Homeಕರ್ನಾಟಕನಾಡ ಉಳಿಸಿ ಸಮಾವೇಶ: 'ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ' - ಸುನಿಲಂ...

ನಾಡ ಉಳಿಸಿ ಸಮಾವೇಶ: ‘ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ’ – ಸುನಿಲಂ ನೇರ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವು ರಾಜ್ಯ ಸರ್ಕಾರಕ್ಕೆ ‘ಗಂಟಲ ಮುಳ್ಳಾಗಿದೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ನಾಯಕ ಸುನಿಲಂ ಹೇಳಿದರು. ಇಂದು (ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಕರ್ನಾಟಕದ ನಾನಾ ಭಾಗಗಳಿಂದ ಬಂದ ರೈತರಿಗೆ ಅಭಿನಂದನೆ ಸಲ್ಲಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್‌ಗೆ ತೀಕ್ಷ್ಣ ಎಚ್ಚರಿಕೆ ನೀಡಿದರು.

‘ಸಿದ್ದರಾಮಯ್ಯ ಅವರೇ, ರೈತ-ಕಾರ್ಮಿಕರ ಸಂಗಾತಿಯಾಗಿರಿ!’: “ಸಿದ್ದರಾಮಯ್ಯನವರೇ, ನಿಮಗೆ ನಾನು ಹೇಳಲು ಬಯಸುತ್ತೇನೆ. ನೀವು ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಆಗಿದ್ದು ಆಮೇಲೆ. ಅದಕ್ಕೂ ಮುನ್ನ ನೀವು ರೈತರು, ಕಾರ್ಮಿಕರ ಸಂಗಾತಿ. ಅದನ್ನು ಮರೆತು ನೀವು ಕಾರ್ಪೊರೇಟ್ ತಾಳಕ್ಕೆ ಕುಣಿದು ನಿಮ್ಮ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತಂದುಕೊಳ್ಳಬೇಡಿ,” ಎಂದು ಸುನಿಲಂ ನೇರವಾಗಿ ಕರೆ ನೀಡಿದರು.

ಕಾಂಗ್ರೆಸ್ ಹೈಕಮಾಂಡ್‌ಗೂ ಇದೇ ಸಂದೇಶ ನೀಡಿದ ಅವರು, “ಕರ್ನಾಟಕದ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿದ್ದು ಕೇವಲ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ. ಇಲ್ಲಿನ ರೈತರು, ಕಾರ್ಮಿಕರು, ನಾಗರಿಕ ಸಂಘಟನೆಗಳು ಶ್ರಮಿಸಿವೆ. ಅದನ್ನು ನೀವು ಮರೆಯಬಾರದು,” ಎಂದು ನೆನಪಿಸಿದರು.

‘ನಾಗರಿಕ ಸಂಘಟನೆಗಳು ಶಾಶ್ವತ ವಿರೋಧ ಪಕ್ಷ’: “ನಾಗರಿಕ ಸಮಾಜ ಕೆಲವೊಂದು ಸಲ ಯಾವುದಾದರೂ ಪಕ್ಷದ ಪರ ನಿಂತರೆ ಅವರಿಗೆ ‘ಇವರು ನಮ್ಮವರು’ ಎಂದು ಅನಿಸಿಬಿಡುತ್ತದೆ. ಸಿದ್ದರಾಮಯ್ಯನವರೇ, ನೀವು ಕೇಳಿಸಿಕೊಳ್ಳಿ. ನಾಗರಿಕ ಸಂಘಟನೆಗಳು ಯಾವತ್ತೂ ಪಕ್ಷಗಳ ಪರ ಅಲ್ಲ. ರೈತರ ಪರ, ಕಾರ್ಮಿಕರ ಪರ. ನಾಗರಿಕ ಸಂಘಟನೆಗಳು ಶಾಶ್ವತ ವಿರೋಧ ಪಕ್ಷ,” ಎಂದು ಸುನಿಲಂ ನಾಗರಿಕ ಸಮಾಜದ ನಿಲುವನ್ನು ಸ್ಪಷ್ಟಪಡಿಸಿದರು.

‘ರೈತರು, ಕಾರ್ಮಿಕರು ಈ ದೇಶದ ನಿಜವಾದ ದೊರೆಗಳು’: “ಕಾಂಗ್ರೆಸ್‌ನ ಜನಗಳೇ ಮತ್ತೊಂದು ವಿಚಾರ. ಇಲ್ಲಿ ಕುಳಿತಿರುವವರನ್ನು ಕಂಡರೆ ಬಿಜೆಪಿಗೆ ಭಯ. ಸಂಸತ್ತಿನಲ್ಲಿ ಆಯೋಜಿಸಿದ್ದ ಕೃಷಿ ಸ್ಥಾಯಿ ಸಮಿತಿ ಸಭೆಗೆ ರೈತರು, ಕಾರ್ಮಿಕರ ಪರವಾಗಿ ಪ್ರಕಾಶ್ ರಾಜ್ ಒಬ್ಬರು ಹೋದಾಗ ಬಿಜೆಪಿಗರು ಪಲಾಯನ ಮಾಡಿದರು. ರೈತರು, ಕಾರ್ಮಿಕರು ಈ ದೇಶದ ನಿಜವಾದ ದೊರೆಗಳು. ಈ ದೇಶ ಅವರಿಗೆ ಸೇರಿದ್ದು,” ಎಂದು ಸುನಿಲಂ ರೈತ ಮತ್ತು ಕಾರ್ಮಿಕ ಶಕ್ತಿಯನ್ನು ಒತ್ತಿ ಹೇಳಿದರು.

“ಬಿಜೆಪಿಯ ಧೋರಣೆ ಸ್ಪಷ್ಟ – ಯಾರು ರೈತರು, ಕಾರ್ಮಿಕರ ಪರ ನಿಂತವರನ್ನು ಅವರು ದೇಶದ್ರೋಹಿಗಳು, ‘ತುಕ್ಡೆ ತುಕ್ಡೆ ಗ್ಯಾಂಗ್’ನವರು ಎನ್ನುತ್ತಾರೆ. ‘ಇಂಡಿಯಾ’ ಒಕ್ಕೂಟಕ್ಕೆ ಆ ಧೋರಣೆ ಇಲ್ಲ ಎಂಬ ವಿಶ್ವಾಸದಲ್ಲಿ ನಾವಿದ್ದೇವೆ,” ಎಂದರು.

‘ದೇವನಹಳ್ಳಿ ಹೋರಾಟ ದೇಶಕ್ಕೆ ಅನುಕರಣೀಯ’: ಸರ್ಕಾರ ನಂಬಿರುವ ಅಭಿವೃದ್ಧಿ ಮಾದರಿ ರೈತರನ್ನು, ಹಳ್ಳಿಗಳನ್ನು ನಾಶ ಮಾಡುವಂತದ್ದಾಗಿದೆ ಎಂದು ಸುನಿಲಂ ಟೀಕಿಸಿದರು. “ಅದಕ್ಕಾಗಿಯೇ ಅವರು ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಜಾರಿಗೆ, ಸಾಲ ಮನ್ನಾಗೆ ಸಿದ್ಧರಿಲ್ಲ. ರೈತರ ಭೂಮಿಯನ್ನು ಕಸಿದುಕೊಂಡು ಅವರನ್ನು ಓಡಿಸುವ ಯೋಚನೆಯಲ್ಲಿ ಅವರಿದ್ದಾರೆ,” ಎಂದು ಆರೋಪಿಸಿದರು.

ಕೊನೆಯದಾಗಿ, “ದೇವನಹಳ್ಳಿಯ ರೈತರ ಹೋರಾಟ ದೇಶಕ್ಕೆ ಅನುಕರಣೀಯ. ಎಂತಹದ್ದೇ ಪರಿಹಾರ ಕೊಟ್ಟರೂ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂಬ ಅವರ ನಿಲುವು ಮೆಚ್ಚುವಂತದ್ದು. ನಾವು ದೆಹಲಿಯನ್ನು ಸುತ್ತುವರಿದು ಹೋರಾಟ ಮಾಡಿದ್ದೆವು. ಅಂತಹ ಹೋರಾಟ ಬೆಂಗಳೂರಿನಲ್ಲಿ ಮಾಡುವ ಶಕ್ತಿ ನಮಗಿದೆ. ಸರ್ಕಾರ ಅಂತಹ ಪರಿಸ್ಥಿತಿ ತಂದುಕೊಳ್ಳುವುದು ಬೇಡ. ಸರ್ಕಾರ ರೈತರ ಹೋರಾಟಕ್ಕೆ ಮಣಿಯಬೇಕು, ಭೂ ಸ್ವಾಧೀನ ಕೈಬಿಡಬೇಕು,” ಎಂದು ಸುನಿಲಂ ಕರ್ನಾಟಕ ಸರ್ಕಾರಕ್ಕೆ ಅಂತಿಮ ಎಚ್ಚರಿಕೆ ನೀಡಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...