HomeUncategorizedನಾಡ ಉಳಿಸಿ ಸಮಾವೇಶ: ರೈತರ ಭೂಮಿಗೆ ಕೈಹಾಕಿದರೆ ಪ್ರಬಲ ಪ್ರತಿರೋಧ - ರಾಕೇಶ್ ಟಿಕಾಯತ್ ಎಚ್ಚರಿಕೆ!

ನಾಡ ಉಳಿಸಿ ಸಮಾವೇಶ: ರೈತರ ಭೂಮಿಗೆ ಕೈಹಾಕಿದರೆ ಪ್ರಬಲ ಪ್ರತಿರೋಧ – ರಾಕೇಶ್ ಟಿಕಾಯತ್ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟದಲ್ಲಿ ರೈತರ ಜೊತೆ ನಾವಿದ್ದೇವೆ ಎಂದು ಸ್ಪಷ್ಟಪಡಿಸಿದ ಭಾರತೀಯ ಕಿಸಾನ್ ಯೂನಿಯನ್ (ಬಿ.ಕೆ.ಯು) ನಾಯಕ ರಾಕೇಶ್ ಟಿಕಾಯತ್, ಭೂಮಿಯನ್ನು ಕಿತ್ತುಕೊಂಡು ರೈತರನ್ನು ಬಡವರನ್ನಾಗಿ ಮಾಡುವ ಸರ್ಕಾರದ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು (ಜುಲೈ 4) ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಭೇಟಿಯ ನಂತರ ಹೋರಾಟದ ಮುಂದಿನ ರೂಪುರೇಷೆಗಳು ನಿರ್ಧಾರವಾಗಲಿವೆ ಎಂದು ಹೇಳಿದರು.

ಕೃಷಿ ಭೂಮಿ ವಶಪಡಿಸಿಕೊಂಡರೆ, ರೈತರು ಬಡವರಾಗುತ್ತಾರೆ: “ನಗರ ಪ್ರದೇಶಗಳಲ್ಲಿ, ವಿಮಾನ ನಿಲ್ದಾಣಗಳಿಗೆ, ಕೈಗಾರಿಕೆಗಳಿಗೆ ಎಂದು ಸರ್ಕಾರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳುತ್ತಿದೆ. ಭೂಮಿಯನ್ನು ಕಿತ್ತುಕೊಂಡು ರೈತರನ್ನು ಬಡವರನ್ನಾಗಿ ಮಾಡಿ, ಭೂಮಿ ಬದಲಿಗೆ ಅಕ್ಕಿ ಕೊಡುತ್ತೇವೆಂದು ಹೇಳುತ್ತಿದ್ದಾರೆ. ಇದು ನಮಗೆ ಬೇಕಾಗಿದೆಯೇ? ಇದರ ವಿರುದ್ಧ ಹೋರಾಟ ಮುಂದುವರಿಸಬೇಕು,” ಎಂದು ಟಿಕಾಯತ್ ಪ್ರಶ್ನಿಸಿದರು.

ಕೈಗಾರಿಕೆಗಳಿಗೆ ಈಗಾಗಲೇ ನೀಡಿರುವ ಭೂಮಿಯನ್ನು ವಾಪಸ್ ಪಡೆದು ಅಲ್ಲಿ ಬೆಳೆ ಬೆಳೆಯುತ್ತೇವೆಂದರೆ ಸರ್ಕಾರ ಕೊಡುತ್ತದೆಯೇ ಎಂದು ಪ್ರಶ್ನಿಸಿದ ಅವರು, ಸರ್ಕಾರ ಭೂಮಿಯನ್ನು ಖಾಸಗಿ ಮಾಲೀಕರಿಗೆ (ಮಾಲಕರಿಗೆ) ಕೊಡುತ್ತಿರುವುದನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು. ಈ ಹಿಂದೆ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದವರು ಈಗ ಅಧಿಕಾರಕ್ಕೆ ಬಂದ ನಂತರ ಬೇರೆ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದನ್ನು ಒಪ್ಪಬಾರದು ಎಂದೂ ಟಿಕಾಯತ್ ಟೀಕಿಸಿದರು.

ಸರ್ಕಾರದ ಬೆದರಿಕೆಗಳಿಗೆ ಜಗ್ಗಬೇಡಿ: “ಈ ಆಂದೋಲನದಲ್ಲಿ ರೈತರು, ಮಹಿಳೆಯರು ಎಲ್ಲರೂ ಇದ್ದಾರೆ. ಇಲ್ಲಿಯವರೆಗೂ ಈ ಹೋರಾಟ ಶಾಂತಿಯುತವಾಗಿ ನಡೆದಿದೆ. ಈ ಚಳವಳಿ ಮುಂದುವರೆಯಬೇಕಾಗಿದೆ,” ಎಂದು ಟಿಕಾಯತ್ ಹೇಳಿದರು. ಸರ್ಕಾರಿ ಅಧಿಕಾರಿಗಳು ಭೂಮಿ ಕಿತ್ತುಕೊಳ್ಳಲು ಗ್ರಾಮಕ್ಕೆ ಬಂದಾಗ, “ನಾವೆಲ್ಲರೂ ತೀವ್ರವಾದ ಪ್ರತಿರೋಧ ಒಡ್ಡಬೇಕು. ಬೆದರಿಸಿ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಾರೆ, ಆಗ ನಾವು ಊರಿನ ಸಮಿತಿ ಒಪ್ಪಿಗೆ ಇಲ್ಲದೇ ಕೊಡುವುದಿಲ್ಲ ಎನ್ನುವ ತೀರ್ಮಾನವನ್ನು ಅವರಿಗೆ ಗಟ್ಟಿಯಾಗಿ ತಿಳಿಸಬೇಕು. ಅಷ್ಟೇ ಅಲ್ಲದೆ, ಬೆದರಿಕೆಗಳಿಗೆ ಜಗ್ಗದೇ ಹೋರಾಟ ಮುನ್ನಡೆಸುವ ತೀರ್ಮಾನ ಮಾಡಬೇಕು. ರೈತರ ಪಟ್ಟ ಜಮೀನನ್ನು (ನೋಂದಾಯಿತ ಜಮೀನನ್ನು) ಕಿತ್ತುಕೊಳ್ಳುವ ಪ್ರಯತ್ನ ಇದಾಗಿದೆ. ಇದಕ್ಕೆ ಪ್ರತಿರೋಧ ಒಡ್ಡಬೇಕು,” ಎಂದು ರೈತರಿಗೆ ಕರೆ ನೀಡಿದರು.

ಸಂಯುಕ್ತ ಹೋರಾಟಕ್ಕೆ ವಿಶ್ವಾಸ: “ಈ ಆಂದೋಲನದ ಜೊತೆಗೆ ನಾವಿದ್ದೇವೆ. ಸಂಯುಕ್ತ ಹೋರಾಟ ಕರ್ನಾಟಕದ ನಾಯಕತ್ವವಿದೆ. ಆಂದೋಲನ ಮುಂದುವರಿಸಿ, ನಿಮ್ಮ ನಾಯಕತ್ವ, ಸಮಿತಿಯ ಮೇಲೆ ವಿಶ್ವಾಸ ಇಡಿ,” ಎಂದು ಟಿಕಾಯತ್ ಹೋರಾಟಗಾರರಿಗೆ ಧೈರ್ಯ ತುಂಬಿದರು. ಜಾತಿವಾದಿಗಳಿಗೆ ಮತ್ತು ಮತೀಯವಾದಿಗಳಿಗೆ ಒಳಗಾಗದೆ, ಒಗ್ಗಟ್ಟಾಗಿ ಹೋರಾಟವನ್ನು ಮುಂದುವರಿಸಬೇಕು ಎಂದು ಅವರು ಕರೆ ನೀಡಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...