Homeಕರ್ನಾಟಕಸಂಸ್ಕೃತ ವಿವಿ ಬೇಡ, ಮಾಗಡಿಯಾದ್ಯಂತ ಪ್ರಚಾರಾಂದೋಲನಕ್ಕೆ ಕೆವಿಎಸ್‌ ನಿರ್ಧಾರ

ಸಂಸ್ಕೃತ ವಿವಿ ಬೇಡ, ಮಾಗಡಿಯಾದ್ಯಂತ ಪ್ರಚಾರಾಂದೋಲನಕ್ಕೆ ಕೆವಿಎಸ್‌ ನಿರ್ಧಾರ

ಸಂಸ್ಕೃತ ಸತ್ತ ಭಾಷೆ ಮಾತ್ರವಲ್ಲ, ಅದು ಕನ್ನಡದ ಕತ್ತು ಹಿಸುಕುತ್ತಿರುವ ಭಾಷೆಯಾಗಿದೆ - ಹರ್ಷಕುಮಾರ್ ಕುಗ್ವೆ

- Advertisement -
- Advertisement -

ಸಂಸ್ಕೃತ ಭಾಷೆ ಯಾವುದೇ ಪ್ರದೇಶದಲ್ಲಿಯೂ ಬಳಕೆಯಲ್ಲಿಲ್ಲದ ಭಾಷೆ. ಆ ಭಾಷೆಗೂ ಈಗಾಗಲೇ 16 ವಿವಿಗಳು ಇವೆ. ಇದೀಗ ಮತ್ತೊಂದು ಸಂಸ್ಕೃತ ವಿವಿಯ ಅಗತ್ಯವಿಲ್ಲ. ಬದಲಾಗಿ ಕನ್ನಡ ವಿವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಒತ್ತಾಯಿಸಿದೆ. ಸಂಸ್ಕೃತ ವಿವಿ ಯಾಕೆ ಬೇಡ ಎಂದು ಮಾಗಡಿ ತಾಲ್ಲೂಕಿನಾದ್ಯಂತ ಪ್ರಚಾರಾಂದೋಲನ ಮಾಡಿ, ಜನರಿಗೆ ಈ ಬಗ್ಗೆ ಅರಿವು ಮೂಡಿಸಲು ಕೆವಿಎಸ್ ನಿರ್ಧರಿಸಿದೆ.

ಕ್ಲಬ್‌ ಹೌಸ್‌ನಲ್ಲಿ ‘ಸಂಸ್ಕೃತ ವಿವಿ ಯಾಕೆ ಬೇಡ?’ ಎಂಬ ವಿಷಯದ ಬಗ್ಗೆ ಕೆವಿಎಸ್‌ ಚರ್ಚೆಯನ್ನು ಆಯೋಜಿಸಿತ್ತು. ಈ ವೇಳೆ, ಮಾತನಾಡಿದ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ, ಕೆವಿಎಸ್‌ ಸಂಘಟನೆಯು ಕರವೇ ಜೊತೆಗೂಡಿ ಪ್ರಚಾರಾಂದೋಲನ ನಡೆಸುವುದಾಗಿ ಘೋಷಿಸಿದ್ದಾರೆ.

ಚರ್ಚೆಯಲ್ಲಿ ಮಾತನಾಡಿದ ಕರವೇ ಸಮಾಜಿಕ ಜಾಲತಾಣ ಸಂಚಾಲಕ ಸಜಿತ್, “ದೇಶದಲ್ಲಿ ಒಟ್ಟು 16 ಸಂಸ್ಕೃತ ವಿವಿಗಳಿವೆ. ಕರ್ನಾಟಕದಲ್ಲಿ 35 ಸಂಸ್ಕೃತ ಶಾಲೆ ಮತ್ತು ಅಧ್ಯಯನ ಕೇಂದ್ರಗಳಿವೆ. ಆದರೆ ಇಡೀ ಭಾರತದಲ್ಲಿ ಕೇವಲ 1 ಕನ್ನಡ ವಿವಿ ಇದೆ. ನಮ್ಮ ಹಂಪಿಯ ಕನ್ನಡ ವಿವಿ ಗಾಗಿ ಆರು ಕೋಟಿ ಅನುದಾನ ಕೊಡಲು ಹೊರಾಟ ಮಾಡಲಾಗಿತ್ತು. ಆದರೆ ಅದನ್ನು ಕೊಡದ ಸರ್ಕಾರ ಸಂಸ್ಕೃತ ವಿವಿ ಗೆ ಪೋಷಣೆ ಮಾಡುತ್ತಿರುವುದು ಕನ್ನಡ ಕೊಲ್ಲುವ ಹುನ್ನಾರ” ಎಂದು ಸರ್ಕಾರದ ವಿರುದ್ದ ಕಿಡಿಕಾರಿದರು.

ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕೆ ತಕರಾರು ಎತ್ತಿದವರು ಮುಂದೆ ಶಾಲೆಯಲ್ಲಿ ಕನ್ನಡ ಕಡ್ಡಾಯಕ್ಕೂ ಕೂಡ ತಕರಾರು ಎತ್ತುತ್ತಾರೆ. ಕನ್ನಡದ ಭಾಷೆಯಲ್ಲಿ ಸಂಸ್ಕೃತವನ್ನು ತುರುಕುವ ಕೆಲಸ ನಡೆಯುತ್ತಿದೆ. ಕನ್ನಡದ ಮೇಲೆ ಸಂಸ್ಕೃತದ ಹೇರಿಕೆ ಮಾಡುತ್ತಾ ದೇವನಾಗರಿಗೆ ಉತ್ತೇಜನ ನೀಡುತ್ತಿದೆ. ಕನ್ನಡವನ್ನು ಉಪಯೋಗದ ಭಾಷೆಯನ್ನಾಗಿ ಮಾಡಬೇಕು ಅದರಿಂದ ಕನ್ನಡವನ್ನು ಗಟ್ಟಿಯಾಗಿಸಬಹುದು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ವೇಳೆ ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್ ಮಾತನಾಡಿ, “ಕನ್ನಡ ಮತ್ತು ಕನ್ನಡ ವಿವಿಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಯಾವುದೇ ತರಹದ ಅನುದಾನ ಸಿಗುತ್ತಿಲ್ಲ. ವಿವಿಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಸರ್ಕಾರದ ನಿರ್ಧಾರದ ವಿರುದ್ದ ಸಂಸ್ಕೃತಪರ ಸಂಘಟನೆಗಳು ಕೋರ್ಟಿಗೆ ಹೋಗುತ್ತಿವೆ. ಕನ್ನಡ ಕಡ್ಡಾಯವಲ್ಲ ಎಂದು ಕೊರ್ಟಿಗೆ ಹೋಗಿರುವ ಸಂಘಟನೆಗಳೊಂದಿಗೆ ಬಿಜೆಪಿ-ಆರ್‌ಎಸ್‌ಎಸ್‌ ಸೇರಿಕೊಂಡಿವೆ. ಮಾತೃಭಾಷೆ ಕಲಿಕೆಯ ವಿಷಯದಲ್ಲಿ ಸರಕಾರ ಹಿಂಜರಿಯುತ್ತಿದೆ. ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕೆ ತಕರಾರು ಎತ್ತಿದವರು ಮುಂದೆ ಶಾಲೆಯಲ್ಲಿ ಕನ್ನಡ ಕಡ್ಡಾಯಕ್ಕೆ ವಿರುದ್ದ ಬರಬಹುದು. ಪ್ರಾದೇಶಿಕ ಭಾಷೆಗಳನ್ನು ಕೊಲ್ಲುವ ಪ್ರಯತ್ನ ನಡೆಯುತ್ತಿದ್ದು, ಅದರ ಪ್ರಯೋಗ ನಡೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾನಪದ ವಿವಿ, ಹಂಪಿ ಕನ್ನಡ ವಿವಿ, ಮೈಸೂರು ವಿವಿ ಗಳಲ್ಲಿನ ಸಿಬ್ಬಂದಿ ಮತ್ತು ಉಪನ್ಯಾಸಕರಿಗೆ ಸಂಬಳ ಕೊಡಲು ಸಹ ದುಡ್ಡಿಲ್ಲ. ಆದರೆ, ಭಾರತ ಸರಕಾರ 1200 ಕೋಟಿ ಸಂಸ್ಕೃತಕ್ಕೆ ಕೊಟ್ಟಿದೆ. ಇದರಿಂದ ಜನಸಾಮಾನ್ಯರಿಗೆ ಏನಾದರೂ ಉಪಯೋಗ ಆಗಿದೆಯೇ ಎಂದು ಅವರು ಪ್ರಶ್ನಿಸಿದರು.

ಚರ್ಚೆಯಲ್ಲಿ ಮಾತನಾಡಿದ ಕರವೇ ರಾಜ್ಯ ಮುಖಂಡರಾದ ದಿನೇಶ್ ಕುಮಾರ್ ದಿನೂ, “ಆಡಳಿತ ಭಾಷೆ ಒಂದೇ ಇರಬೇಕು ಎಂದು ಹೇಳುವ ಸಂವಿಧಾನದ 343 ರಿಂದ 351ರ ವಿಧಿಯವರೆಗೂ ಇವೆಲ್ಲವೂ ಕನ್ನಡ/ಪ್ರಾದೆಶಿಕ ಬಾಷೆಗಳನ್ನು ಕೊಲ್ಲುವ ವಿಧಿಗಳಾಗಿವೆ. ಕನ್ನಡಿಗರಿಗೆ ತಲೆಮೇಲೆ ಸಂಸ್ಕೃತವನ್ನು ಕೂರಿಸುವುದು ಮೊದಲಿನಿಂದ ನಡೆದುಬಂದಿದೆ. ‘ಒಂದು ದೇಶ, ಒಂದು ಭಾಷೆ’ ಎಂಬುದು ನಾಗಪುರದ ಆರ್ ಎಸ್ ಎಸ್ ಅಜೆಂಡ. ಅದನ್ನು ಜಾರಿಗೆ ತರಲು ಸಂಸ್ಕೃತ ವಿವಿಯ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಮುಂದಾಗಿದೆ” ಎಂದು ಆರೋಪಿಸಿದ್ದಾರೆ.

ಜನರ ನುಡಿಯನ್ನ ಕೊಂದರೆ ಜನರನ್ನೇ ಕೊಂದಂತೆ. ದೆಹಲಿಯಲ್ಲಿ ನಡೆದ ರೈತ ಹೊರಾಟದ ಮಾದರಿಯಲ್ಲಿ ಕನ್ನಡಕ್ಕಾಗಿ ಕರವೇಯಿಂದ ಹೋರಾಟ ನಡೆಯಲ್ಲಿದೆ ಎಂದು ನಾರಾಯಣ ಗೌಡ ರವರು ಕರೆ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ ಕುಗ್ವೆ, ಕಳೆದ 40-50 ವರ್ಷಗಳಿಂದ ಸಂಸ್ಕೃತ ವಿವಿಗಳು ಕೆಲಸ ಮಾಡಿವೆ. ಆದರೆ, ಅದರಿಂದ ಯಾವುದಾದರೂ ಮಹತ್ವದ ಕೆಲಸವಾಗಿದೆಯೇ? ಕೇವಲ ಭಾಷಾ ಅಭಿಮಾನದಿಂದ ಸಂಸ್ಕೃತ ವಿವಿ ಸ್ಥಾಪಿಸುತ್ತಿರುವುದೇಕೆ? ಸಂಸ್ಕೃತದಿಂದ ಜನರಿಗೆ ಜ್ಞಾನವನ್ನು ಹಂಚಿಕೆ ಮಾಡುವ ಉದ್ದೆಶವಲ್ಲ ಇದರ ಹಿಂದೆ ಒಂದು ಅಜೆಂಡವಿದೆ ಎಂದು ಆರೋಪಿಸಿದರು.

ಈಗಾಗಲೇ ಚಾಲ್ತಿಯಲಿಲ್ಲದ ಬಾಷೆಯನ್ನು ಇಸ್ರೇಲ್‌ನಲ್ಲಿ ಹಿಬ್ರೋ ರಾಷ್ಟ್ರಭಾಷೆಯನ್ನಾಗಿ ಮಾಡಿದೆ. ಅದೇ ರೀತಿಯಲ್ಲಿ ಸಂಘ ಪರಿವಾರ ಸಂಸ್ಕೃತ ವನ್ನು ರಾಷ್ಟ್ರಭಾಷೆ ಮಾಡುವ ಹುನ್ನಾರ ನಡೆಸುತ್ತಿದೆ. ಸಂಸ್ಕೃತ ಸತ್ತ ಭಾಷೆ ಮಾತ್ರವಲ್ಲ, ಅದು ಕನ್ನಡದ ಕತ್ತು ಹಿಸುಕುತ್ತಿರುವ ಭಾಷೆಯಾಗಿದೆ. ಈ ಬಗ್ಗೆ ಮಾಗಡಿಯ ಜನರಿಗೆ ಮತ್ತು ರಾಜಕಾರಣಿಗಳಿಗೆ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ’ಸಂಸ್ಕೃತ’ ಪುನರುತ್ಥಾನ ಮತ್ತು ನೆಲದ ’ನುಡಿ’ಗಳ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಂಸ್ಕೃತ ವಿ.ವಿ.ಸ್ಥಾಪನೆಯಿಂದ ಕನ್ನಡ ಜನತೆಗೆ ಯಾವ ಪ್ರಯೋಜನವೂ ಇಲ್ಲ. ಆದ್ದರಿಂದ ಅದು ಬೇಡ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...