Homeಕರ್ನಾಟಕನಾಡ ಉಳಿಸಿ ಸಮಾವೇಶ: 'ನಿಮ್ಮ ಭೂಮಿ ಉಳಿಸುವ ಹೋರಾಟ ಇಡೀ ದೇಶಕ್ಕೆ ಸ್ಪೂರ್ತಿ' - ಡಾ....

ನಾಡ ಉಳಿಸಿ ಸಮಾವೇಶ: ‘ನಿಮ್ಮ ಭೂಮಿ ಉಳಿಸುವ ಹೋರಾಟ ಇಡೀ ದೇಶಕ್ಕೆ ಸ್ಪೂರ್ತಿ’ – ಡಾ. ವಿಜು ಕೃಷ್ಣನ್ ಶ್ಲಾಘನೆ!

- Advertisement -
- Advertisement -

ಬೆಂಗಳೂರು: “ಚನ್ನರಾಯಪಟ್ಟಣದ ಧೀರ ಹೋರಾಟಗಾರರಿಗೆ ಸಲಾಂ! ಮೂರು ವರ್ಷಕ್ಕೂ ಹೆಚ್ಚು ಸಮಯದಿಂದ ನಡೆಯುತ್ತಿರುವ ಈ ಹೋರಾಟ ಇಡೀ ಭಾರತದ ರೈತರಿಗೆ ಹೊಸ ಹುಮ್ಮಸ್ಸು ತುಂಬುವ ಹೋರಾಟ,” ಎಂದು ಅಖಿಲ ಭಾರತ ಕಿಸಾನ್ ಸಭಾ (AIKS) ಜಂಟಿ ಕಾರ್ಯದರ್ಶಿ ಡಾ. ವಿಜು ಕೃಷ್ಣನ್ ದೇವನಹಳ್ಳಿ ಭೂ ಹೋರಾಟಗಾರರನ್ನು ಶ್ಲಾಘಿಸಿದರು. ಇಂದು (ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ **’ನಾಡ ಉಳಿಸಿ ಸಮಾವೇಶ’**ದಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ಇತರೆ ಭೂ ಹೋರಾಟಗಳಿಗಿಂತ ದೇವನಹಳ್ಳಿ ರೈತರ ಪ್ರತಿಭಟನೆ ಹೇಗೆ ಭಿನ್ನ ಮತ್ತು ಮಹತ್ವದ್ದು ಎಂಬುದನ್ನು ವಿವರಿಸಿದರು.

‘ಕೃಷಿ ಭೂಮಿ ಉಳಿಸುವ ಅಪ್ರತಿಮ ಹೋರಾಟ’: “ಭಾರತದಲ್ಲಿ ಸಾವಿರ ಕಡೆ ಬಲವಂತದ ಭೂ ಸ್ವಾಧೀನ ವಿರೋಧಿ ಹೋರಾಟಗಳು ನಡೆಯುತ್ತಿವೆ. ಹೆಚ್ಚಿನ ಹೋರಾಟಗಳು ಪರಿಹಾರ ಹೆಚ್ಚಿಸಲು ಆಗ್ರಹಿಸಿದ ಹೋರಾಟಗಳಾಗಿವೆ. ಆದರೆ, ನಿಮ್ಮದು ಕೃಷಿ ಭೂಮಿಯನ್ನು ಉಳಿಸುವ ಹೋರಾಟವಾಗಿದೆ. ಇದು ಇಡೀ ದೇಶಕ್ಕೆ ಮಾದರಿ,” ಎಂದು ಡಾ. ವಿಜು ಕೃಷ್ಣನ್ ಒತ್ತಿ ಹೇಳಿದರು. ಈ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ, ಈಗ ನಮ್ಮೊಂದಿಗಿಲ್ಲದ ಬಯ್ಯಾರೆಡ್ಡಿ ಅವರಿಗೆ ಈ ಹೋರಾಟದ ಗೆಲುವೇ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಅವರು ಭಾವುಕರಾದರು.

‘ವಿರೋಧದಲ್ಲಿದ್ದಾಗ ಬೆಂಬಲ, ಈಗ ಮಾತ ಮರೆತಿದ್ದಾರೆ’: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿರೋಧ ಪಕ್ಷದಲ್ಲಿದ್ದಾಗ ದೇವನಹಳ್ಳಿ ಭೂ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು ಎಂಬುದನ್ನು ಕೃಷ್ಣನ್ ನೆನಪಿಸಿದರು. “ಆದರೆ, ಈಗ ಮಾತ ಮರೆತಿದ್ದಾರೆ. ರೈತರು ಹೋರಾಟ ಮಾಡಿದಾಗ ಪೊಲೀಸರಿಂದ ದೌರ್ಜನ್ಯ ನಡೆಸಿದರು. ಸಂಯುಕ್ತ ಕಿಸಾನ್ ಮೋರ್ಚಾ (SKM) ರೈತರ ಮೇಲಿನ ಪೊಲೀಸ್ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತದೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ‘ಕರಾಳ ಕೃಷಿ ಕಾಯ್ದೆ’ ವಿರುದ್ಧದ ಗೆಲುವು ನೆನಪು: 2020ರ ಜೂನ್‌ನಲ್ಲಿ ಕೋವಿಡ್ ಸಾಂಕ್ರಾಮಿಕದ ನಡುವೆಯೂ ರೈತರು, ಕಾರ್ಮಿಕರನ್ನು ಬಂಧನದಲ್ಲಿಟ್ಟು ಕರಾಳ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ತಂದಿದ್ದನ್ನು ಡಾ. ಕೃಷ್ಣನ್ ಸ್ಮರಿಸಿದರು. “ಅದರ ವಿರುದ್ಧ ಹಸಿರು, ನೀಲಿ, ಕೆಂಪು ಶಾಲುಗಳು ಒಗ್ಗಟ್ಟಿನಿಂದ ಹೋರಾಟ ನಡೆಸಿದವು. ಆಗ ಪ್ರಧಾನಿ ಮೋದಿ, ಕಾರ್ಪೊರೇಟ್ ಮಾಧ್ಯಮಗಳು ರೈತ ಹೋರಾಟಗಾರರನ್ನು ‘ತಾಲಿಬಾನ್’, ‘ಪಾಕಿಸ್ತಾನ್’, ‘ಖಲಿಸ್ತಾನ್’ ಎಂದು ಹಣೆಪಟ್ಟಿ ಕಟ್ಟಿದವು. ‘ಮೋದಿ ‘ಆಂದೋಲನ ಜೀವಿಗಳು’ ಎಂದರು. ಆದರೆ, ಕೊನೆಗೆ ಏನಾಯಿತು? ರೈತರು ಒಂದಿಂಚು ಹಿಂದೆ ಸರಿಯಲಿಲ್ಲ. ನಮ್ಮ ಒಗ್ಗಟ್ಟಿನ ಕಾರಣ ನರೇಂದ್ರ ಮೋದಿ ಸರ್ಕಾರ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಿತು. ಅದು ನಮ್ಮ ಒಗ್ಗಟ್ಟಿನ ಹೋರಾಟದ ವಿಜಯ,” ಎಂದು ದೆಹಲಿ ಹೋರಾಟದ ಯಶಸ್ಸನ್ನು ವಿವರಿಸಿದರು.

‘ದೆಹಲಿ ಹೋರಾಟಕ್ಕೂ ಮೀರಿ ನಿಮ್ಮ ಹೋರಾಟ’: “ದೆಹಲಿಯ ಹೋರಾಟಕ್ಕೂ ಮೀರಿ ನೀವು (ದೇವನಹಳ್ಳಿ ರೈತರು) ಹೋರಾಟ ಮಾಡಿದಿರಿ,” ಎಂದು ದೇವನಹಳ್ಳಿ ರೈತರ ತಾಳ್ಮೆ ಮತ್ತು ದೃಢ ಸಂಕಲ್ಪವನ್ನು ಕೃಷ್ಣನ್ ಶ್ಲಾಘಿಸಿದರು.

ಸರ್ಕಾರ ಈಗ ಸ್ಮಾರ್ಟ್ ಮೀಟರ್ ಅಳವಡಿಸಲು ಹೊರಟಿದೆ ಎಂದು ಪ್ರಸ್ತಾಪಿಸಿದ ಅವರು, “ಪ್ರೀಪೇಡ್ ಸ್ಮಾರ್ಟ್ ಮೀಟರ್ ಅತ್ಯಂತ ಭ್ರಷ್ಟ ಯೋಜನೆ. ಚಂಡೀಗಢದಲ್ಲಿ ಇದರ ವಿರುದ್ಧ ಹೋರಾಟ ಮಾಡಿ ತಾರ್ಕಿಕ ಅಂತ್ಯ ಕಾಣಲಾಗಿದೆ. ಈಗ ಉತ್ತರ ಪ್ರದೇಶದಲ್ಲಿಯೂ ಅಂತಹದ್ದೇ ಹೋರಾಟ ನಡೆಯುತ್ತಿದೆ,” ಎಂದು ಹೋರಾಟದ ಮಹತ್ವವನ್ನು ವಿವರಿಸಿದರು.

“ದೆಹಲಿಯ ಹೋರಾಟದಲ್ಲಿ ಸರ್ಕಾರ ‘ಬಗ್ಗುವುದಿಲ್ಲ’ ಎಂದಿತ್ತು. ಆದರೆ, ನಮ್ಮ ಒಗ್ಗಟ್ಟಿನ ಮುಂದೆ ಸರ್ಕಾರ ಸೋತಿತು. ದೆಹಲಿ ಹೋರಾಟದಲ್ಲಿ ಆರಂಭದಲ್ಲಿ ಪಂಜಾಬ್ ರೈತರು ಮಾತ್ರ ಇದ್ದರು. ಬಳಿಕ ಇಡೀ ದೇಶದಿಂದ ರೈತರು ಬೆಂಬಲ ಸೂಚಿಸಿದ್ದರು. ನೀವು ಈಗ ನಡೆಸುತ್ತಿರುವ ಹೋರಾಟಕ್ಕೆ ಗೆಲುವು ಖಚಿತ ಎಂದು ನನಗೆ ವಿಶ್ವಾಸವಿದೆ. ಗೆಲ್ಲುವವರೆಗೆ ಹೋರಾಟ ನಿಲ್ಲಬಾರದು, ನಿಮ್ಮ ಜೊತೆ ಸಂಯುಕ್ತ ಕಿಸಾನ್ ಮೋರ್ಚಾ ಇದೆ,” ಎಂದು ಡಾ. ವಿಜು ಕೃಷ್ಣನ್ ರೈತರಲ್ಲಿ ಭರವಸೆ ಮೂಡಿಸಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...