Homeಕರ್ನಾಟಕಸಂಸ್ಕೃತ ವಿವಿ ಬೇಡ, ಮಾಗಡಿಯಾದ್ಯಂತ ಪ್ರಚಾರಾಂದೋಲನಕ್ಕೆ ಕೆವಿಎಸ್‌ ನಿರ್ಧಾರ

ಸಂಸ್ಕೃತ ವಿವಿ ಬೇಡ, ಮಾಗಡಿಯಾದ್ಯಂತ ಪ್ರಚಾರಾಂದೋಲನಕ್ಕೆ ಕೆವಿಎಸ್‌ ನಿರ್ಧಾರ

ಸಂಸ್ಕೃತ ಸತ್ತ ಭಾಷೆ ಮಾತ್ರವಲ್ಲ, ಅದು ಕನ್ನಡದ ಕತ್ತು ಹಿಸುಕುತ್ತಿರುವ ಭಾಷೆಯಾಗಿದೆ - ಹರ್ಷಕುಮಾರ್ ಕುಗ್ವೆ

- Advertisement -
- Advertisement -

ಸಂಸ್ಕೃತ ಭಾಷೆ ಯಾವುದೇ ಪ್ರದೇಶದಲ್ಲಿಯೂ ಬಳಕೆಯಲ್ಲಿಲ್ಲದ ಭಾಷೆ. ಆ ಭಾಷೆಗೂ ಈಗಾಗಲೇ 16 ವಿವಿಗಳು ಇವೆ. ಇದೀಗ ಮತ್ತೊಂದು ಸಂಸ್ಕೃತ ವಿವಿಯ ಅಗತ್ಯವಿಲ್ಲ. ಬದಲಾಗಿ ಕನ್ನಡ ವಿವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಒತ್ತಾಯಿಸಿದೆ. ಸಂಸ್ಕೃತ ವಿವಿ ಯಾಕೆ ಬೇಡ ಎಂದು ಮಾಗಡಿ ತಾಲ್ಲೂಕಿನಾದ್ಯಂತ ಪ್ರಚಾರಾಂದೋಲನ ಮಾಡಿ, ಜನರಿಗೆ ಈ ಬಗ್ಗೆ ಅರಿವು ಮೂಡಿಸಲು ಕೆವಿಎಸ್ ನಿರ್ಧರಿಸಿದೆ.

ಕ್ಲಬ್‌ ಹೌಸ್‌ನಲ್ಲಿ ‘ಸಂಸ್ಕೃತ ವಿವಿ ಯಾಕೆ ಬೇಡ?’ ಎಂಬ ವಿಷಯದ ಬಗ್ಗೆ ಕೆವಿಎಸ್‌ ಚರ್ಚೆಯನ್ನು ಆಯೋಜಿಸಿತ್ತು. ಈ ವೇಳೆ, ಮಾತನಾಡಿದ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ, ಕೆವಿಎಸ್‌ ಸಂಘಟನೆಯು ಕರವೇ ಜೊತೆಗೂಡಿ ಪ್ರಚಾರಾಂದೋಲನ ನಡೆಸುವುದಾಗಿ ಘೋಷಿಸಿದ್ದಾರೆ.

ಚರ್ಚೆಯಲ್ಲಿ ಮಾತನಾಡಿದ ಕರವೇ ಸಮಾಜಿಕ ಜಾಲತಾಣ ಸಂಚಾಲಕ ಸಜಿತ್, “ದೇಶದಲ್ಲಿ ಒಟ್ಟು 16 ಸಂಸ್ಕೃತ ವಿವಿಗಳಿವೆ. ಕರ್ನಾಟಕದಲ್ಲಿ 35 ಸಂಸ್ಕೃತ ಶಾಲೆ ಮತ್ತು ಅಧ್ಯಯನ ಕೇಂದ್ರಗಳಿವೆ. ಆದರೆ ಇಡೀ ಭಾರತದಲ್ಲಿ ಕೇವಲ 1 ಕನ್ನಡ ವಿವಿ ಇದೆ. ನಮ್ಮ ಹಂಪಿಯ ಕನ್ನಡ ವಿವಿ ಗಾಗಿ ಆರು ಕೋಟಿ ಅನುದಾನ ಕೊಡಲು ಹೊರಾಟ ಮಾಡಲಾಗಿತ್ತು. ಆದರೆ ಅದನ್ನು ಕೊಡದ ಸರ್ಕಾರ ಸಂಸ್ಕೃತ ವಿವಿ ಗೆ ಪೋಷಣೆ ಮಾಡುತ್ತಿರುವುದು ಕನ್ನಡ ಕೊಲ್ಲುವ ಹುನ್ನಾರ” ಎಂದು ಸರ್ಕಾರದ ವಿರುದ್ದ ಕಿಡಿಕಾರಿದರು.

ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕೆ ತಕರಾರು ಎತ್ತಿದವರು ಮುಂದೆ ಶಾಲೆಯಲ್ಲಿ ಕನ್ನಡ ಕಡ್ಡಾಯಕ್ಕೂ ಕೂಡ ತಕರಾರು ಎತ್ತುತ್ತಾರೆ. ಕನ್ನಡದ ಭಾಷೆಯಲ್ಲಿ ಸಂಸ್ಕೃತವನ್ನು ತುರುಕುವ ಕೆಲಸ ನಡೆಯುತ್ತಿದೆ. ಕನ್ನಡದ ಮೇಲೆ ಸಂಸ್ಕೃತದ ಹೇರಿಕೆ ಮಾಡುತ್ತಾ ದೇವನಾಗರಿಗೆ ಉತ್ತೇಜನ ನೀಡುತ್ತಿದೆ. ಕನ್ನಡವನ್ನು ಉಪಯೋಗದ ಭಾಷೆಯನ್ನಾಗಿ ಮಾಡಬೇಕು ಅದರಿಂದ ಕನ್ನಡವನ್ನು ಗಟ್ಟಿಯಾಗಿಸಬಹುದು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ವೇಳೆ ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್ ಮಾತನಾಡಿ, “ಕನ್ನಡ ಮತ್ತು ಕನ್ನಡ ವಿವಿಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಯಾವುದೇ ತರಹದ ಅನುದಾನ ಸಿಗುತ್ತಿಲ್ಲ. ವಿವಿಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಸರ್ಕಾರದ ನಿರ್ಧಾರದ ವಿರುದ್ದ ಸಂಸ್ಕೃತಪರ ಸಂಘಟನೆಗಳು ಕೋರ್ಟಿಗೆ ಹೋಗುತ್ತಿವೆ. ಕನ್ನಡ ಕಡ್ಡಾಯವಲ್ಲ ಎಂದು ಕೊರ್ಟಿಗೆ ಹೋಗಿರುವ ಸಂಘಟನೆಗಳೊಂದಿಗೆ ಬಿಜೆಪಿ-ಆರ್‌ಎಸ್‌ಎಸ್‌ ಸೇರಿಕೊಂಡಿವೆ. ಮಾತೃಭಾಷೆ ಕಲಿಕೆಯ ವಿಷಯದಲ್ಲಿ ಸರಕಾರ ಹಿಂಜರಿಯುತ್ತಿದೆ. ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕೆ ತಕರಾರು ಎತ್ತಿದವರು ಮುಂದೆ ಶಾಲೆಯಲ್ಲಿ ಕನ್ನಡ ಕಡ್ಡಾಯಕ್ಕೆ ವಿರುದ್ದ ಬರಬಹುದು. ಪ್ರಾದೇಶಿಕ ಭಾಷೆಗಳನ್ನು ಕೊಲ್ಲುವ ಪ್ರಯತ್ನ ನಡೆಯುತ್ತಿದ್ದು, ಅದರ ಪ್ರಯೋಗ ನಡೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾನಪದ ವಿವಿ, ಹಂಪಿ ಕನ್ನಡ ವಿವಿ, ಮೈಸೂರು ವಿವಿ ಗಳಲ್ಲಿನ ಸಿಬ್ಬಂದಿ ಮತ್ತು ಉಪನ್ಯಾಸಕರಿಗೆ ಸಂಬಳ ಕೊಡಲು ಸಹ ದುಡ್ಡಿಲ್ಲ. ಆದರೆ, ಭಾರತ ಸರಕಾರ 1200 ಕೋಟಿ ಸಂಸ್ಕೃತಕ್ಕೆ ಕೊಟ್ಟಿದೆ. ಇದರಿಂದ ಜನಸಾಮಾನ್ಯರಿಗೆ ಏನಾದರೂ ಉಪಯೋಗ ಆಗಿದೆಯೇ ಎಂದು ಅವರು ಪ್ರಶ್ನಿಸಿದರು.

ಚರ್ಚೆಯಲ್ಲಿ ಮಾತನಾಡಿದ ಕರವೇ ರಾಜ್ಯ ಮುಖಂಡರಾದ ದಿನೇಶ್ ಕುಮಾರ್ ದಿನೂ, “ಆಡಳಿತ ಭಾಷೆ ಒಂದೇ ಇರಬೇಕು ಎಂದು ಹೇಳುವ ಸಂವಿಧಾನದ 343 ರಿಂದ 351ರ ವಿಧಿಯವರೆಗೂ ಇವೆಲ್ಲವೂ ಕನ್ನಡ/ಪ್ರಾದೆಶಿಕ ಬಾಷೆಗಳನ್ನು ಕೊಲ್ಲುವ ವಿಧಿಗಳಾಗಿವೆ. ಕನ್ನಡಿಗರಿಗೆ ತಲೆಮೇಲೆ ಸಂಸ್ಕೃತವನ್ನು ಕೂರಿಸುವುದು ಮೊದಲಿನಿಂದ ನಡೆದುಬಂದಿದೆ. ‘ಒಂದು ದೇಶ, ಒಂದು ಭಾಷೆ’ ಎಂಬುದು ನಾಗಪುರದ ಆರ್ ಎಸ್ ಎಸ್ ಅಜೆಂಡ. ಅದನ್ನು ಜಾರಿಗೆ ತರಲು ಸಂಸ್ಕೃತ ವಿವಿಯ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಮುಂದಾಗಿದೆ” ಎಂದು ಆರೋಪಿಸಿದ್ದಾರೆ.

ಜನರ ನುಡಿಯನ್ನ ಕೊಂದರೆ ಜನರನ್ನೇ ಕೊಂದಂತೆ. ದೆಹಲಿಯಲ್ಲಿ ನಡೆದ ರೈತ ಹೊರಾಟದ ಮಾದರಿಯಲ್ಲಿ ಕನ್ನಡಕ್ಕಾಗಿ ಕರವೇಯಿಂದ ಹೋರಾಟ ನಡೆಯಲ್ಲಿದೆ ಎಂದು ನಾರಾಯಣ ಗೌಡ ರವರು ಕರೆ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ ಕುಗ್ವೆ, ಕಳೆದ 40-50 ವರ್ಷಗಳಿಂದ ಸಂಸ್ಕೃತ ವಿವಿಗಳು ಕೆಲಸ ಮಾಡಿವೆ. ಆದರೆ, ಅದರಿಂದ ಯಾವುದಾದರೂ ಮಹತ್ವದ ಕೆಲಸವಾಗಿದೆಯೇ? ಕೇವಲ ಭಾಷಾ ಅಭಿಮಾನದಿಂದ ಸಂಸ್ಕೃತ ವಿವಿ ಸ್ಥಾಪಿಸುತ್ತಿರುವುದೇಕೆ? ಸಂಸ್ಕೃತದಿಂದ ಜನರಿಗೆ ಜ್ಞಾನವನ್ನು ಹಂಚಿಕೆ ಮಾಡುವ ಉದ್ದೆಶವಲ್ಲ ಇದರ ಹಿಂದೆ ಒಂದು ಅಜೆಂಡವಿದೆ ಎಂದು ಆರೋಪಿಸಿದರು.

ಈಗಾಗಲೇ ಚಾಲ್ತಿಯಲಿಲ್ಲದ ಬಾಷೆಯನ್ನು ಇಸ್ರೇಲ್‌ನಲ್ಲಿ ಹಿಬ್ರೋ ರಾಷ್ಟ್ರಭಾಷೆಯನ್ನಾಗಿ ಮಾಡಿದೆ. ಅದೇ ರೀತಿಯಲ್ಲಿ ಸಂಘ ಪರಿವಾರ ಸಂಸ್ಕೃತ ವನ್ನು ರಾಷ್ಟ್ರಭಾಷೆ ಮಾಡುವ ಹುನ್ನಾರ ನಡೆಸುತ್ತಿದೆ. ಸಂಸ್ಕೃತ ಸತ್ತ ಭಾಷೆ ಮಾತ್ರವಲ್ಲ, ಅದು ಕನ್ನಡದ ಕತ್ತು ಹಿಸುಕುತ್ತಿರುವ ಭಾಷೆಯಾಗಿದೆ. ಈ ಬಗ್ಗೆ ಮಾಗಡಿಯ ಜನರಿಗೆ ಮತ್ತು ರಾಜಕಾರಣಿಗಳಿಗೆ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ’ಸಂಸ್ಕೃತ’ ಪುನರುತ್ಥಾನ ಮತ್ತು ನೆಲದ ’ನುಡಿ’ಗಳ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಂಸ್ಕೃತ ವಿ.ವಿ.ಸ್ಥಾಪನೆಯಿಂದ ಕನ್ನಡ ಜನತೆಗೆ ಯಾವ ಪ್ರಯೋಜನವೂ ಇಲ್ಲ. ಆದ್ದರಿಂದ ಅದು ಬೇಡ.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...