Homeಚಳವಳಿಸಂಸ್ಕೃತ ವಿವಿಗೆ ದುಡ್ಡು ಸುರಿಯುವ ಬದಲು ಸರ್ಕಾರಿ ಶಾಲೆ ಉಳಿಸಿ: ಕನ್ನಡಿಗರ ಆಗ್ರಹ

ಸಂಸ್ಕೃತ ವಿವಿಗೆ ದುಡ್ಡು ಸುರಿಯುವ ಬದಲು ಸರ್ಕಾರಿ ಶಾಲೆ ಉಳಿಸಿ: ಕನ್ನಡಿಗರ ಆಗ್ರಹ

ಸಂಸ್ಕೃತ ವಿವಿಗೆ ಕೊಡಲು 359 ಕೋಟಿ ಹಣ, 100 ಎಕರೆ ಮೀಸಲು ಅರಣ್ಯ ಜಾಗ ಇದೆ. ಆದರೆ ಕನ್ನಡಿಗರ ಏಕೈಕ ವಿವಿಗೆ ಕೊಡಲು 2 ಕೋಟಿ ಹಣವಿಲ್ಲವೇ?

- Advertisement -
- Advertisement -

“ಮೊದಲು ಕುಸಿದು ಬೀಳುವ ಹಂತದಲ್ಲಿರುವ ಸರ್ಕಾರೀ ಶಾಲೆಗಳನ್ನು ಉಳಿಸಿ, ನಿಮ್ಮ ಯೋಗ್ಯತೆಗೆ ಅಷ್ಟು ಸಾಕು! ಸಂಸ್ಕೃತ ವಿವಿ ಬೇಡ” – ಇದು ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ ಟ್ವಿಟರ್ ಅಭಿಯಾನದಲ್ಲಿ ಕಂಡುಬಂದ ಟ್ವೀಟ್. ಸಂಸ್ಕೃತ ವಿವಿ ಸ್ಥಾಪನೆಯ ವಿರುದ್ಧ ಬಹುತೇಕ ಕನ್ನಡಿಗರು ತಮ್ಮ ಆಕ್ರೋಶ ಹೊರ ಹಾಕಿದ್ದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈಗಾಗಲೇ ಶೃಂಗೇರಿ ಬಳಿ ಒಕ್ಕೂಟ ಸರ್ಕಾರ ಸಂಸ್ಕೃತ ವಿವಿ ಸ್ಥಾಪಿಸಿದೆ. ಆದರೆ ಅಲ್ಲಿ ಶೇ.50 ರಷ್ಟು ದಾಖಲಾತಿ ಆಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಕರ್ನಾಟಕದಲ್ಲಿ ಎರಡನೇ ಸಂಸ್ಕೃತ ವಿವಿ ಏಕೆ? ದೇಶದಲ್ಲಿ ಒಟ್ಟು ಹದಿನಾರು ಸಂಸ್ಕೃತ ವಿಶ್ವವಿದ್ಯಾಲಯಗಳಿವೆ. ಆದರೆ ಸಂಸ್ಕೃತ ನುಡಿ ಆಡುವವರ ಸಂಖ್ಯೆ ಜಗತ್ತನಲ್ಲಿಯೇ ಕೇವಲ 24,000. ಇಷ್ಟು ಜನರ ನುಡಿಗೆ ಹದಿನಾರು ವಿಶ್ವವಿದ್ಯಾಲಯಗಳ ಅಗತ್ಯವಾದರೂ ಏನಿತ್ತು. ಆದರೆ ಇನ್ನೊಂದೆಡೆ ಏಳು ಕೋಟಿ ಜನರು ಮಾತನಾಡುವ ಕನ್ನಡ ನುಡಿಗೆಂದು ಇರುವುದು ಒಂದೇ ವಿಶ್ವವಿದ್ಯಾಲಯ. ಅದಕ್ಕೂ ಸರ್ಕಾರ ಸಮರ್ಪಕ ಅನುದಾನ ಕೊಡುತ್ತಿಲ್ಲ ಎಂದು ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಎಲ್ಲಾ ಹಂತದಲ್ಲೂ ಕನ್ನಡ ಕಲಿಕೆಯನ್ನು ಮೊಟಕುಗೊಳಿಸಿ, ಕನ್ನಡ ಮಾಧ್ಯಮದಲ್ಲಿ ಸಂಸ್ಕ್ರುತ ಪದಗಳನ್ನೇ ತುಂಬಿ, ಕನ್ನಡದ ಮಕ್ಕಳಿಗೆ ಕಲಿಕೆಯನ್ನು ಕಷ್ಟವಾಗಿಸಿ, ಕನ್ನಡದ ಕೆಲಸಗಳಿಗೆ ದುಡ್ಡು ಬಿಡುಗಡೆ ಮಾಡದೆ ಸಂಸ್ಕ್ರುತ ವಿವಿಗೆ ಕನ್ನಡಿಗರ ನೆಲ, ದುಡ್ಡು ದೋಚಲು ಮುಂದಾಗಿದ್ದಾರೆ. ಕನ್ನಡಿಗರು ಇದನ್ನು ಎದುರಿಸಿಯೇ ತೀರುತ್ತೇವೆ” ಎಂದು ಶ್ರುತಿ ಎಂ ಎಚ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಸಂಸ್ಕೃತ ವಿವಿಗೆ ಕೊಡಲು 359 ಕೋಟಿ ಹಣ, 100 ಎಕರೆ ಮೀಸಲು ಅರಣ್ಯ ಜಾಗ ಇದೆ. ಆದರೆ ಕನ್ನಡಿಗರ ಏಕೈಕ ವಿವಿಗೆ ಕೊಡಲು 2 ಕೋಟಿ ಹಣವಿಲ್ಲ ಎಂದು ಸಂಗೀತಾ ಶೆಟ್ಟಿ ಎಂಬುವವರು ಆಕ್ರೋಶ ಹೊರಹಾಕಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ನೂರು ಎಕರೆ ಅರಣ್ಯ ಪ್ರದೇಶವನ್ನೇ ಸಂಸ್ಕೃತ ವಿವಿಗೆ ಕೊಡಲಾಗಿದೆ. ಇರುವ ಸಂಸ್ಕೃತ ವಿಶ್ವವಿದ್ಯಾಲಯಗಳಲ್ಲಿ ಓದಲು ವಿದ್ಯಾರ್ಥಿಗಳು ಬರುತ್ತಿಲ್ಲ. ಹೀಗಿರುವಾಗ ಇಷ್ಟು ದೊಡ್ಡ ಜಾಗವನ್ನು ಯಾಕೆ ಕೊಡಲಾಗಿದೆ? ಇದೇ ಜಾಗದಲ್ಲಿ ಇನ್ನೊಂದು ಕನ್ನಡ ವಿವಿ ತೆರೆಯಬಹುದಿತ್ತಲ್ಲವೇ? ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿವಿ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ. ರಾಮನಗರ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಜಾಗವನ್ನು ಸರ್ಕಾರ ಹಿಂದಕ್ಕೆ ಪಡೆಯಬೇಕು. ಅನುದಾನವನ್ನೂ ಸಹ ಹಿಂದಕ್ಕೆ ಪಡೆಯಬೇಕು ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರವರು ಒತ್ತಾಯಿಸಿದ್ದಾರೆ.

ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿ, ಅತಿಥಿ ಉಪನ್ಯಾಸಕರಿಗೆ ಸೂಕ್ತ ಸಂಬಳ ನೀಡಿ, ಕನ್ನಡ ಮಾಧ್ಯಮದಲ್ಲಿ ಪಿಯುಸಿ ಹಂತದಲ್ಲಿ ಕಲಿಯಲು ಅಗತ್ಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿ. ಅದನ್ನೆಲ್ಲ ಬಿಟ್ಟು ಕೋಟ್ಯಂತರ ಕನ್ನಡಿಗರ ತೆರಿಗೆಯನ್ನು ವಿದ್ಯಾರ್ಥಿಗಳಿಗೆ ಉಪಯೋಗವಿಲ್ಲದ ಕಾರಣಗಳಿಗೆ ವ್ಯಯ ಮಾಡಬೇಡಿ ಎಂದು ದೇವಾರ್ಷ್ ಜೋಶಿ ಎಂಬುವರರು ತಾಕೀತು ಮಾಡಿದ್ದಾರೆ.

ಇಲ್ಲಿಯವರೆಗೆ ಕನ್ನಡಿಗರ ಮೇಲೆ #ibpsmosa #ಹಿಂದೀಹೇರಿಕೆ ಆಯ್ತು, ಈಗ #ಸಂಸ್ಕೃತ_ಹೇರಿಕೆಯ ಪ್ರಾರಂಭ! #ಸಂಸ್ಕೃತವಿವಿಬೇಡ ಎಂದು ಜಗದೀಶ್ ಕೆ.ಎ ಎಂಬುವವರು ಟ್ವೀಟ್ ಮಾಡಿದ್ದಾರೆ.

ಸಂಸ್ಕೃತ ವಿವಿಗೆ ಮೀಸಲಿಟ್ಟಿರುವ ದುಡ್ಡು ಮತ್ತು ಜಾಗವನ್ನು ಕರ್ನಾಟಕದ ನುಡಿಗಳಾದ ತುಳು, ಬ್ಯಾರಿ, ಕೊಡವ, ಕೊಂಕಣಿಗಳ ಕುರಿತು ಅಧ್ಯಯನ ಮಾಡಲು ಒಂದು ವಿವಿ ನಿರ್‍ಮಿಸಲಿ. ಜನರ ನುಡಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗಲಿ ಎಂದು ಸಚಿನ್ ಒತ್ತಾಯಿಸಿದ್ದಾರೆ.

ಸಂಸ್ಕೃತ ವಿವಿ ಕಟ್ಟಲು ಹೊರಟಿರುವ 100 ಎಕರೆ ಜಾಗ ಮೀಸಲು ಅರಣ್ಯ ಸ್ಥಳ, ಮತ್ತು ಅಲ್ಲಿ ಆನೆ ಕಾರಿಡಾರ್ ಇದೆ, ಆನೆ ಗಣೇಶನ ಪ್ರತಿಬಿಂಬಿ ಅಂತಾರೆ ಅಂತಹ ಅರಣ್ಯ ಮತ್ತು ಆನೆಯ ದಾರಿಯನ್ನ ಮಣ್ಣುಮಾಡಿ ಅದರ ಮೇಲೆ ಕಟ್ಟಲು ಹೊರಟಿರುವ ಸಮಾಧಿ ಯಾರದು? ಎಂದು ದೀಪು ಗೌಡ್ರು ಎಂಬುವವರು ಪ್ರಶ್ನಿಸಿದ್ದಾರೆ.

ಸರಕಾರ ಕನ್ನಡ ವಿಶ್ವವಿದ್ಯಾಲಯದ ನಿರ್ವಹಣೆಗೆ ಅನುದಾನ ನೀಡಲು ವಿಳಂಬ ಮಾಡುತ್ತಿದೆ, ಕನ್ನಡ ಅಭಿವೃದ್ದಿ ಪ್ರಾಧಿಕಾರದಂತಹ ಕನ್ನಡ ಸಂಸ್ತೆಗಳ ಅನುದಾನ ಕಡಿತ ಮಾಡಲಾಗಿದೆ. ತುಳು ಶಿಕ್ಷಕರಿಗೆ ಸರಿಯಾದ ಸಂಬಳ ನೀಡಲ್ಲ,ಈ ನಡುವೆ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ನೂರಾರು ಕೋಟಿ ದುಡ್ಡು ಕೊಡುತ್ತಿರುವುದನ್ನು ಪ್ರಶ್ನಿಸಬೇಕಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಇಂದು ಇಡೀ ದಿನ ಸಂಸ್ಕೃತ ವಿವಿ ಬೇಡ ಎಂಬ ಟ್ವಿಟರ್ ಅಭಿಯಾನಕ್ಕೆ ಕರವೇ ಕರೆ ನೀಡಿದೆ. ಈಗಾಗಲೇ SayNoToSanskrit ಹ್ಯಾಷ್‌ಟ್ಯಾಗ್ ಭಾರತಮಟ್ಟದಲ್ಲಿ ಐದನೇ ಸ್ಥಾನದಲ್ಲಿ ಟ್ರೆಂಡ್ ಆಗುತ್ತಿದೆ.


ಇದನ್ನೂ ಓದಿ: ಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Why do we need Urdu schools run by Government? Urdu never used in any of the offices, organisations , institutions…,
    Why shouldn’t we use the funds to the schools which develop nationalism…?

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...