Homeಕರ್ನಾಟಕನಾಡ ಉಳಿಸಿ ಸಮಾವೇಶ: ದೇವನಹಳ್ಳಿ ರೈತರ ಭೂಮಿಗೆ ಕೈಹಾಕಿದರೆ ದೇಶಾದ್ಯಂತ ಹೋರಾಟ - ದರ್ಶನ್ ಪಾಲ್...

ನಾಡ ಉಳಿಸಿ ಸಮಾವೇಶ: ದೇವನಹಳ್ಳಿ ರೈತರ ಭೂಮಿಗೆ ಕೈಹಾಕಿದರೆ ದೇಶಾದ್ಯಂತ ಹೋರಾಟ – ದರ್ಶನ್ ಪಾಲ್ ಪ್ರಬಲ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಪ್ರದೇಶದ ರೈತರ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಕರ್ನಾಟಕ ಸರ್ಕಾರ ಮಣಿಯದಿದ್ದರೆ, ದೇಶಾದ್ಯಂತ ಈ ಹೋರಾಟವನ್ನು ವಿಸ್ತರಿಸಬೇಕಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ನಾಯಕ ದರ್ಶನ್ ಪಾಲ್ ಎಚ್ಚರಿಕೆ ನೀಡಿದ್ದಾರೆ. ಇಂದು (ಶುಕ್ರವಾರ, ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಭಾಗವಹಿಸಿದ್ದ ಅವರು, ರೈತರ ಭೂಮಿ ಕಿತ್ತುಕೊಳ್ಳುವ ಸರ್ಕಾರದ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ದೇವನಹಳ್ಳಿ ಹೋರಾಟಕ್ಕೆ ರಾಷ್ಟ್ರಮಟ್ಟದ ಬೆಂಬಲ: “ನಾನು ಸಂಯುಕ್ತ ಕಿಸಾನ್ ಮೋರ್ಚಾದ ಪರವಾಗಿ ಇಲ್ಲಿನ ರೈತರ ಹೋರಾಟಕ್ಕೆ ಬೆಂಬಲ ನೀಡಲು ಬಂದಿದ್ದೇನೆ. ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ಸಾವಿರಾರು ಜನರು ಭೂಸ್ವಾಧೀನ ವಿರೋಧಿಸಿ ಕಳೆದ 1185 ದಿನಗಳಿಂದ ನಡೆಸುತ್ತಿರುವ ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವುದು ಸಂತೋಷದ ಸಂಗತಿ,” ಎಂದು ದರ್ಶನ್ ಪಾಲ್ ಹೇಳಿದರು. ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿಗಳ ಭೇಟಿಯ ನಂತರ ಹೋರಾಟದ ಮುಂದಿನ ರೂಪುರೇಷೆಗಳು ಸ್ಪಷ್ಟವಾಗಲಿವೆ ಎಂದು ಅವರು ತಿಳಿಸಿದರು.

ಕರಾಳ ಕಾಯ್ದೆಗಳ ವಿರುದ್ಧದ ಹೋರಾಟದ ಪುನರಾವರ್ತನೆ? ಕೇಂದ್ರದ ಮೂರು ಕರಾಳ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ 13 ತಿಂಗಳ ಸುದೀರ್ಘ ಹೋರಾಟ ನಡೆಸಿ, ಮೋದಿ ಸರ್ಕಾರ ಕೃಷಿ ವಿರೋಧಿ ಕಾನೂನುಗಳನ್ನು ವಾಪಸ್ ಪಡೆದುಕೊಳ್ಳುವಂತೆ ಮಾಡಿದ್ದನ್ನು ದರ್ಶನ್ ಪಾಲ್ ನೆನಪಿಸಿಕೊಂಡರು. “ಅದೇ ಉತ್ಸಾಹದಲ್ಲಿ ದೇವನಹಳ್ಳಿಯ ಈ ಹೋರಾಟವೂ ನಡೆಯುತ್ತಿದೆ. ಅದಕ್ಕೆ ನಮ್ಮೆಲ್ಲರ ಬೆಂಬಲ ಇದೆ,” ಎಂದು ಅವರು ದೃಢಪಡಿಸಿದರು. “ಮೂರು ವರ್ಷದ ಸುದೀರ್ಘ ಹೋರಾಟ ಎಂದರೆ ಸಾಮಾನ್ಯ ವಿಷಯವಲ್ಲ. ದೇವನಹಳ್ಳಿಯ ರೈತರು ಅದನ್ನು ಮಾಡಿ ತೋರಿಸಿದ್ದಾರೆ,” ಎಂದು ಶ್ಲಾಘಿಸಿದರು.

ರೈತರ ಒಪ್ಪಿಗೆ ಇಲ್ಲದೆ ಒಂದಿಂಚು ಭೂಮಿಯೂ ಇಲ್ಲ! ಅನೇಕ ರಾಜ್ಯ ಸರ್ಕಾರಗಳು 2013ರಲ್ಲಿ ಭೂ ಸ್ವಾಧೀನ ಕಾಯಿದೆಯನ್ನು ಅಂಗೀಕರಿಸಿವೆ. ಈ ಕಾಯಿದೆಯ ಪ್ರಕಾರ, ಸರ್ಕಾರ ಕೈಗಾರಿಕಾ ಉದ್ದೇಶಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾದರೆ ಶೇಕಡಾ 70ರಷ್ಟು ರೈತರ ಒಪ್ಪಿಗೆ ಕಡ್ಡಾಯ. ಜೊತೆಗೆ, ಜೀವನ ಭದ್ರತೆ ಸೇರಿದಂತೆ ಎಲ್ಲ ಅಂಶಗಳು ಈ ಪ್ರಕ್ರಿಯೆಯಲ್ಲಿ ಒಳಗೊಳ್ಳಬೇಕು. ಆದರೆ, “ದೇವನಹಳ್ಳಿಯಲ್ಲಿ ಶೇಕಡ 80ರಷ್ಟು ಜನ ರೈತರು ಭೂಮಿ ಕೊಡಲ್ಲ ಎಂದು ಬರೆದುಕೊಟ್ಟಿದ್ದಾರೆ. ರೈತರ ಒಪ್ಪಿಗೆ ಇಲ್ಲದೇ ಒಂದಿಂಚು ಭೂಮಿಯನ್ನೂ ಸ್ವಾಧೀನಪಡಿಸಿಕೊಳ್ಳಬಾರದು,” ಎಂದು ದರ್ಶನ್ ಪಾಲ್ ಆಗ್ರಹಿಸಿದರು.

“ಸರ್ಕಾರ ಎಲ್ಲ ಕಡೆಗಳಲ್ಲಿ ಭೂಮಿಯನ್ನು ಕಿತ್ತುಕೊಳ್ಳುವ ಪ್ರಯತ್ನ ಮುಂದುವರಿಸಿದೆ. ಕೈಗಾರಿಕೆಗಳಿಗೆ ಕೊಟ್ಟಿರುವ ಭೂಮಿಯನ್ನು ಕಿತ್ತು ನಾವು ಅಲ್ಲಿ ಬೆಳೆ ಬೆಳೆಯುತ್ತೇವೆ ಎಂದರೆ ಅವರು ಕೊಡುತ್ತಾರೆಯೇ? ಸರ್ಕಾರ ಭೂಮಿಯನ್ನು ಖಾಸಗಿ ಮಾಲಕರಿಗೆ ಕೊಡುತ್ತಿರುವುದನ್ನು ನಾವು ವಿರೋಧಿಸುತ್ತೇವೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರಕ್ಕೆ ತೀಕ್ಷ್ಣ ಪ್ರಶ್ನೆಗಳು: ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ನಡೆದಾಗ ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಬಿಜೆಪಿ ಸರ್ಕಾರ ರೈತರ ವಿರುದ್ಧ ದಾಳಿ ಮಾಡುತ್ತಿದ್ದರೂ, ಪಂಜಾಬ್ ಸರ್ಕಾರ ರೈತರಿಗೆ ನೈತಿಕವಾಗಿ, ಹಣಕಾಸಿನ ಮೂಲಕ ಸಂಪೂರ್ಣ ಬೆಂಬಲ ನೀಡಿತ್ತು. ಆ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ 700ಕ್ಕೂ ಹೆಚ್ಚು ರೈತರಿಗೆ ತಲಾ 5 ಲಕ್ಷ ರೂ. ಪರಿಹಾರ ಮತ್ತು ಮನೆಗೊಂದು ಸರ್ಕಾರಿ ಕೆಲಸ ಘೋಷಿಸಿತ್ತು. “ಆದರೆ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಯಾಕೆ ಈ ರೀತಿ ನಡೆದುಕೊಳ್ಳುತ್ತಿದೆ?” ಎಂದು ದರ್ಶನ್ ಪಾಲ್ ನೇರವಾಗಿ ಪ್ರಶ್ನಿಸಿದರು.

“ರಾಹುಲ್ ಗಾಂಧಿ ದೆಹಲಿಯ ಗಡಿಗಳಲ್ಲಿ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದರು. ಆದರೆ, ಇಲ್ಲಿ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಯಾವ ಪಾತ್ರವನ್ನು ನಿರ್ವಹಿಸಿತೋ, ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ನಡೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ಜನರನ್ನು ಬೆದರಿಸುತ್ತಿದೆ, ಹೋರಾಟಗಾರರ ವಿರುದ್ಧ ಪೊಲೀಸರನ್ನು ಚೂ ಬಿಡಲಾಗುತ್ತಿದೆ,” ಎಂದು ಅವರು ಆಪಾದಿಸಿದರು.

ಜುಲೈ 20ರ ಗಡುವು ಮತ್ತು ರಾಷ್ಟ್ರವ್ಯಾಪಿ ಹೋರಾಟದ ಕರೆ: ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಕನ್ಯಾಕುಮಾರಿ ಇಂದ ಕಾಶ್ಮೀರದವರೆಗೂ ವ್ಯಾಪಿಸಿದೆ. “ರಾಜ್ಯ ಸರ್ಕಾರ ಈ ಹೋರಾಟಕ್ಕೆ ಮಣಿದು, ರೈತರ ಭೂಮಿ ಪಡೆದುಕೊಳ್ಳುವುದಿಲ್ಲ ಎಂದು ಘೋಷಿಸದಿದ್ದರೆ, ದೇಶಾದ್ಯಂತ ಹೋರಾಟ ಮಾಡಬೇಕಾಗುತ್ತದೆ. ದೇಶದ ಉದ್ದಗಲಕ್ಕೂ ಬೆಂಬಲ ಕೊಡಬೇಕಾಗುತ್ತದೆ. ಆದ್ದರಿಂದ ಈಗಲೇ ರೈತರ ಪರವಾಗಿ ಘೋಷಣೆ ಮಾಡಿ,” ಎಂದು ದರ್ಶನ್ ಪಾಲ್ ಒತ್ತಾಯಿಸಿದರು.

“ನಾವು ದೆಹಲಿಯ ಗಡಿಗಳನ್ನು ಮಾತ್ರವಲ್ಲ, ದೆಹಲಿಯ ರೈಲ್ವೇ ಸ್ಟೇಷನ್‌ಗಳು ಸೇರಿದಂತೆ ದಿಲ್ಲಿಗೆ ಬರುವ ಎಲ್ಲ ಮಾರ್ಗಗಳನ್ನು ದಿಗ್ಬಂಧನ ಮಾಡಿದ್ದೆವು. ರೈತರು ಈ ಬೆದರಿಕೆಗಳಿಗೆ ಹೆದರುವುದಿಲ್ಲ. ಎಸ್.ಕೆ.ಎಂ. ಅವರ ಜೊತೆಗಿದೆ. ಹಾಗಾಗಿ, ಸರ್ಕಾರ ರೈತಪರ ತೀರ್ಮಾನ ಪ್ರಕಟಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ದೇಶವ್ಯಾಪಿ ವಿಸ್ತರಿಸುತ್ತೇವೆ,” ಎಂದು ಅವರು ಪುನರುಚ್ಚರಿಸಿದರು.

ರೈತರ ದೃಢ ಸಂಕಲ್ಪಕ್ಕೆ ಅಭಿನಂದನೆ: “ಅರ್ಧ ಎಕರೆ, ಒಂದು ಎಕರೆ ಭೂಮಿಯಲ್ಲಿ ರೈತರು ತರಕಾರಿ, ಹಣ್ಣು-ಹಂಪಲ ಬೆಳೆಯುತ್ತಿದ್ದಾರೆ. ಅದನ್ನು ಈಗ ಕಿತ್ತುಕೊಳ್ಳಲು ಹೊರಟಿದೆ. ಈಗ ಒಂದಿಂಚು ಭೂಮಿಯನ್ನು ಕೂಡ ಕೊಡುವುದಿಲ್ಲ ಎಂದು ತೀರ್ಮಾನ ಮಾಡಿರುವುದು ಸಂತೋಷದ ಸಂಗತಿ, ಅದಕ್ಕೆ ನಮ್ಮ ಅಭಿನಂದನೆಗಳು,” ಎಂದು ದರ್ಶನ್ ಪಾಲ್ ರೈತರ ಸಂಕಲ್ಪವನ್ನು ಶ್ಲಾಘಿಸಿದರು. “ಜಾತಿವಾದಿಗಳಿಗೆ, ಮತೀಯವಾದಿಗಳಿಗೆ ಒಳಗಾಗದೆ, ಒಗ್ಗಟ್ಟಾಗಿ ನಾವು ಹೋರಾಟವನ್ನು ಮುಂದುವರಿಸಬೇಕು,” ಎಂದು ಅವರು ಕರೆ ನೀಡಿದರು.

ವಿಮಾನ ನಿಲ್ದಾಣಗಳ ಸಮೀಪದಲ್ಲಿ ಸರ್ಕಾರಗಳು ಭೂಮಿಯನ್ನು ವಶಪಡಿಸಿಕೊಳ್ಳುವ ಹುನ್ನಾರ ಮಾಡುತ್ತಿವೆ. ಇದರ ವಿರುದ್ಧ ನಮ್ಮ ಧ್ವನಿ ಎಂದಿಗೂ ಇರುತ್ತದೆ ಎಂದು ಎಸ್‌ಕೆಎಂ ನಾಯಕರು ಸ್ಪಷ್ಟಪಡಿಸಿದರು. ಜುಲೈ 20ರಂದು ನಡೆಯುವ ಸಂಯುಕ್ತ ಕಿಸಾನ್ ಮೋರ್ಚಾದ ಸಭೆಯಲ್ಲಿ ದೇವನಹಳ್ಳಿ ರೈತರ ಬೇಡಿಕೆಗಳನ್ನು ಪ್ರಮುಖವಾಗಿ ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ಅಂತಿಮಗೊಳಿಸಲಾಗುವುದು ಎಂದು ದರ್ಶನ್ ಪಾಲ್ ತಿಳಿಸಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...