Homeಮುಖಪುಟಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಸಾವಿತ್ರಿಬಾಯಿಯವರು 184 ವರ್ಷಗಳ ಹಿಂದೆ ದಮನಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣವನ್ನು ಕೊಟ್ಟಂತಹ ಮೊದಲ ಶಿಕ್ಷಕಿ.

- Advertisement -
- Advertisement -

19ನೇ ಶತಮಾನದಲ್ಲಿ ಶಿಕ್ಷಣದಲ್ಲಿ ಕ್ರಾಂತಿಯನ್ನು ತಂದು, ಆಧುನಿಕ ಶಿಕ್ಷಣದ ತಾಯಿ, ಮೊದಲ ಮಹಿಳಾ ಶಿಕ್ಷಕಿ ಎಂದು ಕರೆಸಿಕೊಂಡಿರುವವರು ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆಯವರು. ಇವರಿಗೆ ಗೌರವ ಸಲ್ಲಿಸುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ ಪ್ರತಿವರ್ಷ ಜನವರಿ 3 ರಂದು ‘ಸಾವಿತ್ರಿ ಉತ್ಸವ’ ಆಚರಿಸಲಿದೆ ಎಂದು ಘೋಷಿಸಿದೆ.

ಜನವರಿ 3 ರಂದು ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಇನ್ನು ಮುಂದೆ ಸಾವಿತ್ರಿ ಉತ್ಸವ ಆಚರಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.

’ಉತ್ಸವದ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಸಾವಿತ್ರಿಬಾಯಿ ಫುಲೆ ಅವರ ಸಮಾಜ ಸುಧಾರಣೆ ಕಾರ್ಯಗಳ ಬಗ್ಗೆ ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳು ನಡೆಯಲಿವೆ’ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಡಿ.14 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಿರುವ ದೆಹಲಿಯ ಹೋರಾಟನಿರತ ರೈತರು

1831ರ ಜನವರಿ 3 ರಂದು ಮಹಾರಾಷ್ಟ್ರದ ಸತಾರ ಜಿಲ್ಲೆಯ ನೈಗಾಂನ್‌ನಲ್ಲಿ ಹುಟ್ಟಿದ ಸಾವಿತ್ರಿಬಾಯಿಯವರು 184 ವರ್ಷಗಳ ಹಿಂದೆಯೇ ದಮನಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣವನ್ನು ಕೊಟ್ಟಂತಹ ಮೊದಲ ಶಿಕ್ಷಕಿ. ಒಂಬತ್ತನೇ ವರ್ಷದಲ್ಲಿ ಮದುವೆಯಾದ ಸಾವಿತ್ರಿಬಾಯಿಯವರು ಮುಂದೆ ಆಧುನಿಕ ಫೆಮಿನಿಸಂ ಚಳವಳಿಯ ತಾಯಿಯೆಂದು ಗುರುತಿಸಲ್ಪಡುತ್ತಾರೆ. ಪತಿ ಜ್ಯೋತಿಬಾ ಫುಲೆ ಅವರೊಂದಿಗೆ ಮಹಿಳಾ ಸಬಲೀಕರಣದಲ್ಲಿ, ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಮಹಿಳೆಯರ ಹಕ್ಕುಗಳಿಗಾಗಿ ನಿರಂತರವಾಗಿ ಚಳವಳಿಗಳನ್ನು ಸಂಘಟಿಸಿದ ಸಾವಿತ್ರಿಬಾಯಿಯವರು 1848ರಲ್ಲಿ ಪುಣೆಯ ನಾರಾಯಣಪೇಟೆಯ ಬಿಂದೇವಾಡದಲ್ಲಿ ಪತಿ ಜ್ಯೋತಿಬಾರೊಂದಿಗೆ ಕೈಜೋಡಿಸಿ ಮೊದಲ ಬಾರಿಗೆ ಬಾಲಕಿಯರ ಶಾಲೆಯನ್ನು ಪ್ರಾರಂಭಿಸಿದರು.

ಲಿಂಗ ಮತ್ತು ಜಾತಿ ಆಧಾರದಲ್ಲಿ ಸಮಾಜದಲ್ಲಿ ನಡೆಯುತ್ತಿದ್ದ ತಾರತಮ್ಯವನ್ನು ನಿರ್ಮೂಲನೆ ಮಾಡಲು  ಹೋರಾಟ ನಡೆಸಿದರು. 1897ರಲ್ಲಿ ಪ್ಲೇಗ್‌ಪೀಡಿತ ರೋಗಿಗಳ ಸೇವೆಯಲ್ಲಿ ತೊಡಗಿದ್ದಾಗ ಸ್ವತಃ ತಾವೇ ಆ ಕಾಯಿಲೆಯ ಸೋಂಕಿಗೆ ಬಲಿಯಾಗಿ ತೀರಿಕೊಂಡರು.


ಇದನ್ನೂ ಓದಿ: ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...