Homeಕರ್ನಾಟಕನಾಡ ಉಳಿಸಿ ಸಮಾವೇಶ: 'ನಿಮ್ಮ ಭೂಮಿ ಉಳಿಸುವ ಹೋರಾಟ ಇಡೀ ದೇಶಕ್ಕೆ ಸ್ಪೂರ್ತಿ' - ಡಾ....

ನಾಡ ಉಳಿಸಿ ಸಮಾವೇಶ: ‘ನಿಮ್ಮ ಭೂಮಿ ಉಳಿಸುವ ಹೋರಾಟ ಇಡೀ ದೇಶಕ್ಕೆ ಸ್ಪೂರ್ತಿ’ – ಡಾ. ವಿಜು ಕೃಷ್ಣನ್ ಶ್ಲಾಘನೆ!

- Advertisement -
- Advertisement -

ಬೆಂಗಳೂರು: “ಚನ್ನರಾಯಪಟ್ಟಣದ ಧೀರ ಹೋರಾಟಗಾರರಿಗೆ ಸಲಾಂ! ಮೂರು ವರ್ಷಕ್ಕೂ ಹೆಚ್ಚು ಸಮಯದಿಂದ ನಡೆಯುತ್ತಿರುವ ಈ ಹೋರಾಟ ಇಡೀ ಭಾರತದ ರೈತರಿಗೆ ಹೊಸ ಹುಮ್ಮಸ್ಸು ತುಂಬುವ ಹೋರಾಟ,” ಎಂದು ಅಖಿಲ ಭಾರತ ಕಿಸಾನ್ ಸಭಾ (AIKS) ಜಂಟಿ ಕಾರ್ಯದರ್ಶಿ ಡಾ. ವಿಜು ಕೃಷ್ಣನ್ ದೇವನಹಳ್ಳಿ ಭೂ ಹೋರಾಟಗಾರರನ್ನು ಶ್ಲಾಘಿಸಿದರು. ಇಂದು (ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ **’ನಾಡ ಉಳಿಸಿ ಸಮಾವೇಶ’**ದಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ಇತರೆ ಭೂ ಹೋರಾಟಗಳಿಗಿಂತ ದೇವನಹಳ್ಳಿ ರೈತರ ಪ್ರತಿಭಟನೆ ಹೇಗೆ ಭಿನ್ನ ಮತ್ತು ಮಹತ್ವದ್ದು ಎಂಬುದನ್ನು ವಿವರಿಸಿದರು.

‘ಕೃಷಿ ಭೂಮಿ ಉಳಿಸುವ ಅಪ್ರತಿಮ ಹೋರಾಟ’: “ಭಾರತದಲ್ಲಿ ಸಾವಿರ ಕಡೆ ಬಲವಂತದ ಭೂ ಸ್ವಾಧೀನ ವಿರೋಧಿ ಹೋರಾಟಗಳು ನಡೆಯುತ್ತಿವೆ. ಹೆಚ್ಚಿನ ಹೋರಾಟಗಳು ಪರಿಹಾರ ಹೆಚ್ಚಿಸಲು ಆಗ್ರಹಿಸಿದ ಹೋರಾಟಗಳಾಗಿವೆ. ಆದರೆ, ನಿಮ್ಮದು ಕೃಷಿ ಭೂಮಿಯನ್ನು ಉಳಿಸುವ ಹೋರಾಟವಾಗಿದೆ. ಇದು ಇಡೀ ದೇಶಕ್ಕೆ ಮಾದರಿ,” ಎಂದು ಡಾ. ವಿಜು ಕೃಷ್ಣನ್ ಒತ್ತಿ ಹೇಳಿದರು. ಈ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ, ಈಗ ನಮ್ಮೊಂದಿಗಿಲ್ಲದ ಬಯ್ಯಾರೆಡ್ಡಿ ಅವರಿಗೆ ಈ ಹೋರಾಟದ ಗೆಲುವೇ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಅವರು ಭಾವುಕರಾದರು.

‘ವಿರೋಧದಲ್ಲಿದ್ದಾಗ ಬೆಂಬಲ, ಈಗ ಮಾತ ಮರೆತಿದ್ದಾರೆ’: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿರೋಧ ಪಕ್ಷದಲ್ಲಿದ್ದಾಗ ದೇವನಹಳ್ಳಿ ಭೂ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು ಎಂಬುದನ್ನು ಕೃಷ್ಣನ್ ನೆನಪಿಸಿದರು. “ಆದರೆ, ಈಗ ಮಾತ ಮರೆತಿದ್ದಾರೆ. ರೈತರು ಹೋರಾಟ ಮಾಡಿದಾಗ ಪೊಲೀಸರಿಂದ ದೌರ್ಜನ್ಯ ನಡೆಸಿದರು. ಸಂಯುಕ್ತ ಕಿಸಾನ್ ಮೋರ್ಚಾ (SKM) ರೈತರ ಮೇಲಿನ ಪೊಲೀಸ್ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತದೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ‘ಕರಾಳ ಕೃಷಿ ಕಾಯ್ದೆ’ ವಿರುದ್ಧದ ಗೆಲುವು ನೆನಪು: 2020ರ ಜೂನ್‌ನಲ್ಲಿ ಕೋವಿಡ್ ಸಾಂಕ್ರಾಮಿಕದ ನಡುವೆಯೂ ರೈತರು, ಕಾರ್ಮಿಕರನ್ನು ಬಂಧನದಲ್ಲಿಟ್ಟು ಕರಾಳ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ತಂದಿದ್ದನ್ನು ಡಾ. ಕೃಷ್ಣನ್ ಸ್ಮರಿಸಿದರು. “ಅದರ ವಿರುದ್ಧ ಹಸಿರು, ನೀಲಿ, ಕೆಂಪು ಶಾಲುಗಳು ಒಗ್ಗಟ್ಟಿನಿಂದ ಹೋರಾಟ ನಡೆಸಿದವು. ಆಗ ಪ್ರಧಾನಿ ಮೋದಿ, ಕಾರ್ಪೊರೇಟ್ ಮಾಧ್ಯಮಗಳು ರೈತ ಹೋರಾಟಗಾರರನ್ನು ‘ತಾಲಿಬಾನ್’, ‘ಪಾಕಿಸ್ತಾನ್’, ‘ಖಲಿಸ್ತಾನ್’ ಎಂದು ಹಣೆಪಟ್ಟಿ ಕಟ್ಟಿದವು. ‘ಮೋದಿ ‘ಆಂದೋಲನ ಜೀವಿಗಳು’ ಎಂದರು. ಆದರೆ, ಕೊನೆಗೆ ಏನಾಯಿತು? ರೈತರು ಒಂದಿಂಚು ಹಿಂದೆ ಸರಿಯಲಿಲ್ಲ. ನಮ್ಮ ಒಗ್ಗಟ್ಟಿನ ಕಾರಣ ನರೇಂದ್ರ ಮೋದಿ ಸರ್ಕಾರ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಿತು. ಅದು ನಮ್ಮ ಒಗ್ಗಟ್ಟಿನ ಹೋರಾಟದ ವಿಜಯ,” ಎಂದು ದೆಹಲಿ ಹೋರಾಟದ ಯಶಸ್ಸನ್ನು ವಿವರಿಸಿದರು.

‘ದೆಹಲಿ ಹೋರಾಟಕ್ಕೂ ಮೀರಿ ನಿಮ್ಮ ಹೋರಾಟ’: “ದೆಹಲಿಯ ಹೋರಾಟಕ್ಕೂ ಮೀರಿ ನೀವು (ದೇವನಹಳ್ಳಿ ರೈತರು) ಹೋರಾಟ ಮಾಡಿದಿರಿ,” ಎಂದು ದೇವನಹಳ್ಳಿ ರೈತರ ತಾಳ್ಮೆ ಮತ್ತು ದೃಢ ಸಂಕಲ್ಪವನ್ನು ಕೃಷ್ಣನ್ ಶ್ಲಾಘಿಸಿದರು.

ಸರ್ಕಾರ ಈಗ ಸ್ಮಾರ್ಟ್ ಮೀಟರ್ ಅಳವಡಿಸಲು ಹೊರಟಿದೆ ಎಂದು ಪ್ರಸ್ತಾಪಿಸಿದ ಅವರು, “ಪ್ರೀಪೇಡ್ ಸ್ಮಾರ್ಟ್ ಮೀಟರ್ ಅತ್ಯಂತ ಭ್ರಷ್ಟ ಯೋಜನೆ. ಚಂಡೀಗಢದಲ್ಲಿ ಇದರ ವಿರುದ್ಧ ಹೋರಾಟ ಮಾಡಿ ತಾರ್ಕಿಕ ಅಂತ್ಯ ಕಾಣಲಾಗಿದೆ. ಈಗ ಉತ್ತರ ಪ್ರದೇಶದಲ್ಲಿಯೂ ಅಂತಹದ್ದೇ ಹೋರಾಟ ನಡೆಯುತ್ತಿದೆ,” ಎಂದು ಹೋರಾಟದ ಮಹತ್ವವನ್ನು ವಿವರಿಸಿದರು.

“ದೆಹಲಿಯ ಹೋರಾಟದಲ್ಲಿ ಸರ್ಕಾರ ‘ಬಗ್ಗುವುದಿಲ್ಲ’ ಎಂದಿತ್ತು. ಆದರೆ, ನಮ್ಮ ಒಗ್ಗಟ್ಟಿನ ಮುಂದೆ ಸರ್ಕಾರ ಸೋತಿತು. ದೆಹಲಿ ಹೋರಾಟದಲ್ಲಿ ಆರಂಭದಲ್ಲಿ ಪಂಜಾಬ್ ರೈತರು ಮಾತ್ರ ಇದ್ದರು. ಬಳಿಕ ಇಡೀ ದೇಶದಿಂದ ರೈತರು ಬೆಂಬಲ ಸೂಚಿಸಿದ್ದರು. ನೀವು ಈಗ ನಡೆಸುತ್ತಿರುವ ಹೋರಾಟಕ್ಕೆ ಗೆಲುವು ಖಚಿತ ಎಂದು ನನಗೆ ವಿಶ್ವಾಸವಿದೆ. ಗೆಲ್ಲುವವರೆಗೆ ಹೋರಾಟ ನಿಲ್ಲಬಾರದು, ನಿಮ್ಮ ಜೊತೆ ಸಂಯುಕ್ತ ಕಿಸಾನ್ ಮೋರ್ಚಾ ಇದೆ,” ಎಂದು ಡಾ. ವಿಜು ಕೃಷ್ಣನ್ ರೈತರಲ್ಲಿ ಭರವಸೆ ಮೂಡಿಸಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...