Homeಕರ್ನಾಟಕನಾಡ ಉಳಿಸಿ ಸಮಾವೇಶ: 'ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ' - ಸುನಿಲಂ...

ನಾಡ ಉಳಿಸಿ ಸಮಾವೇಶ: ‘ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ’ – ಸುನಿಲಂ ನೇರ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವು ರಾಜ್ಯ ಸರ್ಕಾರಕ್ಕೆ ‘ಗಂಟಲ ಮುಳ್ಳಾಗಿದೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ನಾಯಕ ಸುನಿಲಂ ಹೇಳಿದರು. ಇಂದು (ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಕರ್ನಾಟಕದ ನಾನಾ ಭಾಗಗಳಿಂದ ಬಂದ ರೈತರಿಗೆ ಅಭಿನಂದನೆ ಸಲ್ಲಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್‌ಗೆ ತೀಕ್ಷ್ಣ ಎಚ್ಚರಿಕೆ ನೀಡಿದರು.

‘ಸಿದ್ದರಾಮಯ್ಯ ಅವರೇ, ರೈತ-ಕಾರ್ಮಿಕರ ಸಂಗಾತಿಯಾಗಿರಿ!’: “ಸಿದ್ದರಾಮಯ್ಯನವರೇ, ನಿಮಗೆ ನಾನು ಹೇಳಲು ಬಯಸುತ್ತೇನೆ. ನೀವು ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಆಗಿದ್ದು ಆಮೇಲೆ. ಅದಕ್ಕೂ ಮುನ್ನ ನೀವು ರೈತರು, ಕಾರ್ಮಿಕರ ಸಂಗಾತಿ. ಅದನ್ನು ಮರೆತು ನೀವು ಕಾರ್ಪೊರೇಟ್ ತಾಳಕ್ಕೆ ಕುಣಿದು ನಿಮ್ಮ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತಂದುಕೊಳ್ಳಬೇಡಿ,” ಎಂದು ಸುನಿಲಂ ನೇರವಾಗಿ ಕರೆ ನೀಡಿದರು.

ಕಾಂಗ್ರೆಸ್ ಹೈಕಮಾಂಡ್‌ಗೂ ಇದೇ ಸಂದೇಶ ನೀಡಿದ ಅವರು, “ಕರ್ನಾಟಕದ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿದ್ದು ಕೇವಲ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ. ಇಲ್ಲಿನ ರೈತರು, ಕಾರ್ಮಿಕರು, ನಾಗರಿಕ ಸಂಘಟನೆಗಳು ಶ್ರಮಿಸಿವೆ. ಅದನ್ನು ನೀವು ಮರೆಯಬಾರದು,” ಎಂದು ನೆನಪಿಸಿದರು.

‘ನಾಗರಿಕ ಸಂಘಟನೆಗಳು ಶಾಶ್ವತ ವಿರೋಧ ಪಕ್ಷ’: “ನಾಗರಿಕ ಸಮಾಜ ಕೆಲವೊಂದು ಸಲ ಯಾವುದಾದರೂ ಪಕ್ಷದ ಪರ ನಿಂತರೆ ಅವರಿಗೆ ‘ಇವರು ನಮ್ಮವರು’ ಎಂದು ಅನಿಸಿಬಿಡುತ್ತದೆ. ಸಿದ್ದರಾಮಯ್ಯನವರೇ, ನೀವು ಕೇಳಿಸಿಕೊಳ್ಳಿ. ನಾಗರಿಕ ಸಂಘಟನೆಗಳು ಯಾವತ್ತೂ ಪಕ್ಷಗಳ ಪರ ಅಲ್ಲ. ರೈತರ ಪರ, ಕಾರ್ಮಿಕರ ಪರ. ನಾಗರಿಕ ಸಂಘಟನೆಗಳು ಶಾಶ್ವತ ವಿರೋಧ ಪಕ್ಷ,” ಎಂದು ಸುನಿಲಂ ನಾಗರಿಕ ಸಮಾಜದ ನಿಲುವನ್ನು ಸ್ಪಷ್ಟಪಡಿಸಿದರು.

‘ರೈತರು, ಕಾರ್ಮಿಕರು ಈ ದೇಶದ ನಿಜವಾದ ದೊರೆಗಳು’: “ಕಾಂಗ್ರೆಸ್‌ನ ಜನಗಳೇ ಮತ್ತೊಂದು ವಿಚಾರ. ಇಲ್ಲಿ ಕುಳಿತಿರುವವರನ್ನು ಕಂಡರೆ ಬಿಜೆಪಿಗೆ ಭಯ. ಸಂಸತ್ತಿನಲ್ಲಿ ಆಯೋಜಿಸಿದ್ದ ಕೃಷಿ ಸ್ಥಾಯಿ ಸಮಿತಿ ಸಭೆಗೆ ರೈತರು, ಕಾರ್ಮಿಕರ ಪರವಾಗಿ ಪ್ರಕಾಶ್ ರಾಜ್ ಒಬ್ಬರು ಹೋದಾಗ ಬಿಜೆಪಿಗರು ಪಲಾಯನ ಮಾಡಿದರು. ರೈತರು, ಕಾರ್ಮಿಕರು ಈ ದೇಶದ ನಿಜವಾದ ದೊರೆಗಳು. ಈ ದೇಶ ಅವರಿಗೆ ಸೇರಿದ್ದು,” ಎಂದು ಸುನಿಲಂ ರೈತ ಮತ್ತು ಕಾರ್ಮಿಕ ಶಕ್ತಿಯನ್ನು ಒತ್ತಿ ಹೇಳಿದರು.

“ಬಿಜೆಪಿಯ ಧೋರಣೆ ಸ್ಪಷ್ಟ – ಯಾರು ರೈತರು, ಕಾರ್ಮಿಕರ ಪರ ನಿಂತವರನ್ನು ಅವರು ದೇಶದ್ರೋಹಿಗಳು, ‘ತುಕ್ಡೆ ತುಕ್ಡೆ ಗ್ಯಾಂಗ್’ನವರು ಎನ್ನುತ್ತಾರೆ. ‘ಇಂಡಿಯಾ’ ಒಕ್ಕೂಟಕ್ಕೆ ಆ ಧೋರಣೆ ಇಲ್ಲ ಎಂಬ ವಿಶ್ವಾಸದಲ್ಲಿ ನಾವಿದ್ದೇವೆ,” ಎಂದರು.

‘ದೇವನಹಳ್ಳಿ ಹೋರಾಟ ದೇಶಕ್ಕೆ ಅನುಕರಣೀಯ’: ಸರ್ಕಾರ ನಂಬಿರುವ ಅಭಿವೃದ್ಧಿ ಮಾದರಿ ರೈತರನ್ನು, ಹಳ್ಳಿಗಳನ್ನು ನಾಶ ಮಾಡುವಂತದ್ದಾಗಿದೆ ಎಂದು ಸುನಿಲಂ ಟೀಕಿಸಿದರು. “ಅದಕ್ಕಾಗಿಯೇ ಅವರು ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಜಾರಿಗೆ, ಸಾಲ ಮನ್ನಾಗೆ ಸಿದ್ಧರಿಲ್ಲ. ರೈತರ ಭೂಮಿಯನ್ನು ಕಸಿದುಕೊಂಡು ಅವರನ್ನು ಓಡಿಸುವ ಯೋಚನೆಯಲ್ಲಿ ಅವರಿದ್ದಾರೆ,” ಎಂದು ಆರೋಪಿಸಿದರು.

ಕೊನೆಯದಾಗಿ, “ದೇವನಹಳ್ಳಿಯ ರೈತರ ಹೋರಾಟ ದೇಶಕ್ಕೆ ಅನುಕರಣೀಯ. ಎಂತಹದ್ದೇ ಪರಿಹಾರ ಕೊಟ್ಟರೂ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂಬ ಅವರ ನಿಲುವು ಮೆಚ್ಚುವಂತದ್ದು. ನಾವು ದೆಹಲಿಯನ್ನು ಸುತ್ತುವರಿದು ಹೋರಾಟ ಮಾಡಿದ್ದೆವು. ಅಂತಹ ಹೋರಾಟ ಬೆಂಗಳೂರಿನಲ್ಲಿ ಮಾಡುವ ಶಕ್ತಿ ನಮಗಿದೆ. ಸರ್ಕಾರ ಅಂತಹ ಪರಿಸ್ಥಿತಿ ತಂದುಕೊಳ್ಳುವುದು ಬೇಡ. ಸರ್ಕಾರ ರೈತರ ಹೋರಾಟಕ್ಕೆ ಮಣಿಯಬೇಕು, ಭೂ ಸ್ವಾಧೀನ ಕೈಬಿಡಬೇಕು,” ಎಂದು ಸುನಿಲಂ ಕರ್ನಾಟಕ ಸರ್ಕಾರಕ್ಕೆ ಅಂತಿಮ ಎಚ್ಚರಿಕೆ ನೀಡಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...