Homeಕರ್ನಾಟಕಸಂಸ್ಕೃತ ವಿವಿ ಬೇಡ, ಮಾಗಡಿಯಾದ್ಯಂತ ಪ್ರಚಾರಾಂದೋಲನಕ್ಕೆ ಕೆವಿಎಸ್‌ ನಿರ್ಧಾರ

ಸಂಸ್ಕೃತ ವಿವಿ ಬೇಡ, ಮಾಗಡಿಯಾದ್ಯಂತ ಪ್ರಚಾರಾಂದೋಲನಕ್ಕೆ ಕೆವಿಎಸ್‌ ನಿರ್ಧಾರ

ಸಂಸ್ಕೃತ ಸತ್ತ ಭಾಷೆ ಮಾತ್ರವಲ್ಲ, ಅದು ಕನ್ನಡದ ಕತ್ತು ಹಿಸುಕುತ್ತಿರುವ ಭಾಷೆಯಾಗಿದೆ - ಹರ್ಷಕುಮಾರ್ ಕುಗ್ವೆ

- Advertisement -
- Advertisement -

ಸಂಸ್ಕೃತ ಭಾಷೆ ಯಾವುದೇ ಪ್ರದೇಶದಲ್ಲಿಯೂ ಬಳಕೆಯಲ್ಲಿಲ್ಲದ ಭಾಷೆ. ಆ ಭಾಷೆಗೂ ಈಗಾಗಲೇ 16 ವಿವಿಗಳು ಇವೆ. ಇದೀಗ ಮತ್ತೊಂದು ಸಂಸ್ಕೃತ ವಿವಿಯ ಅಗತ್ಯವಿಲ್ಲ. ಬದಲಾಗಿ ಕನ್ನಡ ವಿವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಒತ್ತಾಯಿಸಿದೆ. ಸಂಸ್ಕೃತ ವಿವಿ ಯಾಕೆ ಬೇಡ ಎಂದು ಮಾಗಡಿ ತಾಲ್ಲೂಕಿನಾದ್ಯಂತ ಪ್ರಚಾರಾಂದೋಲನ ಮಾಡಿ, ಜನರಿಗೆ ಈ ಬಗ್ಗೆ ಅರಿವು ಮೂಡಿಸಲು ಕೆವಿಎಸ್ ನಿರ್ಧರಿಸಿದೆ.

ಕ್ಲಬ್‌ ಹೌಸ್‌ನಲ್ಲಿ ‘ಸಂಸ್ಕೃತ ವಿವಿ ಯಾಕೆ ಬೇಡ?’ ಎಂಬ ವಿಷಯದ ಬಗ್ಗೆ ಕೆವಿಎಸ್‌ ಚರ್ಚೆಯನ್ನು ಆಯೋಜಿಸಿತ್ತು. ಈ ವೇಳೆ, ಮಾತನಾಡಿದ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ, ಕೆವಿಎಸ್‌ ಸಂಘಟನೆಯು ಕರವೇ ಜೊತೆಗೂಡಿ ಪ್ರಚಾರಾಂದೋಲನ ನಡೆಸುವುದಾಗಿ ಘೋಷಿಸಿದ್ದಾರೆ.

ಚರ್ಚೆಯಲ್ಲಿ ಮಾತನಾಡಿದ ಕರವೇ ಸಮಾಜಿಕ ಜಾಲತಾಣ ಸಂಚಾಲಕ ಸಜಿತ್, “ದೇಶದಲ್ಲಿ ಒಟ್ಟು 16 ಸಂಸ್ಕೃತ ವಿವಿಗಳಿವೆ. ಕರ್ನಾಟಕದಲ್ಲಿ 35 ಸಂಸ್ಕೃತ ಶಾಲೆ ಮತ್ತು ಅಧ್ಯಯನ ಕೇಂದ್ರಗಳಿವೆ. ಆದರೆ ಇಡೀ ಭಾರತದಲ್ಲಿ ಕೇವಲ 1 ಕನ್ನಡ ವಿವಿ ಇದೆ. ನಮ್ಮ ಹಂಪಿಯ ಕನ್ನಡ ವಿವಿ ಗಾಗಿ ಆರು ಕೋಟಿ ಅನುದಾನ ಕೊಡಲು ಹೊರಾಟ ಮಾಡಲಾಗಿತ್ತು. ಆದರೆ ಅದನ್ನು ಕೊಡದ ಸರ್ಕಾರ ಸಂಸ್ಕೃತ ವಿವಿ ಗೆ ಪೋಷಣೆ ಮಾಡುತ್ತಿರುವುದು ಕನ್ನಡ ಕೊಲ್ಲುವ ಹುನ್ನಾರ” ಎಂದು ಸರ್ಕಾರದ ವಿರುದ್ದ ಕಿಡಿಕಾರಿದರು.

ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕೆ ತಕರಾರು ಎತ್ತಿದವರು ಮುಂದೆ ಶಾಲೆಯಲ್ಲಿ ಕನ್ನಡ ಕಡ್ಡಾಯಕ್ಕೂ ಕೂಡ ತಕರಾರು ಎತ್ತುತ್ತಾರೆ. ಕನ್ನಡದ ಭಾಷೆಯಲ್ಲಿ ಸಂಸ್ಕೃತವನ್ನು ತುರುಕುವ ಕೆಲಸ ನಡೆಯುತ್ತಿದೆ. ಕನ್ನಡದ ಮೇಲೆ ಸಂಸ್ಕೃತದ ಹೇರಿಕೆ ಮಾಡುತ್ತಾ ದೇವನಾಗರಿಗೆ ಉತ್ತೇಜನ ನೀಡುತ್ತಿದೆ. ಕನ್ನಡವನ್ನು ಉಪಯೋಗದ ಭಾಷೆಯನ್ನಾಗಿ ಮಾಡಬೇಕು ಅದರಿಂದ ಕನ್ನಡವನ್ನು ಗಟ್ಟಿಯಾಗಿಸಬಹುದು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ವೇಳೆ ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್ ಮಾತನಾಡಿ, “ಕನ್ನಡ ಮತ್ತು ಕನ್ನಡ ವಿವಿಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಯಾವುದೇ ತರಹದ ಅನುದಾನ ಸಿಗುತ್ತಿಲ್ಲ. ವಿವಿಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಸರ್ಕಾರದ ನಿರ್ಧಾರದ ವಿರುದ್ದ ಸಂಸ್ಕೃತಪರ ಸಂಘಟನೆಗಳು ಕೋರ್ಟಿಗೆ ಹೋಗುತ್ತಿವೆ. ಕನ್ನಡ ಕಡ್ಡಾಯವಲ್ಲ ಎಂದು ಕೊರ್ಟಿಗೆ ಹೋಗಿರುವ ಸಂಘಟನೆಗಳೊಂದಿಗೆ ಬಿಜೆಪಿ-ಆರ್‌ಎಸ್‌ಎಸ್‌ ಸೇರಿಕೊಂಡಿವೆ. ಮಾತೃಭಾಷೆ ಕಲಿಕೆಯ ವಿಷಯದಲ್ಲಿ ಸರಕಾರ ಹಿಂಜರಿಯುತ್ತಿದೆ. ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕೆ ತಕರಾರು ಎತ್ತಿದವರು ಮುಂದೆ ಶಾಲೆಯಲ್ಲಿ ಕನ್ನಡ ಕಡ್ಡಾಯಕ್ಕೆ ವಿರುದ್ದ ಬರಬಹುದು. ಪ್ರಾದೇಶಿಕ ಭಾಷೆಗಳನ್ನು ಕೊಲ್ಲುವ ಪ್ರಯತ್ನ ನಡೆಯುತ್ತಿದ್ದು, ಅದರ ಪ್ರಯೋಗ ನಡೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾನಪದ ವಿವಿ, ಹಂಪಿ ಕನ್ನಡ ವಿವಿ, ಮೈಸೂರು ವಿವಿ ಗಳಲ್ಲಿನ ಸಿಬ್ಬಂದಿ ಮತ್ತು ಉಪನ್ಯಾಸಕರಿಗೆ ಸಂಬಳ ಕೊಡಲು ಸಹ ದುಡ್ಡಿಲ್ಲ. ಆದರೆ, ಭಾರತ ಸರಕಾರ 1200 ಕೋಟಿ ಸಂಸ್ಕೃತಕ್ಕೆ ಕೊಟ್ಟಿದೆ. ಇದರಿಂದ ಜನಸಾಮಾನ್ಯರಿಗೆ ಏನಾದರೂ ಉಪಯೋಗ ಆಗಿದೆಯೇ ಎಂದು ಅವರು ಪ್ರಶ್ನಿಸಿದರು.

ಚರ್ಚೆಯಲ್ಲಿ ಮಾತನಾಡಿದ ಕರವೇ ರಾಜ್ಯ ಮುಖಂಡರಾದ ದಿನೇಶ್ ಕುಮಾರ್ ದಿನೂ, “ಆಡಳಿತ ಭಾಷೆ ಒಂದೇ ಇರಬೇಕು ಎಂದು ಹೇಳುವ ಸಂವಿಧಾನದ 343 ರಿಂದ 351ರ ವಿಧಿಯವರೆಗೂ ಇವೆಲ್ಲವೂ ಕನ್ನಡ/ಪ್ರಾದೆಶಿಕ ಬಾಷೆಗಳನ್ನು ಕೊಲ್ಲುವ ವಿಧಿಗಳಾಗಿವೆ. ಕನ್ನಡಿಗರಿಗೆ ತಲೆಮೇಲೆ ಸಂಸ್ಕೃತವನ್ನು ಕೂರಿಸುವುದು ಮೊದಲಿನಿಂದ ನಡೆದುಬಂದಿದೆ. ‘ಒಂದು ದೇಶ, ಒಂದು ಭಾಷೆ’ ಎಂಬುದು ನಾಗಪುರದ ಆರ್ ಎಸ್ ಎಸ್ ಅಜೆಂಡ. ಅದನ್ನು ಜಾರಿಗೆ ತರಲು ಸಂಸ್ಕೃತ ವಿವಿಯ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಮುಂದಾಗಿದೆ” ಎಂದು ಆರೋಪಿಸಿದ್ದಾರೆ.

ಜನರ ನುಡಿಯನ್ನ ಕೊಂದರೆ ಜನರನ್ನೇ ಕೊಂದಂತೆ. ದೆಹಲಿಯಲ್ಲಿ ನಡೆದ ರೈತ ಹೊರಾಟದ ಮಾದರಿಯಲ್ಲಿ ಕನ್ನಡಕ್ಕಾಗಿ ಕರವೇಯಿಂದ ಹೋರಾಟ ನಡೆಯಲ್ಲಿದೆ ಎಂದು ನಾರಾಯಣ ಗೌಡ ರವರು ಕರೆ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ ಕುಗ್ವೆ, ಕಳೆದ 40-50 ವರ್ಷಗಳಿಂದ ಸಂಸ್ಕೃತ ವಿವಿಗಳು ಕೆಲಸ ಮಾಡಿವೆ. ಆದರೆ, ಅದರಿಂದ ಯಾವುದಾದರೂ ಮಹತ್ವದ ಕೆಲಸವಾಗಿದೆಯೇ? ಕೇವಲ ಭಾಷಾ ಅಭಿಮಾನದಿಂದ ಸಂಸ್ಕೃತ ವಿವಿ ಸ್ಥಾಪಿಸುತ್ತಿರುವುದೇಕೆ? ಸಂಸ್ಕೃತದಿಂದ ಜನರಿಗೆ ಜ್ಞಾನವನ್ನು ಹಂಚಿಕೆ ಮಾಡುವ ಉದ್ದೆಶವಲ್ಲ ಇದರ ಹಿಂದೆ ಒಂದು ಅಜೆಂಡವಿದೆ ಎಂದು ಆರೋಪಿಸಿದರು.

ಈಗಾಗಲೇ ಚಾಲ್ತಿಯಲಿಲ್ಲದ ಬಾಷೆಯನ್ನು ಇಸ್ರೇಲ್‌ನಲ್ಲಿ ಹಿಬ್ರೋ ರಾಷ್ಟ್ರಭಾಷೆಯನ್ನಾಗಿ ಮಾಡಿದೆ. ಅದೇ ರೀತಿಯಲ್ಲಿ ಸಂಘ ಪರಿವಾರ ಸಂಸ್ಕೃತ ವನ್ನು ರಾಷ್ಟ್ರಭಾಷೆ ಮಾಡುವ ಹುನ್ನಾರ ನಡೆಸುತ್ತಿದೆ. ಸಂಸ್ಕೃತ ಸತ್ತ ಭಾಷೆ ಮಾತ್ರವಲ್ಲ, ಅದು ಕನ್ನಡದ ಕತ್ತು ಹಿಸುಕುತ್ತಿರುವ ಭಾಷೆಯಾಗಿದೆ. ಈ ಬಗ್ಗೆ ಮಾಗಡಿಯ ಜನರಿಗೆ ಮತ್ತು ರಾಜಕಾರಣಿಗಳಿಗೆ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ’ಸಂಸ್ಕೃತ’ ಪುನರುತ್ಥಾನ ಮತ್ತು ನೆಲದ ’ನುಡಿ’ಗಳ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಂಸ್ಕೃತ ವಿ.ವಿ.ಸ್ಥಾಪನೆಯಿಂದ ಕನ್ನಡ ಜನತೆಗೆ ಯಾವ ಪ್ರಯೋಜನವೂ ಇಲ್ಲ. ಆದ್ದರಿಂದ ಅದು ಬೇಡ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....