Homeಕರ್ನಾಟಕಕನ್ನಡ ವಿರೋಧಿ ಪರಿಷ್ಕರಿಸಿರುವ ಪಠ್ಯಗಳು ಬೇಡವೇ ಬೇಡ: ಕರವೇ ನಾರಾಯಣಗೌಡ

ಕನ್ನಡ ವಿರೋಧಿ ಪರಿಷ್ಕರಿಸಿರುವ ಪಠ್ಯಗಳು ಬೇಡವೇ ಬೇಡ: ಕರವೇ ನಾರಾಯಣಗೌಡ

- Advertisement -
- Advertisement -

ಕನ್ನಡ ವಿರೋಧಿಯು ಪರಿಷ್ಕರಣೆ ಮಾಡಿರುವ ಪಠ್ಯದಲ್ಲಿ‌ ನೂರೆಂಟು ಹುಳುಕುಗಳಿವೆ. ಅವುಗಳನ್ನು ಕನ್ನಡದ ಮಕ್ಕಳು ಓದುವ ಅವಶ್ಯಕತೆ ಇಲ್ಲ. ಹಾಗಾಗಿ ಹಳೇ ಪಠ್ಯಗಳನ್ನೆ ಮಕ್ಕಳಿಗೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ನಾರಾಯಣಗೌಡ ಒತ್ತಾಯಿಸಿದ್ದಾರೆ.

ಸರ್ಕಾರ ಕೆಲವು ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡುವ ಭರವಸೆ ನೀಡಿದೆ. ಆದರೆ ಇಡೀ ಪರಿಷ್ಕರಣೆಯೇ ವಿಕೃತವಾಗಿದೆ. ಕನ್ನಡ ಬಾವುಟವಿದ್ದ ಚಿತ್ರವನ್ನು ತೆಗೆಯಲಾಗಿದೆ, ಕುವೆಂಪು, ದೇವನೂರು ಅವರ ಭಾವಚಿತ್ರಗಳನ್ನು ಕುತ್ಸಿತ ಮನಸ್ಥಿತಿಯಿಂದ ತೆಗೆಯಲಾಗಿದೆ. ಕನ್ನಡ ರಾಜ್ಯೋತ್ಸವದ ಪಾಠವನ್ನೇ ಕಿತ್ತುಹಾಕಲಾಗಿದೆ ಎಂದು ಅವರು ದೂರಿದ್ದಾರೆ.

ಕನ್ನಡ ನೆಲದ ವೀರರಾಣಿ ಅಬ್ಬಕ್ಕನ ಚರಿತ್ರೆಯನ್ನು ತೆಗೆದು ಹಾಕಲಾಗಿದೆ. ಕನಕದಾಸರು, ಪುರಂದರ ದಾಸರು, ಶಿಶುನಾಳ ಶರೀಫರ ಮತ್ತು ಇತರ ಭಕ್ತಪಂಥದ ಮಹಾನುಭಾವರ ಪರಿಚಯವಿದ್ದ ಲೇಖನ ತೆಗೆಯಲಾಗಿದೆ. ಬಸವಣ್ಣನವರ ಚರಿತ್ರೆ ವಿರೂಪಗೊಳಿಸಲಾಗಿದೆ, ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಬಳಸಿದ್ದ ಸಂವಿಧಾನಶಿಲ್ಪಿ ಎಂಬ ಪದವನ್ನು ಕಿತ್ತುಹಾಕಲಾಗಿದೆ. ಇಂತಹ ಪಠ್ಯಗಳನ್ನು ನಮ್ಮ ಮಕ್ಕಳು ಓದಬೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಆಡಿಸು ನೋಡು ಬೀಳಿಸಿ ನೋಡು ಎಂಬ ಚಿ.ಉದಯಶಂಕರ್ ಅವರ ಕವಿತೆಯನ್ನು ಬಳಸಿ, ಆರ್.ಎನ್.ಜಯಗೋಪಾಲ್ ಅವರ ಹೆಸರನ್ನು ಬಳಸಲಾಗಿದೆ. ಪರಿಷ್ಕರಣಾ ಸಮಿತಿಯವರ ಸ್ನೇಹಿತರೆಂಬ ಕಾರಣಕ್ಕೆ ವಿರೂಪಗೊಂಡ ಕೃತಿಚೌರ್ಯದ ಪದ್ಯ ಬಳಸಲಾಗಿದೆ. ಪಿ.ಲಂಕೇಶ್, ಸಾ.ರಾ.ಅಬೂಬಕರ್ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ನಾಡಿನ ಪ್ರಖ್ಯಾತ ಸಾಹಿತಿಗಳು, ಕವಿಗಳ ಲೇಖನ, ಪದ್ಯಗಳನ್ನು ಯಾವ ಕಾರಣವನ್ನೂ ಒದಗಿಸದೆ ಕಿತ್ತುಹಾಕಲಾಗಿದೆ. ಕನ್ನಡಿಗರಿಗೆ, ಕನ್ನಡ ಸಂಸ್ಕೃತಿಗೆ ಯಾವ ಸಂಬಂಧವೂ ಇಲ್ಲದ ಲೇಖಕರಿಗೆ ಮಣೆ ಹಾಕಲಾಗಿದೆ. ಕನ್ನಡಿಗರ ಇತಿಹಾಸವನ್ನು ಕುಬ್ಜಗೊಳಿಸುವ ಪ್ರಯತ್ನ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟೆಲ್ಲ ಇದ್ದ ಮೇಲೆ, ಈ ಪರಿಷ್ಕರಣೆಗಳನ್ನು ಇಟ್ಟುಕೊಳ್ಳುವುದರಲ್ಲಿ ಯಾವ ಅರ್ಥವೂ ಇಲ್ಲ. ಎಷ್ಟು ತೇಪೆ ಹಾಕಿದರೂ ಅದರಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ತೇಪೆ ಕೆಲಸ ಕೈಬಿಟ್ಟು ಇಡಿಯಾಗಿ ಪರಿಷ್ಕರಣೆಯನ್ನು ಸರ್ಕಾರ ತಿರಸ್ಕರಿಸಬೇಕು. ತಡಮಾಡದೇ ಈ ವರ್ಷ ವಿದ್ಯಾರ್ಥಿಗಳಿಗೆ ಹಳೆಯ ಪಠ್ಯವನ್ನೇ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪಿಯುಸಿ ಪಠ್ಯ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...