Homeಕರ್ನಾಟಕನಾಡ ಉಳಿಸಿ ಸಮಾವೇಶ: 'ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ' - ಸುನಿಲಂ...

ನಾಡ ಉಳಿಸಿ ಸಮಾವೇಶ: ‘ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ’ – ಸುನಿಲಂ ನೇರ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವು ರಾಜ್ಯ ಸರ್ಕಾರಕ್ಕೆ ‘ಗಂಟಲ ಮುಳ್ಳಾಗಿದೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ನಾಯಕ ಸುನಿಲಂ ಹೇಳಿದರು. ಇಂದು (ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಕರ್ನಾಟಕದ ನಾನಾ ಭಾಗಗಳಿಂದ ಬಂದ ರೈತರಿಗೆ ಅಭಿನಂದನೆ ಸಲ್ಲಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್‌ಗೆ ತೀಕ್ಷ್ಣ ಎಚ್ಚರಿಕೆ ನೀಡಿದರು.

‘ಸಿದ್ದರಾಮಯ್ಯ ಅವರೇ, ರೈತ-ಕಾರ್ಮಿಕರ ಸಂಗಾತಿಯಾಗಿರಿ!’: “ಸಿದ್ದರಾಮಯ್ಯನವರೇ, ನಿಮಗೆ ನಾನು ಹೇಳಲು ಬಯಸುತ್ತೇನೆ. ನೀವು ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಆಗಿದ್ದು ಆಮೇಲೆ. ಅದಕ್ಕೂ ಮುನ್ನ ನೀವು ರೈತರು, ಕಾರ್ಮಿಕರ ಸಂಗಾತಿ. ಅದನ್ನು ಮರೆತು ನೀವು ಕಾರ್ಪೊರೇಟ್ ತಾಳಕ್ಕೆ ಕುಣಿದು ನಿಮ್ಮ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತಂದುಕೊಳ್ಳಬೇಡಿ,” ಎಂದು ಸುನಿಲಂ ನೇರವಾಗಿ ಕರೆ ನೀಡಿದರು.

ಕಾಂಗ್ರೆಸ್ ಹೈಕಮಾಂಡ್‌ಗೂ ಇದೇ ಸಂದೇಶ ನೀಡಿದ ಅವರು, “ಕರ್ನಾಟಕದ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿದ್ದು ಕೇವಲ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ. ಇಲ್ಲಿನ ರೈತರು, ಕಾರ್ಮಿಕರು, ನಾಗರಿಕ ಸಂಘಟನೆಗಳು ಶ್ರಮಿಸಿವೆ. ಅದನ್ನು ನೀವು ಮರೆಯಬಾರದು,” ಎಂದು ನೆನಪಿಸಿದರು.

‘ನಾಗರಿಕ ಸಂಘಟನೆಗಳು ಶಾಶ್ವತ ವಿರೋಧ ಪಕ್ಷ’: “ನಾಗರಿಕ ಸಮಾಜ ಕೆಲವೊಂದು ಸಲ ಯಾವುದಾದರೂ ಪಕ್ಷದ ಪರ ನಿಂತರೆ ಅವರಿಗೆ ‘ಇವರು ನಮ್ಮವರು’ ಎಂದು ಅನಿಸಿಬಿಡುತ್ತದೆ. ಸಿದ್ದರಾಮಯ್ಯನವರೇ, ನೀವು ಕೇಳಿಸಿಕೊಳ್ಳಿ. ನಾಗರಿಕ ಸಂಘಟನೆಗಳು ಯಾವತ್ತೂ ಪಕ್ಷಗಳ ಪರ ಅಲ್ಲ. ರೈತರ ಪರ, ಕಾರ್ಮಿಕರ ಪರ. ನಾಗರಿಕ ಸಂಘಟನೆಗಳು ಶಾಶ್ವತ ವಿರೋಧ ಪಕ್ಷ,” ಎಂದು ಸುನಿಲಂ ನಾಗರಿಕ ಸಮಾಜದ ನಿಲುವನ್ನು ಸ್ಪಷ್ಟಪಡಿಸಿದರು.

‘ರೈತರು, ಕಾರ್ಮಿಕರು ಈ ದೇಶದ ನಿಜವಾದ ದೊರೆಗಳು’: “ಕಾಂಗ್ರೆಸ್‌ನ ಜನಗಳೇ ಮತ್ತೊಂದು ವಿಚಾರ. ಇಲ್ಲಿ ಕುಳಿತಿರುವವರನ್ನು ಕಂಡರೆ ಬಿಜೆಪಿಗೆ ಭಯ. ಸಂಸತ್ತಿನಲ್ಲಿ ಆಯೋಜಿಸಿದ್ದ ಕೃಷಿ ಸ್ಥಾಯಿ ಸಮಿತಿ ಸಭೆಗೆ ರೈತರು, ಕಾರ್ಮಿಕರ ಪರವಾಗಿ ಪ್ರಕಾಶ್ ರಾಜ್ ಒಬ್ಬರು ಹೋದಾಗ ಬಿಜೆಪಿಗರು ಪಲಾಯನ ಮಾಡಿದರು. ರೈತರು, ಕಾರ್ಮಿಕರು ಈ ದೇಶದ ನಿಜವಾದ ದೊರೆಗಳು. ಈ ದೇಶ ಅವರಿಗೆ ಸೇರಿದ್ದು,” ಎಂದು ಸುನಿಲಂ ರೈತ ಮತ್ತು ಕಾರ್ಮಿಕ ಶಕ್ತಿಯನ್ನು ಒತ್ತಿ ಹೇಳಿದರು.

“ಬಿಜೆಪಿಯ ಧೋರಣೆ ಸ್ಪಷ್ಟ – ಯಾರು ರೈತರು, ಕಾರ್ಮಿಕರ ಪರ ನಿಂತವರನ್ನು ಅವರು ದೇಶದ್ರೋಹಿಗಳು, ‘ತುಕ್ಡೆ ತುಕ್ಡೆ ಗ್ಯಾಂಗ್’ನವರು ಎನ್ನುತ್ತಾರೆ. ‘ಇಂಡಿಯಾ’ ಒಕ್ಕೂಟಕ್ಕೆ ಆ ಧೋರಣೆ ಇಲ್ಲ ಎಂಬ ವಿಶ್ವಾಸದಲ್ಲಿ ನಾವಿದ್ದೇವೆ,” ಎಂದರು.

‘ದೇವನಹಳ್ಳಿ ಹೋರಾಟ ದೇಶಕ್ಕೆ ಅನುಕರಣೀಯ’: ಸರ್ಕಾರ ನಂಬಿರುವ ಅಭಿವೃದ್ಧಿ ಮಾದರಿ ರೈತರನ್ನು, ಹಳ್ಳಿಗಳನ್ನು ನಾಶ ಮಾಡುವಂತದ್ದಾಗಿದೆ ಎಂದು ಸುನಿಲಂ ಟೀಕಿಸಿದರು. “ಅದಕ್ಕಾಗಿಯೇ ಅವರು ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಜಾರಿಗೆ, ಸಾಲ ಮನ್ನಾಗೆ ಸಿದ್ಧರಿಲ್ಲ. ರೈತರ ಭೂಮಿಯನ್ನು ಕಸಿದುಕೊಂಡು ಅವರನ್ನು ಓಡಿಸುವ ಯೋಚನೆಯಲ್ಲಿ ಅವರಿದ್ದಾರೆ,” ಎಂದು ಆರೋಪಿಸಿದರು.

ಕೊನೆಯದಾಗಿ, “ದೇವನಹಳ್ಳಿಯ ರೈತರ ಹೋರಾಟ ದೇಶಕ್ಕೆ ಅನುಕರಣೀಯ. ಎಂತಹದ್ದೇ ಪರಿಹಾರ ಕೊಟ್ಟರೂ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂಬ ಅವರ ನಿಲುವು ಮೆಚ್ಚುವಂತದ್ದು. ನಾವು ದೆಹಲಿಯನ್ನು ಸುತ್ತುವರಿದು ಹೋರಾಟ ಮಾಡಿದ್ದೆವು. ಅಂತಹ ಹೋರಾಟ ಬೆಂಗಳೂರಿನಲ್ಲಿ ಮಾಡುವ ಶಕ್ತಿ ನಮಗಿದೆ. ಸರ್ಕಾರ ಅಂತಹ ಪರಿಸ್ಥಿತಿ ತಂದುಕೊಳ್ಳುವುದು ಬೇಡ. ಸರ್ಕಾರ ರೈತರ ಹೋರಾಟಕ್ಕೆ ಮಣಿಯಬೇಕು, ಭೂ ಸ್ವಾಧೀನ ಕೈಬಿಡಬೇಕು,” ಎಂದು ಸುನಿಲಂ ಕರ್ನಾಟಕ ಸರ್ಕಾರಕ್ಕೆ ಅಂತಿಮ ಎಚ್ಚರಿಕೆ ನೀಡಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...