೈ ಬಿಡದಿದ್ದರೆ, ಮುಂದೆ ನೀವು ವಿಧಾನ ಸೌಧಕ್ಕೆ ಆಯ್ಕೆ ಆಗುವುದಕ್ಕೂ ಸಾಧ್ಯವಿಲ್ಲ. ಭೂಮಿ ತಂಟೆಗೆ ಬಂದರೆ, ನೀವು ರಸ್ತೆಯಲ್ಲಿ ಸುಲಭವಾಗಿ ತಿರುಗಾಡುವುದಕ್ಕೆ ಸಾಧ್ಯವಿಲ್ಲ” ಎಂದು ನಾಗೇಂದ್ರ ನೇರವಾಗಿ ಸವಾಲು ಹಾಕಿದರು.

“ನಮ್ಮ ಭೂಮಿ ನಮಗೆ ಸಿಗುವ ತನಕ ಹೋರಾಟ ನಿಲ್ಲಿಸುವುದಿಲ್ಲ, ನಾವು ಇಲ್ಲಿಂದ ಹೊರಡುವುದಿಲ್ಲ” ಎಂದು ದೃಢವಾಗಿ ಹೇಳಿದರು.

ವೇದಿಕೆಯಲ್ಲಿ ಮಾರೇಗೌಡ, ಗೋಪಿನಾಥ್, ರಮೇಶ್ ಚೀಮಾಚನಹಳ್ಳಿ, ಅಶ್ವಥ್ಥಪ್ಪ, ಪ್ರಭಾ ಬೆಳವಂಗಲ, ರಘು, ಸಂಯುಕ್ತ ಹೋರಾಟ ಕರ್ನಾಟಕದ ಪ್ರತಿನಿಧಿಗಳಾದ ಬಡಗಲಪುರ ನಾಗೇಂದ್ರ, ಎಸ್ ವರಲಕ್ಷ್ಮೀ, ನೂರ್ ಶ್ರೀಧರ್, ಎಚ್.ಆರ್.ಬಸವರಾಜಪ್ಪ, ಎಸ್ ಮೀನಾಕ್ಷಿ ಸುಂದರಂ, ಡಾ.ಸಿದ್ದನಗೌಡ ಪಾಟೀಲ್, ಗುರುಪ್ರಸಾದ್ ಕೆರಗೋಡು, ಯು ಬಸವರಾಜ, ಚುಕ್ಕಿ ನಂಜುಂಡಸ್ವಾಮಿ, ವಿ ನಾಗರಾಜ್, ಪಿ ಪಿ ಅಪ್ಪಣ್ಣ, ಡಿ.ಎಚ್.ಪೂಜಾರ್, ಕೆ.ವಿ.ಭಟ್, ಮಾವಳ್ಳಿ ಶಂಕರ್‌, ರಾಷ್ಟ್ರೀಯ ನಾಯಕಾರ ದರ್ಶನ್‌ ಪಾಲ್‌, ಯುದ್‌ವೀರ್‌ ಸಿಂಗ್‌, ರಾಕೇಶ್‌ ಟಿಕಾಯತ್‌, ಡಾ.ಸುನೀಲಮ್‌, ವಿಜು ಕೃಷ್ಣನ್‌, ಪಿ,ಟಿ.ಜಾನ್‌, ನಟ ಪ್ರಕಾಶ್ ರಾಜ್, ಪತ್ರಕರ್ತ ಇಂದೂಧರ ಹೊನ್ನಾಪುರ, ಚಿಂತಕ ಎಸ್.ಆರ್.ಹಿರೇಮಠ್‌ ಉಪಸ್ಥಿತರಿದ್ದರು.

ದೇವನಹಳ್ಳಿ: ಭೂಸ್ವಾಧೀನ ಅಧಿಸೂಚನೆ  ರದ್ದುಗೊಳಿಸಿ; ಸರಕಾರಕ್ಕೆ ಗುಜರಾತ್‌ನ ಪ್ರಮುಖ ಟ್ರೇಡ್ ಯೂನಿಯನ್ ಮಜೂರ್ ಅಧಿಕಾರ್ ಮಂಚ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...