Homeಚಳವಳಿಸಂಸ್ಕೃತ ವಿವಿಗೆ ದುಡ್ಡು ಸುರಿಯುವ ಬದಲು ಸರ್ಕಾರಿ ಶಾಲೆ ಉಳಿಸಿ: ಕನ್ನಡಿಗರ ಆಗ್ರಹ

ಸಂಸ್ಕೃತ ವಿವಿಗೆ ದುಡ್ಡು ಸುರಿಯುವ ಬದಲು ಸರ್ಕಾರಿ ಶಾಲೆ ಉಳಿಸಿ: ಕನ್ನಡಿಗರ ಆಗ್ರಹ

ಸಂಸ್ಕೃತ ವಿವಿಗೆ ಕೊಡಲು 359 ಕೋಟಿ ಹಣ, 100 ಎಕರೆ ಮೀಸಲು ಅರಣ್ಯ ಜಾಗ ಇದೆ. ಆದರೆ ಕನ್ನಡಿಗರ ಏಕೈಕ ವಿವಿಗೆ ಕೊಡಲು 2 ಕೋಟಿ ಹಣವಿಲ್ಲವೇ?

- Advertisement -
- Advertisement -

“ಮೊದಲು ಕುಸಿದು ಬೀಳುವ ಹಂತದಲ್ಲಿರುವ ಸರ್ಕಾರೀ ಶಾಲೆಗಳನ್ನು ಉಳಿಸಿ, ನಿಮ್ಮ ಯೋಗ್ಯತೆಗೆ ಅಷ್ಟು ಸಾಕು! ಸಂಸ್ಕೃತ ವಿವಿ ಬೇಡ” – ಇದು ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ ಟ್ವಿಟರ್ ಅಭಿಯಾನದಲ್ಲಿ ಕಂಡುಬಂದ ಟ್ವೀಟ್. ಸಂಸ್ಕೃತ ವಿವಿ ಸ್ಥಾಪನೆಯ ವಿರುದ್ಧ ಬಹುತೇಕ ಕನ್ನಡಿಗರು ತಮ್ಮ ಆಕ್ರೋಶ ಹೊರ ಹಾಕಿದ್ದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈಗಾಗಲೇ ಶೃಂಗೇರಿ ಬಳಿ ಒಕ್ಕೂಟ ಸರ್ಕಾರ ಸಂಸ್ಕೃತ ವಿವಿ ಸ್ಥಾಪಿಸಿದೆ. ಆದರೆ ಅಲ್ಲಿ ಶೇ.50 ರಷ್ಟು ದಾಖಲಾತಿ ಆಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಕರ್ನಾಟಕದಲ್ಲಿ ಎರಡನೇ ಸಂಸ್ಕೃತ ವಿವಿ ಏಕೆ? ದೇಶದಲ್ಲಿ ಒಟ್ಟು ಹದಿನಾರು ಸಂಸ್ಕೃತ ವಿಶ್ವವಿದ್ಯಾಲಯಗಳಿವೆ. ಆದರೆ ಸಂಸ್ಕೃತ ನುಡಿ ಆಡುವವರ ಸಂಖ್ಯೆ ಜಗತ್ತನಲ್ಲಿಯೇ ಕೇವಲ 24,000. ಇಷ್ಟು ಜನರ ನುಡಿಗೆ ಹದಿನಾರು ವಿಶ್ವವಿದ್ಯಾಲಯಗಳ ಅಗತ್ಯವಾದರೂ ಏನಿತ್ತು. ಆದರೆ ಇನ್ನೊಂದೆಡೆ ಏಳು ಕೋಟಿ ಜನರು ಮಾತನಾಡುವ ಕನ್ನಡ ನುಡಿಗೆಂದು ಇರುವುದು ಒಂದೇ ವಿಶ್ವವಿದ್ಯಾಲಯ. ಅದಕ್ಕೂ ಸರ್ಕಾರ ಸಮರ್ಪಕ ಅನುದಾನ ಕೊಡುತ್ತಿಲ್ಲ ಎಂದು ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಎಲ್ಲಾ ಹಂತದಲ್ಲೂ ಕನ್ನಡ ಕಲಿಕೆಯನ್ನು ಮೊಟಕುಗೊಳಿಸಿ, ಕನ್ನಡ ಮಾಧ್ಯಮದಲ್ಲಿ ಸಂಸ್ಕ್ರುತ ಪದಗಳನ್ನೇ ತುಂಬಿ, ಕನ್ನಡದ ಮಕ್ಕಳಿಗೆ ಕಲಿಕೆಯನ್ನು ಕಷ್ಟವಾಗಿಸಿ, ಕನ್ನಡದ ಕೆಲಸಗಳಿಗೆ ದುಡ್ಡು ಬಿಡುಗಡೆ ಮಾಡದೆ ಸಂಸ್ಕ್ರುತ ವಿವಿಗೆ ಕನ್ನಡಿಗರ ನೆಲ, ದುಡ್ಡು ದೋಚಲು ಮುಂದಾಗಿದ್ದಾರೆ. ಕನ್ನಡಿಗರು ಇದನ್ನು ಎದುರಿಸಿಯೇ ತೀರುತ್ತೇವೆ” ಎಂದು ಶ್ರುತಿ ಎಂ ಎಚ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಸಂಸ್ಕೃತ ವಿವಿಗೆ ಕೊಡಲು 359 ಕೋಟಿ ಹಣ, 100 ಎಕರೆ ಮೀಸಲು ಅರಣ್ಯ ಜಾಗ ಇದೆ. ಆದರೆ ಕನ್ನಡಿಗರ ಏಕೈಕ ವಿವಿಗೆ ಕೊಡಲು 2 ಕೋಟಿ ಹಣವಿಲ್ಲ ಎಂದು ಸಂಗೀತಾ ಶೆಟ್ಟಿ ಎಂಬುವವರು ಆಕ್ರೋಶ ಹೊರಹಾಕಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ನೂರು ಎಕರೆ ಅರಣ್ಯ ಪ್ರದೇಶವನ್ನೇ ಸಂಸ್ಕೃತ ವಿವಿಗೆ ಕೊಡಲಾಗಿದೆ. ಇರುವ ಸಂಸ್ಕೃತ ವಿಶ್ವವಿದ್ಯಾಲಯಗಳಲ್ಲಿ ಓದಲು ವಿದ್ಯಾರ್ಥಿಗಳು ಬರುತ್ತಿಲ್ಲ. ಹೀಗಿರುವಾಗ ಇಷ್ಟು ದೊಡ್ಡ ಜಾಗವನ್ನು ಯಾಕೆ ಕೊಡಲಾಗಿದೆ? ಇದೇ ಜಾಗದಲ್ಲಿ ಇನ್ನೊಂದು ಕನ್ನಡ ವಿವಿ ತೆರೆಯಬಹುದಿತ್ತಲ್ಲವೇ? ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿವಿ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ. ರಾಮನಗರ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಜಾಗವನ್ನು ಸರ್ಕಾರ ಹಿಂದಕ್ಕೆ ಪಡೆಯಬೇಕು. ಅನುದಾನವನ್ನೂ ಸಹ ಹಿಂದಕ್ಕೆ ಪಡೆಯಬೇಕು ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರವರು ಒತ್ತಾಯಿಸಿದ್ದಾರೆ.

ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿ, ಅತಿಥಿ ಉಪನ್ಯಾಸಕರಿಗೆ ಸೂಕ್ತ ಸಂಬಳ ನೀಡಿ, ಕನ್ನಡ ಮಾಧ್ಯಮದಲ್ಲಿ ಪಿಯುಸಿ ಹಂತದಲ್ಲಿ ಕಲಿಯಲು ಅಗತ್ಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿ. ಅದನ್ನೆಲ್ಲ ಬಿಟ್ಟು ಕೋಟ್ಯಂತರ ಕನ್ನಡಿಗರ ತೆರಿಗೆಯನ್ನು ವಿದ್ಯಾರ್ಥಿಗಳಿಗೆ ಉಪಯೋಗವಿಲ್ಲದ ಕಾರಣಗಳಿಗೆ ವ್ಯಯ ಮಾಡಬೇಡಿ ಎಂದು ದೇವಾರ್ಷ್ ಜೋಶಿ ಎಂಬುವರರು ತಾಕೀತು ಮಾಡಿದ್ದಾರೆ.

ಇಲ್ಲಿಯವರೆಗೆ ಕನ್ನಡಿಗರ ಮೇಲೆ #ibpsmosa #ಹಿಂದೀಹೇರಿಕೆ ಆಯ್ತು, ಈಗ #ಸಂಸ್ಕೃತ_ಹೇರಿಕೆಯ ಪ್ರಾರಂಭ! #ಸಂಸ್ಕೃತವಿವಿಬೇಡ ಎಂದು ಜಗದೀಶ್ ಕೆ.ಎ ಎಂಬುವವರು ಟ್ವೀಟ್ ಮಾಡಿದ್ದಾರೆ.

ಸಂಸ್ಕೃತ ವಿವಿಗೆ ಮೀಸಲಿಟ್ಟಿರುವ ದುಡ್ಡು ಮತ್ತು ಜಾಗವನ್ನು ಕರ್ನಾಟಕದ ನುಡಿಗಳಾದ ತುಳು, ಬ್ಯಾರಿ, ಕೊಡವ, ಕೊಂಕಣಿಗಳ ಕುರಿತು ಅಧ್ಯಯನ ಮಾಡಲು ಒಂದು ವಿವಿ ನಿರ್‍ಮಿಸಲಿ. ಜನರ ನುಡಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗಲಿ ಎಂದು ಸಚಿನ್ ಒತ್ತಾಯಿಸಿದ್ದಾರೆ.

ಸಂಸ್ಕೃತ ವಿವಿ ಕಟ್ಟಲು ಹೊರಟಿರುವ 100 ಎಕರೆ ಜಾಗ ಮೀಸಲು ಅರಣ್ಯ ಸ್ಥಳ, ಮತ್ತು ಅಲ್ಲಿ ಆನೆ ಕಾರಿಡಾರ್ ಇದೆ, ಆನೆ ಗಣೇಶನ ಪ್ರತಿಬಿಂಬಿ ಅಂತಾರೆ ಅಂತಹ ಅರಣ್ಯ ಮತ್ತು ಆನೆಯ ದಾರಿಯನ್ನ ಮಣ್ಣುಮಾಡಿ ಅದರ ಮೇಲೆ ಕಟ್ಟಲು ಹೊರಟಿರುವ ಸಮಾಧಿ ಯಾರದು? ಎಂದು ದೀಪು ಗೌಡ್ರು ಎಂಬುವವರು ಪ್ರಶ್ನಿಸಿದ್ದಾರೆ.

ಸರಕಾರ ಕನ್ನಡ ವಿಶ್ವವಿದ್ಯಾಲಯದ ನಿರ್ವಹಣೆಗೆ ಅನುದಾನ ನೀಡಲು ವಿಳಂಬ ಮಾಡುತ್ತಿದೆ, ಕನ್ನಡ ಅಭಿವೃದ್ದಿ ಪ್ರಾಧಿಕಾರದಂತಹ ಕನ್ನಡ ಸಂಸ್ತೆಗಳ ಅನುದಾನ ಕಡಿತ ಮಾಡಲಾಗಿದೆ. ತುಳು ಶಿಕ್ಷಕರಿಗೆ ಸರಿಯಾದ ಸಂಬಳ ನೀಡಲ್ಲ,ಈ ನಡುವೆ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ನೂರಾರು ಕೋಟಿ ದುಡ್ಡು ಕೊಡುತ್ತಿರುವುದನ್ನು ಪ್ರಶ್ನಿಸಬೇಕಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಇಂದು ಇಡೀ ದಿನ ಸಂಸ್ಕೃತ ವಿವಿ ಬೇಡ ಎಂಬ ಟ್ವಿಟರ್ ಅಭಿಯಾನಕ್ಕೆ ಕರವೇ ಕರೆ ನೀಡಿದೆ. ಈಗಾಗಲೇ SayNoToSanskrit ಹ್ಯಾಷ್‌ಟ್ಯಾಗ್ ಭಾರತಮಟ್ಟದಲ್ಲಿ ಐದನೇ ಸ್ಥಾನದಲ್ಲಿ ಟ್ರೆಂಡ್ ಆಗುತ್ತಿದೆ.


ಇದನ್ನೂ ಓದಿ: ಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Why do we need Urdu schools run by Government? Urdu never used in any of the offices, organisations , institutions…,
    Why shouldn’t we use the funds to the schools which develop nationalism…?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...