HomeUncategorizedನಾಡ ಉಳಿಸಿ ಸಮಾವೇಶ: ರೈತರ ಭೂಮಿಗೆ ಕೈಹಾಕಿದರೆ ಪ್ರಬಲ ಪ್ರತಿರೋಧ - ರಾಕೇಶ್ ಟಿಕಾಯತ್ ಎಚ್ಚರಿಕೆ!

ನಾಡ ಉಳಿಸಿ ಸಮಾವೇಶ: ರೈತರ ಭೂಮಿಗೆ ಕೈಹಾಕಿದರೆ ಪ್ರಬಲ ಪ್ರತಿರೋಧ – ರಾಕೇಶ್ ಟಿಕಾಯತ್ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟದಲ್ಲಿ ರೈತರ ಜೊತೆ ನಾವಿದ್ದೇವೆ ಎಂದು ಸ್ಪಷ್ಟಪಡಿಸಿದ ಭಾರತೀಯ ಕಿಸಾನ್ ಯೂನಿಯನ್ (ಬಿ.ಕೆ.ಯು) ನಾಯಕ ರಾಕೇಶ್ ಟಿಕಾಯತ್, ಭೂಮಿಯನ್ನು ಕಿತ್ತುಕೊಂಡು ರೈತರನ್ನು ಬಡವರನ್ನಾಗಿ ಮಾಡುವ ಸರ್ಕಾರದ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು (ಜುಲೈ 4) ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಭೇಟಿಯ ನಂತರ ಹೋರಾಟದ ಮುಂದಿನ ರೂಪುರೇಷೆಗಳು ನಿರ್ಧಾರವಾಗಲಿವೆ ಎಂದು ಹೇಳಿದರು.

ಕೃಷಿ ಭೂಮಿ ವಶಪಡಿಸಿಕೊಂಡರೆ, ರೈತರು ಬಡವರಾಗುತ್ತಾರೆ: “ನಗರ ಪ್ರದೇಶಗಳಲ್ಲಿ, ವಿಮಾನ ನಿಲ್ದಾಣಗಳಿಗೆ, ಕೈಗಾರಿಕೆಗಳಿಗೆ ಎಂದು ಸರ್ಕಾರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳುತ್ತಿದೆ. ಭೂಮಿಯನ್ನು ಕಿತ್ತುಕೊಂಡು ರೈತರನ್ನು ಬಡವರನ್ನಾಗಿ ಮಾಡಿ, ಭೂಮಿ ಬದಲಿಗೆ ಅಕ್ಕಿ ಕೊಡುತ್ತೇವೆಂದು ಹೇಳುತ್ತಿದ್ದಾರೆ. ಇದು ನಮಗೆ ಬೇಕಾಗಿದೆಯೇ? ಇದರ ವಿರುದ್ಧ ಹೋರಾಟ ಮುಂದುವರಿಸಬೇಕು,” ಎಂದು ಟಿಕಾಯತ್ ಪ್ರಶ್ನಿಸಿದರು.

ಕೈಗಾರಿಕೆಗಳಿಗೆ ಈಗಾಗಲೇ ನೀಡಿರುವ ಭೂಮಿಯನ್ನು ವಾಪಸ್ ಪಡೆದು ಅಲ್ಲಿ ಬೆಳೆ ಬೆಳೆಯುತ್ತೇವೆಂದರೆ ಸರ್ಕಾರ ಕೊಡುತ್ತದೆಯೇ ಎಂದು ಪ್ರಶ್ನಿಸಿದ ಅವರು, ಸರ್ಕಾರ ಭೂಮಿಯನ್ನು ಖಾಸಗಿ ಮಾಲೀಕರಿಗೆ (ಮಾಲಕರಿಗೆ) ಕೊಡುತ್ತಿರುವುದನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು. ಈ ಹಿಂದೆ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದವರು ಈಗ ಅಧಿಕಾರಕ್ಕೆ ಬಂದ ನಂತರ ಬೇರೆ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದನ್ನು ಒಪ್ಪಬಾರದು ಎಂದೂ ಟಿಕಾಯತ್ ಟೀಕಿಸಿದರು.

ಸರ್ಕಾರದ ಬೆದರಿಕೆಗಳಿಗೆ ಜಗ್ಗಬೇಡಿ: “ಈ ಆಂದೋಲನದಲ್ಲಿ ರೈತರು, ಮಹಿಳೆಯರು ಎಲ್ಲರೂ ಇದ್ದಾರೆ. ಇಲ್ಲಿಯವರೆಗೂ ಈ ಹೋರಾಟ ಶಾಂತಿಯುತವಾಗಿ ನಡೆದಿದೆ. ಈ ಚಳವಳಿ ಮುಂದುವರೆಯಬೇಕಾಗಿದೆ,” ಎಂದು ಟಿಕಾಯತ್ ಹೇಳಿದರು. ಸರ್ಕಾರಿ ಅಧಿಕಾರಿಗಳು ಭೂಮಿ ಕಿತ್ತುಕೊಳ್ಳಲು ಗ್ರಾಮಕ್ಕೆ ಬಂದಾಗ, “ನಾವೆಲ್ಲರೂ ತೀವ್ರವಾದ ಪ್ರತಿರೋಧ ಒಡ್ಡಬೇಕು. ಬೆದರಿಸಿ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಾರೆ, ಆಗ ನಾವು ಊರಿನ ಸಮಿತಿ ಒಪ್ಪಿಗೆ ಇಲ್ಲದೇ ಕೊಡುವುದಿಲ್ಲ ಎನ್ನುವ ತೀರ್ಮಾನವನ್ನು ಅವರಿಗೆ ಗಟ್ಟಿಯಾಗಿ ತಿಳಿಸಬೇಕು. ಅಷ್ಟೇ ಅಲ್ಲದೆ, ಬೆದರಿಕೆಗಳಿಗೆ ಜಗ್ಗದೇ ಹೋರಾಟ ಮುನ್ನಡೆಸುವ ತೀರ್ಮಾನ ಮಾಡಬೇಕು. ರೈತರ ಪಟ್ಟ ಜಮೀನನ್ನು (ನೋಂದಾಯಿತ ಜಮೀನನ್ನು) ಕಿತ್ತುಕೊಳ್ಳುವ ಪ್ರಯತ್ನ ಇದಾಗಿದೆ. ಇದಕ್ಕೆ ಪ್ರತಿರೋಧ ಒಡ್ಡಬೇಕು,” ಎಂದು ರೈತರಿಗೆ ಕರೆ ನೀಡಿದರು.

ಸಂಯುಕ್ತ ಹೋರಾಟಕ್ಕೆ ವಿಶ್ವಾಸ: “ಈ ಆಂದೋಲನದ ಜೊತೆಗೆ ನಾವಿದ್ದೇವೆ. ಸಂಯುಕ್ತ ಹೋರಾಟ ಕರ್ನಾಟಕದ ನಾಯಕತ್ವವಿದೆ. ಆಂದೋಲನ ಮುಂದುವರಿಸಿ, ನಿಮ್ಮ ನಾಯಕತ್ವ, ಸಮಿತಿಯ ಮೇಲೆ ವಿಶ್ವಾಸ ಇಡಿ,” ಎಂದು ಟಿಕಾಯತ್ ಹೋರಾಟಗಾರರಿಗೆ ಧೈರ್ಯ ತುಂಬಿದರು. ಜಾತಿವಾದಿಗಳಿಗೆ ಮತ್ತು ಮತೀಯವಾದಿಗಳಿಗೆ ಒಳಗಾಗದೆ, ಒಗ್ಗಟ್ಟಾಗಿ ಹೋರಾಟವನ್ನು ಮುಂದುವರಿಸಬೇಕು ಎಂದು ಅವರು ಕರೆ ನೀಡಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...