Homeಕರ್ನಾಟಕಜುಲೈ 4ಕ್ಕೆ 'ನಾಡ ಉಳಿಸಿ ಸಮಾವೇಶ': ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ರೈತರಿಂದ ಆಗ್ರಹ

ಜುಲೈ 4ಕ್ಕೆ ‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ರೈತರಿಂದ ಆಗ್ರಹ

- Advertisement -
- Advertisement -

ಬೆಂಗಳೂರು: ದೇವನಹಳ್ಳಿಯ ಚನ್ನರಾಯಪಟ್ಟಣದ ಫಲವತ್ತಾದ ಕೃಷಿ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಬಲವಂತವಾಗಿ ಭೂಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಂಯುಕ್ತ ಹೋರಾಟ ಕರ್ನಾಟಕ ಹಮ್ಮಿಕೊಂಡಿದ್ದ ‘ದೇವನಹಳ್ಳಿ ಚಲೋ’ ಸಂದರ್ಭದಲ್ಲಿ ನಡೆದ ಪೊಲೀಸ್ ದಾಳಿಯ ನಂತರ, ರೈತರು ಮತ್ತು ಹೋರಾಟಗಾರರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಭೂ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇಂದು (ಭಾನುವಾರ) ಭೂ ಸತ್ಯಾಗ್ರಹದ ‘ಭೂಮಿ ಬಿಡಾರ’ದ ಕಾಂ. ಬಯ್ಯಾರೆಡ್ಡಿ ವೇದಿಕೆಯಲ್ಲಿ ರೈತ ಹೋರಾಟಗಾರರು ಹಾಗೂ ವಿವಿಧ ಚಳವಳಿಗಳ ಮುಖಂಡರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಜುಲೈ 4ರಂದು ಮುಖ್ಯಮಂತ್ರಿಗಳು ಕರೆದಿರುವ ಸಭೆಯಲ್ಲಿ ದೇವನಹಳ್ಳಿ ಭೂ ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸುವಂತಹ ನಿರ್ಧಾರ ಕೈಗೊಳ್ಳಬೇಕೆಂದು ಈ ವೇಳೆ ಸರ್ಕಾರವನ್ನು ಆಗ್ರಹಿಸಲಾಯಿತು.

ಸಚಿವರ ಮೇಲೆ ರೈತಪರ ನಿಲುವು ವಿಶ್ವಾಸ: ಬಡಗಲಪುರ ನಾಗೇಂದ್ರ

ಕರ್ನಾಟಕ ರಾಜ್ಯ ರೈತ ಸಂಘದ ನಾಯಕರು ಹಾಗೂ ಸಂಯುಕ್ತ ಹೋರಾಟದ ಸಂಚಾಲಕರೂ ಆದ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, “ಜುಲೈ 2ರಂದು ಕ್ಯಾಬಿನೆಟ್ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕ್ಯಾಬಿನೆಟ್‌ನ ಎಲ್ಲ ಸಚಿವರೂ ರೈತರ ಪರವಾದ ನಿರ್ಣಯಕ್ಕೆ ಬರುತ್ತಾರೆಂಬ ವಿಶ್ವಾಸವಿದೆ” ಎಂದರು.

“ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನೂ ಒಳಗೊಂಡಂತೆ, ಕ್ಯಾಬಿನೆಟ್‌ನ ಎಲ್ಲ ಸಚಿವರೂ ಚಳವಳಿಗಳ ಮಹತ್ವವೇನು ಎಂಬುದನ್ನು ಅರಿತವರೇ ಆಗಿದ್ದಾರೆ. ಒಂದು ವೇಳೆ ಸರ್ಕಾರದ ನಿರ್ಧಾರ ರೈತರ ವಿರುದ್ಧ ಬಂದರೆ ಈ ಚಳವಳಿ ಇನ್ನಷ್ಟು ತೀವ್ರವಾಗಿ ಮುಂದುವರೆಯಲಿದೆ. ಜುಲೈ 4ರಂದು ರೈತರು, ರೈತಮಹಿಳೆಯರು, ಕಾರ್ಮಿಕರು, ವಿದ್ಯಾರ್ಥಿಗಳು, ಚಿಂತಕರು ಸೇರಿದಂತೆ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಫ್ರೀಡಂ ಪಾರ್ಕ್‌ನಲ್ಲಿ ಸೇರಲಿದ್ದಾರೆ. ರಾಷ್ಟ್ರೀಯ ನಾಯಕರು ಅಂದು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

ಇದು ಭೂಮಿ ಉಳಿಸಿಕೊಳ್ಳಲು ರೈತರ ಬದುಕಿನ ಹೋರಾಟ: ನೂರ್ ಶ್ರೀಧರ್

ನಂತರ ಮಾತನಾಡಿದ ಹೋರಾಟಗಾರ ನೂರ್ ಶ್ರೀಧರ್ ಅವರು, “ಇಂದು ರಾಜ್ಯ ಸರ್ಕಾರದ ಮೇಲೆ ದೊಡ್ಡ ಚಾರಿತ್ರಿಕ ಹೊಣೆಗಾರಿಕೆಯಿದೆ. ಈಗಲೂ ಕ್ಯಾಬಿನೆಟ್‌ನ ಹಲವು ಸಚಿವರು ಈ ಹೋರಾಟದಲ್ಲಿರುವ ರೈತರನ್ನು ಹೆಚ್ಚಿನ ಬೆಲೆಗೆ ಭೂಮಿ ಮಾರಿಕೊಳ್ಳಲು ಕಾದಿರುವವರೆಂದು ಪರಿಗಣಿಸುತ್ತಿದ್ದಾರೆಯೇ ಹೊರತು, ಈ ರೈತ ಕುಟುಂಬಗಳ ನೈತಿಕ ಶಕ್ತಿಯನ್ನು ಅರ್ಥಮಾಡಿಕೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಇದು ಪ್ರಾಮಾಣಿಕವಾಗಿ ಭೂಮಿ ಉಳಿಸಿಕೊಳ್ಳಲಿಕ್ಕಾಗಿ ರೈತರು ನಡೆಸುತ್ತಿರುವ ಬದುಕಿನ ಹೋರಾಟ. ಈ ಹೋರಾಟದಲ್ಲಿ ಸತ್ವ ಇಲ್ಲದಿದ್ದಿದ್ದರೆ, ಒಟ್ಟು 13 ಹಳ್ಳಿಗಳಲ್ಲಿ 3 ಹಳ್ಳಿಗಳ ರೈತರ ಜಮೀನನ್ನು ನೀವು ಯೋಜನೆಯಿಂದ ಹೊರಗಿಟ್ಟಾಗ ಇವರಲ್ಲಿ ಬಿರುಕು ಬಂದಿರುತ್ತಿತ್ತು. ಆದರೆ ಇಂದಿನವರೆಗೂ ಆ ಹಳ್ಳಿಗಳ ರೈತರೂ ಕೂಡಾ ಪ್ರತಿದಿನ ಈ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ, ಯಾಕೆಂದು ನೀವು ಯೋಚಿಸಬೇಕು. ಇದನ್ನು ಅರ್ಥಮಾಡಿಕೊಂಡು, ಜುಲೈ 2ರಂದು ನಂದಿಬೆಟ್ಟದಲ್ಲಿ ನಡೆಯುತ್ತಿರುವ ಕ್ಯಾಬಿನೆಟ್‌ನಲ್ಲಿ ದೇವನಹಳ್ಳಿಯ ಮೂಲಕವೇ ಹೋಗಿ ಬರುತ್ತಾ ಅಲ್ಲಿನ ರೈತರ ಪರವಾದ ನಿರ್ಧಾರ ತೆಗೆದುಕೊಳ್ಳಿ, ಇಲ್ಲದಿದ್ದರೆ ನಾಡಿನ ಜನತೆಗೆ ಸರ್ಕಾರ ದೊಡ್ಡ ದ್ರೋಹ ಮಾಡಿದಂತಾಗುತ್ತದೆ” ಎಂದು ನೂರ್ ಶ್ರೀಧರ್ ಆಗ್ರಹಿಸಿದರು.

ಸರ್ಕಾರದ ಕೈಗಾರಿಕಾ ನೀತಿ ದೋಷಯುಕ್ತ: ಯು. ಬಸವರಾಜ್

ಕರ್ನಾಟಕ ಪ್ರಾಂತ ರೈತ ಸಂಘದ ಯು. ಬಸವರಾಜ್ ಅವರು ಮಾತನಾಡಿ, “ಸರ್ಕಾರದ ಕೈಗಾರಿಕಾ ನೀತಿ ದೋಷಯುಕ್ತವಾಗಿದೆ, ಇದು ನೈಜ ಅಭಿವೃದ್ಧಿಯ ಪರವಾಗಿಲ್ಲ, ಲೂಟಿಕೋರರ ಪರವಾಗಿದೆ. ಸರ್ಕಾರದ ಅಧೀನದ ಕೆಐಎಡಿಬಿ ಮತ್ತು ಅನೇಕ ಸಚಿವರು ಕೈಗಾರಿಕೆಗಳ ಹೆಸರಿನಲ್ಲಿ ವಶಪಡಿಸಿಕೊಂಡ ಭೂಮಿ ವೇದಾಂತದಂತಹ ಕಾರ್ಪೊರೇಟ್‌ಗಳ ಪಾಲಾಗುತ್ತಿದೆ. ಅಲ್ಲಿ ಯಾವುದೇ ದೊಡ್ಡ ಸಂಖ್ಯೆಯ ಉದ್ಯೋಗ ತರುವ ಯೋಜನೆಗಳು ಬರುತ್ತಿಲ್ಲ” ಎಂದು ಆರೋಪಿಸಿದರು.

“ಉತ್ತರ ಕರ್ನಾಟಕದಲ್ಲಿ ನೀರಾವರಿಯಿಲ್ಲದ, ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿಯಲ್ಲಿ ಕೈಗಾರಿಕೆ ಸ್ಥಾಪಿಸಿ. ಅಲ್ಲಿ ಈಗಾಗಲೇ ನೀವು ಸ್ವಾಧೀನಪಡಿಸಿಕೊಂಡಿರುವ 50,000 ಎಕರೆಗಿಂತ ಹೆಚ್ಚು ಭೂಮಿ, ರೈತರು ಒಪ್ಪಿಕೊಟ್ಟಿರುವಂಥದ್ದು ನಿಮ್ಮ ಕೈಯಲ್ಲಿದೆ, ಅಲ್ಲಿ ಕೈಗಾರಿಕೆ ಸ್ಥಾಪಿಸಿ” ಎಂದು ಅವರು ಒತ್ತಾಯಿಸಿದರು.

ಇದು ಜನರ ಹಿತಾಸಕ್ತಿಗೆ ವಿರುದ್ಧ: ವಿ. ನಾಗರಾಜ್

ದಲಿತ ಚಳವಳಿಯ ನಾಯಕರಾದ ವಿ. ನಾಗರಾಜ್‌ರವರು ಮಾತನಾಡಿ, “ರೈತರು ಮತ್ತು ಕರ್ನಾಟಕದ ಜನರ ಆಗ್ರಹವನ್ನು ನೀವು ಅರ್ಥಮಾಡಿಕೊಳ್ಳಬೇಕು, ನಾವು ಕೈಗಾರಿಕೆ ವಿರೋಧಿಗಳಲ್ಲ, ಆದರೆ ಇಲ್ಲಿ ಭೂಸ್ವಾಧೀನ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ. ಅವರ ಬದುಕಿನ ಪರವಾಗಿ ಭಾರೀ ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್ ಅವರು ನಿರ್ಣಯ ಕೈಗೊಳ್ಳಬೇಕು. ಇಲ್ಲದಿದ್ದರೆ ಈ ಹುದ್ದೆಯಲ್ಲಿರಲು ಅನರ್ಹರೆಂದು ಒಪ್ಪಿಕೊಂಡು ರಾಜೀನಾಮೆ ನೀಡಬೇಕೆಂದು ನಾವು ಕೇಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಕಿಸಾನ್ ಸಭಾದ ಪರವಾಗಿ ಪಿ.ವಿ ಲೋಕೇಶ್, ಎಐಸಿಸಿಟಿಯು ಪರವಾಗಿ ನಿರ್ಮಲಾ ಮೊದಲಾದವರು ಮಾತನಾಡಿದರು. ಸಿಐಟಿಯುನ ವರಲಕ್ಷ್ಮಿ ಅವರು, “ಒಂದಲ್ಲಾ ಒಂದು ಕಾರಣ ನೀಡಿ, ನೋಟಿಫಿಕೇಶನ್‌ ಅನ್ನು ರದ್ದು ಮಾಡದೆ ಮುಂದೂಡಿದಲ್ಲಿ ಪರಿಣಾಮಗಳು ಗಂಭೀರವಾಗುವುದು ಶತಸಿದ್ಧ. ಇದನ್ನು ತಡೆಯಬೇಕಾದರೆ ಇಡೀ ರಾಜ್ಯ ಮತ್ತೊಮ್ಮೆ ಗಟ್ಟಿಯಾಗಿ ಕೂಗಿ ಹೇಳಬೇಕಿರುವ ಮತ್ತು ಇಡೀ ಸರ್ಕಾರ ಕಣ್ಣು ತೆರೆಯಲೇಬೇಕಾದ ವಾತಾವರಣ ನಿರ್ಮಿಸುವ ಅಗತ್ಯವಿದೆ. ಅಂತಿಮ ಗೆಲುವಂತೂ ನ್ಯಾಯದ್ದೇ ಆಗಲಿದೆ. ಅದಕ್ಕಾಗಿ ಹೋರಾಟ ಸಮಿತಿಯು ಈ ಕೆಳಕಂಡ ತೀರ್ಮಾನಗಳನ್ನು ತೆಗೆದುಕೊಂಡಿದೆ” ಎಂದು ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು:

  • ಜುಲೈ 2 ರಂದು ನಂದಿಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ‘ದೇವನಹಳ್ಳಿ ಭೂ ಸಮಸ್ಯೆ’ ವಿಶೇಷ ಅಜೆಂಡಾ ಆಗಬೇಕು ಎಂದು ಒತ್ತಾಯಿಸುತ್ತಿದ್ದೇವೆ. ದೇವನಹಳ್ಳಿಯ ಮೂಲಕವೇ ಬೆಟ್ಟಕ್ಕೆ ಹೋದವರು ಬರಿಗೈಯಲ್ಲಿ ಬಾರದಿರಿ ಎಂದು ಕ್ಯಾಬಿನೆಟ್ ಸಚಿವರುಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ.
  • ದೇವನಹಳ್ಳಿ ವಿವಾದದ ನಿಜವಾದ ಚಿತ್ರಣ ಬಹುತೇಕ ಸಚಿವರುಗಳಿಗೆ ಹಾಗೂ ಶಾಸಕರುಗಳಿಗೆ ಸ್ಪಷ್ಟವಾಗಿಲ್ಲ. ನಿಮ್ಮ ನಿಮ್ಮ ಜಿಲ್ಲೆಯಲ್ಲಿರುವ ಶಾಸಕರು ಮತ್ತು ಸಚಿವರನ್ನು ಕಂಡು, ವಿಚಾರ ವಿವರಿಸಿ, ರೈತಪರ ನಿಲುವು ತೆಗೆದುಕೊಳ್ಳುವಂತೆ ಮನವೊಲಿಸಬೇಕು ಎಂದು ರಾಜ್ಯದ ಎಲ್ಲಾ ಹೋರಾಟಗಾರರಲ್ಲೂ ಮನವಿ ಮಾಡಿಕೊಳ್ಳುತ್ತಿದ್ದೇವೆ.
  • ಸರ್ಕಾರದ ಮೇಲೆ ಸಾತ್ವಿಕ ಒತ್ತಡ ಹೆಚ್ಚಿಸುವ ದೃಷ್ಟಿಯಿಂದ ಜುಲೈ 4 ರಂದು ಇದೇ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನಾಡ ಉಳಿಸಿ ಸಮಾವೇಶ’ವನ್ನು ಸಂಘಟಿಸಲಾಗುತ್ತಿದೆ. ರಾಜ್ಯದ ಎಲ್ಲಾ ತಾಲ್ಲೂಕುಗಳಿಂದಲೂ ಸಮಾನ ಮನಸ್ಕರು ದೊಡ್ಡ ಸಂಖ್ಯೆಯಲ್ಲಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
  • ಜುಲೈ 4 ರಂದು ಸರ್ಕಾರ ನಿಟ್ಟುಸಿರು ಬಿಡುವಂತಹ ತೀರ್ಮಾನ ತೆಗೆದುಕೊಂಡಲ್ಲಿ ಸಿದ್ಧರಾಮಯ್ಯನವರನ್ನು ಹಾಗೂ ಅವರ ಸರ್ಕಾರವನ್ನು ಅಭಿನಂದಿಸಿ ಇಲ್ಲಿಂದ ಹೊರಡುತ್ತೇವೆ. ಒಂದು ವೇಳೆ ಮತ್ತೊಮ್ಮೆ ನ್ಯಾಯ ನಿರಾಕರಣೆ ನಡೆದಲ್ಲಿ ಇನ್ನಷ್ಟು ಕಠಿಣ ಹೋರಾಟದ ದಿಟ್ಟ ತೀರ್ಮಾನವನ್ನು ಅಂದು ತೆಗೆದುಕೊಳ್ಳುತ್ತೇವೆ.

ಈ ಹೋರಾಟಕ್ಕೆ ನಾಡಿನ ಎಲ್ಲ ಚಳುವಳಿಗಳು ಮತ್ತು ಪ್ರಜ್ಞಾವಂತ ಜನತೆ ಬೆಂಬಲ ನೀಡಬೇಕೆಂದು   ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿಕೊಳ್ಳಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಬಡಗಲಪುರ ನಾಗೇಂದ್ರ, ವರಲಕ್ಷ್ಮಿ, ಚಾಮರಸ ಮಾಲಿಪಾಟೀಲ್, ವಿ.ನಾಗರಾಜ್, ಯು.ಬಸವರಾಜ್, ಪಿ.ವಿ.ಲೋಕೇಶ್, ನಿರ್ವಾಣಪ್ಪ, ದೇವಿ, ಶ್ರೀನಿವಾಸ್ ಕಾರಹಳ್ಳಿ, ಪ್ರಭಾ ಬೆಳವಂಗಲ, ಕೆ.ವಿ. ಭಟ್, ನೂರ್ ಶ್ರೀಧರ್, ನಿರ್ಮಲ, ಶಿವಪ್ರಕಾಶ್, ಕುಮಾರ್ ಸಮತಳ, ಸುನಂದಾ ಮೊದಲಾದವರು ಹಾಜರಿದ್ದವರು.

ದೇವನಹಳ್ಳಿ ರೈತರ ಭೂಮಿ ಸತ್ಯಾಗ್ರಹ ಹೋರಾಟ: ಜು.2ರ ಸಂಪುಟ ಸಭೆಯಲ್ಲಿ ಭೂಸ್ವಾಧೀನ ಕೈಬಿಡುವ ತೀರ್ಮಾನ ತಗಿದುಕೊಳ್ಳಿ-ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....