Homeಕರ್ನಾಟಕ'ಒಕ್ಕೂಟ ಉಳಿಸಿ ಆಂದೋಲನ' ಆರಂಭ : ಹಲವು ನಿರ್ಣಯಗಳ ಅಂಗೀಕಾರ

‘ಒಕ್ಕೂಟ ಉಳಿಸಿ ಆಂದೋಲನ’ ಆರಂಭ : ಹಲವು ನಿರ್ಣಯಗಳ ಅಂಗೀಕಾರ

- Advertisement -
- Advertisement -

ರಾಜ್ಯಗಳ ಮೇಲಿನ ದಾಳಿಗೆ ಜನಪ್ರತಿರೋಧವನ್ನು ದಾಖಲಿಸುವ ಸಲುವಾಗಿ ಇಂದು (ಸೆ.14) ‘ಒಕ್ಕೂಟ ಉಳಿಸಿ ಆಂದೋಲನ’ದ ಚಾಲನಾ ಸಭೆ ನಡೆಯಿತು.

ಬೆಂಗಳೂರಿನ ಕೆ.ಆರ್ ವೃತ್ತದ ಬಳಿಯ ಯುವಿಸಿಇ ಅಲುಮ್ನಿ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ಒಕ್ಕೂಟ ಸರ್ಕಾರವು ಎಲ್ಲಾ ರಾಜ್ಯಗಳ ಹಕ್ಕುಗಳು ಮತ್ತು ಅಸ್ಮಿತೆಯ ಮೇಲೆ ಬಹುಮುಖಿ ದಾಳಿಯನ್ನು ನಡೆಸುತ್ತಿರುವುದು, ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳ ಸಂಪನ್ಮೂಲಗಳನ್ನು ಬಸಿಯುತ್ತಿರುವುದು, ರಾಜ್ಯಗಳ ಪಾಲನ್ನು ಕೊಡದೆ ವಂಚಿಸುತ್ತಿರುವುದು, ನಮ್ಮ ಭಾಷೆ ಮತ್ತು ಸಂಸ್ಕೃತಿಗಳನ್ನು ಮೂಲೆಗೊತ್ತುತ್ತಿರುವುದರ ಕುರಿತು ಚರ್ಚಿಸಲಾಯಿತು ಮತ್ತು ಅದರ ವಿರುದ್ಧ ನಿರ್ಣಾಯಕವಾದ ಆಂದೋಲನವನ್ನು ರೂಪಿಸಲು ದೃಢ ನಿಶ್ಚಯ ಮಾಡಿದೆ ಎಂದು ಸಭೆ ಸರ್ವಾನುಮತದಿಂದ ಘೋಷಿಸಿತು.

ರಾಜ್ಯ ಪಟ್ಟಿಯಲ್ಲಿರುವ ವಿಷಯಗಳ ಕುರಿತು ಒಕ್ಕೂಟ ಸರ್ಕಾರವೇ ಜನ ವಿರೋಧಿ ರೀತಿಯಲ್ಲಿ ಶಾಸನಗಳನ್ನು ರೂಪಿಸುವುದು, ಅವನ್ನು ಜಾರಿಗೊಳಿಸಲೇಬೇಕು ಎಂದು ಒತ್ತಡ ಹಾಕುವುದು, ಇಲ್ಲವಾದರೆ ಅನುದಾನ ನೀಡುವುದಿಲ್ಲ ಎಂದು ಬೆದರಿಕೆ ಹಾಕುವುದು ಮೊದಲಾದ ಅಸಂವಿಧನಾತ್ಮಕ ನಡತೆಯನ್ನು ಒಕ್ಕೂಟ ಸರ್ಕಾರ ಪ್ರದರ್ಶಿಸುತ್ತಿದೆ. ಇದು ಒಕ್ಕೂಟ ತತ್ವದ ಮೇಲೆ ನಡೆಸುತ್ತಿರುವ ಅಪಚಾರವಾಗಿದೆ. ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಕಡಿಮೆ ಅನುದಾನ ನೀಡುವುದು, ಜಿಎಸ್‌ ಟಿ ಮೂಲಕ ರಾಜ್ಯಗಳ ಸಂಪನ್ಮೂಲಗಳನ್ನೆಲ್ಲಾ ತಾನೇ ಬಾಚಿಕೊಂಡು ರಾಜ್ಯಗಳಿಗೆ ಕನಿಷ್ಟ ಅರ್ಧಪಾಲನ್ನೂ ಸಹ ನೀಡದಿರುವುದು, ಬೆಲೆ ಏರಿಕೆಗೆ ಕಾರಣವಾಗುವ ರೀತಿಯಲ್ಲಿ ಸೆಸ್‌ ಮತ್ತು ಸರ್‌ ಚಾರ್ಜ್‌ ಹೆಚ್ಚಿಸುತ್ತಾ, ಅದರಲ್ಲಿ ರಾಜ್ಯಗಳಿಗೆ ಎಳ್ಳಷ್ಟು ಪಾಲನ್ನೂ ನೀಡದೆ ತಾನೇ ಕಬಳಿಸುವುದು, ಇವೆಲ್ಲವೂ ವಿತ್ತೀಯ ಕೇಂದ್ರೀಕರಣದ ಅಕ್ರಮ ಮಾರ್ಗಗಳಾಗಿವೆ. ಇಂತಹ ವಿವಿಧ ಕ್ರಮಗಳಿಗೆ ನಮ್ಮ ಪ್ರತಿರೋಧ ಇದ್ದೇ ಇರುತ್ತದೆ‌ ಎಂದು ಸಭೆ ನಿರ್ಣಯಿಸಿತು.

200 ವರ್ಷಗಳ ವೀರೋಚಿತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಲಕ್ಷಾಂತರ ಜನರ ಬಲಿದಾನದ ಮುಖಾಂತರ ವಸಾಹತುಶಾಹಿಗಳ ವಿರುದ್ಧದ ಆಂದೋಲನದಲ್ಲಿ ಒಂದುಗೂಡಿದ ಈ ದೇಶದ ಶಕ್ತಿ ಇದರ ವೈವಿಧ್ಯತೆಯಾಗಿದೆ. ಇಂತಹ ವಿಶಿಷ್ಟ ದೇಶ ಈ ಪ್ರಪಂಚದಲ್ಲಿ ಇನ್ನೊಂದಿಲ್ಲ. ಈ ವಿಶಿಷ್ಟತೆಯನ್ನು ನಾಶ ಮಾಡಿ ಇದನ್ನು ದುರ್ಬಲಗೊಳಿಸುವ ಒಂದು ಭಾಷೆ, ಒಂದು ಸಂಸ್ಕೃತಿ, ಒಂದು ಧರ್ಮ, ಒಂದು ರಾಜಕೀಯ ಪಕ್ಷ, ಒಬ್ಬ ನಾಯಕ, ಒಂದು ಚಿಂತನೆ ಎಂಬ ಸಿದ್ಧಾಂತವನ್ನು ನಾವು ವಿರೋಧಿಸುತ್ತೇವೆ. ಅದೇ ರೀತಿ, ಒಂದು ತೆರಿಗೆ, ಒಂದು ಮಾರುಕಟ್ಟೆ, ಒಮ್ಮೆಗೇ ಚುನಾವಣೆಯಂತಹ ಕ್ರಮಗಳೂ ಸಹಾ ದುರುದ್ದೇಶದಿಂದ ಕೂಡಿದೆ. ಈ ನಿಟ್ಟಿನಲ್ಲಿ ಇದುವರೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳನ್ನು ಹಿಂತೆಗೆದುಕೊಳ್ಳಬೇಕೆಂದು ನಾವು ಆಗ್ರಹಿಸುತ್ತೇವೆ ಮತ್ತು ಮುಂದಿನ ದಿನಗಳಲ್ಲಿ ಅಂತಹ ಕ್ರಮಗಳನ್ನು ತೆಗೆದುಕೊಂಡರೆ ಯಾವುದೇ ಬೆಲೆ ತೆತ್ತಾದರೂ ಅದನ್ನು ತಡೆಯುತ್ತೇವೆ ಎಂಬ ದೃಢ ‌ನಿಶ್ಚಯವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಹೀಗಿವೆ..

ಕೇಂದ್ರೀಯ ಏಜೆನ್ಸಿಗಳಾದ ಸಿಬಿಐ, ಐಟಿ, ಇಡಿ ಇತ್ಯಾದಿಗಳನ್ನೂ, ರಾಜ್ಯಪಾಲರ ಕಚೇರಿಯೂ ಸೇರಿದಂತೆ ವಿವಿಧ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಗಳನ್ನೂ ಒಕ್ಕೂಟ ಸರ್ಕಾರವು ತನ್ನ ಖಾಸಗಿ ಏಜೆನ್ಸಿಗಳಂತೆ ಬಳಸಿಕೊಳ್ಳುತ್ತಿದೆ. ತನ್ನ ವಿರೋಧಿಗಳನ್ನು ಅಕ್ರಮವಾಗಿ ಬಗ್ಗುಬಡಿಯಲು, ತನ್ನ ಜೊತೆಗಿರುವವರನ್ನು ರಕ್ಷಿಸಲು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಹುನ್ನಾರವು ದೇಶದ ಜನರಿಗೆ ಸ್ಪಷ್ಟವಾಗಿ ಕಂಡಿದ್ದು, ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತತೆಯನ್ನು ಕಾಪಾಡಲು ಮತ್ತು ದೇಶದಲ್ಲಿ ಭ್ರಷ್ಟಾಚಾರ ಹಾಗೂ ವಿವಿಧ ಅಕ್ರಮಗಳ ನಿಷ್ಪಕ್ಷಪಾತ ತನಿಖೆ ನಡೆಯುವಂತಾಗಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ನಾವು ಮಾಡುತ್ತೇವೆ.

ಕೇಂದ್ರೀಕರಣದ ಪ್ರಯತ್ನಗಳನ್ನು ಹಿಂದೆ ಕಾಂಗ್ರೆಸ್‌ ಸೇರಿದಂತೆ ಹಲವು ರಾಜಕೀಯ ಪಕ್ಷಗಳ ಆಡಳಿತದ ಸಂದರ್ಭದಲ್ಲಿ ಮಾಡಲಾಗಿದೆ; ಅವೆಲ್ಲವನ್ನೂ ನಾವು ನೆನಪಿನಲ್ಲಿಟ್ಟಿದ್ದೇವೆ. ಆದರೆ, 2014ರಿಂದ ಈಚೆಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷವು ಕೇಂದ್ರೀಕರಣವನ್ನು ತೀವ್ರಗೊಳಿಸಿದ್ದಲ್ಲದೇ ಎಲ್ಲಾ ಮೇರೆಗಳನ್ನು ದಾಟಿ ನಿರ್ಲಜ್ಜವಾಗಿ ಮುಂದುವರೆದಿದೆ. ಇದನ್ನು ಎದುರಿಸಿ ನಿಲ್ಲಲು, ದೇಶದ ಎಲ್ಲಾ ರಾಜ್ಯಗಳ ಪ್ರಜಾತಂತ್ರವಾದಿ ಜನತೆ, ರಾಜಕೀಯ ಪಕ್ಷಗಳು, ವಿಶೇಷವಾಗಿ ವಿದ್ಯಾರ್ಥಿ ಯುವ ಜನರನ್ನು ಒಳಗೊಂಡು ರಾಷ್ಟ್ರೀಯ ಅಭಿಯಾನವನ್ನು ರೂಪಿಸಲು ಈ ಸಭೆ ನಿರ್ಣಯಿಸುತ್ತಿದೆ.

‘ಒಕ್ಕೂಟ’ ಸರ್ಕಾರದ ಒಕ್ಕೂಟ ತತ್ವ ವಿರೋಧಿ ನೀತಿಯ ಕುರಿತು, ಅದರ ಪರಿಣಾಮಗಳ ಕುರಿತು ಅರಿವು ಮೂಡಿಸಲು ಮುಂದಿನ ಒಂದು ತಿಂಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಜಾಗೃತಿ ಸಭೆಗಳನ್ನು ನಡೆಸುವುದು.

ನವೆಂಬರ್‌ ತಿಂಗಳಿನಲ್ಲಿ ಈ ವಿಚಾರವನ್ನೇ ಕೇಂದ್ರಬಿಂದುವಾಗಿಟ್ಟುಕೊಂಡು ಬೃಹತ್‌ ಸಮಾವೇಶವನ್ನು ಸಂಘಟಿಸುವುದು.

ವಿವಿಧ ರಾಜ್ಯಗಳ ಸಮಾನ ಮನಸ್ಕರನ್ನು ಸಂಪರ್ಕಿಸಿ ದೇಶ ಮಟ್ಟದಲ್ಲಿ ಕೇಂದ್ರದ ರಾಜ್ಯ ವಿರೋಧಿ ಧೋರಣೆ ವಿರುದ್ಧ ದನಿ ಎತ್ತಲು ದೆಹಲಿಯಲ್ಲಿ ಅಖಿಲ ಭಾರತ ಮಟ್ಟದ ಪ್ರತಿಭಟನಾ ಸಭೆಯೊಂದನ್ನು ಆಯೋಜಿಸುವುದು.

ರಾಜ್ಯದ ಅಸ್ಮಿತೆ, ಹಕ್ಕು ಹಾಗೂ ಪಾಲಿನ ರಕ್ಷಣೆಗಾಗಿ ರಾಜ್ಯ ಸರ್ಕಾರವೂ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ರಾಜ್ಯವ್ಯಾಪಿಯಾಗಿ ಹಕ್ಕೊತ್ತಾಯ ಸಲ್ಲಿಸುವುದು.

ಇದೇ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್‌ ಅವರ ಬಿಡುಗಡೆಗೆ ಸಭೆ ಆಗ್ರಹಿಸಿತು. ದೆಹಲಿ ದಂಗೆಗಳಿಗೆ ಕಾರಣ ಎಂಬ ಆಧಾರ ರಹಿತ ಸುಳ್ಳು ಆರೋಪದ ಮೇಲೆ ಖಾಲಿದ್ ಅವರನ್ನು ಬಂಧಿಸಿ ಇಂದಿಗೆ 4 ವರ್ಷಗಳಾಗುತ್ತಿವೆ. ವಿನಾಕಾರಣ ಬೇಲ್‌ ಸಹ ನೀಡದೆ ಕೊಳೆಸುತ್ತಿರುವುದಲ್ಲದೆ, ಕನಿಷ್ಟ ವಿಚಾರಣೆಯನ್ನೂ ಪ್ರಾರಂಭಿಸದೆ ಅವರ ಪ್ರಜಾತಾಂತ್ರಿಕ ಹಕ್ಕನ್ನು ದಮನ ಮಾಡಲಾಗುತ್ತಿದೆ. ಈ ಸಂಚಿನಲ್ಲಿ ಒಕ್ಕೂಟ ಸರ್ಕಾರದ ಗೃಹ ಮಂತ್ರಾಲಯವು ನೇರವಾಗಿ ಭಾಗಿಯಾಗಿದೆ. ಅನ್ಯಾಯಗಳ ವಿರುದ್ಧ ದನಿ ಎತ್ತಿದವರನ್ನು ಈ ರೀತಿ ದಮನ ಮಾಡುವುದನ್ನು ಈ ಸಭೆ ತೀವ್ರವಾಗಿ ಖಂಡಿಸುತ್ತದೆ. ಉಮರ್‌ ಖಾಲಿದ್‌ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಸಭೆ ಒತ್ತಾಯಿಸಿದೆ.

ನ್ಯಾಯಮೂರ್ತಿ ಗೋಪಾಲಗೌಡ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಿವರಾಯಪ್ಪ
ಜೋಗಿನ ಪ್ರಸ್ತಾವನೆ ಮಂಡಿಸಿದರು. ಜೆ.ಎಂ ವೀರಸಂಗಯ್ಯ ಸಭೆಯ ನಿರ್ವಹಣೆ ಮಾಡಿದರು. ಬಿ.ಟಿ ಲಲಿತಾ ನಾಯಕ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಎ.ನಾರಾಯಣ ಹಾಗೂ
ಡಾ.ಬಂಜಗೆರೆ ಜಯಪ್ರಕಾಶ್ ಮಾತನಾಡಿದರು. ಕೆ.ಷರೀಫಾ ನಿರ್ಣಯಗಳನ್ನು ಮಂಡಿಸಿದರು.

ಇದನ್ನೂ ಓದಿ : ಜೀವ ಬೆದರಿಕೆ, ಜಾತಿ ನಿಂದನೆ ಆರೋಪ : ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...