HomeUncategorizedನಾಡ ಉಳಿಸಿ ಸಮಾವೇಶ: ರೈತರ ಭೂಮಿಗೆ ಕೈಹಾಕಿದರೆ ಪ್ರಬಲ ಪ್ರತಿರೋಧ - ರಾಕೇಶ್ ಟಿಕಾಯತ್ ಎಚ್ಚರಿಕೆ!

ನಾಡ ಉಳಿಸಿ ಸಮಾವೇಶ: ರೈತರ ಭೂಮಿಗೆ ಕೈಹಾಕಿದರೆ ಪ್ರಬಲ ಪ್ರತಿರೋಧ – ರಾಕೇಶ್ ಟಿಕಾಯತ್ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟದಲ್ಲಿ ರೈತರ ಜೊತೆ ನಾವಿದ್ದೇವೆ ಎಂದು ಸ್ಪಷ್ಟಪಡಿಸಿದ ಭಾರತೀಯ ಕಿಸಾನ್ ಯೂನಿಯನ್ (ಬಿ.ಕೆ.ಯು) ನಾಯಕ ರಾಕೇಶ್ ಟಿಕಾಯತ್, ಭೂಮಿಯನ್ನು ಕಿತ್ತುಕೊಂಡು ರೈತರನ್ನು ಬಡವರನ್ನಾಗಿ ಮಾಡುವ ಸರ್ಕಾರದ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು (ಜುಲೈ 4) ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಭೇಟಿಯ ನಂತರ ಹೋರಾಟದ ಮುಂದಿನ ರೂಪುರೇಷೆಗಳು ನಿರ್ಧಾರವಾಗಲಿವೆ ಎಂದು ಹೇಳಿದರು.

ಕೃಷಿ ಭೂಮಿ ವಶಪಡಿಸಿಕೊಂಡರೆ, ರೈತರು ಬಡವರಾಗುತ್ತಾರೆ: “ನಗರ ಪ್ರದೇಶಗಳಲ್ಲಿ, ವಿಮಾನ ನಿಲ್ದಾಣಗಳಿಗೆ, ಕೈಗಾರಿಕೆಗಳಿಗೆ ಎಂದು ಸರ್ಕಾರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳುತ್ತಿದೆ. ಭೂಮಿಯನ್ನು ಕಿತ್ತುಕೊಂಡು ರೈತರನ್ನು ಬಡವರನ್ನಾಗಿ ಮಾಡಿ, ಭೂಮಿ ಬದಲಿಗೆ ಅಕ್ಕಿ ಕೊಡುತ್ತೇವೆಂದು ಹೇಳುತ್ತಿದ್ದಾರೆ. ಇದು ನಮಗೆ ಬೇಕಾಗಿದೆಯೇ? ಇದರ ವಿರುದ್ಧ ಹೋರಾಟ ಮುಂದುವರಿಸಬೇಕು,” ಎಂದು ಟಿಕಾಯತ್ ಪ್ರಶ್ನಿಸಿದರು.

ಕೈಗಾರಿಕೆಗಳಿಗೆ ಈಗಾಗಲೇ ನೀಡಿರುವ ಭೂಮಿಯನ್ನು ವಾಪಸ್ ಪಡೆದು ಅಲ್ಲಿ ಬೆಳೆ ಬೆಳೆಯುತ್ತೇವೆಂದರೆ ಸರ್ಕಾರ ಕೊಡುತ್ತದೆಯೇ ಎಂದು ಪ್ರಶ್ನಿಸಿದ ಅವರು, ಸರ್ಕಾರ ಭೂಮಿಯನ್ನು ಖಾಸಗಿ ಮಾಲೀಕರಿಗೆ (ಮಾಲಕರಿಗೆ) ಕೊಡುತ್ತಿರುವುದನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು. ಈ ಹಿಂದೆ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದವರು ಈಗ ಅಧಿಕಾರಕ್ಕೆ ಬಂದ ನಂತರ ಬೇರೆ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದನ್ನು ಒಪ್ಪಬಾರದು ಎಂದೂ ಟಿಕಾಯತ್ ಟೀಕಿಸಿದರು.

ಸರ್ಕಾರದ ಬೆದರಿಕೆಗಳಿಗೆ ಜಗ್ಗಬೇಡಿ: “ಈ ಆಂದೋಲನದಲ್ಲಿ ರೈತರು, ಮಹಿಳೆಯರು ಎಲ್ಲರೂ ಇದ್ದಾರೆ. ಇಲ್ಲಿಯವರೆಗೂ ಈ ಹೋರಾಟ ಶಾಂತಿಯುತವಾಗಿ ನಡೆದಿದೆ. ಈ ಚಳವಳಿ ಮುಂದುವರೆಯಬೇಕಾಗಿದೆ,” ಎಂದು ಟಿಕಾಯತ್ ಹೇಳಿದರು. ಸರ್ಕಾರಿ ಅಧಿಕಾರಿಗಳು ಭೂಮಿ ಕಿತ್ತುಕೊಳ್ಳಲು ಗ್ರಾಮಕ್ಕೆ ಬಂದಾಗ, “ನಾವೆಲ್ಲರೂ ತೀವ್ರವಾದ ಪ್ರತಿರೋಧ ಒಡ್ಡಬೇಕು. ಬೆದರಿಸಿ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಾರೆ, ಆಗ ನಾವು ಊರಿನ ಸಮಿತಿ ಒಪ್ಪಿಗೆ ಇಲ್ಲದೇ ಕೊಡುವುದಿಲ್ಲ ಎನ್ನುವ ತೀರ್ಮಾನವನ್ನು ಅವರಿಗೆ ಗಟ್ಟಿಯಾಗಿ ತಿಳಿಸಬೇಕು. ಅಷ್ಟೇ ಅಲ್ಲದೆ, ಬೆದರಿಕೆಗಳಿಗೆ ಜಗ್ಗದೇ ಹೋರಾಟ ಮುನ್ನಡೆಸುವ ತೀರ್ಮಾನ ಮಾಡಬೇಕು. ರೈತರ ಪಟ್ಟ ಜಮೀನನ್ನು (ನೋಂದಾಯಿತ ಜಮೀನನ್ನು) ಕಿತ್ತುಕೊಳ್ಳುವ ಪ್ರಯತ್ನ ಇದಾಗಿದೆ. ಇದಕ್ಕೆ ಪ್ರತಿರೋಧ ಒಡ್ಡಬೇಕು,” ಎಂದು ರೈತರಿಗೆ ಕರೆ ನೀಡಿದರು.

ಸಂಯುಕ್ತ ಹೋರಾಟಕ್ಕೆ ವಿಶ್ವಾಸ: “ಈ ಆಂದೋಲನದ ಜೊತೆಗೆ ನಾವಿದ್ದೇವೆ. ಸಂಯುಕ್ತ ಹೋರಾಟ ಕರ್ನಾಟಕದ ನಾಯಕತ್ವವಿದೆ. ಆಂದೋಲನ ಮುಂದುವರಿಸಿ, ನಿಮ್ಮ ನಾಯಕತ್ವ, ಸಮಿತಿಯ ಮೇಲೆ ವಿಶ್ವಾಸ ಇಡಿ,” ಎಂದು ಟಿಕಾಯತ್ ಹೋರಾಟಗಾರರಿಗೆ ಧೈರ್ಯ ತುಂಬಿದರು. ಜಾತಿವಾದಿಗಳಿಗೆ ಮತ್ತು ಮತೀಯವಾದಿಗಳಿಗೆ ಒಳಗಾಗದೆ, ಒಗ್ಗಟ್ಟಾಗಿ ಹೋರಾಟವನ್ನು ಮುಂದುವರಿಸಬೇಕು ಎಂದು ಅವರು ಕರೆ ನೀಡಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...