Homeಕರ್ನಾಟಕಜುಲೈ 4ಕ್ಕೆ 'ನಾಡ ಉಳಿಸಿ ಸಮಾವೇಶ': ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ರೈತರಿಂದ ಆಗ್ರಹ

ಜುಲೈ 4ಕ್ಕೆ ‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ರೈತರಿಂದ ಆಗ್ರಹ

- Advertisement -
- Advertisement -

ಬೆಂಗಳೂರು: ದೇವನಹಳ್ಳಿಯ ಚನ್ನರಾಯಪಟ್ಟಣದ ಫಲವತ್ತಾದ ಕೃಷಿ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಬಲವಂತವಾಗಿ ಭೂಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಂಯುಕ್ತ ಹೋರಾಟ ಕರ್ನಾಟಕ ಹಮ್ಮಿಕೊಂಡಿದ್ದ ‘ದೇವನಹಳ್ಳಿ ಚಲೋ’ ಸಂದರ್ಭದಲ್ಲಿ ನಡೆದ ಪೊಲೀಸ್ ದಾಳಿಯ ನಂತರ, ರೈತರು ಮತ್ತು ಹೋರಾಟಗಾರರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಭೂ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇಂದು (ಭಾನುವಾರ) ಭೂ ಸತ್ಯಾಗ್ರಹದ ‘ಭೂಮಿ ಬಿಡಾರ’ದ ಕಾಂ. ಬಯ್ಯಾರೆಡ್ಡಿ ವೇದಿಕೆಯಲ್ಲಿ ರೈತ ಹೋರಾಟಗಾರರು ಹಾಗೂ ವಿವಿಧ ಚಳವಳಿಗಳ ಮುಖಂಡರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಜುಲೈ 4ರಂದು ಮುಖ್ಯಮಂತ್ರಿಗಳು ಕರೆದಿರುವ ಸಭೆಯಲ್ಲಿ ದೇವನಹಳ್ಳಿ ಭೂ ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸುವಂತಹ ನಿರ್ಧಾರ ಕೈಗೊಳ್ಳಬೇಕೆಂದು ಈ ವೇಳೆ ಸರ್ಕಾರವನ್ನು ಆಗ್ರಹಿಸಲಾಯಿತು.

ಸಚಿವರ ಮೇಲೆ ರೈತಪರ ನಿಲುವು ವಿಶ್ವಾಸ: ಬಡಗಲಪುರ ನಾಗೇಂದ್ರ

ಕರ್ನಾಟಕ ರಾಜ್ಯ ರೈತ ಸಂಘದ ನಾಯಕರು ಹಾಗೂ ಸಂಯುಕ್ತ ಹೋರಾಟದ ಸಂಚಾಲಕರೂ ಆದ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, “ಜುಲೈ 2ರಂದು ಕ್ಯಾಬಿನೆಟ್ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕ್ಯಾಬಿನೆಟ್‌ನ ಎಲ್ಲ ಸಚಿವರೂ ರೈತರ ಪರವಾದ ನಿರ್ಣಯಕ್ಕೆ ಬರುತ್ತಾರೆಂಬ ವಿಶ್ವಾಸವಿದೆ” ಎಂದರು.

“ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನೂ ಒಳಗೊಂಡಂತೆ, ಕ್ಯಾಬಿನೆಟ್‌ನ ಎಲ್ಲ ಸಚಿವರೂ ಚಳವಳಿಗಳ ಮಹತ್ವವೇನು ಎಂಬುದನ್ನು ಅರಿತವರೇ ಆಗಿದ್ದಾರೆ. ಒಂದು ವೇಳೆ ಸರ್ಕಾರದ ನಿರ್ಧಾರ ರೈತರ ವಿರುದ್ಧ ಬಂದರೆ ಈ ಚಳವಳಿ ಇನ್ನಷ್ಟು ತೀವ್ರವಾಗಿ ಮುಂದುವರೆಯಲಿದೆ. ಜುಲೈ 4ರಂದು ರೈತರು, ರೈತಮಹಿಳೆಯರು, ಕಾರ್ಮಿಕರು, ವಿದ್ಯಾರ್ಥಿಗಳು, ಚಿಂತಕರು ಸೇರಿದಂತೆ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಫ್ರೀಡಂ ಪಾರ್ಕ್‌ನಲ್ಲಿ ಸೇರಲಿದ್ದಾರೆ. ರಾಷ್ಟ್ರೀಯ ನಾಯಕರು ಅಂದು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

ಇದು ಭೂಮಿ ಉಳಿಸಿಕೊಳ್ಳಲು ರೈತರ ಬದುಕಿನ ಹೋರಾಟ: ನೂರ್ ಶ್ರೀಧರ್

ನಂತರ ಮಾತನಾಡಿದ ಹೋರಾಟಗಾರ ನೂರ್ ಶ್ರೀಧರ್ ಅವರು, “ಇಂದು ರಾಜ್ಯ ಸರ್ಕಾರದ ಮೇಲೆ ದೊಡ್ಡ ಚಾರಿತ್ರಿಕ ಹೊಣೆಗಾರಿಕೆಯಿದೆ. ಈಗಲೂ ಕ್ಯಾಬಿನೆಟ್‌ನ ಹಲವು ಸಚಿವರು ಈ ಹೋರಾಟದಲ್ಲಿರುವ ರೈತರನ್ನು ಹೆಚ್ಚಿನ ಬೆಲೆಗೆ ಭೂಮಿ ಮಾರಿಕೊಳ್ಳಲು ಕಾದಿರುವವರೆಂದು ಪರಿಗಣಿಸುತ್ತಿದ್ದಾರೆಯೇ ಹೊರತು, ಈ ರೈತ ಕುಟುಂಬಗಳ ನೈತಿಕ ಶಕ್ತಿಯನ್ನು ಅರ್ಥಮಾಡಿಕೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಇದು ಪ್ರಾಮಾಣಿಕವಾಗಿ ಭೂಮಿ ಉಳಿಸಿಕೊಳ್ಳಲಿಕ್ಕಾಗಿ ರೈತರು ನಡೆಸುತ್ತಿರುವ ಬದುಕಿನ ಹೋರಾಟ. ಈ ಹೋರಾಟದಲ್ಲಿ ಸತ್ವ ಇಲ್ಲದಿದ್ದಿದ್ದರೆ, ಒಟ್ಟು 13 ಹಳ್ಳಿಗಳಲ್ಲಿ 3 ಹಳ್ಳಿಗಳ ರೈತರ ಜಮೀನನ್ನು ನೀವು ಯೋಜನೆಯಿಂದ ಹೊರಗಿಟ್ಟಾಗ ಇವರಲ್ಲಿ ಬಿರುಕು ಬಂದಿರುತ್ತಿತ್ತು. ಆದರೆ ಇಂದಿನವರೆಗೂ ಆ ಹಳ್ಳಿಗಳ ರೈತರೂ ಕೂಡಾ ಪ್ರತಿದಿನ ಈ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ, ಯಾಕೆಂದು ನೀವು ಯೋಚಿಸಬೇಕು. ಇದನ್ನು ಅರ್ಥಮಾಡಿಕೊಂಡು, ಜುಲೈ 2ರಂದು ನಂದಿಬೆಟ್ಟದಲ್ಲಿ ನಡೆಯುತ್ತಿರುವ ಕ್ಯಾಬಿನೆಟ್‌ನಲ್ಲಿ ದೇವನಹಳ್ಳಿಯ ಮೂಲಕವೇ ಹೋಗಿ ಬರುತ್ತಾ ಅಲ್ಲಿನ ರೈತರ ಪರವಾದ ನಿರ್ಧಾರ ತೆಗೆದುಕೊಳ್ಳಿ, ಇಲ್ಲದಿದ್ದರೆ ನಾಡಿನ ಜನತೆಗೆ ಸರ್ಕಾರ ದೊಡ್ಡ ದ್ರೋಹ ಮಾಡಿದಂತಾಗುತ್ತದೆ” ಎಂದು ನೂರ್ ಶ್ರೀಧರ್ ಆಗ್ರಹಿಸಿದರು.

ಸರ್ಕಾರದ ಕೈಗಾರಿಕಾ ನೀತಿ ದೋಷಯುಕ್ತ: ಯು. ಬಸವರಾಜ್

ಕರ್ನಾಟಕ ಪ್ರಾಂತ ರೈತ ಸಂಘದ ಯು. ಬಸವರಾಜ್ ಅವರು ಮಾತನಾಡಿ, “ಸರ್ಕಾರದ ಕೈಗಾರಿಕಾ ನೀತಿ ದೋಷಯುಕ್ತವಾಗಿದೆ, ಇದು ನೈಜ ಅಭಿವೃದ್ಧಿಯ ಪರವಾಗಿಲ್ಲ, ಲೂಟಿಕೋರರ ಪರವಾಗಿದೆ. ಸರ್ಕಾರದ ಅಧೀನದ ಕೆಐಎಡಿಬಿ ಮತ್ತು ಅನೇಕ ಸಚಿವರು ಕೈಗಾರಿಕೆಗಳ ಹೆಸರಿನಲ್ಲಿ ವಶಪಡಿಸಿಕೊಂಡ ಭೂಮಿ ವೇದಾಂತದಂತಹ ಕಾರ್ಪೊರೇಟ್‌ಗಳ ಪಾಲಾಗುತ್ತಿದೆ. ಅಲ್ಲಿ ಯಾವುದೇ ದೊಡ್ಡ ಸಂಖ್ಯೆಯ ಉದ್ಯೋಗ ತರುವ ಯೋಜನೆಗಳು ಬರುತ್ತಿಲ್ಲ” ಎಂದು ಆರೋಪಿಸಿದರು.

“ಉತ್ತರ ಕರ್ನಾಟಕದಲ್ಲಿ ನೀರಾವರಿಯಿಲ್ಲದ, ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿಯಲ್ಲಿ ಕೈಗಾರಿಕೆ ಸ್ಥಾಪಿಸಿ. ಅಲ್ಲಿ ಈಗಾಗಲೇ ನೀವು ಸ್ವಾಧೀನಪಡಿಸಿಕೊಂಡಿರುವ 50,000 ಎಕರೆಗಿಂತ ಹೆಚ್ಚು ಭೂಮಿ, ರೈತರು ಒಪ್ಪಿಕೊಟ್ಟಿರುವಂಥದ್ದು ನಿಮ್ಮ ಕೈಯಲ್ಲಿದೆ, ಅಲ್ಲಿ ಕೈಗಾರಿಕೆ ಸ್ಥಾಪಿಸಿ” ಎಂದು ಅವರು ಒತ್ತಾಯಿಸಿದರು.

ಇದು ಜನರ ಹಿತಾಸಕ್ತಿಗೆ ವಿರುದ್ಧ: ವಿ. ನಾಗರಾಜ್

ದಲಿತ ಚಳವಳಿಯ ನಾಯಕರಾದ ವಿ. ನಾಗರಾಜ್‌ರವರು ಮಾತನಾಡಿ, “ರೈತರು ಮತ್ತು ಕರ್ನಾಟಕದ ಜನರ ಆಗ್ರಹವನ್ನು ನೀವು ಅರ್ಥಮಾಡಿಕೊಳ್ಳಬೇಕು, ನಾವು ಕೈಗಾರಿಕೆ ವಿರೋಧಿಗಳಲ್ಲ, ಆದರೆ ಇಲ್ಲಿ ಭೂಸ್ವಾಧೀನ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ. ಅವರ ಬದುಕಿನ ಪರವಾಗಿ ಭಾರೀ ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್ ಅವರು ನಿರ್ಣಯ ಕೈಗೊಳ್ಳಬೇಕು. ಇಲ್ಲದಿದ್ದರೆ ಈ ಹುದ್ದೆಯಲ್ಲಿರಲು ಅನರ್ಹರೆಂದು ಒಪ್ಪಿಕೊಂಡು ರಾಜೀನಾಮೆ ನೀಡಬೇಕೆಂದು ನಾವು ಕೇಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಕಿಸಾನ್ ಸಭಾದ ಪರವಾಗಿ ಪಿ.ವಿ ಲೋಕೇಶ್, ಎಐಸಿಸಿಟಿಯು ಪರವಾಗಿ ನಿರ್ಮಲಾ ಮೊದಲಾದವರು ಮಾತನಾಡಿದರು. ಸಿಐಟಿಯುನ ವರಲಕ್ಷ್ಮಿ ಅವರು, “ಒಂದಲ್ಲಾ ಒಂದು ಕಾರಣ ನೀಡಿ, ನೋಟಿಫಿಕೇಶನ್‌ ಅನ್ನು ರದ್ದು ಮಾಡದೆ ಮುಂದೂಡಿದಲ್ಲಿ ಪರಿಣಾಮಗಳು ಗಂಭೀರವಾಗುವುದು ಶತಸಿದ್ಧ. ಇದನ್ನು ತಡೆಯಬೇಕಾದರೆ ಇಡೀ ರಾಜ್ಯ ಮತ್ತೊಮ್ಮೆ ಗಟ್ಟಿಯಾಗಿ ಕೂಗಿ ಹೇಳಬೇಕಿರುವ ಮತ್ತು ಇಡೀ ಸರ್ಕಾರ ಕಣ್ಣು ತೆರೆಯಲೇಬೇಕಾದ ವಾತಾವರಣ ನಿರ್ಮಿಸುವ ಅಗತ್ಯವಿದೆ. ಅಂತಿಮ ಗೆಲುವಂತೂ ನ್ಯಾಯದ್ದೇ ಆಗಲಿದೆ. ಅದಕ್ಕಾಗಿ ಹೋರಾಟ ಸಮಿತಿಯು ಈ ಕೆಳಕಂಡ ತೀರ್ಮಾನಗಳನ್ನು ತೆಗೆದುಕೊಂಡಿದೆ” ಎಂದು ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು:

  • ಜುಲೈ 2 ರಂದು ನಂದಿಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ‘ದೇವನಹಳ್ಳಿ ಭೂ ಸಮಸ್ಯೆ’ ವಿಶೇಷ ಅಜೆಂಡಾ ಆಗಬೇಕು ಎಂದು ಒತ್ತಾಯಿಸುತ್ತಿದ್ದೇವೆ. ದೇವನಹಳ್ಳಿಯ ಮೂಲಕವೇ ಬೆಟ್ಟಕ್ಕೆ ಹೋದವರು ಬರಿಗೈಯಲ್ಲಿ ಬಾರದಿರಿ ಎಂದು ಕ್ಯಾಬಿನೆಟ್ ಸಚಿವರುಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ.
  • ದೇವನಹಳ್ಳಿ ವಿವಾದದ ನಿಜವಾದ ಚಿತ್ರಣ ಬಹುತೇಕ ಸಚಿವರುಗಳಿಗೆ ಹಾಗೂ ಶಾಸಕರುಗಳಿಗೆ ಸ್ಪಷ್ಟವಾಗಿಲ್ಲ. ನಿಮ್ಮ ನಿಮ್ಮ ಜಿಲ್ಲೆಯಲ್ಲಿರುವ ಶಾಸಕರು ಮತ್ತು ಸಚಿವರನ್ನು ಕಂಡು, ವಿಚಾರ ವಿವರಿಸಿ, ರೈತಪರ ನಿಲುವು ತೆಗೆದುಕೊಳ್ಳುವಂತೆ ಮನವೊಲಿಸಬೇಕು ಎಂದು ರಾಜ್ಯದ ಎಲ್ಲಾ ಹೋರಾಟಗಾರರಲ್ಲೂ ಮನವಿ ಮಾಡಿಕೊಳ್ಳುತ್ತಿದ್ದೇವೆ.
  • ಸರ್ಕಾರದ ಮೇಲೆ ಸಾತ್ವಿಕ ಒತ್ತಡ ಹೆಚ್ಚಿಸುವ ದೃಷ್ಟಿಯಿಂದ ಜುಲೈ 4 ರಂದು ಇದೇ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನಾಡ ಉಳಿಸಿ ಸಮಾವೇಶ’ವನ್ನು ಸಂಘಟಿಸಲಾಗುತ್ತಿದೆ. ರಾಜ್ಯದ ಎಲ್ಲಾ ತಾಲ್ಲೂಕುಗಳಿಂದಲೂ ಸಮಾನ ಮನಸ್ಕರು ದೊಡ್ಡ ಸಂಖ್ಯೆಯಲ್ಲಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
  • ಜುಲೈ 4 ರಂದು ಸರ್ಕಾರ ನಿಟ್ಟುಸಿರು ಬಿಡುವಂತಹ ತೀರ್ಮಾನ ತೆಗೆದುಕೊಂಡಲ್ಲಿ ಸಿದ್ಧರಾಮಯ್ಯನವರನ್ನು ಹಾಗೂ ಅವರ ಸರ್ಕಾರವನ್ನು ಅಭಿನಂದಿಸಿ ಇಲ್ಲಿಂದ ಹೊರಡುತ್ತೇವೆ. ಒಂದು ವೇಳೆ ಮತ್ತೊಮ್ಮೆ ನ್ಯಾಯ ನಿರಾಕರಣೆ ನಡೆದಲ್ಲಿ ಇನ್ನಷ್ಟು ಕಠಿಣ ಹೋರಾಟದ ದಿಟ್ಟ ತೀರ್ಮಾನವನ್ನು ಅಂದು ತೆಗೆದುಕೊಳ್ಳುತ್ತೇವೆ.

ಈ ಹೋರಾಟಕ್ಕೆ ನಾಡಿನ ಎಲ್ಲ ಚಳುವಳಿಗಳು ಮತ್ತು ಪ್ರಜ್ಞಾವಂತ ಜನತೆ ಬೆಂಬಲ ನೀಡಬೇಕೆಂದು   ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿಕೊಳ್ಳಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಬಡಗಲಪುರ ನಾಗೇಂದ್ರ, ವರಲಕ್ಷ್ಮಿ, ಚಾಮರಸ ಮಾಲಿಪಾಟೀಲ್, ವಿ.ನಾಗರಾಜ್, ಯು.ಬಸವರಾಜ್, ಪಿ.ವಿ.ಲೋಕೇಶ್, ನಿರ್ವಾಣಪ್ಪ, ದೇವಿ, ಶ್ರೀನಿವಾಸ್ ಕಾರಹಳ್ಳಿ, ಪ್ರಭಾ ಬೆಳವಂಗಲ, ಕೆ.ವಿ. ಭಟ್, ನೂರ್ ಶ್ರೀಧರ್, ನಿರ್ಮಲ, ಶಿವಪ್ರಕಾಶ್, ಕುಮಾರ್ ಸಮತಳ, ಸುನಂದಾ ಮೊದಲಾದವರು ಹಾಜರಿದ್ದವರು.

ದೇವನಹಳ್ಳಿ ರೈತರ ಭೂಮಿ ಸತ್ಯಾಗ್ರಹ ಹೋರಾಟ: ಜು.2ರ ಸಂಪುಟ ಸಭೆಯಲ್ಲಿ ಭೂಸ್ವಾಧೀನ ಕೈಬಿಡುವ ತೀರ್ಮಾನ ತಗಿದುಕೊಳ್ಳಿ-ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...