Homeಚಳವಳಿಸಂಸ್ಕೃತ ವಿವಿಗೆ ದುಡ್ಡು ಸುರಿಯುವ ಬದಲು ಸರ್ಕಾರಿ ಶಾಲೆ ಉಳಿಸಿ: ಕನ್ನಡಿಗರ ಆಗ್ರಹ

ಸಂಸ್ಕೃತ ವಿವಿಗೆ ದುಡ್ಡು ಸುರಿಯುವ ಬದಲು ಸರ್ಕಾರಿ ಶಾಲೆ ಉಳಿಸಿ: ಕನ್ನಡಿಗರ ಆಗ್ರಹ

ಸಂಸ್ಕೃತ ವಿವಿಗೆ ಕೊಡಲು 359 ಕೋಟಿ ಹಣ, 100 ಎಕರೆ ಮೀಸಲು ಅರಣ್ಯ ಜಾಗ ಇದೆ. ಆದರೆ ಕನ್ನಡಿಗರ ಏಕೈಕ ವಿವಿಗೆ ಕೊಡಲು 2 ಕೋಟಿ ಹಣವಿಲ್ಲವೇ?

- Advertisement -
- Advertisement -

“ಮೊದಲು ಕುಸಿದು ಬೀಳುವ ಹಂತದಲ್ಲಿರುವ ಸರ್ಕಾರೀ ಶಾಲೆಗಳನ್ನು ಉಳಿಸಿ, ನಿಮ್ಮ ಯೋಗ್ಯತೆಗೆ ಅಷ್ಟು ಸಾಕು! ಸಂಸ್ಕೃತ ವಿವಿ ಬೇಡ” – ಇದು ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ ಟ್ವಿಟರ್ ಅಭಿಯಾನದಲ್ಲಿ ಕಂಡುಬಂದ ಟ್ವೀಟ್. ಸಂಸ್ಕೃತ ವಿವಿ ಸ್ಥಾಪನೆಯ ವಿರುದ್ಧ ಬಹುತೇಕ ಕನ್ನಡಿಗರು ತಮ್ಮ ಆಕ್ರೋಶ ಹೊರ ಹಾಕಿದ್ದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈಗಾಗಲೇ ಶೃಂಗೇರಿ ಬಳಿ ಒಕ್ಕೂಟ ಸರ್ಕಾರ ಸಂಸ್ಕೃತ ವಿವಿ ಸ್ಥಾಪಿಸಿದೆ. ಆದರೆ ಅಲ್ಲಿ ಶೇ.50 ರಷ್ಟು ದಾಖಲಾತಿ ಆಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಕರ್ನಾಟಕದಲ್ಲಿ ಎರಡನೇ ಸಂಸ್ಕೃತ ವಿವಿ ಏಕೆ? ದೇಶದಲ್ಲಿ ಒಟ್ಟು ಹದಿನಾರು ಸಂಸ್ಕೃತ ವಿಶ್ವವಿದ್ಯಾಲಯಗಳಿವೆ. ಆದರೆ ಸಂಸ್ಕೃತ ನುಡಿ ಆಡುವವರ ಸಂಖ್ಯೆ ಜಗತ್ತನಲ್ಲಿಯೇ ಕೇವಲ 24,000. ಇಷ್ಟು ಜನರ ನುಡಿಗೆ ಹದಿನಾರು ವಿಶ್ವವಿದ್ಯಾಲಯಗಳ ಅಗತ್ಯವಾದರೂ ಏನಿತ್ತು. ಆದರೆ ಇನ್ನೊಂದೆಡೆ ಏಳು ಕೋಟಿ ಜನರು ಮಾತನಾಡುವ ಕನ್ನಡ ನುಡಿಗೆಂದು ಇರುವುದು ಒಂದೇ ವಿಶ್ವವಿದ್ಯಾಲಯ. ಅದಕ್ಕೂ ಸರ್ಕಾರ ಸಮರ್ಪಕ ಅನುದಾನ ಕೊಡುತ್ತಿಲ್ಲ ಎಂದು ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಎಲ್ಲಾ ಹಂತದಲ್ಲೂ ಕನ್ನಡ ಕಲಿಕೆಯನ್ನು ಮೊಟಕುಗೊಳಿಸಿ, ಕನ್ನಡ ಮಾಧ್ಯಮದಲ್ಲಿ ಸಂಸ್ಕ್ರುತ ಪದಗಳನ್ನೇ ತುಂಬಿ, ಕನ್ನಡದ ಮಕ್ಕಳಿಗೆ ಕಲಿಕೆಯನ್ನು ಕಷ್ಟವಾಗಿಸಿ, ಕನ್ನಡದ ಕೆಲಸಗಳಿಗೆ ದುಡ್ಡು ಬಿಡುಗಡೆ ಮಾಡದೆ ಸಂಸ್ಕ್ರುತ ವಿವಿಗೆ ಕನ್ನಡಿಗರ ನೆಲ, ದುಡ್ಡು ದೋಚಲು ಮುಂದಾಗಿದ್ದಾರೆ. ಕನ್ನಡಿಗರು ಇದನ್ನು ಎದುರಿಸಿಯೇ ತೀರುತ್ತೇವೆ” ಎಂದು ಶ್ರುತಿ ಎಂ ಎಚ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಸಂಸ್ಕೃತ ವಿವಿಗೆ ಕೊಡಲು 359 ಕೋಟಿ ಹಣ, 100 ಎಕರೆ ಮೀಸಲು ಅರಣ್ಯ ಜಾಗ ಇದೆ. ಆದರೆ ಕನ್ನಡಿಗರ ಏಕೈಕ ವಿವಿಗೆ ಕೊಡಲು 2 ಕೋಟಿ ಹಣವಿಲ್ಲ ಎಂದು ಸಂಗೀತಾ ಶೆಟ್ಟಿ ಎಂಬುವವರು ಆಕ್ರೋಶ ಹೊರಹಾಕಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ನೂರು ಎಕರೆ ಅರಣ್ಯ ಪ್ರದೇಶವನ್ನೇ ಸಂಸ್ಕೃತ ವಿವಿಗೆ ಕೊಡಲಾಗಿದೆ. ಇರುವ ಸಂಸ್ಕೃತ ವಿಶ್ವವಿದ್ಯಾಲಯಗಳಲ್ಲಿ ಓದಲು ವಿದ್ಯಾರ್ಥಿಗಳು ಬರುತ್ತಿಲ್ಲ. ಹೀಗಿರುವಾಗ ಇಷ್ಟು ದೊಡ್ಡ ಜಾಗವನ್ನು ಯಾಕೆ ಕೊಡಲಾಗಿದೆ? ಇದೇ ಜಾಗದಲ್ಲಿ ಇನ್ನೊಂದು ಕನ್ನಡ ವಿವಿ ತೆರೆಯಬಹುದಿತ್ತಲ್ಲವೇ? ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿವಿ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ. ರಾಮನಗರ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಜಾಗವನ್ನು ಸರ್ಕಾರ ಹಿಂದಕ್ಕೆ ಪಡೆಯಬೇಕು. ಅನುದಾನವನ್ನೂ ಸಹ ಹಿಂದಕ್ಕೆ ಪಡೆಯಬೇಕು ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರವರು ಒತ್ತಾಯಿಸಿದ್ದಾರೆ.

ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿ, ಅತಿಥಿ ಉಪನ್ಯಾಸಕರಿಗೆ ಸೂಕ್ತ ಸಂಬಳ ನೀಡಿ, ಕನ್ನಡ ಮಾಧ್ಯಮದಲ್ಲಿ ಪಿಯುಸಿ ಹಂತದಲ್ಲಿ ಕಲಿಯಲು ಅಗತ್ಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿ. ಅದನ್ನೆಲ್ಲ ಬಿಟ್ಟು ಕೋಟ್ಯಂತರ ಕನ್ನಡಿಗರ ತೆರಿಗೆಯನ್ನು ವಿದ್ಯಾರ್ಥಿಗಳಿಗೆ ಉಪಯೋಗವಿಲ್ಲದ ಕಾರಣಗಳಿಗೆ ವ್ಯಯ ಮಾಡಬೇಡಿ ಎಂದು ದೇವಾರ್ಷ್ ಜೋಶಿ ಎಂಬುವರರು ತಾಕೀತು ಮಾಡಿದ್ದಾರೆ.

ಇಲ್ಲಿಯವರೆಗೆ ಕನ್ನಡಿಗರ ಮೇಲೆ #ibpsmosa #ಹಿಂದೀಹೇರಿಕೆ ಆಯ್ತು, ಈಗ #ಸಂಸ್ಕೃತ_ಹೇರಿಕೆಯ ಪ್ರಾರಂಭ! #ಸಂಸ್ಕೃತವಿವಿಬೇಡ ಎಂದು ಜಗದೀಶ್ ಕೆ.ಎ ಎಂಬುವವರು ಟ್ವೀಟ್ ಮಾಡಿದ್ದಾರೆ.

ಸಂಸ್ಕೃತ ವಿವಿಗೆ ಮೀಸಲಿಟ್ಟಿರುವ ದುಡ್ಡು ಮತ್ತು ಜಾಗವನ್ನು ಕರ್ನಾಟಕದ ನುಡಿಗಳಾದ ತುಳು, ಬ್ಯಾರಿ, ಕೊಡವ, ಕೊಂಕಣಿಗಳ ಕುರಿತು ಅಧ್ಯಯನ ಮಾಡಲು ಒಂದು ವಿವಿ ನಿರ್‍ಮಿಸಲಿ. ಜನರ ನುಡಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗಲಿ ಎಂದು ಸಚಿನ್ ಒತ್ತಾಯಿಸಿದ್ದಾರೆ.

ಸಂಸ್ಕೃತ ವಿವಿ ಕಟ್ಟಲು ಹೊರಟಿರುವ 100 ಎಕರೆ ಜಾಗ ಮೀಸಲು ಅರಣ್ಯ ಸ್ಥಳ, ಮತ್ತು ಅಲ್ಲಿ ಆನೆ ಕಾರಿಡಾರ್ ಇದೆ, ಆನೆ ಗಣೇಶನ ಪ್ರತಿಬಿಂಬಿ ಅಂತಾರೆ ಅಂತಹ ಅರಣ್ಯ ಮತ್ತು ಆನೆಯ ದಾರಿಯನ್ನ ಮಣ್ಣುಮಾಡಿ ಅದರ ಮೇಲೆ ಕಟ್ಟಲು ಹೊರಟಿರುವ ಸಮಾಧಿ ಯಾರದು? ಎಂದು ದೀಪು ಗೌಡ್ರು ಎಂಬುವವರು ಪ್ರಶ್ನಿಸಿದ್ದಾರೆ.

ಸರಕಾರ ಕನ್ನಡ ವಿಶ್ವವಿದ್ಯಾಲಯದ ನಿರ್ವಹಣೆಗೆ ಅನುದಾನ ನೀಡಲು ವಿಳಂಬ ಮಾಡುತ್ತಿದೆ, ಕನ್ನಡ ಅಭಿವೃದ್ದಿ ಪ್ರಾಧಿಕಾರದಂತಹ ಕನ್ನಡ ಸಂಸ್ತೆಗಳ ಅನುದಾನ ಕಡಿತ ಮಾಡಲಾಗಿದೆ. ತುಳು ಶಿಕ್ಷಕರಿಗೆ ಸರಿಯಾದ ಸಂಬಳ ನೀಡಲ್ಲ,ಈ ನಡುವೆ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ನೂರಾರು ಕೋಟಿ ದುಡ್ಡು ಕೊಡುತ್ತಿರುವುದನ್ನು ಪ್ರಶ್ನಿಸಬೇಕಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಇಂದು ಇಡೀ ದಿನ ಸಂಸ್ಕೃತ ವಿವಿ ಬೇಡ ಎಂಬ ಟ್ವಿಟರ್ ಅಭಿಯಾನಕ್ಕೆ ಕರವೇ ಕರೆ ನೀಡಿದೆ. ಈಗಾಗಲೇ SayNoToSanskrit ಹ್ಯಾಷ್‌ಟ್ಯಾಗ್ ಭಾರತಮಟ್ಟದಲ್ಲಿ ಐದನೇ ಸ್ಥಾನದಲ್ಲಿ ಟ್ರೆಂಡ್ ಆಗುತ್ತಿದೆ.


ಇದನ್ನೂ ಓದಿ: ಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Why do we need Urdu schools run by Government? Urdu never used in any of the offices, organisations , institutions…,
    Why shouldn’t we use the funds to the schools which develop nationalism…?

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...