Homeಕರ್ನಾಟಕಸೇವ್ ಉತ್ತರ ಕನ್ನಡ: ನೋ ಎನ್ನುತ್ತಿದ್ದಾರೆ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಸರ್ಕಾರ

ಸೇವ್ ಉತ್ತರ ಕನ್ನಡ: ನೋ ಎನ್ನುತ್ತಿದ್ದಾರೆ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಸರ್ಕಾರ

- Advertisement -
- Advertisement -

ಮಳೆಗೆ ಉತ್ತರಕನ್ನಡ ಒದ್ದೆಮುದ್ದೆಯಾಗಿ ಒದ್ದಾಡುತ್ತಿದೆ! ಬದುಕು ಅಕ್ಷರಶಃ ಮುಳುಗಿದೆ. ಜಿಲ್ಲೆಯ ಒಟ್ಟು ಹನ್ನೆರಡೂ ತಾಲ್ಲೂಕಿನಲ್ಲಿ ಎಲ್ಲಿ ನಿಂತು ನೋಡಿದರೂ ನೀರೇ ನೀರು!! ಆಗಸ್ಟ್ 1ರಿಂದ 7ರ ತನಕ ಬರೋಬ್ಬರಿ 571 ಮಿಮೀ ಮಳೆ ದೋ ಎಂದು ಒಂದೇಸಮನೆ ಜಡಿದು ಸಾವಿರಾರು ಕುಟುಂಬಗಳನ್ನು ಬೀದಿ ಪಾಲಾಗಿಸಿದೆ. ಗದ್ದೆ-ತೋಟ, ಮನೆ, ರಸ್ತೆ, ಶಾಲೆ, ವಿದ್ಯುತ್ ಸಂಪರ್ಕ…… ಎಲ್ಲವೂ ನೆರೆಯಲ್ಲಿ ಕದಡಿಹೋಗಿದೆ. ಜಿಲ್ಲೆಯ ಜೀವವಾಹಿನಿಗಳು ಎನಿಸಿದ್ದ ಕಾಳಿ, ಗಂಗಾವಳಿ, ಬೇಡ್ತಿ, ಶರಾವತಿ, ಅಘನಾಶಿನಿ, ವರಧಾಮ ಶಾಲ್ಮಲಾ, ಪಾಂಡ್ರಿ, ಚೌಥನಿ, ವೆಂಕಟಾಪುರ ನದಿಗಳು ಉಕ್ಕುಕ್ಕಿ ಹರಿದು ಅಮಾಯಕರ ಜೀವ-ಜೀವನ ಆಪೋಷನ ಪಡೆದಿದೆ!!!

ಸದಾ ಮಳೆಯಿಲ್ಲದೆ ಬರದಲ್ಲಿ ಬಸವಳಿಯುತ್ತಿದ್ದ ಮುಂಡಗೋಡ ಮತ್ತು ಹಳಿಯಾಳ ತಾಲ್ಲೂಕುಗಳೂ ಈ ಯಮ ಮಳೆಗೆ ಕೊಚ್ಚಿಹೋಗಿವೆ. ಸರ್ಕಾರಿ ಲೆಕ್ಕಾಚಾರ ಏನೇ ಇರಲಿ, ನೆರೆಹಾವಳಿಯಿಂದ ಹತ್ತಿರತ್ತಿರ ಎರಡು ನೂರು ಗ್ರಾಮಗಳು ಮುಳುಗಡೆ ಆಗಿವೆ. 24 ಸೇತುವೆಗಳು ಪ್ರವಾಹದಲ್ಲಿ ಕಣ್ಮರೆಯಾಗಿದ್ದವು. ಅಷ್ಟೇ ಪ್ರಮಾಣದ ರಸ್ತೆಗಳು ಚಿಂದಿ ಎದ್ದುಹೋಗಿವೆ. 2,000ದಷ್ಟು ಮನೆಗಳು ಜಲಯಜ್ಞಕ್ಕೆ ಹವಿಸ್ಸಾಗಿವೆ. ಕಣ್ಮರೆಯಾದ ಜನ-ಜಾನುವಾರುಗಳ ಲೆಕ್ಕ ಇನ್ನೂ ಸರಿಯಾಗಿ ಸಿಗುತ್ತಿಲ್ಲ. ಸಾವಿರಾರು ಕುಟುಂಬಗಳ ಕಮ್ಮಿಯೆಂದರೂ 10,000 ಮಂದಿ ತಾತ್ಕಾಲಿಕ ಕ್ಷೇಮ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಹತ್ತಿರತ್ತಿರ ನೂರು ಪರಿಹಾರ ಕೇಂದ್ರಗಳನ್ನು ಜಿಲ್ಲಾಡಳಿತ ತೆರೆದಿದೆ.

ರಾಜ್ಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿದು ಅಥವಾ ರಸ್ತೆಗಳೇ ಬಿರುಕುಬಿಟ್ಟು, ಸೇತುವೆಗಳು ಜಖಮ್ ಆಗಿ ನೂರಾರು ಹಳ್ಳಿಗಳು ನಡುಗಡ್ಡೆಗಳಂತಾಗಿವೆ. ದೇವಿಮನೆ, ಅರಬೈಲ್, ಕೋಗಾರ, ಬಡಳ, ವಡ್ಡಿ, ಶೇವಕಾರ ಘಟ್ಟ ಪ್ರದೇಶದಲ್ಲಿ ಸಂಚಾರ ಅಪಾಯಕಾರಿಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಕಂಬಗಳು ಸಾಲಾಗಿ ಮುರಿದು ಬಿದ್ದಿವೆ; ಮೊಬೈಲ್ ಟವರ್‍ಗಳು ಸ್ಥಗಿತಗೊಂಡಿವೆ. ಹಳ್ಳಿ-ಹಳ್ಳಿಗಳು ವಿದ್ಯುತ್ ದೀಪ ಬೆಳಗದೆ ಗಾಡಾಂಧಕಾರದಲ್ಲಿ ಮುಳುಗಿವೆ. ಇದೆಲ್ಲ ಸರಿ ಮಾಡಲು ಜಿಲ್ಲಾಡಳಿತಕ್ಕೆ ತಿಂಗಳುಗಳೇ ಬೇಕು! ಜನರ ಪರದಾಟ ಹೇಳತೀರದು.

ಈ ವರದಿ ಸಿದ್ಧವಾಗುತ್ತಿರುವ ಹೊತ್ತಿಗೆ ಮಳೆಯ ಆರ್ಭಟ ನಿಂತಿದೆ. ಎಲ್ಲಾ ನದಿ-ಹೊಳೆಗಳ ನೆರೆ ಇಳಿದಿದೆ. ಜಿಲ್ಲೆಯ ಅಷ್ಟೂ ನದಿ ದಡದ ಹಳ್ಳಗಳಲ್ಲೀಗ ಕಾಣುತ್ತಿರುವುದು ನರಕಸದೃಶ ಪರಿಸ್ಥಿತಿ! ಅಡಿಗಟ್ಟಲೆ ಕೆಸರು, ಉರುಳಿದ ಮನೆ, ಅಂಗಡಿ ಮುಂಗಟ್ಟುಗಳು; ಕೊಚ್ಚಿಹೋದ ಅಡಿಕೆ ತೋಟ, ಭತ್ತದ ಗದ್ದೆ, ಮೂಲಭೂತ ಸೌಕರ್ಯದ ಅವಶೇಷಗಳು. ನಿಧಾನವಾಗಿ ಕ್ಷೇಮ ಕೇಂದ್ರಗಳಿಂದ ಸಂತ್ರಸ್ತರು ಮನೆಗಳತ್ತ ಹೋಗುತ್ತಿದ್ದಾರೆ. ಸಂಗ್ರಹಿಸಿಟ್ಟುಕೊಂಡಿದ್ದ ಅಕ್ಕಿ, ಬೇಳೆ, ಬಟ್ಟೆ, ಮಕ್ಕಳ ಪಾಟಿ ಪುಸ್ತಕ, ನೋಟ್‍ಬುಕ್, ರೇಷನ್ ಕಾರ್ಡು, ಆಧಾರ್ ಕಾರ್ಡು, ಗ್ಯಾಸ್ ಒಲೆ……. ಹೀಗೆ ಎಲ್ಲವೂ ನೀರುಪಾಲಾಗಿವೆ. ಮನೆ ಬಾಗಿಲು ತೆರೆದರೆ ನೆರೆಯಲ್ಲಿ ತೇಲಿಬಂದ ವಿಷಕಾರಿ ಹಾವು-ಸರೀಸೃಪಗಳು ಬುಸುಗುಡುತ್ತಿವೆ. ಸತ್ತ ಪ್ರಾಣಿಗಳ ದುರ್ನಾತ! ಬದುಕು ಮುಂದ್ಹೇಗೆಂಬ ಆತಂಕದಲ್ಲಿ ಜನರು ದಿಕ್ಕೆಟ್ಟು ನಿಂತಿದ್ದಾರೆ.

ಈ ಭೀಭತ್ಸ ನೆರೆಯಿಂದ ಸಂತ್ರಸ್ತರಾದವರಿಗೆ ಜಿಲ್ಲಾಧಿಕಾರಿ ಹರೀಶ್‍ಕುಮಾರ್ ಕೆಪ್ಟನಿಕೆಯ ಜಿಲ್ಲಾಡಳಿತ ಬದ್ಧತೆಯಿಂದ, ಕರ್ತವ್ಯನಿಷ್ಠೆಯಿಂದ ನೆರವಾಗಿದೆ ಎಂಬುದಕ್ಕೆ ಎರಡು ಮಾತೇ ಇಲ್ಲ. ಜಿಲ್ಲಾಡಳಿತ ಸುರಿವ ಅನಾಹುತಕಾರಿ ಮಳೆಯಲ್ಲಿ ಹಗಲಿರುಳೂ ನೊಂದವರಿಗೆ ಸ್ಪಂದಿಸಿದೆ. ಸರ್ಕಾರೇತರ ಸಂಘ-ಸಂಸ್ಥೆಗಳೂ ನೆಲೆ ಕಳಕೊಂಡವರಿಗೆ ಕಳಕಳಿಯಿಂದ ಸಹಾಯ ಮಾಡಿದ್ದಾರೆ. ಆದರೆ ಯಡ್ಡಿ ಮಹಾತ್ಮನ ‘ಏಕವ್ಯಕ್ತಿ’ ಸರ್ಕಾರದಿಂದ ಉತ್ತರ ಕನ್ನಡದ ನೆರೆ ಪೀಡಿತರಿಗೆ ತಕ್ಷಣದ ಪರಿಹಾರ-ಸಾಂತ್ವನ ಯಾವುದೂ ಸಿಗಲಿಲ್ಲ. ನೆರೆ ನೋಡಲು ಬಾಗಲಕೋಟೆ, ಬೆಳಗಾವಿಗೆ ಹೋಗಿದ್ದ ಯಡ್ಡಿಯ ಕಾಪ್ಟರ್ ಉತ್ತರ ಕನ್ನಡದತ್ತ ಹೊರಳಲೇ ಇಲ್ಲ.

ಆಳುವ ಸರ್ಕಾರಗಳಿಗೆ ನಮ್ಮತ್ತ ಯಾಕಿಂಥ ತಾತ್ಸಾರ ಎಂದು ಉತ್ತರ ಕನ್ನಡ ಜಿಲ್ಲೆಯ ಜನ ಕೇಳಿಕೊಳ್ಳಲು ಶುರು ಮಾಡಿದ್ದಾರೆ. ಹಾಗೆ ನೋಡಿದರೆ, ಜಿಲ್ಲೆ ತನ್ನ ಸಿರಿಸಂಪತ್ತನ್ನೆಲ್ಲಾ ರಾಜ್ಯ-ರಾಷ್ಟ್ರದ ಕಲ್ಯಾಣಕ್ಕಾಗಿ ಕೊಡುತ್ತಲೇ ಬಂದಿದೆ. ಇಲ್ಲಾಗಿರುವ ಜಲವಿದ್ಯುತ್ ಯೋಜನೆಯಿರಲಿ, ಕೈಗಾ ಅಣು ಸ್ಥಾವರವಿರಲಿ, ಕುದಂಬ ನೌಕಾನೆಲೆಯಾಗಲಿ ಸ್ಥಳೀಯ ಉದ್ಧಾರಕ್ಕೆ ಬಂದಿದ್ದಲ್ಲ. ಜಿಲ್ಲೆ ಮಾಡಿರುವ ಪ್ರತಿ ತ್ಯಾಗದ ಹಿಂದೆ ರಾಜ್ಯ-ರಾಷ್ಟ್ರದ ಹಿತವೇ ಅಡಗಿದೆ. ಇಲ್ಲಿನ ಮರ-ಮಟ್ಟು, ವನಸ್ವತಿ, ನೀರು, ಮೀನು, ವಿದ್ಯುತ್, ಉಪ್ಪು, ಪ್ರವಾಸಿತಾಣಗಳ ಮೂಲಕ ದೊಡ್ಡ ಮಟ್ಟದ ಆದಾಯ ಗಳಿಸುತ್ತಿರುವ ರಾಜ್ಯ ಸರ್ಕಾರ ಇಷ್ಟೇಕೆ ಕಡೆಗಣಿಸುತ್ತಿದೆ ಉತ್ತರ ಕನ್ನಡವನ್ನು? ಪ್ರವಾಹದಿಂದ ಬದುಕು ಕಳೆದುಕೊಂಡ ಜನರ ನಡುವೆ ಇಂತಹದ್ದೊಂದು ಆಕ್ರೋಶದ ಪ್ರಶ್ನೆ ಹುಲುಸಾಗೇ ಬೆಳೆಯುತ್ತಿದೆ.

ಹೀಗಾಗಿಯೇ ಈಗ ಸಾಮಾಜಿಕ ಜಾಲತಾಣಗಳಲ್ಲಿ “ಸೇವ್ ಉತ್ತರ ಕನ್ನಡ” ಎಂಬ ಕೂಗೆದ್ದಿದೆ. ಜಲಪ್ರಳಯದ ಸಂತ್ರಸ್ತರ ವಾಟ್ಸಪ್ ಗ್ರೂಪ್ ಹುಟ್ಟುಹಾಕಲಾಗಿದೆ. ಜಲಕಂಟಕದ ಚಿತ್ರಣಗಳು ಎಲ್ಲೆಡೆ ಹರಿದಾಡುತ್ತಿವೆ. ಚಲನಚಿತ್ರರಂಗ, ಸಾಹಿತಿಗಳು, ಉದ್ಯೋಗಿಗಳು, ಉದ್ಯಮಿಗಳು ಯಾನದಲ್ಲಿ ಸೇರಿಕೊಂಡಿದ್ದಾರೆ. ನಟ ಉಪೇಂದ್ರ ಐದು ಲಕ್ಷ ಪರಿಹಾರ ಧನ ಕೊಟ್ಟು ತಕ್ಷಣಕ್ಕೆ ಸ್ಪಂದಿಸಿದ್ದಾರೆ. ಯಾಕೆ ಆಳುವವರು ಉತ್ತರ ಕನ್ನಡವನ್ನು ನಿರ್ಲಕ್ಷ್ಯ ಮಾಡುತ್ತಾರೆ? ಕೇರಳ-ಕೊಡಗಲ್ಲಿ ಮಳೆ ಪ್ರಳಯ ಆದಾಗ ಧಾವಿಸಿದವರಿಗೇಕೆ ಜಿಲ್ಲೆಯ ಗೋಳು ಕಾಣಿಸುತ್ತಿಲ್ಲ? ಶರಾವತಿ ನೀರು, ಅಘನಾಶಿನಿ ನೀರು ಬೇಕೆನ್ನುವವರು, ಕಾಳಿ, ಶರಾವತಿ ನದಿ ನೀರಿಂದಾದ ವಿದ್ಯುತ್ ಪ್ರಯೋಜನ ಪಡೆಯುತ್ತಿರುವವರಿಗೆಲ್ಲ ಋಣ ತೀರಿಸಬೇಕೆಂಬ ಸಣ್ಣ ಮಾನವೀಯತೆಯೂ ಇಲ್ಲದಾಯಿತಾ? ಈ ಪ್ರಶ್ನೆ ಸೇವ್ ಉತ್ತರ ಕನ್ನಡ ಅಭಿಯಾನವನ್ನು ಕಾಡುತ್ತಿದೆ.

ಆಳುವವರು ಉತ್ತರ ಕನ್ನಡದ ನೆರೆಪೀಡಿತರಿಗೆ ನ್ಯಾಯ ಕೊಡಿಸಿ ಅವರು ಸ್ವಾವಲಂಬನೆಯಿಂದ ಬದುಕಲು ಅವಕಾಶ ಮಾಡಿಕೊಡುತ್ತದೆಂಬ ಯಾವ ಭರವಸೆಯೂ ಇಲ್ಲ. ಈ ಸಂಶಯಕ್ಕೆ ಹಿಂದೆಲ್ಲಾ ನೆರೆಯಿಂದ ನೊಂದವರಿಗೆ ಸರ್ಕಾರಿ ಮಂದಿಯಿಂದಾದ ಅನ್ಯಾಯವೇ ಕಾರಣ. ಈಗ ನೊಂದವರಿಗಾಗಿ ಪರಿಹಾರ ಸಾಮಗ್ರಿ ಎಲ್ಲೆಲ್ಲಿಂದಲೋ ಹರಿದುಬರುತ್ತಿದೆ. ಅವೆಲ್ಲ ಸರಿಯಾಗಿ ಹಂಚಿಕೆಯಾಗುತ್ತವೆಂದು ಹೇಳಲಾಗದು. ಇದು ಹಿಂದಿನ ಅನುಭವ. ಆಧಾರ್, ರೇಷನ್ ಕಾರ್ಡ್‍ನಂಥ ದಾಖಲೆಗಳನ್ನೇ ನೆರೆಯಲ್ಲಿ ಕಳಕೊಂಡವರನ್ನು ಕಳ್ಳರಂತೆ ಅಧಿಕಾರಿಗಳು ನೋಡುವ ಸಾಧ್ಯತೆಯೇ ಹೆಚ್ಚು. ಹಿಂದೆಲ್ಲ ಪ್ರವಾಹ ಪೀಡಿತರಿಗೆ ಪರಿಹಾರದ ಚೆಕ್ ಕೊಡುವಾಗ ಪರ್ಸೆಂಟೇಜ್ ಕೇಳಿದ್ದೂ ಇದೆ. ಸಂತ್ರಸ್ತರೊಂದಿಗೆ ಗೌರವಯುತವಾಗಿ, ಮಾನವೀಯವಾಗಿ ನಡೆದುಕೊಳ್ಳುವ ಪಾಠ ಅಧಿಕಾರಿ ವರ್ಗಕ್ಕೆ ಆಡಳಿತಗಾರರು ಕಲಿಸಬೇಕಾಗಿದೆ. ಪ್ರವಾಹಪೀಡಿತರ ಮನೆ ಮುಳುಗಿರಬಹುದು, ಮಾನ ಮುಳುಗಿಲ್ಲ ಎಂಬ ಎಚ್ಚರಿಕೆ ಅಧಿಕಾರಿ ಗಣಕ್ಕೆ ಇರಬೇಕು!!

ಉತ್ತರ ಕನ್ನಡದಲ್ಲಷ್ಟೇ ಅಲ್ಲ, ಇಡೀ ರಾಜ್ಯದಲ್ಲಾಗಿರುವ ಪ್ರವಾಹ ಪ್ರಕೋಪದ ಗಂಡಾಂತರ ಆಪರೇಷನ್ ಕಮಲದ ಅಡ್ಡ ಪರಿಣಾಮ ಎಂದರೂ ತಪ್ಪಾಗಲಿಕ್ಕಿಲ್ಲ. ಎರಡು ತಿಂಗಳ ಹಿಂದೆಯೇ ಅಧಿಕಾರಿಗಳ ಸಭೆ ಸಡೆಸಿ ಪ್ರವಾಹ, ಅತಿವೃಷ್ಟಿ ಸಮಸ್ಯೆ ಎದುರಿಸುವ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಆದರೆ ಈ ಅವಧಿಯಲ್ಲಿ ಬಿಜೆಪಿಗರು ಸರ್ಕಾರ ಉರುಳಿಸುವ ಚಟಕ್ಕೆ ಬಿದ್ದರೆ, ಸಿಎಂ ಆಗಿದ್ದ ಕುಮ್ಮಿ ಅಧಿಕಾರ ಉಳಿಸಿಕೊಳ್ಳುವ ತೆವಲಿಗೆ ಬಿದ್ದರು. ಹೀಗಾಗಿ ಅಧಿಕಾರಿಗಳು ಲಂಗು-ಲಗಾಮಿಲ್ಲದೆ ಹಾಯಾಗಿ ಉಳಿದುಬಿಟ್ಟರು. ಇಂಥ ಗತಿಗೇಡಿ ಸಂದರ್ಭದಲ್ಲಿ ಅಧಿಕಾರಿಗಳಿಗೆ ಪ್ರವಾಹ ಪ್ರಕೋಪ, ಮಳೆ ಅನಾಹುತದ ಬಗ್ಗೆ ತಲೆಕೆಡಿಸಿಕೊಳ್ಳಲು ಸಾಧ್ಯವಾ?
ಹೀಗಾಗಿ ರಾಜ್ಯ ಮುಳುಗಿದೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...