Homeಕರ್ನಾಟಕಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

"ಬಹುತ್ವ ನಿಮ್ಮ ಸಿದ್ಧಾಂತ, ಅದನ್ನು ನಿಮ್ಮಲ್ಲಿಯೇ ಇಟ್ಟುಕೊಳ್ಳಿ; ನಮಗಲ್ಲ" ಎನ್ನುವ ಕಾರ್ಯಪ್ಪ ಅವರಿಗೆ ಸಾಂವಿಧಾನಿಕ ಆಶಯಗಳ ಬಗ್ಗೆ ನಂಬಿಕೆ ಇದೆಯೇ?

- Advertisement -
- Advertisement -

“ಚಕ್ರವರ್ತಿ ಸೂಲಿಬೆಲೆ ಅವರು ಹೇಳುವುದು ನಿಮಗೆ ಸುಳ್ಳಾಗಿರಬಹುದು, ಆದರೆ ನಮಗಲ್ಲ” ಎಂದು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಹೇಳಿದರು.

ಡಿ.10ರಿಂದ ಡಿ.19ರವರೆಗೆ ನಡೆಯಲಿರುವ ಪ್ರತಿಷ್ಟಿತ ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ’ದ ವಿಚಾರ ಸಂಕಿರಣಕ್ಕೆ ಬಿಜೆಪಿ ಪ್ರಚಾರಕ ಚಕ್ರವರ್ತಿ ಸೂಲಿಬೆಲೆಯವರನ್ನು ಕರೆಸಲಾಗುತ್ತಿದೆ. ಈ ಕುರಿತಂತೆ ಪತ್ರಕರ್ತರು ಪ್ರಶ್ನಿಸಿದಾಗ, ತಮ್ಮ ನಿಲುವನ್ನು ಕಾರ್ಯಪ್ಪ ಅವರು ಸಮರ್ಥಿಸಿಕೊಂಡಿದ್ದಾರೆ. ಚಕ್ರವರ್ತಿ ಸೂಲಿಬೆಲೆಯವರಿಗೆ ‘ಸಮಾಜ ಸೇವಕ’ ಎಂದು ವಿಶೇಷಣವನ್ನು ನೀಡಿರುವ ಕುರಿತು ಪತ್ರಕರ್ತರು ಪ್ರಶ್ನಿಸಿದಾಗ ಉಡಾಫೆಯಾಗಿ ಕಾರ್ಯಪ್ಪ ಅವರು ಉತ್ತರಿಸಿದ್ದಾರೆ.

ಅಡ್ಡಂಡ ಸಿ.ಕಾರ್ಯಪ್ಪ ಅವರು ಮೈಸೂರು ರಂಗಾಯಣದ ನಿರ್ದೇಶಕರಾದ ಬಳಿಕ ಒಂದಿಲ್ಲೊಂದು ವಿವಾದಗಳಲ್ಲಿ ರಂಗಾಯಣ ಸಿಲುಕುತ್ತಲೇ ಇದ್ದು, ಪ್ರಸಕ್ತ ಬಹುರೂಪಿ ಕಾರ್ಯಕ್ರಮವೂ ಮತ್ತೊಂದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಬಲಪಂಥೀಯ ವಿಚಾರಧಾರೆಯ ಅಡ್ಡಂಡ ಸಿ.ಕಾರ್ಯಪ್ಪ ಅವರು ಅದೇ ವಿಚಾರಧಾರೆಯುಳ್ಳವರನ್ನು ಹೆಚ್ಚಿನ ಸಂಖ್ಯೆಯಲ್ಲಿ ರಂಗಾಯಣಕ್ಕೆ ಕರೆಸಿಕೊಳ್ಳುವುದು ಮತ್ತು ಹೆಚ್ಚಿನ ಅವಕಾಶ ನೀಡುವುದು ಈಗ ಗುಟ್ಟಿನ ವಿಷಯವೇನಲ್ಲ. ಆದರೆ ಸಾರ್ವಜನಿಕ ಜೀವನದಲ್ಲಿ ಸಾಕಷ್ಟು ಸುಳ್ಳುಗಳನ್ನು ಹೇಳುತ್ತಾ, ಸುಳ್ಳು ಸುದ್ದಿಗಳನ್ನು ಹರಡುತ್ತಾ, ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಒಳಗಾಗಿರುವ ಚಕ್ರವರ್ತಿ ಸೂಲಿಬೆಲೆ ಅಂಥವರನ್ನು ಬಹುರೂಪಿ ನಾಟಕೋತ್ಸವ ವಿಚಾರಸಂಕಿರಣದ ಸಮಾರೋಪ ಭಾಷಣಕ್ಕೆ ಕರೆಸುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?


ಡಿಸೆಂಬರ್‌ 10ರಿಂದ ಡಿ.19ರವರೆಗೆ ಬಹುರೂಪಿ ನಡೆಯಲಿದ್ದು, ಉದ್ಘಾಟನಾ ಸಮಾರಂಭ ಡಿಸೆಂಬರ್‌‌ 11ರಂದು ಜರುಗಲಿದೆ. ಡಿಸೆಂಬರ್‌ 12 ಮತ್ತು 13ರಂದು ಬಹುರೂಪಿ ವಿಚಾರಸಂಕಿರಣ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ. ಡಿ.13ರಂದು ನಡೆಯುವ ಭಾಷಣ ಸ್ಪರ್ಧೆಯ ಬಳಿಕ, ಅಂದು ಸಂಜೆ 4 ಗಂಟೆಗೆ ಬಿಜೆಪಿ ಪ್ರಚಾರಕ ಚಕ್ರವರ್ತಿ ಸೂಲಿಬೆಲೆಯವರು ವಿಚಾರಸಂಕಿರಣದ ಸಮಾರೋಪ ಭಾಷಣ ಮಾಡಲಿದ್ದಾರೆ.

“ಚಕ್ರವರ್ತಿ ಸೂಲಿಬೆಲೆಯವರು ಸಮಾರೋಪ ಭಾಷಣಕ್ಕೆ ಸೂಕ್ತವ್ಯಕ್ತಿ ಎನಿಸಿದ್ದರಿಂದ ನಾವು ಕರೆದಿದ್ದೇವೆ. ಚಕ್ರವರ್ತಿ ಸೂಲಿಬೆಲೆಯವರ ವಿಚಾರವನ್ನು ಬಿಟ್ಟುಬಿಡಿ. ಅವರನ್ನು ಕರೆದಿದ್ದೇವೆ. ಬರ್ತಾರೆ, ಸಮಾರೋಪ ಭಾಷಣ ಮಾಡ್ತಾರೆ. ಆ ಭಾಷಣದಲ್ಲಿ ದೋಷಗಳನ್ನು ಕಂಡು ಹಿಡಿದು ಅದನ್ನು ಪ್ರಕಟಿಸಿ, ಅದು ನಿಮ್ಮ ಸ್ವಾತಂತ್ರ್ಯ” ಎಂದು ಪತ್ರತರ್ಕರಿಗೆ ಬೋಧನೆ ಮಾಡಿದ್ದಾರೆ.

“ಜನರಿಗೆ ಇವರಿಂದ ಏನು ಸಂದೇಶ ಕೊಡುತ್ತೀರಿ?” ಎಂದು ಕೇಳಿದರೆ, “ಯುವಕರಿಗೆ ಸಂದೇಶವನ್ನು ಕೊಡುತ್ತೀವಿ” ಎಂದಿದ್ದಾರೆ. “ನಾವು ಚರ್ಚೆ ಮಾಡಿ ಒಂದಿಷ್ಟು ಜನರನ್ನು ಕರೆದಿದ್ದೇವೆ” ಎಂದು ಕಾರ್ಯಪ್ಪ ಪ್ರತಿಕ್ರಿಯೆ ನೀಡುತ್ತಾರೆ. “ಚಕ್ರವರ್ತಿ ಸೂಲಿಬೆಲೆಯವರು ರೈತರ ಬಗ್ಗೆ, ರಂಗಭೂಮಿ ಬಗ್ಗೆ ಯಾವತ್ತೂ ಮಾತನಾಡಲ್ಲ. ಯಾರೋ ಒಬ್ಬರನ್ನು ಒಲೈಸುತ್ತಾರೆ” ಎಂದು ಪತ್ರಕರ್ತರು ಕೇಳಿದರೆ, “ಮಾಧ್ಯಮದ ಕೆಲವರಿಗೆ ಹಾಗೆ ಅನ್ನಿಸಿರಬಹುದು, ಎಲ್ಲರಿಗೂ ಅಲ್ಲ” ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿರಿ: ಮಾಂಸಾಹಾರದ ಮೇಲಿನ ಕೀಳರಿಮೆ ತೊಲಗಬೇಕಿದೆ: ಚಿತ್ರಸಾಹಿತಿ ಕವಿರಾಜ್‌ ಬರಹಕ್ಕೆ ಮಿಡಿದ ಕನ್ನಡಿಗರು


ಹೆಚ್ಚಿನ ವಿವರಗಳಿಗಾಗಿ ಅಡ್ಡಂಡ ಕಾರ್ಯಪ್ಪ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗಲೂ ಹೀಗೆಯೇ ಉಡಾಫೆ ಉತ್ತರಗಳನ್ನೇ ನೀಡಿದರು. “ಚಕ್ರವರ್ತಿ ಸೂಲಿಬೆಲೆಯವರು ಸುಳ್ಳುಗಳನ್ನು ಹೇಳುತ್ತಾ ಬಂದಿದ್ದಾರೆ. ಅವರನ್ನು ಕರೆಸುವುದು ಎಷ್ಟು ಸರಿ? ಸಂಘಪರಿವಾರದ ವಿಚಾರಧಾರೆಗಳ ವ್ಯಕ್ತಿಗಳಾದರೂ ಎಲ್ಲ ಜನವರ್ಗವನ್ನು ಗೌರವಿಸುವ ಬಲಪಂಥೀಯರನ್ನು ಕರೆಸಬಹುದಲ್ಲ?” ಎಂದು ಕೇಳಿದೆವು. ನಮ್ಮ ಮಾಧ್ಯಮದ ಕುರಿತೂ ಲಘುವಾಗಿ ಮಾತನಾಡುತ್ತಲೇ ಉತ್ತರಿಸಿದ ಅವರು, “ನಿಮಗೆ ಅವರು ಸುಳ್ಳು ಹೇಳಿದ್ದಾರೆಂದು ಅನಿಸಬಹುದು. ಆದರೆ ನಮಗೆ ಅವರು ಸತ್ಯಗಳನ್ನು ಹೇಳುತ್ತಿದ್ದಾರೆ ಅನಿಸುತ್ತದೆ. ಅವರನ್ನು ಕಂಡರೆ ನಿಮಗೆ ಆಗಲ್ಲ, ನಮಗೆ ಅವರನ್ನು ಕಂಡರೆ ಆಗುತ್ತದೆ” ಎಂದರು.

“ಬಹುರೂಪಿಯು ಬಹುತ್ವವನ್ನು ಪ್ರತಿನಿಧಿಸುವ ಒಂದು ಕಾರ್ಯಕ್ರಮ. ಬಹುತ್ವದ ಬಗ್ಗೆ ನಂಬಿಕೆ ಇರದವರನ್ನು ವೇದಿಕೆಗೆ ಕರೆಸುವುದು ಎಷ್ಟು ಸರಿ?” ಎಂದು ಕೇಳಿದರೆ, “ಈ ಸಿದ್ಧಾಂತವನ್ನೆಲ್ಲ ನಿಮಗೆ ಇಟ್ಟುಕೊಳ್ಳಿ. ನಮಗಲ್ಲ. ಇನ್ನೊಬ್ಬರನ್ನು ಓಲೈಸಲು ಆಗಲ್ಲ. ಸೂಲಿಬೆಲೆ ನಿಮಗೆ ಸುಳ್ಳುಗಾರರಾಗಿರಬಹುದು. ನಮಗೆ ಸುಳ್ಳುಗಾರನಲ್ಲ. ಒಂದು ವರ್ಷ ಅಧಿಕಾರದಲ್ಲಿರುತ್ತೇನೆ, ಏನು ಬರೆದುಕೊಳ್ಳುತ್ತೀರೋ ಬರೆದುಕೊಳ್ಳಿ. ಯಾವುದಕ್ಕೂ ಧೃತಿಗೆಡುವುದಿಲ್ಲ” ಎಂದ ಅವರು ಬಹುತ್ವದ ವಿಷಯವನ್ನೇ ನಿರಾಕರಿಸಿದರು.

“ಸ್ವತಃ ಚಕ್ರವರ್ತಿ ಸೂಲಿಬೆಲೆಯವರೇ ತಾವು ಹೇಳಿರುವ ಮಾತುಗಳನ್ನು ಸತ್ಯವೆಂದು ಸಾಬೀತು ಮಾಡಲು ಸಾಧ್ಯವಾಗದಿರುವಾಗ, ನೀವು ಹೇಗೆ ಅವರು ಹೇಳುತ್ತಿರುವುದು ಸತ್ಯ ಎಂದು ಸಾಬೀತು ಮಾಡುತ್ತೀರಿ?” ಎಂದು ಕೇಳಿದೆವು. “ನಾನು ಅಷ್ಟು ಆಳಕ್ಕೆ ಇಳಿದಿಲ್ಲರ್‍ರೀ, ನೀವು ಆಳಕ್ಕೆ ಇಳಿದು ಏಕಮುಖ ವಿಚಾರಗಳನ್ನು ಬಿತ್ತುವ ಜನ್ಮದಲ್ಲಿ ಹುಟ್ಟಿದ್ದೀರಿ, ವಿವಾದ ಮಾಡಿಕೊಳ್ಳಿ” ಎಂದು ಹೇಳುತ್ತಾ ಮಾತುಮುಗಿಸಿದರು.

ಎಲ್ಲ ಜನವರ್ಗವನ್ನು ಕಟ್ಟು ನಿಟ್ಟಿನಲ್ಲಿ ರಂಗಾಯಣ ಮಾಡಿರುವ ಕೆಲಸಕ್ಕೆ ಅದರದ್ದೇ ಆದ ತೂಕವಿದೆ. ಬಿ.ವಿ.ಕಾರಂತರಂತಹ ರಂಗಭೂಮಿ ಭೀಷ್ಮರು ಕಟ್ಟಿದ ರಂಗಾಯಣದಲ್ಲಿ ಹಲವು ಮಹನೀಯರು ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅರ್ಥಪೂರ್ಣ ಪ್ರಯೋಗಗಳನ್ನು ರಂಗಾಯಣ ಮಾಡಿದೆ. ಆದರೆ ಮಹಾನ್‌ ಇತಿಹಾಸವನ್ನು ಹೊಂದಿರುವ ರಂಗಾಯಣದ ಚುಕ್ಕಾಣಿ ಹಿಡಿದಿರುವ ಕಾರ್ಯಪ್ಪ ಅವರು ಆಡುವ ಮಾತುಗಳು ಆತಂಕವನ್ನು ಹುಟ್ಟಿಸುತ್ತವೆ. “ಬಹುತ್ವ ನಿಮ್ಮ ಸಿದ್ಧಾಂತ, ಅದನ್ನು ನಿಮ್ಮಲ್ಲಿಯೇ ಇಟ್ಟುಕೊಳ್ಳಿ; ನಮಗಲ್ಲ” ಎನ್ನುವ ಕಾರ್ಯಪ್ಪ ಅವರಿಗೆ ಸಾಂವಿಧಾನಿಕ ಆಶಯಗಳ ಬಗ್ಗೆ ನಂಬಿಕೆ ಇದೆಯೇ? ಬಹುತ್ವ ಸಂವಿಧಾನದ ಸಿದ್ಧಾಂತವೆಂದು ಅವರಿಗೆ ತಿಳಿದಿಲ್ಲವೇ? ಜನರ ತೆರಿಗೆ ಹಣದಲ್ಲಿ ನಡೆಯುವ ರಂಗಾಯಣದ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೀಗೆ ಮಾತನಾಡಬಹುದೇ?


ಇದನ್ನೂ ಓದಿರಿ: ಹೋರಾಟಗಾರ್ತಿ ‘ಸುಧಾ ಭಾರದ್ವಾಜ್‌’ ಅವರಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹುಚ್ಚರಂತೆ ಪ್ರಶ್ನೆ ಮಾಡುತ್ತಿರುವ ಈ ಲೇಖನವನ್ನು ಓದುತಿದ್ದರೆ ಹೊಟ್ಟೆ ಹುಣ್ಣಾಗುವಷ್ಟು ನಗು ಬರುತಿದೆ, ತಲೆ ಬುಡ ವಿಲದಂತೆ ಹೀಗೆ ಏನೇನೋ ಬರೆದರೆ ಜನರು ಇದನ್ನು ಓದಿ ಒಪ್ಪಿಕೊಳುತಾರೆ ಅಂದುಕೊಂಡಿದೀರಾ? ರಾಷ್ಟ್ರದ ಬಗ್ಗೆ ಪ್ರಚಾರ ಮಾಡುವ ಮನುಷ್ಯನನ್ನು ಮೋದಿಯ ಬಗ್ಗೆ 30-40 ಭಾಷಣ ಮಾಡಿದಕ್ಕೆ ಬಿಜೆಪಿ ಪ್ರಚಾರಕ ಎಂದು ಒತ್ತಿ ಒತ್ತಿ ಹೇಳಿದರೆ ಓದುವ ಜನ ನಗುತಾರೆ ಹೊರತು ಇದನ್ನು ಒಪ್ಪಿಕೊಳುವುದಿಲ್ಲ, ವೆಬ್ಸೈಟ್ ನಲ್ಲಿ ಕುಳಿತುಕೊಂಡು ಯಾವದ್ಯಾವುದೋ ವಿಚಾರಗಳ್ಳನ್ನ ಸಂಗ್ರಹಿಸಿ ವೆಬ್ಸೈಟ್ ನಲ್ಲಿ ಬಿಟ್ಟು ಸುಲಭವಾಗಿ ಕುಳಿತಲ್ಲಿಯೇ ದುಡ್ಡು ಮಾಡಿದಷ್ಟು ಸುಲಭವಾಲ್ಲ ಸಾವಿರಾರು ಜನರು ಒಪ್ಪುವಂತೆ ಭಾಷಣ ಮಾಡುವುದು ಅದನ್ನು ಮೊದಲು ತಿಳಿದುಕೊಳ್ಳಿ…..

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...