Homeಚಳವಳಿಸಂಸ್ಕೃತ ವಿವಿಗೆ ದುಡ್ಡು ಸುರಿಯುವ ಬದಲು ಸರ್ಕಾರಿ ಶಾಲೆ ಉಳಿಸಿ: ಕನ್ನಡಿಗರ ಆಗ್ರಹ

ಸಂಸ್ಕೃತ ವಿವಿಗೆ ದುಡ್ಡು ಸುರಿಯುವ ಬದಲು ಸರ್ಕಾರಿ ಶಾಲೆ ಉಳಿಸಿ: ಕನ್ನಡಿಗರ ಆಗ್ರಹ

ಸಂಸ್ಕೃತ ವಿವಿಗೆ ಕೊಡಲು 359 ಕೋಟಿ ಹಣ, 100 ಎಕರೆ ಮೀಸಲು ಅರಣ್ಯ ಜಾಗ ಇದೆ. ಆದರೆ ಕನ್ನಡಿಗರ ಏಕೈಕ ವಿವಿಗೆ ಕೊಡಲು 2 ಕೋಟಿ ಹಣವಿಲ್ಲವೇ?

- Advertisement -
- Advertisement -

“ಮೊದಲು ಕುಸಿದು ಬೀಳುವ ಹಂತದಲ್ಲಿರುವ ಸರ್ಕಾರೀ ಶಾಲೆಗಳನ್ನು ಉಳಿಸಿ, ನಿಮ್ಮ ಯೋಗ್ಯತೆಗೆ ಅಷ್ಟು ಸಾಕು! ಸಂಸ್ಕೃತ ವಿವಿ ಬೇಡ” – ಇದು ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ ಟ್ವಿಟರ್ ಅಭಿಯಾನದಲ್ಲಿ ಕಂಡುಬಂದ ಟ್ವೀಟ್. ಸಂಸ್ಕೃತ ವಿವಿ ಸ್ಥಾಪನೆಯ ವಿರುದ್ಧ ಬಹುತೇಕ ಕನ್ನಡಿಗರು ತಮ್ಮ ಆಕ್ರೋಶ ಹೊರ ಹಾಕಿದ್ದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈಗಾಗಲೇ ಶೃಂಗೇರಿ ಬಳಿ ಒಕ್ಕೂಟ ಸರ್ಕಾರ ಸಂಸ್ಕೃತ ವಿವಿ ಸ್ಥಾಪಿಸಿದೆ. ಆದರೆ ಅಲ್ಲಿ ಶೇ.50 ರಷ್ಟು ದಾಖಲಾತಿ ಆಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಕರ್ನಾಟಕದಲ್ಲಿ ಎರಡನೇ ಸಂಸ್ಕೃತ ವಿವಿ ಏಕೆ? ದೇಶದಲ್ಲಿ ಒಟ್ಟು ಹದಿನಾರು ಸಂಸ್ಕೃತ ವಿಶ್ವವಿದ್ಯಾಲಯಗಳಿವೆ. ಆದರೆ ಸಂಸ್ಕೃತ ನುಡಿ ಆಡುವವರ ಸಂಖ್ಯೆ ಜಗತ್ತನಲ್ಲಿಯೇ ಕೇವಲ 24,000. ಇಷ್ಟು ಜನರ ನುಡಿಗೆ ಹದಿನಾರು ವಿಶ್ವವಿದ್ಯಾಲಯಗಳ ಅಗತ್ಯವಾದರೂ ಏನಿತ್ತು. ಆದರೆ ಇನ್ನೊಂದೆಡೆ ಏಳು ಕೋಟಿ ಜನರು ಮಾತನಾಡುವ ಕನ್ನಡ ನುಡಿಗೆಂದು ಇರುವುದು ಒಂದೇ ವಿಶ್ವವಿದ್ಯಾಲಯ. ಅದಕ್ಕೂ ಸರ್ಕಾರ ಸಮರ್ಪಕ ಅನುದಾನ ಕೊಡುತ್ತಿಲ್ಲ ಎಂದು ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಎಲ್ಲಾ ಹಂತದಲ್ಲೂ ಕನ್ನಡ ಕಲಿಕೆಯನ್ನು ಮೊಟಕುಗೊಳಿಸಿ, ಕನ್ನಡ ಮಾಧ್ಯಮದಲ್ಲಿ ಸಂಸ್ಕ್ರುತ ಪದಗಳನ್ನೇ ತುಂಬಿ, ಕನ್ನಡದ ಮಕ್ಕಳಿಗೆ ಕಲಿಕೆಯನ್ನು ಕಷ್ಟವಾಗಿಸಿ, ಕನ್ನಡದ ಕೆಲಸಗಳಿಗೆ ದುಡ್ಡು ಬಿಡುಗಡೆ ಮಾಡದೆ ಸಂಸ್ಕ್ರುತ ವಿವಿಗೆ ಕನ್ನಡಿಗರ ನೆಲ, ದುಡ್ಡು ದೋಚಲು ಮುಂದಾಗಿದ್ದಾರೆ. ಕನ್ನಡಿಗರು ಇದನ್ನು ಎದುರಿಸಿಯೇ ತೀರುತ್ತೇವೆ” ಎಂದು ಶ್ರುತಿ ಎಂ ಎಚ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಸಂಸ್ಕೃತ ವಿವಿಗೆ ಕೊಡಲು 359 ಕೋಟಿ ಹಣ, 100 ಎಕರೆ ಮೀಸಲು ಅರಣ್ಯ ಜಾಗ ಇದೆ. ಆದರೆ ಕನ್ನಡಿಗರ ಏಕೈಕ ವಿವಿಗೆ ಕೊಡಲು 2 ಕೋಟಿ ಹಣವಿಲ್ಲ ಎಂದು ಸಂಗೀತಾ ಶೆಟ್ಟಿ ಎಂಬುವವರು ಆಕ್ರೋಶ ಹೊರಹಾಕಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ನೂರು ಎಕರೆ ಅರಣ್ಯ ಪ್ರದೇಶವನ್ನೇ ಸಂಸ್ಕೃತ ವಿವಿಗೆ ಕೊಡಲಾಗಿದೆ. ಇರುವ ಸಂಸ್ಕೃತ ವಿಶ್ವವಿದ್ಯಾಲಯಗಳಲ್ಲಿ ಓದಲು ವಿದ್ಯಾರ್ಥಿಗಳು ಬರುತ್ತಿಲ್ಲ. ಹೀಗಿರುವಾಗ ಇಷ್ಟು ದೊಡ್ಡ ಜಾಗವನ್ನು ಯಾಕೆ ಕೊಡಲಾಗಿದೆ? ಇದೇ ಜಾಗದಲ್ಲಿ ಇನ್ನೊಂದು ಕನ್ನಡ ವಿವಿ ತೆರೆಯಬಹುದಿತ್ತಲ್ಲವೇ? ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿವಿ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ. ರಾಮನಗರ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಜಾಗವನ್ನು ಸರ್ಕಾರ ಹಿಂದಕ್ಕೆ ಪಡೆಯಬೇಕು. ಅನುದಾನವನ್ನೂ ಸಹ ಹಿಂದಕ್ಕೆ ಪಡೆಯಬೇಕು ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರವರು ಒತ್ತಾಯಿಸಿದ್ದಾರೆ.

ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿ, ಅತಿಥಿ ಉಪನ್ಯಾಸಕರಿಗೆ ಸೂಕ್ತ ಸಂಬಳ ನೀಡಿ, ಕನ್ನಡ ಮಾಧ್ಯಮದಲ್ಲಿ ಪಿಯುಸಿ ಹಂತದಲ್ಲಿ ಕಲಿಯಲು ಅಗತ್ಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿ. ಅದನ್ನೆಲ್ಲ ಬಿಟ್ಟು ಕೋಟ್ಯಂತರ ಕನ್ನಡಿಗರ ತೆರಿಗೆಯನ್ನು ವಿದ್ಯಾರ್ಥಿಗಳಿಗೆ ಉಪಯೋಗವಿಲ್ಲದ ಕಾರಣಗಳಿಗೆ ವ್ಯಯ ಮಾಡಬೇಡಿ ಎಂದು ದೇವಾರ್ಷ್ ಜೋಶಿ ಎಂಬುವರರು ತಾಕೀತು ಮಾಡಿದ್ದಾರೆ.

ಇಲ್ಲಿಯವರೆಗೆ ಕನ್ನಡಿಗರ ಮೇಲೆ #ibpsmosa #ಹಿಂದೀಹೇರಿಕೆ ಆಯ್ತು, ಈಗ #ಸಂಸ್ಕೃತ_ಹೇರಿಕೆಯ ಪ್ರಾರಂಭ! #ಸಂಸ್ಕೃತವಿವಿಬೇಡ ಎಂದು ಜಗದೀಶ್ ಕೆ.ಎ ಎಂಬುವವರು ಟ್ವೀಟ್ ಮಾಡಿದ್ದಾರೆ.

ಸಂಸ್ಕೃತ ವಿವಿಗೆ ಮೀಸಲಿಟ್ಟಿರುವ ದುಡ್ಡು ಮತ್ತು ಜಾಗವನ್ನು ಕರ್ನಾಟಕದ ನುಡಿಗಳಾದ ತುಳು, ಬ್ಯಾರಿ, ಕೊಡವ, ಕೊಂಕಣಿಗಳ ಕುರಿತು ಅಧ್ಯಯನ ಮಾಡಲು ಒಂದು ವಿವಿ ನಿರ್‍ಮಿಸಲಿ. ಜನರ ನುಡಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗಲಿ ಎಂದು ಸಚಿನ್ ಒತ್ತಾಯಿಸಿದ್ದಾರೆ.

ಸಂಸ್ಕೃತ ವಿವಿ ಕಟ್ಟಲು ಹೊರಟಿರುವ 100 ಎಕರೆ ಜಾಗ ಮೀಸಲು ಅರಣ್ಯ ಸ್ಥಳ, ಮತ್ತು ಅಲ್ಲಿ ಆನೆ ಕಾರಿಡಾರ್ ಇದೆ, ಆನೆ ಗಣೇಶನ ಪ್ರತಿಬಿಂಬಿ ಅಂತಾರೆ ಅಂತಹ ಅರಣ್ಯ ಮತ್ತು ಆನೆಯ ದಾರಿಯನ್ನ ಮಣ್ಣುಮಾಡಿ ಅದರ ಮೇಲೆ ಕಟ್ಟಲು ಹೊರಟಿರುವ ಸಮಾಧಿ ಯಾರದು? ಎಂದು ದೀಪು ಗೌಡ್ರು ಎಂಬುವವರು ಪ್ರಶ್ನಿಸಿದ್ದಾರೆ.

ಸರಕಾರ ಕನ್ನಡ ವಿಶ್ವವಿದ್ಯಾಲಯದ ನಿರ್ವಹಣೆಗೆ ಅನುದಾನ ನೀಡಲು ವಿಳಂಬ ಮಾಡುತ್ತಿದೆ, ಕನ್ನಡ ಅಭಿವೃದ್ದಿ ಪ್ರಾಧಿಕಾರದಂತಹ ಕನ್ನಡ ಸಂಸ್ತೆಗಳ ಅನುದಾನ ಕಡಿತ ಮಾಡಲಾಗಿದೆ. ತುಳು ಶಿಕ್ಷಕರಿಗೆ ಸರಿಯಾದ ಸಂಬಳ ನೀಡಲ್ಲ,ಈ ನಡುವೆ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ನೂರಾರು ಕೋಟಿ ದುಡ್ಡು ಕೊಡುತ್ತಿರುವುದನ್ನು ಪ್ರಶ್ನಿಸಬೇಕಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಇಂದು ಇಡೀ ದಿನ ಸಂಸ್ಕೃತ ವಿವಿ ಬೇಡ ಎಂಬ ಟ್ವಿಟರ್ ಅಭಿಯಾನಕ್ಕೆ ಕರವೇ ಕರೆ ನೀಡಿದೆ. ಈಗಾಗಲೇ SayNoToSanskrit ಹ್ಯಾಷ್‌ಟ್ಯಾಗ್ ಭಾರತಮಟ್ಟದಲ್ಲಿ ಐದನೇ ಸ್ಥಾನದಲ್ಲಿ ಟ್ರೆಂಡ್ ಆಗುತ್ತಿದೆ.


ಇದನ್ನೂ ಓದಿ: ಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Why do we need Urdu schools run by Government? Urdu never used in any of the offices, organisations , institutions…,
    Why shouldn’t we use the funds to the schools which develop nationalism…?

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...