Homeಕರ್ನಾಟಕಸಂಸ್ಕೃತ ವಿವಿ ಬೇಡ, ಮಾಗಡಿಯಾದ್ಯಂತ ಪ್ರಚಾರಾಂದೋಲನಕ್ಕೆ ಕೆವಿಎಸ್‌ ನಿರ್ಧಾರ

ಸಂಸ್ಕೃತ ವಿವಿ ಬೇಡ, ಮಾಗಡಿಯಾದ್ಯಂತ ಪ್ರಚಾರಾಂದೋಲನಕ್ಕೆ ಕೆವಿಎಸ್‌ ನಿರ್ಧಾರ

ಸಂಸ್ಕೃತ ಸತ್ತ ಭಾಷೆ ಮಾತ್ರವಲ್ಲ, ಅದು ಕನ್ನಡದ ಕತ್ತು ಹಿಸುಕುತ್ತಿರುವ ಭಾಷೆಯಾಗಿದೆ - ಹರ್ಷಕುಮಾರ್ ಕುಗ್ವೆ

- Advertisement -
- Advertisement -

ಸಂಸ್ಕೃತ ಭಾಷೆ ಯಾವುದೇ ಪ್ರದೇಶದಲ್ಲಿಯೂ ಬಳಕೆಯಲ್ಲಿಲ್ಲದ ಭಾಷೆ. ಆ ಭಾಷೆಗೂ ಈಗಾಗಲೇ 16 ವಿವಿಗಳು ಇವೆ. ಇದೀಗ ಮತ್ತೊಂದು ಸಂಸ್ಕೃತ ವಿವಿಯ ಅಗತ್ಯವಿಲ್ಲ. ಬದಲಾಗಿ ಕನ್ನಡ ವಿವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಒತ್ತಾಯಿಸಿದೆ. ಸಂಸ್ಕೃತ ವಿವಿ ಯಾಕೆ ಬೇಡ ಎಂದು ಮಾಗಡಿ ತಾಲ್ಲೂಕಿನಾದ್ಯಂತ ಪ್ರಚಾರಾಂದೋಲನ ಮಾಡಿ, ಜನರಿಗೆ ಈ ಬಗ್ಗೆ ಅರಿವು ಮೂಡಿಸಲು ಕೆವಿಎಸ್ ನಿರ್ಧರಿಸಿದೆ.

ಕ್ಲಬ್‌ ಹೌಸ್‌ನಲ್ಲಿ ‘ಸಂಸ್ಕೃತ ವಿವಿ ಯಾಕೆ ಬೇಡ?’ ಎಂಬ ವಿಷಯದ ಬಗ್ಗೆ ಕೆವಿಎಸ್‌ ಚರ್ಚೆಯನ್ನು ಆಯೋಜಿಸಿತ್ತು. ಈ ವೇಳೆ, ಮಾತನಾಡಿದ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ, ಕೆವಿಎಸ್‌ ಸಂಘಟನೆಯು ಕರವೇ ಜೊತೆಗೂಡಿ ಪ್ರಚಾರಾಂದೋಲನ ನಡೆಸುವುದಾಗಿ ಘೋಷಿಸಿದ್ದಾರೆ.

ಚರ್ಚೆಯಲ್ಲಿ ಮಾತನಾಡಿದ ಕರವೇ ಸಮಾಜಿಕ ಜಾಲತಾಣ ಸಂಚಾಲಕ ಸಜಿತ್, “ದೇಶದಲ್ಲಿ ಒಟ್ಟು 16 ಸಂಸ್ಕೃತ ವಿವಿಗಳಿವೆ. ಕರ್ನಾಟಕದಲ್ಲಿ 35 ಸಂಸ್ಕೃತ ಶಾಲೆ ಮತ್ತು ಅಧ್ಯಯನ ಕೇಂದ್ರಗಳಿವೆ. ಆದರೆ ಇಡೀ ಭಾರತದಲ್ಲಿ ಕೇವಲ 1 ಕನ್ನಡ ವಿವಿ ಇದೆ. ನಮ್ಮ ಹಂಪಿಯ ಕನ್ನಡ ವಿವಿ ಗಾಗಿ ಆರು ಕೋಟಿ ಅನುದಾನ ಕೊಡಲು ಹೊರಾಟ ಮಾಡಲಾಗಿತ್ತು. ಆದರೆ ಅದನ್ನು ಕೊಡದ ಸರ್ಕಾರ ಸಂಸ್ಕೃತ ವಿವಿ ಗೆ ಪೋಷಣೆ ಮಾಡುತ್ತಿರುವುದು ಕನ್ನಡ ಕೊಲ್ಲುವ ಹುನ್ನಾರ” ಎಂದು ಸರ್ಕಾರದ ವಿರುದ್ದ ಕಿಡಿಕಾರಿದರು.

ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕೆ ತಕರಾರು ಎತ್ತಿದವರು ಮುಂದೆ ಶಾಲೆಯಲ್ಲಿ ಕನ್ನಡ ಕಡ್ಡಾಯಕ್ಕೂ ಕೂಡ ತಕರಾರು ಎತ್ತುತ್ತಾರೆ. ಕನ್ನಡದ ಭಾಷೆಯಲ್ಲಿ ಸಂಸ್ಕೃತವನ್ನು ತುರುಕುವ ಕೆಲಸ ನಡೆಯುತ್ತಿದೆ. ಕನ್ನಡದ ಮೇಲೆ ಸಂಸ್ಕೃತದ ಹೇರಿಕೆ ಮಾಡುತ್ತಾ ದೇವನಾಗರಿಗೆ ಉತ್ತೇಜನ ನೀಡುತ್ತಿದೆ. ಕನ್ನಡವನ್ನು ಉಪಯೋಗದ ಭಾಷೆಯನ್ನಾಗಿ ಮಾಡಬೇಕು ಅದರಿಂದ ಕನ್ನಡವನ್ನು ಗಟ್ಟಿಯಾಗಿಸಬಹುದು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ವೇಳೆ ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್ ಮಾತನಾಡಿ, “ಕನ್ನಡ ಮತ್ತು ಕನ್ನಡ ವಿವಿಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಯಾವುದೇ ತರಹದ ಅನುದಾನ ಸಿಗುತ್ತಿಲ್ಲ. ವಿವಿಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಸರ್ಕಾರದ ನಿರ್ಧಾರದ ವಿರುದ್ದ ಸಂಸ್ಕೃತಪರ ಸಂಘಟನೆಗಳು ಕೋರ್ಟಿಗೆ ಹೋಗುತ್ತಿವೆ. ಕನ್ನಡ ಕಡ್ಡಾಯವಲ್ಲ ಎಂದು ಕೊರ್ಟಿಗೆ ಹೋಗಿರುವ ಸಂಘಟನೆಗಳೊಂದಿಗೆ ಬಿಜೆಪಿ-ಆರ್‌ಎಸ್‌ಎಸ್‌ ಸೇರಿಕೊಂಡಿವೆ. ಮಾತೃಭಾಷೆ ಕಲಿಕೆಯ ವಿಷಯದಲ್ಲಿ ಸರಕಾರ ಹಿಂಜರಿಯುತ್ತಿದೆ. ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕೆ ತಕರಾರು ಎತ್ತಿದವರು ಮುಂದೆ ಶಾಲೆಯಲ್ಲಿ ಕನ್ನಡ ಕಡ್ಡಾಯಕ್ಕೆ ವಿರುದ್ದ ಬರಬಹುದು. ಪ್ರಾದೇಶಿಕ ಭಾಷೆಗಳನ್ನು ಕೊಲ್ಲುವ ಪ್ರಯತ್ನ ನಡೆಯುತ್ತಿದ್ದು, ಅದರ ಪ್ರಯೋಗ ನಡೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾನಪದ ವಿವಿ, ಹಂಪಿ ಕನ್ನಡ ವಿವಿ, ಮೈಸೂರು ವಿವಿ ಗಳಲ್ಲಿನ ಸಿಬ್ಬಂದಿ ಮತ್ತು ಉಪನ್ಯಾಸಕರಿಗೆ ಸಂಬಳ ಕೊಡಲು ಸಹ ದುಡ್ಡಿಲ್ಲ. ಆದರೆ, ಭಾರತ ಸರಕಾರ 1200 ಕೋಟಿ ಸಂಸ್ಕೃತಕ್ಕೆ ಕೊಟ್ಟಿದೆ. ಇದರಿಂದ ಜನಸಾಮಾನ್ಯರಿಗೆ ಏನಾದರೂ ಉಪಯೋಗ ಆಗಿದೆಯೇ ಎಂದು ಅವರು ಪ್ರಶ್ನಿಸಿದರು.

ಚರ್ಚೆಯಲ್ಲಿ ಮಾತನಾಡಿದ ಕರವೇ ರಾಜ್ಯ ಮುಖಂಡರಾದ ದಿನೇಶ್ ಕುಮಾರ್ ದಿನೂ, “ಆಡಳಿತ ಭಾಷೆ ಒಂದೇ ಇರಬೇಕು ಎಂದು ಹೇಳುವ ಸಂವಿಧಾನದ 343 ರಿಂದ 351ರ ವಿಧಿಯವರೆಗೂ ಇವೆಲ್ಲವೂ ಕನ್ನಡ/ಪ್ರಾದೆಶಿಕ ಬಾಷೆಗಳನ್ನು ಕೊಲ್ಲುವ ವಿಧಿಗಳಾಗಿವೆ. ಕನ್ನಡಿಗರಿಗೆ ತಲೆಮೇಲೆ ಸಂಸ್ಕೃತವನ್ನು ಕೂರಿಸುವುದು ಮೊದಲಿನಿಂದ ನಡೆದುಬಂದಿದೆ. ‘ಒಂದು ದೇಶ, ಒಂದು ಭಾಷೆ’ ಎಂಬುದು ನಾಗಪುರದ ಆರ್ ಎಸ್ ಎಸ್ ಅಜೆಂಡ. ಅದನ್ನು ಜಾರಿಗೆ ತರಲು ಸಂಸ್ಕೃತ ವಿವಿಯ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಮುಂದಾಗಿದೆ” ಎಂದು ಆರೋಪಿಸಿದ್ದಾರೆ.

ಜನರ ನುಡಿಯನ್ನ ಕೊಂದರೆ ಜನರನ್ನೇ ಕೊಂದಂತೆ. ದೆಹಲಿಯಲ್ಲಿ ನಡೆದ ರೈತ ಹೊರಾಟದ ಮಾದರಿಯಲ್ಲಿ ಕನ್ನಡಕ್ಕಾಗಿ ಕರವೇಯಿಂದ ಹೋರಾಟ ನಡೆಯಲ್ಲಿದೆ ಎಂದು ನಾರಾಯಣ ಗೌಡ ರವರು ಕರೆ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ ಕುಗ್ವೆ, ಕಳೆದ 40-50 ವರ್ಷಗಳಿಂದ ಸಂಸ್ಕೃತ ವಿವಿಗಳು ಕೆಲಸ ಮಾಡಿವೆ. ಆದರೆ, ಅದರಿಂದ ಯಾವುದಾದರೂ ಮಹತ್ವದ ಕೆಲಸವಾಗಿದೆಯೇ? ಕೇವಲ ಭಾಷಾ ಅಭಿಮಾನದಿಂದ ಸಂಸ್ಕೃತ ವಿವಿ ಸ್ಥಾಪಿಸುತ್ತಿರುವುದೇಕೆ? ಸಂಸ್ಕೃತದಿಂದ ಜನರಿಗೆ ಜ್ಞಾನವನ್ನು ಹಂಚಿಕೆ ಮಾಡುವ ಉದ್ದೆಶವಲ್ಲ ಇದರ ಹಿಂದೆ ಒಂದು ಅಜೆಂಡವಿದೆ ಎಂದು ಆರೋಪಿಸಿದರು.

ಈಗಾಗಲೇ ಚಾಲ್ತಿಯಲಿಲ್ಲದ ಬಾಷೆಯನ್ನು ಇಸ್ರೇಲ್‌ನಲ್ಲಿ ಹಿಬ್ರೋ ರಾಷ್ಟ್ರಭಾಷೆಯನ್ನಾಗಿ ಮಾಡಿದೆ. ಅದೇ ರೀತಿಯಲ್ಲಿ ಸಂಘ ಪರಿವಾರ ಸಂಸ್ಕೃತ ವನ್ನು ರಾಷ್ಟ್ರಭಾಷೆ ಮಾಡುವ ಹುನ್ನಾರ ನಡೆಸುತ್ತಿದೆ. ಸಂಸ್ಕೃತ ಸತ್ತ ಭಾಷೆ ಮಾತ್ರವಲ್ಲ, ಅದು ಕನ್ನಡದ ಕತ್ತು ಹಿಸುಕುತ್ತಿರುವ ಭಾಷೆಯಾಗಿದೆ. ಈ ಬಗ್ಗೆ ಮಾಗಡಿಯ ಜನರಿಗೆ ಮತ್ತು ರಾಜಕಾರಣಿಗಳಿಗೆ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ’ಸಂಸ್ಕೃತ’ ಪುನರುತ್ಥಾನ ಮತ್ತು ನೆಲದ ’ನುಡಿ’ಗಳ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಂಸ್ಕೃತ ವಿ.ವಿ.ಸ್ಥಾಪನೆಯಿಂದ ಕನ್ನಡ ಜನತೆಗೆ ಯಾವ ಪ್ರಯೋಜನವೂ ಇಲ್ಲ. ಆದ್ದರಿಂದ ಅದು ಬೇಡ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...