Homeಕರ್ನಾಟಕನಾಡ ಉಳಿಸಿ ಸಮಾವೇಶ: 'ನಿಮ್ಮ ಭೂಮಿ ಉಳಿಸುವ ಹೋರಾಟ ಇಡೀ ದೇಶಕ್ಕೆ ಸ್ಪೂರ್ತಿ' - ಡಾ....

ನಾಡ ಉಳಿಸಿ ಸಮಾವೇಶ: ‘ನಿಮ್ಮ ಭೂಮಿ ಉಳಿಸುವ ಹೋರಾಟ ಇಡೀ ದೇಶಕ್ಕೆ ಸ್ಪೂರ್ತಿ’ – ಡಾ. ವಿಜು ಕೃಷ್ಣನ್ ಶ್ಲಾಘನೆ!

- Advertisement -
- Advertisement -

ಬೆಂಗಳೂರು: “ಚನ್ನರಾಯಪಟ್ಟಣದ ಧೀರ ಹೋರಾಟಗಾರರಿಗೆ ಸಲಾಂ! ಮೂರು ವರ್ಷಕ್ಕೂ ಹೆಚ್ಚು ಸಮಯದಿಂದ ನಡೆಯುತ್ತಿರುವ ಈ ಹೋರಾಟ ಇಡೀ ಭಾರತದ ರೈತರಿಗೆ ಹೊಸ ಹುಮ್ಮಸ್ಸು ತುಂಬುವ ಹೋರಾಟ,” ಎಂದು ಅಖಿಲ ಭಾರತ ಕಿಸಾನ್ ಸಭಾ (AIKS) ಜಂಟಿ ಕಾರ್ಯದರ್ಶಿ ಡಾ. ವಿಜು ಕೃಷ್ಣನ್ ದೇವನಹಳ್ಳಿ ಭೂ ಹೋರಾಟಗಾರರನ್ನು ಶ್ಲಾಘಿಸಿದರು. ಇಂದು (ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ **’ನಾಡ ಉಳಿಸಿ ಸಮಾವೇಶ’**ದಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ಇತರೆ ಭೂ ಹೋರಾಟಗಳಿಗಿಂತ ದೇವನಹಳ್ಳಿ ರೈತರ ಪ್ರತಿಭಟನೆ ಹೇಗೆ ಭಿನ್ನ ಮತ್ತು ಮಹತ್ವದ್ದು ಎಂಬುದನ್ನು ವಿವರಿಸಿದರು.

‘ಕೃಷಿ ಭೂಮಿ ಉಳಿಸುವ ಅಪ್ರತಿಮ ಹೋರಾಟ’: “ಭಾರತದಲ್ಲಿ ಸಾವಿರ ಕಡೆ ಬಲವಂತದ ಭೂ ಸ್ವಾಧೀನ ವಿರೋಧಿ ಹೋರಾಟಗಳು ನಡೆಯುತ್ತಿವೆ. ಹೆಚ್ಚಿನ ಹೋರಾಟಗಳು ಪರಿಹಾರ ಹೆಚ್ಚಿಸಲು ಆಗ್ರಹಿಸಿದ ಹೋರಾಟಗಳಾಗಿವೆ. ಆದರೆ, ನಿಮ್ಮದು ಕೃಷಿ ಭೂಮಿಯನ್ನು ಉಳಿಸುವ ಹೋರಾಟವಾಗಿದೆ. ಇದು ಇಡೀ ದೇಶಕ್ಕೆ ಮಾದರಿ,” ಎಂದು ಡಾ. ವಿಜು ಕೃಷ್ಣನ್ ಒತ್ತಿ ಹೇಳಿದರು. ಈ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ, ಈಗ ನಮ್ಮೊಂದಿಗಿಲ್ಲದ ಬಯ್ಯಾರೆಡ್ಡಿ ಅವರಿಗೆ ಈ ಹೋರಾಟದ ಗೆಲುವೇ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಅವರು ಭಾವುಕರಾದರು.

‘ವಿರೋಧದಲ್ಲಿದ್ದಾಗ ಬೆಂಬಲ, ಈಗ ಮಾತ ಮರೆತಿದ್ದಾರೆ’: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿರೋಧ ಪಕ್ಷದಲ್ಲಿದ್ದಾಗ ದೇವನಹಳ್ಳಿ ಭೂ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು ಎಂಬುದನ್ನು ಕೃಷ್ಣನ್ ನೆನಪಿಸಿದರು. “ಆದರೆ, ಈಗ ಮಾತ ಮರೆತಿದ್ದಾರೆ. ರೈತರು ಹೋರಾಟ ಮಾಡಿದಾಗ ಪೊಲೀಸರಿಂದ ದೌರ್ಜನ್ಯ ನಡೆಸಿದರು. ಸಂಯುಕ್ತ ಕಿಸಾನ್ ಮೋರ್ಚಾ (SKM) ರೈತರ ಮೇಲಿನ ಪೊಲೀಸ್ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತದೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ‘ಕರಾಳ ಕೃಷಿ ಕಾಯ್ದೆ’ ವಿರುದ್ಧದ ಗೆಲುವು ನೆನಪು: 2020ರ ಜೂನ್‌ನಲ್ಲಿ ಕೋವಿಡ್ ಸಾಂಕ್ರಾಮಿಕದ ನಡುವೆಯೂ ರೈತರು, ಕಾರ್ಮಿಕರನ್ನು ಬಂಧನದಲ್ಲಿಟ್ಟು ಕರಾಳ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ತಂದಿದ್ದನ್ನು ಡಾ. ಕೃಷ್ಣನ್ ಸ್ಮರಿಸಿದರು. “ಅದರ ವಿರುದ್ಧ ಹಸಿರು, ನೀಲಿ, ಕೆಂಪು ಶಾಲುಗಳು ಒಗ್ಗಟ್ಟಿನಿಂದ ಹೋರಾಟ ನಡೆಸಿದವು. ಆಗ ಪ್ರಧಾನಿ ಮೋದಿ, ಕಾರ್ಪೊರೇಟ್ ಮಾಧ್ಯಮಗಳು ರೈತ ಹೋರಾಟಗಾರರನ್ನು ‘ತಾಲಿಬಾನ್’, ‘ಪಾಕಿಸ್ತಾನ್’, ‘ಖಲಿಸ್ತಾನ್’ ಎಂದು ಹಣೆಪಟ್ಟಿ ಕಟ್ಟಿದವು. ‘ಮೋದಿ ‘ಆಂದೋಲನ ಜೀವಿಗಳು’ ಎಂದರು. ಆದರೆ, ಕೊನೆಗೆ ಏನಾಯಿತು? ರೈತರು ಒಂದಿಂಚು ಹಿಂದೆ ಸರಿಯಲಿಲ್ಲ. ನಮ್ಮ ಒಗ್ಗಟ್ಟಿನ ಕಾರಣ ನರೇಂದ್ರ ಮೋದಿ ಸರ್ಕಾರ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಿತು. ಅದು ನಮ್ಮ ಒಗ್ಗಟ್ಟಿನ ಹೋರಾಟದ ವಿಜಯ,” ಎಂದು ದೆಹಲಿ ಹೋರಾಟದ ಯಶಸ್ಸನ್ನು ವಿವರಿಸಿದರು.

‘ದೆಹಲಿ ಹೋರಾಟಕ್ಕೂ ಮೀರಿ ನಿಮ್ಮ ಹೋರಾಟ’: “ದೆಹಲಿಯ ಹೋರಾಟಕ್ಕೂ ಮೀರಿ ನೀವು (ದೇವನಹಳ್ಳಿ ರೈತರು) ಹೋರಾಟ ಮಾಡಿದಿರಿ,” ಎಂದು ದೇವನಹಳ್ಳಿ ರೈತರ ತಾಳ್ಮೆ ಮತ್ತು ದೃಢ ಸಂಕಲ್ಪವನ್ನು ಕೃಷ್ಣನ್ ಶ್ಲಾಘಿಸಿದರು.

ಸರ್ಕಾರ ಈಗ ಸ್ಮಾರ್ಟ್ ಮೀಟರ್ ಅಳವಡಿಸಲು ಹೊರಟಿದೆ ಎಂದು ಪ್ರಸ್ತಾಪಿಸಿದ ಅವರು, “ಪ್ರೀಪೇಡ್ ಸ್ಮಾರ್ಟ್ ಮೀಟರ್ ಅತ್ಯಂತ ಭ್ರಷ್ಟ ಯೋಜನೆ. ಚಂಡೀಗಢದಲ್ಲಿ ಇದರ ವಿರುದ್ಧ ಹೋರಾಟ ಮಾಡಿ ತಾರ್ಕಿಕ ಅಂತ್ಯ ಕಾಣಲಾಗಿದೆ. ಈಗ ಉತ್ತರ ಪ್ರದೇಶದಲ್ಲಿಯೂ ಅಂತಹದ್ದೇ ಹೋರಾಟ ನಡೆಯುತ್ತಿದೆ,” ಎಂದು ಹೋರಾಟದ ಮಹತ್ವವನ್ನು ವಿವರಿಸಿದರು.

“ದೆಹಲಿಯ ಹೋರಾಟದಲ್ಲಿ ಸರ್ಕಾರ ‘ಬಗ್ಗುವುದಿಲ್ಲ’ ಎಂದಿತ್ತು. ಆದರೆ, ನಮ್ಮ ಒಗ್ಗಟ್ಟಿನ ಮುಂದೆ ಸರ್ಕಾರ ಸೋತಿತು. ದೆಹಲಿ ಹೋರಾಟದಲ್ಲಿ ಆರಂಭದಲ್ಲಿ ಪಂಜಾಬ್ ರೈತರು ಮಾತ್ರ ಇದ್ದರು. ಬಳಿಕ ಇಡೀ ದೇಶದಿಂದ ರೈತರು ಬೆಂಬಲ ಸೂಚಿಸಿದ್ದರು. ನೀವು ಈಗ ನಡೆಸುತ್ತಿರುವ ಹೋರಾಟಕ್ಕೆ ಗೆಲುವು ಖಚಿತ ಎಂದು ನನಗೆ ವಿಶ್ವಾಸವಿದೆ. ಗೆಲ್ಲುವವರೆಗೆ ಹೋರಾಟ ನಿಲ್ಲಬಾರದು, ನಿಮ್ಮ ಜೊತೆ ಸಂಯುಕ್ತ ಕಿಸಾನ್ ಮೋರ್ಚಾ ಇದೆ,” ಎಂದು ಡಾ. ವಿಜು ಕೃಷ್ಣನ್ ರೈತರಲ್ಲಿ ಭರವಸೆ ಮೂಡಿಸಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...