Homeಕರ್ನಾಟಕಸಂಸ್ಕೃತ ವಿವಿ ಬೇಡ, ಮಾಗಡಿಯಾದ್ಯಂತ ಪ್ರಚಾರಾಂದೋಲನಕ್ಕೆ ಕೆವಿಎಸ್‌ ನಿರ್ಧಾರ

ಸಂಸ್ಕೃತ ವಿವಿ ಬೇಡ, ಮಾಗಡಿಯಾದ್ಯಂತ ಪ್ರಚಾರಾಂದೋಲನಕ್ಕೆ ಕೆವಿಎಸ್‌ ನಿರ್ಧಾರ

ಸಂಸ್ಕೃತ ಸತ್ತ ಭಾಷೆ ಮಾತ್ರವಲ್ಲ, ಅದು ಕನ್ನಡದ ಕತ್ತು ಹಿಸುಕುತ್ತಿರುವ ಭಾಷೆಯಾಗಿದೆ - ಹರ್ಷಕುಮಾರ್ ಕುಗ್ವೆ

- Advertisement -
- Advertisement -

ಸಂಸ್ಕೃತ ಭಾಷೆ ಯಾವುದೇ ಪ್ರದೇಶದಲ್ಲಿಯೂ ಬಳಕೆಯಲ್ಲಿಲ್ಲದ ಭಾಷೆ. ಆ ಭಾಷೆಗೂ ಈಗಾಗಲೇ 16 ವಿವಿಗಳು ಇವೆ. ಇದೀಗ ಮತ್ತೊಂದು ಸಂಸ್ಕೃತ ವಿವಿಯ ಅಗತ್ಯವಿಲ್ಲ. ಬದಲಾಗಿ ಕನ್ನಡ ವಿವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಒತ್ತಾಯಿಸಿದೆ. ಸಂಸ್ಕೃತ ವಿವಿ ಯಾಕೆ ಬೇಡ ಎಂದು ಮಾಗಡಿ ತಾಲ್ಲೂಕಿನಾದ್ಯಂತ ಪ್ರಚಾರಾಂದೋಲನ ಮಾಡಿ, ಜನರಿಗೆ ಈ ಬಗ್ಗೆ ಅರಿವು ಮೂಡಿಸಲು ಕೆವಿಎಸ್ ನಿರ್ಧರಿಸಿದೆ.

ಕ್ಲಬ್‌ ಹೌಸ್‌ನಲ್ಲಿ ‘ಸಂಸ್ಕೃತ ವಿವಿ ಯಾಕೆ ಬೇಡ?’ ಎಂಬ ವಿಷಯದ ಬಗ್ಗೆ ಕೆವಿಎಸ್‌ ಚರ್ಚೆಯನ್ನು ಆಯೋಜಿಸಿತ್ತು. ಈ ವೇಳೆ, ಮಾತನಾಡಿದ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ, ಕೆವಿಎಸ್‌ ಸಂಘಟನೆಯು ಕರವೇ ಜೊತೆಗೂಡಿ ಪ್ರಚಾರಾಂದೋಲನ ನಡೆಸುವುದಾಗಿ ಘೋಷಿಸಿದ್ದಾರೆ.

ಚರ್ಚೆಯಲ್ಲಿ ಮಾತನಾಡಿದ ಕರವೇ ಸಮಾಜಿಕ ಜಾಲತಾಣ ಸಂಚಾಲಕ ಸಜಿತ್, “ದೇಶದಲ್ಲಿ ಒಟ್ಟು 16 ಸಂಸ್ಕೃತ ವಿವಿಗಳಿವೆ. ಕರ್ನಾಟಕದಲ್ಲಿ 35 ಸಂಸ್ಕೃತ ಶಾಲೆ ಮತ್ತು ಅಧ್ಯಯನ ಕೇಂದ್ರಗಳಿವೆ. ಆದರೆ ಇಡೀ ಭಾರತದಲ್ಲಿ ಕೇವಲ 1 ಕನ್ನಡ ವಿವಿ ಇದೆ. ನಮ್ಮ ಹಂಪಿಯ ಕನ್ನಡ ವಿವಿ ಗಾಗಿ ಆರು ಕೋಟಿ ಅನುದಾನ ಕೊಡಲು ಹೊರಾಟ ಮಾಡಲಾಗಿತ್ತು. ಆದರೆ ಅದನ್ನು ಕೊಡದ ಸರ್ಕಾರ ಸಂಸ್ಕೃತ ವಿವಿ ಗೆ ಪೋಷಣೆ ಮಾಡುತ್ತಿರುವುದು ಕನ್ನಡ ಕೊಲ್ಲುವ ಹುನ್ನಾರ” ಎಂದು ಸರ್ಕಾರದ ವಿರುದ್ದ ಕಿಡಿಕಾರಿದರು.

ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕೆ ತಕರಾರು ಎತ್ತಿದವರು ಮುಂದೆ ಶಾಲೆಯಲ್ಲಿ ಕನ್ನಡ ಕಡ್ಡಾಯಕ್ಕೂ ಕೂಡ ತಕರಾರು ಎತ್ತುತ್ತಾರೆ. ಕನ್ನಡದ ಭಾಷೆಯಲ್ಲಿ ಸಂಸ್ಕೃತವನ್ನು ತುರುಕುವ ಕೆಲಸ ನಡೆಯುತ್ತಿದೆ. ಕನ್ನಡದ ಮೇಲೆ ಸಂಸ್ಕೃತದ ಹೇರಿಕೆ ಮಾಡುತ್ತಾ ದೇವನಾಗರಿಗೆ ಉತ್ತೇಜನ ನೀಡುತ್ತಿದೆ. ಕನ್ನಡವನ್ನು ಉಪಯೋಗದ ಭಾಷೆಯನ್ನಾಗಿ ಮಾಡಬೇಕು ಅದರಿಂದ ಕನ್ನಡವನ್ನು ಗಟ್ಟಿಯಾಗಿಸಬಹುದು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ವೇಳೆ ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್ ಮಾತನಾಡಿ, “ಕನ್ನಡ ಮತ್ತು ಕನ್ನಡ ವಿವಿಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಯಾವುದೇ ತರಹದ ಅನುದಾನ ಸಿಗುತ್ತಿಲ್ಲ. ವಿವಿಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಸರ್ಕಾರದ ನಿರ್ಧಾರದ ವಿರುದ್ದ ಸಂಸ್ಕೃತಪರ ಸಂಘಟನೆಗಳು ಕೋರ್ಟಿಗೆ ಹೋಗುತ್ತಿವೆ. ಕನ್ನಡ ಕಡ್ಡಾಯವಲ್ಲ ಎಂದು ಕೊರ್ಟಿಗೆ ಹೋಗಿರುವ ಸಂಘಟನೆಗಳೊಂದಿಗೆ ಬಿಜೆಪಿ-ಆರ್‌ಎಸ್‌ಎಸ್‌ ಸೇರಿಕೊಂಡಿವೆ. ಮಾತೃಭಾಷೆ ಕಲಿಕೆಯ ವಿಷಯದಲ್ಲಿ ಸರಕಾರ ಹಿಂಜರಿಯುತ್ತಿದೆ. ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕೆ ತಕರಾರು ಎತ್ತಿದವರು ಮುಂದೆ ಶಾಲೆಯಲ್ಲಿ ಕನ್ನಡ ಕಡ್ಡಾಯಕ್ಕೆ ವಿರುದ್ದ ಬರಬಹುದು. ಪ್ರಾದೇಶಿಕ ಭಾಷೆಗಳನ್ನು ಕೊಲ್ಲುವ ಪ್ರಯತ್ನ ನಡೆಯುತ್ತಿದ್ದು, ಅದರ ಪ್ರಯೋಗ ನಡೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾನಪದ ವಿವಿ, ಹಂಪಿ ಕನ್ನಡ ವಿವಿ, ಮೈಸೂರು ವಿವಿ ಗಳಲ್ಲಿನ ಸಿಬ್ಬಂದಿ ಮತ್ತು ಉಪನ್ಯಾಸಕರಿಗೆ ಸಂಬಳ ಕೊಡಲು ಸಹ ದುಡ್ಡಿಲ್ಲ. ಆದರೆ, ಭಾರತ ಸರಕಾರ 1200 ಕೋಟಿ ಸಂಸ್ಕೃತಕ್ಕೆ ಕೊಟ್ಟಿದೆ. ಇದರಿಂದ ಜನಸಾಮಾನ್ಯರಿಗೆ ಏನಾದರೂ ಉಪಯೋಗ ಆಗಿದೆಯೇ ಎಂದು ಅವರು ಪ್ರಶ್ನಿಸಿದರು.

ಚರ್ಚೆಯಲ್ಲಿ ಮಾತನಾಡಿದ ಕರವೇ ರಾಜ್ಯ ಮುಖಂಡರಾದ ದಿನೇಶ್ ಕುಮಾರ್ ದಿನೂ, “ಆಡಳಿತ ಭಾಷೆ ಒಂದೇ ಇರಬೇಕು ಎಂದು ಹೇಳುವ ಸಂವಿಧಾನದ 343 ರಿಂದ 351ರ ವಿಧಿಯವರೆಗೂ ಇವೆಲ್ಲವೂ ಕನ್ನಡ/ಪ್ರಾದೆಶಿಕ ಬಾಷೆಗಳನ್ನು ಕೊಲ್ಲುವ ವಿಧಿಗಳಾಗಿವೆ. ಕನ್ನಡಿಗರಿಗೆ ತಲೆಮೇಲೆ ಸಂಸ್ಕೃತವನ್ನು ಕೂರಿಸುವುದು ಮೊದಲಿನಿಂದ ನಡೆದುಬಂದಿದೆ. ‘ಒಂದು ದೇಶ, ಒಂದು ಭಾಷೆ’ ಎಂಬುದು ನಾಗಪುರದ ಆರ್ ಎಸ್ ಎಸ್ ಅಜೆಂಡ. ಅದನ್ನು ಜಾರಿಗೆ ತರಲು ಸಂಸ್ಕೃತ ವಿವಿಯ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಮುಂದಾಗಿದೆ” ಎಂದು ಆರೋಪಿಸಿದ್ದಾರೆ.

ಜನರ ನುಡಿಯನ್ನ ಕೊಂದರೆ ಜನರನ್ನೇ ಕೊಂದಂತೆ. ದೆಹಲಿಯಲ್ಲಿ ನಡೆದ ರೈತ ಹೊರಾಟದ ಮಾದರಿಯಲ್ಲಿ ಕನ್ನಡಕ್ಕಾಗಿ ಕರವೇಯಿಂದ ಹೋರಾಟ ನಡೆಯಲ್ಲಿದೆ ಎಂದು ನಾರಾಯಣ ಗೌಡ ರವರು ಕರೆ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ ಕುಗ್ವೆ, ಕಳೆದ 40-50 ವರ್ಷಗಳಿಂದ ಸಂಸ್ಕೃತ ವಿವಿಗಳು ಕೆಲಸ ಮಾಡಿವೆ. ಆದರೆ, ಅದರಿಂದ ಯಾವುದಾದರೂ ಮಹತ್ವದ ಕೆಲಸವಾಗಿದೆಯೇ? ಕೇವಲ ಭಾಷಾ ಅಭಿಮಾನದಿಂದ ಸಂಸ್ಕೃತ ವಿವಿ ಸ್ಥಾಪಿಸುತ್ತಿರುವುದೇಕೆ? ಸಂಸ್ಕೃತದಿಂದ ಜನರಿಗೆ ಜ್ಞಾನವನ್ನು ಹಂಚಿಕೆ ಮಾಡುವ ಉದ್ದೆಶವಲ್ಲ ಇದರ ಹಿಂದೆ ಒಂದು ಅಜೆಂಡವಿದೆ ಎಂದು ಆರೋಪಿಸಿದರು.

ಈಗಾಗಲೇ ಚಾಲ್ತಿಯಲಿಲ್ಲದ ಬಾಷೆಯನ್ನು ಇಸ್ರೇಲ್‌ನಲ್ಲಿ ಹಿಬ್ರೋ ರಾಷ್ಟ್ರಭಾಷೆಯನ್ನಾಗಿ ಮಾಡಿದೆ. ಅದೇ ರೀತಿಯಲ್ಲಿ ಸಂಘ ಪರಿವಾರ ಸಂಸ್ಕೃತ ವನ್ನು ರಾಷ್ಟ್ರಭಾಷೆ ಮಾಡುವ ಹುನ್ನಾರ ನಡೆಸುತ್ತಿದೆ. ಸಂಸ್ಕೃತ ಸತ್ತ ಭಾಷೆ ಮಾತ್ರವಲ್ಲ, ಅದು ಕನ್ನಡದ ಕತ್ತು ಹಿಸುಕುತ್ತಿರುವ ಭಾಷೆಯಾಗಿದೆ. ಈ ಬಗ್ಗೆ ಮಾಗಡಿಯ ಜನರಿಗೆ ಮತ್ತು ರಾಜಕಾರಣಿಗಳಿಗೆ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ’ಸಂಸ್ಕೃತ’ ಪುನರುತ್ಥಾನ ಮತ್ತು ನೆಲದ ’ನುಡಿ’ಗಳ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಂಸ್ಕೃತ ವಿ.ವಿ.ಸ್ಥಾಪನೆಯಿಂದ ಕನ್ನಡ ಜನತೆಗೆ ಯಾವ ಪ್ರಯೋಜನವೂ ಇಲ್ಲ. ಆದ್ದರಿಂದ ಅದು ಬೇಡ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....