Homeಕರ್ನಾಟಕಮಣ್ಣು ಉಳಿಸುತ್ತೇವೆ: ರಾಜ್ಯ ಸರ್ಕಾರದೊಂದಿಗೆ ಜ್ಞಾಪನಪತ್ರಕ್ಕೆ ಸಹಿ ಹಾಕಿದ ಈಶಾ ಫೌಂಡೇಷನ್‌

ಮಣ್ಣು ಉಳಿಸುತ್ತೇವೆ: ರಾಜ್ಯ ಸರ್ಕಾರದೊಂದಿಗೆ ಜ್ಞಾಪನಪತ್ರಕ್ಕೆ ಸಹಿ ಹಾಕಿದ ಈಶಾ ಫೌಂಡೇಷನ್‌

ಈ ಹಿಂದೆ ‘ಕಾವೇರಿ ಕೂಗು’ ನಡೆಸಿ ಗಿಡ ನೆಡುವುದಾಗಿ ಹೇಳಿದ್ದ ಜಗ್ಗಿ ವಾಸುದೇವ್‌ ಕೋಟ್ಯಂತರ ಹಣ ಸಂಗ್ರಹಿಸಿರುವ ಆರೋಪ ಎದುರಿಸುತ್ತಿದ್ದಾರೆ. ಈಗ ‘ಮಣ್ಣು ಉಳಿಸಿ’ ಅಭಿಯಾನ ನಡೆಸುತ್ತಿದ್ದಾರೆ.

- Advertisement -
- Advertisement -

ಈಶಾ ಫೌಂಡೇಶನ್ ತನ್ನ ಸೇವ್ ಸಾಯಿಲ್‌ (ಮಣ್ಣು ಉಳಿಸಿ) ಅಭಿಯಾನದ ಭಾಗವಾಗಿ ಮಣ್ಣಿನ ಆರೋಗ್ಯ ಸುಧಾರಿಸುತ್ತೇವೆ ಎಂದು ಕರ್ನಾಟಕ ಸರ್ಕಾರದೊಂದಿಗೆ ಭಾನುವಾರ ಜ್ಞಾಪನ ಪತ್ರಕ್ಕೆ (ಎಂಒಯು) ಸಹಿ ಹಾಕಿದೆ.

ಜ್ಞಾಪಕ ಪತ್ರವು ಎರಡು ಅಥವಾ ಹೆಚ್ಚಿನ ಪಕ್ಷಗಳ ನಡುವಿನ ಒಪ್ಪಂದವಾಗಿದೆ. ಇದು ಕಾನೂನುಬದ್ಧ ಕ್ರಮವೇನೂ ಅಲ್ಲ. ಆದರೆ ಒಪ್ಪಂದದೊಂದಿಗೆ ಮುಂದುವರಿಯಲು ಉಭಯ ಪಕ್ಷಗಳ ಇಚ್ಛೆಯನ್ನು ಸಂಕೇತಿಸುತ್ತದೆ.

‘ಮಣ್ಣು ಉಳಿಸಿ’ ಅಭಿಯಾನ ಆರಂಭಿಸಿರುವ ಸ್ವಯಂ ಘೋಷಿತ ದೇವಗುರು ಜಗ್ಗಿ ವಾಸುದೇವ್ ತಮ್ಮ 100 ದಿನಗಳ ಮೋಟಾರ್ ಸೈಕಲ್ ಪ್ರಯಾಣದ ಅಂಗವಾಗಿ ಭಾನುವಾರ ಬೆಂಗಳೂರಿಗೆ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗಿಯಾದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಂಡನ್ ನಿಂದ ಆರಂಭವಾದ ಅಭಿಯಾನ ಕೊನೆಗೂ ಕಾವೇರಿ ತಲುಪುತ್ತಿದೆ ಎಂದು ಜಗ್ಗಿ ಹೇಳಿದ್ದಾರೆ. ಅಭಿಯಾನದ ಭಾಗವಾಗಿ 27,278 ಕಿ.ಮೀ. ಕ್ರಮಿಸಿದ್ದಾರೆ. ಕಳೆದ 94 ದಿನಗಳಲ್ಲಿ ನಡೆದ 593 ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

ಈಶಾ ಫೌಂಡೇಷನ್‌ ಪ್ರತಿ ದೇಶದ ವಿಶಿಷ್ಟತೆಗಳ ಆಧಾರದ ಮೇಲೆ 193 ರಾಷ್ಟ್ರಗಳಿಗೆ ಪ್ರತ್ಯೇಕ ‘ಮಣ್ಣು ಉಳಿಸಿ’ ನೀತಿಗಳನ್ನು ರೂಪಿಸಿದೆ. ಆ ದೇಶಗಳಿಗೆ ದಾಖಲೆಗಳನ್ನು ಹಸ್ತಾಂತರಿಸಿದೆ. ವಿವಿಧ ದೇಶಗಳು ಆ ದಾಖಲೆಗಳನ್ನು ಗಂಭೀರವಾಗಿ ಪರಿಗಣಿಸಿವೆ ಎಂದು ಜಗ್ಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿರಿ: ಪರಿಷ್ಕೃತ ಪಠ್ಯ ಪುಸ್ತಕಗಳನ್ನು ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆ ಚಿತ್ರಗಳಲ್ಲಿ ನೋಡಿ

74 ರಾಷ್ಟ್ರಗಳು ಶಿಫಾರಸುಗಳನ್ನು ಜಾರಿಗೆ ತರಲು ಒಪ್ಪಿಕೊಂಡಿವೆ. ಜ್ಞಾಪನ ಪತ್ರಕ್ಕೆ ಸಹಿಹಾಕಿವೆ ಎಂದು ತಿಳಿಸಿದ್ದಾರೆ. ಭಾರತದಲ್ಲಿ ಏಳೆಂಟು ರಾಜ್ಯಗಳು ಜ್ಞಾಪನ ಪತ್ರಕ್ಕೆ ಸಹಿ ಹಾಕುತ್ತಿವೆ. ಕರ್ನಾಟಕವೂ ಸಹಿ ಹಾಕಿದೆ.

“ಯುಎನ್ ಏಜೆನ್ಸಿಗಳ ಪ್ರಕಾರ ಮಣ್ಣಿನಲ್ಲಿ ಸಾವಯವ ಪ್ರಮಾಣವು ಕನಿಷ್ಠ 3 ಪ್ರತಿಶತದಷ್ಟು ಇರಬೇಕು. ಆದರೆ, ವಿಶ್ವದ ಒಂದೇ ಒಂದು ದೇಶ ಈ ಗುರಿ ತಲುಪಿಲ್ಲ” ಎಂದು ಜಗ್ಗಿ ಪ್ರತಿಪಾದಿಸಿದ್ದಾರೆ.

ಅರಮನೆ ಮೈದಾನದಲ್ಲಿ ಜಗ್ಗಿಯವರ ‘ಮಣ್ಣು ಉಳಿಸಿ’ ಕಾರ್ಯಕ್ರಮವನ್ನು ವೀಕ್ಷಿಸಲು ನೂರಾರು ಜನರು ಭಾನುವಾರ ಆಗಮಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜಗ್ಗಿ ವಾಸುದೇವ್‌ ಜ್ಞಾಪನ ಪತ್ರಗಳ ದಾಖಲೆಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಂತೆ “ಮಣ್ಣು ಉಳಿಸಿ” ಎಂಬ ಘೋಷಣೆಗಳನ್ನು ಕೂಗಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿದ್ದರು.

ಯಡಿಯೂರಪ್ಪ ಅವರು ಜಗ್ಗಿಯವರ ಪಾದ ಮುಟ್ಟಿ ಅವರ ಆಶೀರ್ವಾದ ಪಡೆದುಕೊಂಡರು. 25 ಲಕ್ಷ ರೂ. ಬೆಲೆ ಬಾಳುವ BMW 1600 GT ಸೂಪರ್‌ಬೈಕ್‌ನಲ್ಲಿ ಸವಾರಿ ಮಾಡುವ ಮೂಲಕ ಜಗ್ಗಿ ವಾಸುದೇವ್‌ ಸ್ಥಳಕ್ಕೆ ಆಗಮಿಸಿದ್ದರು.

‘ಕಾವೇರಿ ಕೂಗು’ ಹೆಸರಲ್ಲಿ ಕೋಟಿ ಕೋಟಿ ರೂ. ವಂಚನೆ!?

’ಕಾವೇರಿ ಕೂಗು’ ಅಭಿಯಾನಕ್ಕಾಗಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹ ಮಾಡಿರುವ ಈಶಾ ಫೌಂಡೇಶನ್‌ ಸ್ಥಾಪಕ ಜಗ್ಗಿ ವಾಸುದೇವ್‌ ಅಫಿಡವಿಟ್‌ ಮೂಲಕ ಎಷ್ಟು ಹಣ ಸಂಗ್ರಹಿಸಿದ್ದಾರೆ, ಯಾವೆಲ್ಲಾ ವಿಧಾನಗಳ ಮೂಲಕ ಸಂಗ್ರಹಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ಈ ಹಿಂದೆ ಆದೇಶಿಸಿತ್ತು.

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕೂಡ ಕಾನೂನಿಗಿಂತ ಮಿಗಿಲಲ್ಲ ಎಂದು ಒತ್ತಿ ಹೇಳಿದ್ದ ಮುಖ್ಯ ನ್ಯಾಯಮೂರ್ತಿ ಅಭಯ್‌ ಓಕ ಮತ್ತು ಹೇಮಂತ್‌ ಚಂದನ್‌ಗೌಡರ್‌ ಅವರಿದ್ದ ಪೀಠ, ಜಗ್ಗಿ ವಾಸುದೇವ್‌ ಸಂಗ್ರಹಿಸಿರುವ ಹಣದ ಲೆಕ್ಕ ಕೊಡಬೇಕು ಎಂದು ತಾಕೀತು ಮಾಡಿತ್ತು.

ಕಾವೇರಿ ಕೂಗು ಯೋಜನೆಗೆ ಯಾವ ಕಾರಣಕ್ಕೂ ಸಾರ್ವಜನಿಕರಿಂದ ಹಣ ಸಂಗ್ರಹಿಸಬಾರದು ಎಂದು ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ ಸಾರ್ವಜನಿಕ ಹಿತರಕ್ಷಣಾ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ತೀರ್ಮಾನಕ್ಕೆ ಬಂದಿತ್ತು.

ಯಾರಾದರೂ ಜನರಿಗೆ ಅರಿವು ಮೂಡಿಸಿದರೆ ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಅದರ ನೆಪದಲ್ಲಿ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಿಸುವುದನ್ನು ಒಪ್ಪುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತ್ತು.

ಅಕ್ರಮ ಕಟ್ಟಡ ಕುರಿತು ಪ್ರಶ್ನಿಸಿದ್ದಕ್ಕೆ ಸಂದರ್ಶನವನ್ನೇ ಬಿಟ್ಟು ಹೊರಟ ಜಗ್ಗಿ ವಾಸುದೇವ್‌

ಸ್ವಯಂಘೋಷಿತ ದೇವಮಾನವ, ಸದ್ಗುರು ಎಂದೂ ಕರೆಯಲ್ಪಡುವ ಜಗ್ಗಿ ವಾಸುದೇವ್ ಅವರು ತಾಳ್ಮೆಯ ಬಗ್ಗೆ ಅನೇಕ ಸಂದರ್ಭಗಳಲ್ಲಿ ಬೋಧನೆ ಮಾಡಿದ್ದಾರೆ. ಆದರೆ ಬಿಬಿಸಿ ತಮಿಳು ಮಾಧ್ಯಮಕ್ಕೆ ಸಂದರ್ಶನ ನೀಡುವ ವೇಳೆ ಸ್ವತಃ ಜಗ್ಗಿಯವರೇ ತಮ್ಮ ತಾಳ್ಮೆಯನ್ನು ಕಳೆದುಕೊಂಡ ಘಟನೆ ಇತ್ತೀಚೆಗೆ ನಡೆದಿತ್ತು.

ಸಂದರ್ಶನದ ಮಧ್ಯದಲ್ಲೇ ಕ್ಯಾಮೆರಾಗಳನ್ನು ಸ್ವಿಚ್ ಆಫ್ ಮಾಡಲು ಸೂಚಿಸಿದ್ದರು. ಬಿಬಿಸಿ ತಮಿಳಿನ ಕೆ.ಸುಬಗುಣಂ ಅವರು ಜಗ್ಗಿ ವಾಸುದೇವ್‌ ಅವರ ಸಂದರ್ಶನ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿತ್ತು. ಸಂದರ್ಶನದ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪತ್ರಕರ್ತರ ಪ್ರಶ್ನೆಗಳಿಂದ ಜಗ್ಗಿ ವಿಚಲಿತರಾಗಿರುವುದು ಚರ್ಚೆಯಾಗುತ್ತಿದೆ.

ಜಗ್ಗಿ ಆರಂಭಿಸಿರುವ ‘ಮಣ್ಣು ಉಳಿಸಿ ಆಂದೋಲನ’ದ ಕುರಿತು ಸಂದರ್ಶನ ನಡೆಯುತ್ತಿತ್ತು. ಸ್ವಘೋಷಿತ ದೇವಮಾನವರಾದ ಜಗ್ಗಿ ತಮ್ಮ ದ್ವಿಚಕ್ರ ವಾಹನದಲ್ಲಿ ವಿವಿಧ ಸ್ಥಳಗಳಿಗೆ ಪ್ರಯಾಣಿಸಿ ಈ ಅಭಿಯಾನ ನಡೆಸುತ್ತಿದ್ದಾರೆ. ಆದರೆ ಜಗ್ಗಿಯವರ ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ ಪರಿಸರ ಅನುಮತಿಯ ವಿವಾದದ ಕುರಿತು ಪ್ರಶ್ನೆಗಳು ಬರುತ್ತಿದ್ದಂತೆ ಸಿಟ್ಟಿಗೆದ್ದಿದ್ದರು. ಅಂತಿಮವಾಗಿ ಸಂದರ್ಶನವನ್ನು ಮೊಟಕುಗೊಳಿಸಲು ಸೂಚಿಸಿದ್ದರು.

ಕೊಯಮತ್ತೂರು ಜಿಲ್ಲೆಯ ಬೂಲುವಾಪಟ್ಟಿ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಪೂರ್ವಾನುಮತಿ ಪಡೆದಿಲ್ಲ. ನಿರ್ಮಾಣ ಮುಗಿದ ಸುಮಾರು ಮೂರು ವರ್ಷಗಳ ನಂತರ ಅಗತ್ಯವಿರುವ ಅನುಮತಿಗಳನ್ನು ಕೇಳಲಾಗಿದೆ ಎಂದು 2018ರಲ್ಲಿ ಸದ್ಗುರುಗಳ ಈಶಾ ಫೌಂಡೇಶನ್ ವಿರುದ್ಧ ಕಂಟ್ರೋಲರ್ ಮತ್ತು ಆಡಿಟರ್ ಜನರಲ್‌‌ (ಸಿಎಜೆ) ಗಂಭೀರ ಆರೋಪಗಳನ್ನು ಮಾಡಿದ್ದರು.

ಇದನ್ನೂ ಓದಿರಿ: ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

ಗ್ರಾಮದಲ್ಲಿ 32,856 ಚದರ ಅಡಿ ವಿಸ್ತೀರ್ಣದ ವಿವಿಧ ಕಟ್ಟಡಗಳನ್ನು 1994 ರಿಂದ 2008 ರ ನಡುವೆ ಸೂಕ್ತ ಅನುಮತಿಯೊಂದಿಗೆ ನಿರ್ಮಿಸಲಾಗಿದೆ ಎಂದು ಸಿಎಜಿ ಹೇಳಿದ್ದರು. ಆದರೆ 2005 ಮತ್ತು 2008ರ ನಡುವೆ ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯದೆ ಕಟ್ಟಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು. ಇಶಾ ಸಂಸ್ಥೆಯು 2011ರಲ್ಲಿ ನಿರ್ಮಾಣಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಮತ್ತು ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯನ್ನು ಕೋರಿತ್ತು.

“ಈಶಾ ಫೌಂಡೇಶನ್ ಈಗ ಪರಿಸರಕ್ಕಾಗಿ ಕೆಲಸ ಮಾಡುತ್ತಿದೆ” ಎಂದು ಬಿಬಿಸಿಯ ಸುಬಗುಣಂ ಪ್ರಸ್ತಾಪಿಸುತ್ತಾ “ಕಟ್ಟಡಗಳ ನಿರ್ಮಾಣಕ್ಕೆ ಅನುಮತಿಯನ್ನು ಪಡೆದಿಲ್ಲ ಎಂಬ ಆರೋಪದ ಬಗ್ಗೆ ಸದ್ಗುರುಗಳ ಅಭಿಪ್ರಾಯವೇನು?” ಎಂದು ಕೇಳಿದ್ದರು. ಇದರಿಂದ ತಾಳ್ಮೆ ಕಳೆದುಕೊಂಡು ಸಂದರ್ಶನ ಮೊಟುಕುಗೊಳಿಸಿದ್ದರು. (ಈ ಕುರಿತ ಪೂರ್ಣ ವಿವರ ಓದಲು ಇಲ್ಲಿ ಕ್ಲಿಕ್‌ ಮಾಡಿರಿ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...