Homeಕರ್ನಾಟಕಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

"ಬಹುತ್ವ ನಿಮ್ಮ ಸಿದ್ಧಾಂತ, ಅದನ್ನು ನಿಮ್ಮಲ್ಲಿಯೇ ಇಟ್ಟುಕೊಳ್ಳಿ; ನಮಗಲ್ಲ" ಎನ್ನುವ ಕಾರ್ಯಪ್ಪ ಅವರಿಗೆ ಸಾಂವಿಧಾನಿಕ ಆಶಯಗಳ ಬಗ್ಗೆ ನಂಬಿಕೆ ಇದೆಯೇ?

- Advertisement -
- Advertisement -

“ಚಕ್ರವರ್ತಿ ಸೂಲಿಬೆಲೆ ಅವರು ಹೇಳುವುದು ನಿಮಗೆ ಸುಳ್ಳಾಗಿರಬಹುದು, ಆದರೆ ನಮಗಲ್ಲ” ಎಂದು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಹೇಳಿದರು.

ಡಿ.10ರಿಂದ ಡಿ.19ರವರೆಗೆ ನಡೆಯಲಿರುವ ಪ್ರತಿಷ್ಟಿತ ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ’ದ ವಿಚಾರ ಸಂಕಿರಣಕ್ಕೆ ಬಿಜೆಪಿ ಪ್ರಚಾರಕ ಚಕ್ರವರ್ತಿ ಸೂಲಿಬೆಲೆಯವರನ್ನು ಕರೆಸಲಾಗುತ್ತಿದೆ. ಈ ಕುರಿತಂತೆ ಪತ್ರಕರ್ತರು ಪ್ರಶ್ನಿಸಿದಾಗ, ತಮ್ಮ ನಿಲುವನ್ನು ಕಾರ್ಯಪ್ಪ ಅವರು ಸಮರ್ಥಿಸಿಕೊಂಡಿದ್ದಾರೆ. ಚಕ್ರವರ್ತಿ ಸೂಲಿಬೆಲೆಯವರಿಗೆ ‘ಸಮಾಜ ಸೇವಕ’ ಎಂದು ವಿಶೇಷಣವನ್ನು ನೀಡಿರುವ ಕುರಿತು ಪತ್ರಕರ್ತರು ಪ್ರಶ್ನಿಸಿದಾಗ ಉಡಾಫೆಯಾಗಿ ಕಾರ್ಯಪ್ಪ ಅವರು ಉತ್ತರಿಸಿದ್ದಾರೆ.

ಅಡ್ಡಂಡ ಸಿ.ಕಾರ್ಯಪ್ಪ ಅವರು ಮೈಸೂರು ರಂಗಾಯಣದ ನಿರ್ದೇಶಕರಾದ ಬಳಿಕ ಒಂದಿಲ್ಲೊಂದು ವಿವಾದಗಳಲ್ಲಿ ರಂಗಾಯಣ ಸಿಲುಕುತ್ತಲೇ ಇದ್ದು, ಪ್ರಸಕ್ತ ಬಹುರೂಪಿ ಕಾರ್ಯಕ್ರಮವೂ ಮತ್ತೊಂದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಬಲಪಂಥೀಯ ವಿಚಾರಧಾರೆಯ ಅಡ್ಡಂಡ ಸಿ.ಕಾರ್ಯಪ್ಪ ಅವರು ಅದೇ ವಿಚಾರಧಾರೆಯುಳ್ಳವರನ್ನು ಹೆಚ್ಚಿನ ಸಂಖ್ಯೆಯಲ್ಲಿ ರಂಗಾಯಣಕ್ಕೆ ಕರೆಸಿಕೊಳ್ಳುವುದು ಮತ್ತು ಹೆಚ್ಚಿನ ಅವಕಾಶ ನೀಡುವುದು ಈಗ ಗುಟ್ಟಿನ ವಿಷಯವೇನಲ್ಲ. ಆದರೆ ಸಾರ್ವಜನಿಕ ಜೀವನದಲ್ಲಿ ಸಾಕಷ್ಟು ಸುಳ್ಳುಗಳನ್ನು ಹೇಳುತ್ತಾ, ಸುಳ್ಳು ಸುದ್ದಿಗಳನ್ನು ಹರಡುತ್ತಾ, ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಒಳಗಾಗಿರುವ ಚಕ್ರವರ್ತಿ ಸೂಲಿಬೆಲೆ ಅಂಥವರನ್ನು ಬಹುರೂಪಿ ನಾಟಕೋತ್ಸವ ವಿಚಾರಸಂಕಿರಣದ ಸಮಾರೋಪ ಭಾಷಣಕ್ಕೆ ಕರೆಸುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?


ಡಿಸೆಂಬರ್‌ 10ರಿಂದ ಡಿ.19ರವರೆಗೆ ಬಹುರೂಪಿ ನಡೆಯಲಿದ್ದು, ಉದ್ಘಾಟನಾ ಸಮಾರಂಭ ಡಿಸೆಂಬರ್‌‌ 11ರಂದು ಜರುಗಲಿದೆ. ಡಿಸೆಂಬರ್‌ 12 ಮತ್ತು 13ರಂದು ಬಹುರೂಪಿ ವಿಚಾರಸಂಕಿರಣ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ. ಡಿ.13ರಂದು ನಡೆಯುವ ಭಾಷಣ ಸ್ಪರ್ಧೆಯ ಬಳಿಕ, ಅಂದು ಸಂಜೆ 4 ಗಂಟೆಗೆ ಬಿಜೆಪಿ ಪ್ರಚಾರಕ ಚಕ್ರವರ್ತಿ ಸೂಲಿಬೆಲೆಯವರು ವಿಚಾರಸಂಕಿರಣದ ಸಮಾರೋಪ ಭಾಷಣ ಮಾಡಲಿದ್ದಾರೆ.

“ಚಕ್ರವರ್ತಿ ಸೂಲಿಬೆಲೆಯವರು ಸಮಾರೋಪ ಭಾಷಣಕ್ಕೆ ಸೂಕ್ತವ್ಯಕ್ತಿ ಎನಿಸಿದ್ದರಿಂದ ನಾವು ಕರೆದಿದ್ದೇವೆ. ಚಕ್ರವರ್ತಿ ಸೂಲಿಬೆಲೆಯವರ ವಿಚಾರವನ್ನು ಬಿಟ್ಟುಬಿಡಿ. ಅವರನ್ನು ಕರೆದಿದ್ದೇವೆ. ಬರ್ತಾರೆ, ಸಮಾರೋಪ ಭಾಷಣ ಮಾಡ್ತಾರೆ. ಆ ಭಾಷಣದಲ್ಲಿ ದೋಷಗಳನ್ನು ಕಂಡು ಹಿಡಿದು ಅದನ್ನು ಪ್ರಕಟಿಸಿ, ಅದು ನಿಮ್ಮ ಸ್ವಾತಂತ್ರ್ಯ” ಎಂದು ಪತ್ರತರ್ಕರಿಗೆ ಬೋಧನೆ ಮಾಡಿದ್ದಾರೆ.

“ಜನರಿಗೆ ಇವರಿಂದ ಏನು ಸಂದೇಶ ಕೊಡುತ್ತೀರಿ?” ಎಂದು ಕೇಳಿದರೆ, “ಯುವಕರಿಗೆ ಸಂದೇಶವನ್ನು ಕೊಡುತ್ತೀವಿ” ಎಂದಿದ್ದಾರೆ. “ನಾವು ಚರ್ಚೆ ಮಾಡಿ ಒಂದಿಷ್ಟು ಜನರನ್ನು ಕರೆದಿದ್ದೇವೆ” ಎಂದು ಕಾರ್ಯಪ್ಪ ಪ್ರತಿಕ್ರಿಯೆ ನೀಡುತ್ತಾರೆ. “ಚಕ್ರವರ್ತಿ ಸೂಲಿಬೆಲೆಯವರು ರೈತರ ಬಗ್ಗೆ, ರಂಗಭೂಮಿ ಬಗ್ಗೆ ಯಾವತ್ತೂ ಮಾತನಾಡಲ್ಲ. ಯಾರೋ ಒಬ್ಬರನ್ನು ಒಲೈಸುತ್ತಾರೆ” ಎಂದು ಪತ್ರಕರ್ತರು ಕೇಳಿದರೆ, “ಮಾಧ್ಯಮದ ಕೆಲವರಿಗೆ ಹಾಗೆ ಅನ್ನಿಸಿರಬಹುದು, ಎಲ್ಲರಿಗೂ ಅಲ್ಲ” ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿರಿ: ಮಾಂಸಾಹಾರದ ಮೇಲಿನ ಕೀಳರಿಮೆ ತೊಲಗಬೇಕಿದೆ: ಚಿತ್ರಸಾಹಿತಿ ಕವಿರಾಜ್‌ ಬರಹಕ್ಕೆ ಮಿಡಿದ ಕನ್ನಡಿಗರು


ಹೆಚ್ಚಿನ ವಿವರಗಳಿಗಾಗಿ ಅಡ್ಡಂಡ ಕಾರ್ಯಪ್ಪ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗಲೂ ಹೀಗೆಯೇ ಉಡಾಫೆ ಉತ್ತರಗಳನ್ನೇ ನೀಡಿದರು. “ಚಕ್ರವರ್ತಿ ಸೂಲಿಬೆಲೆಯವರು ಸುಳ್ಳುಗಳನ್ನು ಹೇಳುತ್ತಾ ಬಂದಿದ್ದಾರೆ. ಅವರನ್ನು ಕರೆಸುವುದು ಎಷ್ಟು ಸರಿ? ಸಂಘಪರಿವಾರದ ವಿಚಾರಧಾರೆಗಳ ವ್ಯಕ್ತಿಗಳಾದರೂ ಎಲ್ಲ ಜನವರ್ಗವನ್ನು ಗೌರವಿಸುವ ಬಲಪಂಥೀಯರನ್ನು ಕರೆಸಬಹುದಲ್ಲ?” ಎಂದು ಕೇಳಿದೆವು. ನಮ್ಮ ಮಾಧ್ಯಮದ ಕುರಿತೂ ಲಘುವಾಗಿ ಮಾತನಾಡುತ್ತಲೇ ಉತ್ತರಿಸಿದ ಅವರು, “ನಿಮಗೆ ಅವರು ಸುಳ್ಳು ಹೇಳಿದ್ದಾರೆಂದು ಅನಿಸಬಹುದು. ಆದರೆ ನಮಗೆ ಅವರು ಸತ್ಯಗಳನ್ನು ಹೇಳುತ್ತಿದ್ದಾರೆ ಅನಿಸುತ್ತದೆ. ಅವರನ್ನು ಕಂಡರೆ ನಿಮಗೆ ಆಗಲ್ಲ, ನಮಗೆ ಅವರನ್ನು ಕಂಡರೆ ಆಗುತ್ತದೆ” ಎಂದರು.

“ಬಹುರೂಪಿಯು ಬಹುತ್ವವನ್ನು ಪ್ರತಿನಿಧಿಸುವ ಒಂದು ಕಾರ್ಯಕ್ರಮ. ಬಹುತ್ವದ ಬಗ್ಗೆ ನಂಬಿಕೆ ಇರದವರನ್ನು ವೇದಿಕೆಗೆ ಕರೆಸುವುದು ಎಷ್ಟು ಸರಿ?” ಎಂದು ಕೇಳಿದರೆ, “ಈ ಸಿದ್ಧಾಂತವನ್ನೆಲ್ಲ ನಿಮಗೆ ಇಟ್ಟುಕೊಳ್ಳಿ. ನಮಗಲ್ಲ. ಇನ್ನೊಬ್ಬರನ್ನು ಓಲೈಸಲು ಆಗಲ್ಲ. ಸೂಲಿಬೆಲೆ ನಿಮಗೆ ಸುಳ್ಳುಗಾರರಾಗಿರಬಹುದು. ನಮಗೆ ಸುಳ್ಳುಗಾರನಲ್ಲ. ಒಂದು ವರ್ಷ ಅಧಿಕಾರದಲ್ಲಿರುತ್ತೇನೆ, ಏನು ಬರೆದುಕೊಳ್ಳುತ್ತೀರೋ ಬರೆದುಕೊಳ್ಳಿ. ಯಾವುದಕ್ಕೂ ಧೃತಿಗೆಡುವುದಿಲ್ಲ” ಎಂದ ಅವರು ಬಹುತ್ವದ ವಿಷಯವನ್ನೇ ನಿರಾಕರಿಸಿದರು.

“ಸ್ವತಃ ಚಕ್ರವರ್ತಿ ಸೂಲಿಬೆಲೆಯವರೇ ತಾವು ಹೇಳಿರುವ ಮಾತುಗಳನ್ನು ಸತ್ಯವೆಂದು ಸಾಬೀತು ಮಾಡಲು ಸಾಧ್ಯವಾಗದಿರುವಾಗ, ನೀವು ಹೇಗೆ ಅವರು ಹೇಳುತ್ತಿರುವುದು ಸತ್ಯ ಎಂದು ಸಾಬೀತು ಮಾಡುತ್ತೀರಿ?” ಎಂದು ಕೇಳಿದೆವು. “ನಾನು ಅಷ್ಟು ಆಳಕ್ಕೆ ಇಳಿದಿಲ್ಲರ್‍ರೀ, ನೀವು ಆಳಕ್ಕೆ ಇಳಿದು ಏಕಮುಖ ವಿಚಾರಗಳನ್ನು ಬಿತ್ತುವ ಜನ್ಮದಲ್ಲಿ ಹುಟ್ಟಿದ್ದೀರಿ, ವಿವಾದ ಮಾಡಿಕೊಳ್ಳಿ” ಎಂದು ಹೇಳುತ್ತಾ ಮಾತುಮುಗಿಸಿದರು.

ಎಲ್ಲ ಜನವರ್ಗವನ್ನು ಕಟ್ಟು ನಿಟ್ಟಿನಲ್ಲಿ ರಂಗಾಯಣ ಮಾಡಿರುವ ಕೆಲಸಕ್ಕೆ ಅದರದ್ದೇ ಆದ ತೂಕವಿದೆ. ಬಿ.ವಿ.ಕಾರಂತರಂತಹ ರಂಗಭೂಮಿ ಭೀಷ್ಮರು ಕಟ್ಟಿದ ರಂಗಾಯಣದಲ್ಲಿ ಹಲವು ಮಹನೀಯರು ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅರ್ಥಪೂರ್ಣ ಪ್ರಯೋಗಗಳನ್ನು ರಂಗಾಯಣ ಮಾಡಿದೆ. ಆದರೆ ಮಹಾನ್‌ ಇತಿಹಾಸವನ್ನು ಹೊಂದಿರುವ ರಂಗಾಯಣದ ಚುಕ್ಕಾಣಿ ಹಿಡಿದಿರುವ ಕಾರ್ಯಪ್ಪ ಅವರು ಆಡುವ ಮಾತುಗಳು ಆತಂಕವನ್ನು ಹುಟ್ಟಿಸುತ್ತವೆ. “ಬಹುತ್ವ ನಿಮ್ಮ ಸಿದ್ಧಾಂತ, ಅದನ್ನು ನಿಮ್ಮಲ್ಲಿಯೇ ಇಟ್ಟುಕೊಳ್ಳಿ; ನಮಗಲ್ಲ” ಎನ್ನುವ ಕಾರ್ಯಪ್ಪ ಅವರಿಗೆ ಸಾಂವಿಧಾನಿಕ ಆಶಯಗಳ ಬಗ್ಗೆ ನಂಬಿಕೆ ಇದೆಯೇ? ಬಹುತ್ವ ಸಂವಿಧಾನದ ಸಿದ್ಧಾಂತವೆಂದು ಅವರಿಗೆ ತಿಳಿದಿಲ್ಲವೇ? ಜನರ ತೆರಿಗೆ ಹಣದಲ್ಲಿ ನಡೆಯುವ ರಂಗಾಯಣದ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೀಗೆ ಮಾತನಾಡಬಹುದೇ?


ಇದನ್ನೂ ಓದಿರಿ: ಹೋರಾಟಗಾರ್ತಿ ‘ಸುಧಾ ಭಾರದ್ವಾಜ್‌’ ಅವರಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹುಚ್ಚರಂತೆ ಪ್ರಶ್ನೆ ಮಾಡುತ್ತಿರುವ ಈ ಲೇಖನವನ್ನು ಓದುತಿದ್ದರೆ ಹೊಟ್ಟೆ ಹುಣ್ಣಾಗುವಷ್ಟು ನಗು ಬರುತಿದೆ, ತಲೆ ಬುಡ ವಿಲದಂತೆ ಹೀಗೆ ಏನೇನೋ ಬರೆದರೆ ಜನರು ಇದನ್ನು ಓದಿ ಒಪ್ಪಿಕೊಳುತಾರೆ ಅಂದುಕೊಂಡಿದೀರಾ? ರಾಷ್ಟ್ರದ ಬಗ್ಗೆ ಪ್ರಚಾರ ಮಾಡುವ ಮನುಷ್ಯನನ್ನು ಮೋದಿಯ ಬಗ್ಗೆ 30-40 ಭಾಷಣ ಮಾಡಿದಕ್ಕೆ ಬಿಜೆಪಿ ಪ್ರಚಾರಕ ಎಂದು ಒತ್ತಿ ಒತ್ತಿ ಹೇಳಿದರೆ ಓದುವ ಜನ ನಗುತಾರೆ ಹೊರತು ಇದನ್ನು ಒಪ್ಪಿಕೊಳುವುದಿಲ್ಲ, ವೆಬ್ಸೈಟ್ ನಲ್ಲಿ ಕುಳಿತುಕೊಂಡು ಯಾವದ್ಯಾವುದೋ ವಿಚಾರಗಳ್ಳನ್ನ ಸಂಗ್ರಹಿಸಿ ವೆಬ್ಸೈಟ್ ನಲ್ಲಿ ಬಿಟ್ಟು ಸುಲಭವಾಗಿ ಕುಳಿತಲ್ಲಿಯೇ ದುಡ್ಡು ಮಾಡಿದಷ್ಟು ಸುಲಭವಾಲ್ಲ ಸಾವಿರಾರು ಜನರು ಒಪ್ಪುವಂತೆ ಭಾಷಣ ಮಾಡುವುದು ಅದನ್ನು ಮೊದಲು ತಿಳಿದುಕೊಳ್ಳಿ…..

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...