Homeಕರ್ನಾಟಕನಾಡ ಉಳಿಸಿ ಸಮಾವೇಶ: 'ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ' - ಸುನಿಲಂ...

ನಾಡ ಉಳಿಸಿ ಸಮಾವೇಶ: ‘ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ’ – ಸುನಿಲಂ ನೇರ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವು ರಾಜ್ಯ ಸರ್ಕಾರಕ್ಕೆ ‘ಗಂಟಲ ಮುಳ್ಳಾಗಿದೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ನಾಯಕ ಸುನಿಲಂ ಹೇಳಿದರು. ಇಂದು (ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಕರ್ನಾಟಕದ ನಾನಾ ಭಾಗಗಳಿಂದ ಬಂದ ರೈತರಿಗೆ ಅಭಿನಂದನೆ ಸಲ್ಲಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್‌ಗೆ ತೀಕ್ಷ್ಣ ಎಚ್ಚರಿಕೆ ನೀಡಿದರು.

‘ಸಿದ್ದರಾಮಯ್ಯ ಅವರೇ, ರೈತ-ಕಾರ್ಮಿಕರ ಸಂಗಾತಿಯಾಗಿರಿ!’: “ಸಿದ್ದರಾಮಯ್ಯನವರೇ, ನಿಮಗೆ ನಾನು ಹೇಳಲು ಬಯಸುತ್ತೇನೆ. ನೀವು ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಆಗಿದ್ದು ಆಮೇಲೆ. ಅದಕ್ಕೂ ಮುನ್ನ ನೀವು ರೈತರು, ಕಾರ್ಮಿಕರ ಸಂಗಾತಿ. ಅದನ್ನು ಮರೆತು ನೀವು ಕಾರ್ಪೊರೇಟ್ ತಾಳಕ್ಕೆ ಕುಣಿದು ನಿಮ್ಮ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತಂದುಕೊಳ್ಳಬೇಡಿ,” ಎಂದು ಸುನಿಲಂ ನೇರವಾಗಿ ಕರೆ ನೀಡಿದರು.

ಕಾಂಗ್ರೆಸ್ ಹೈಕಮಾಂಡ್‌ಗೂ ಇದೇ ಸಂದೇಶ ನೀಡಿದ ಅವರು, “ಕರ್ನಾಟಕದ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿದ್ದು ಕೇವಲ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ. ಇಲ್ಲಿನ ರೈತರು, ಕಾರ್ಮಿಕರು, ನಾಗರಿಕ ಸಂಘಟನೆಗಳು ಶ್ರಮಿಸಿವೆ. ಅದನ್ನು ನೀವು ಮರೆಯಬಾರದು,” ಎಂದು ನೆನಪಿಸಿದರು.

‘ನಾಗರಿಕ ಸಂಘಟನೆಗಳು ಶಾಶ್ವತ ವಿರೋಧ ಪಕ್ಷ’: “ನಾಗರಿಕ ಸಮಾಜ ಕೆಲವೊಂದು ಸಲ ಯಾವುದಾದರೂ ಪಕ್ಷದ ಪರ ನಿಂತರೆ ಅವರಿಗೆ ‘ಇವರು ನಮ್ಮವರು’ ಎಂದು ಅನಿಸಿಬಿಡುತ್ತದೆ. ಸಿದ್ದರಾಮಯ್ಯನವರೇ, ನೀವು ಕೇಳಿಸಿಕೊಳ್ಳಿ. ನಾಗರಿಕ ಸಂಘಟನೆಗಳು ಯಾವತ್ತೂ ಪಕ್ಷಗಳ ಪರ ಅಲ್ಲ. ರೈತರ ಪರ, ಕಾರ್ಮಿಕರ ಪರ. ನಾಗರಿಕ ಸಂಘಟನೆಗಳು ಶಾಶ್ವತ ವಿರೋಧ ಪಕ್ಷ,” ಎಂದು ಸುನಿಲಂ ನಾಗರಿಕ ಸಮಾಜದ ನಿಲುವನ್ನು ಸ್ಪಷ್ಟಪಡಿಸಿದರು.

‘ರೈತರು, ಕಾರ್ಮಿಕರು ಈ ದೇಶದ ನಿಜವಾದ ದೊರೆಗಳು’: “ಕಾಂಗ್ರೆಸ್‌ನ ಜನಗಳೇ ಮತ್ತೊಂದು ವಿಚಾರ. ಇಲ್ಲಿ ಕುಳಿತಿರುವವರನ್ನು ಕಂಡರೆ ಬಿಜೆಪಿಗೆ ಭಯ. ಸಂಸತ್ತಿನಲ್ಲಿ ಆಯೋಜಿಸಿದ್ದ ಕೃಷಿ ಸ್ಥಾಯಿ ಸಮಿತಿ ಸಭೆಗೆ ರೈತರು, ಕಾರ್ಮಿಕರ ಪರವಾಗಿ ಪ್ರಕಾಶ್ ರಾಜ್ ಒಬ್ಬರು ಹೋದಾಗ ಬಿಜೆಪಿಗರು ಪಲಾಯನ ಮಾಡಿದರು. ರೈತರು, ಕಾರ್ಮಿಕರು ಈ ದೇಶದ ನಿಜವಾದ ದೊರೆಗಳು. ಈ ದೇಶ ಅವರಿಗೆ ಸೇರಿದ್ದು,” ಎಂದು ಸುನಿಲಂ ರೈತ ಮತ್ತು ಕಾರ್ಮಿಕ ಶಕ್ತಿಯನ್ನು ಒತ್ತಿ ಹೇಳಿದರು.

“ಬಿಜೆಪಿಯ ಧೋರಣೆ ಸ್ಪಷ್ಟ – ಯಾರು ರೈತರು, ಕಾರ್ಮಿಕರ ಪರ ನಿಂತವರನ್ನು ಅವರು ದೇಶದ್ರೋಹಿಗಳು, ‘ತುಕ್ಡೆ ತುಕ್ಡೆ ಗ್ಯಾಂಗ್’ನವರು ಎನ್ನುತ್ತಾರೆ. ‘ಇಂಡಿಯಾ’ ಒಕ್ಕೂಟಕ್ಕೆ ಆ ಧೋರಣೆ ಇಲ್ಲ ಎಂಬ ವಿಶ್ವಾಸದಲ್ಲಿ ನಾವಿದ್ದೇವೆ,” ಎಂದರು.

‘ದೇವನಹಳ್ಳಿ ಹೋರಾಟ ದೇಶಕ್ಕೆ ಅನುಕರಣೀಯ’: ಸರ್ಕಾರ ನಂಬಿರುವ ಅಭಿವೃದ್ಧಿ ಮಾದರಿ ರೈತರನ್ನು, ಹಳ್ಳಿಗಳನ್ನು ನಾಶ ಮಾಡುವಂತದ್ದಾಗಿದೆ ಎಂದು ಸುನಿಲಂ ಟೀಕಿಸಿದರು. “ಅದಕ್ಕಾಗಿಯೇ ಅವರು ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಜಾರಿಗೆ, ಸಾಲ ಮನ್ನಾಗೆ ಸಿದ್ಧರಿಲ್ಲ. ರೈತರ ಭೂಮಿಯನ್ನು ಕಸಿದುಕೊಂಡು ಅವರನ್ನು ಓಡಿಸುವ ಯೋಚನೆಯಲ್ಲಿ ಅವರಿದ್ದಾರೆ,” ಎಂದು ಆರೋಪಿಸಿದರು.

ಕೊನೆಯದಾಗಿ, “ದೇವನಹಳ್ಳಿಯ ರೈತರ ಹೋರಾಟ ದೇಶಕ್ಕೆ ಅನುಕರಣೀಯ. ಎಂತಹದ್ದೇ ಪರಿಹಾರ ಕೊಟ್ಟರೂ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂಬ ಅವರ ನಿಲುವು ಮೆಚ್ಚುವಂತದ್ದು. ನಾವು ದೆಹಲಿಯನ್ನು ಸುತ್ತುವರಿದು ಹೋರಾಟ ಮಾಡಿದ್ದೆವು. ಅಂತಹ ಹೋರಾಟ ಬೆಂಗಳೂರಿನಲ್ಲಿ ಮಾಡುವ ಶಕ್ತಿ ನಮಗಿದೆ. ಸರ್ಕಾರ ಅಂತಹ ಪರಿಸ್ಥಿತಿ ತಂದುಕೊಳ್ಳುವುದು ಬೇಡ. ಸರ್ಕಾರ ರೈತರ ಹೋರಾಟಕ್ಕೆ ಮಣಿಯಬೇಕು, ಭೂ ಸ್ವಾಧೀನ ಕೈಬಿಡಬೇಕು,” ಎಂದು ಸುನಿಲಂ ಕರ್ನಾಟಕ ಸರ್ಕಾರಕ್ಕೆ ಅಂತಿಮ ಎಚ್ಚರಿಕೆ ನೀಡಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...