Homeಮುಖಪುಟಚುನಾವಣಾ ಬಾಂಡ್‌: SBI ಕಾಲಾವಕಾಶ ಕೋರಿರುವುದರ ವಿರುದ್ಧ ಭುಗಿಲೆದ್ದ ಆಕ್ರೋಶ

ಚುನಾವಣಾ ಬಾಂಡ್‌: SBI ಕಾಲಾವಕಾಶ ಕೋರಿರುವುದರ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಸಾರ್ವಜನಿಕ ಚುನಾವಣಾ ಬಾಂಡ್ ವಿವರಗಳನ್ನು ನೀಡಲು ಜೂನ್ 30ರವರೆಗೆ ಮೂರುವರೆ ತಿಂಗಳಿಗಿಂತ ಹೆಚ್ಚು ಹೆಚ್ಚುವರಿ ಸಮಯವನ್ನು ಕೋರಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅರ್ಜಿ ಬಗ್ಗೆ ವ್ಯಾಪಕವಾದಂತಹ ಆಕ್ರೋಶ ವ್ಯಕ್ತವಾಗಿದೆ. ಸುಪ್ರೀಂಕೋರ್ಟ್‌ ಆದೇಶವಿರುವಾಗ ಎಸ್‌ಬಿಐ ಈ ಮಾಹಿತಿಯನ್ನು ಚುನಾವಣೆಯ ಮೊದಲು ಏಕೆ ಸಾರ್ವಜನಿಕಗೊಳಿಸುತ್ತಿಲ್ಲ? ಎಂದು ಪ್ರತಿಪಕ್ಷಗಳ ನಾಯಕರು ಸೇರಿದಂತೆ ಹಲವರು ಪ್ರಶ್ನಿಸಿದ್ದಾರೆ.

ಎಸ್‌ಬಿಐಯ ಅರ್ಜಿ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನರೇಂದ್ರ ಮೋದಿಯವರು ದೇಣಿಗೆ ವ್ಯವಹಾರವನ್ನು ಮರೆಮಾಚಲು ತಮ್ಮ ಕೈಲಾದಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಚುನಾವಣಾ ಬಾಂಡ್‌ಗಳ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ದೇಶವಾಸಿಗಳ ಹಕ್ಕು ಎಂದು ಸುಪ್ರೀಂಕೋರ್ಟ್ ಹೇಳಿರುವಾಗ, ಎಸ್‌ಬಿಐ ಈ ಮಾಹಿತಿಯನ್ನು ಚುನಾವಣೆಯ ಮೊದಲು ಸಾರ್ವಜನಿಕಗೊಳಿಸಬಾರದು ಎಂದು ಏಕೆ ಬಯಸುತ್ತಿದೆ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಒಂದೇ ಕ್ಲಿಕ್‌ನಲ್ಲಿ ಪಡೆಯಬಹುದಾದ ಮಾಹಿತಿಯನ್ನು ನೀಡಲು ಜೂನ್ 30ರವರೆಗೆ ಸಮಯ ಕೇಳುವುದು, ಅದರ ಹಿಂದಿನ ಉದ್ದೇಶವನ್ನು ತೋರಿಸುತ್ತದೆ. ದೇಶದ ಪ್ರತಿಯೊಂದು ಸ್ವತಂತ್ರ ಸಂಸ್ಥೆಗಳು ತಮ್ಮ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ‘ಮೋದಾನಿ’ ಕುಟುಂಬದ ಭಾಗವಾಗುತ್ತಿದೆ. ಚುನಾವಣೆಗೂ ಮುನ್ನ ಮೋದಿಯ ನಿಜಮುಖವನ್ನು ಮರೆ ಮಾಚಲು ಇದು ಕೊನೆಯ ಪ್ರಯತ್ನ ಎಂದು ಹೇಳಿದ್ದಾರೆ.

ಚುನಾವಣಾ ಬಾಂಡ್‌ಗಳ ಮಾಹಿತಿ ನೀಡಲು ಸಮಯಾವಕಾಶ ಕೇಳಿದ ಎಸ್‌ಬಿಐ ಬೇಡಿಕೆ ವಿಚಾರವನ್ನು ಮುಂದಿಟ್ಟುಕೊಂಡು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಶಿವಸೇನೆ ಸಂಸದ ಸಂಜಯ್ ರಾವತ್, ‘ಇಂಡಿಯಾವನ್ನು ‘ಡಿಜಿಟಲ್ ಇಂಡಿಯಾ’ಕ್ಕೆ ಬದಲಾಯಿಸಿದ ಪ್ರಧಾನಿಯನ್ನು ಬ್ಯಾಂಕ್ ಅಧಿಕಾರಿಗಳು ಅವಮಾನಿಸಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ. ಎಸ್‌ಬಿಐ ಅಧ್ಯಕ್ಷರು ಮತ್ತು ನಿರ್ದೇಶಕರು “ನಮ್ಮ ಪ್ರಧಾನಿ ಮೋದಿಯನ್ನು ಅವಮಾನಿಸಿದ್ದಕ್ಕಾಗಿ ಅವರನ್ನು ಶಿಕ್ಷಿಸಬೇಕು” ಎಂದು ಹೇಳಿದ್ದಾರೆ.

ಈ ಬಗ್ಗೆ ಲೇವಡಿ ಮಾಡಿರುವ ರಾವತ್ಮ ‘ಮೋದಿಜಿ ಇಂಡಿಯಾವನ್ನು ಬದಲಾಯಿಸಿದ್ದಾರೆ, ಈಗ ಅದು ಡಿಜಿಟಲ್ ಇಂಡಿಯಾ! ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಲ್ಲಿಸಲು ಎಸ್‌ಬಿಐ ಸುಪ್ರೀಂ ಕೋರ್ಟ್‌ಗೆ 4 ತಿಂಗಳ ಸಮಯವನ್ನು ಕೇಳಿದೆ’ ಎಂದು ಪ್ರಧಾನಿ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

‘365 ದಿನಗಳು 9 ವರ್ಷ 10 ತಿಂಗಳು 20 ಗಂಟೆ ದುಡಿಯುತ್ತಿರುವ ನಮ್ಮ ಪ್ರೀತಿಯ ಪ್ರಧಾನಿ ಮೋದಿಜಿಯನ್ನು ಅವಮಾನಿಸಲು ಅವರಿಗೆ ಎಷ್ಟು ಧೈರ್ಯ!  ಈ ‘ಕಾಮ್ ಚೋರ್‌’ಗೆ 4 ತಿಂಗಳು ಬೇಕೇ? ಅವರೆಲ್ಲರನ್ನೂ ಜೈಲಿಗೆ ಕಳುಹಿಸಿ’ ಎಂದು ಸಂಜಯ್ ರಾವುತ್ ಬರೆದುಕೊಂಡಿದ್ದಾರೆ.

ಈ ಬಗ್ಗೆ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಪ್ರತಿಕ್ರಿಯಿಸಿದ್ದು, ಇದು ಸಂಪೂರ್ಣ ದುರುದ್ದೇಶಪೂರಿತವಾಗಿದೆ. ಎಸ್‌ಬಿಐ ಈ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕಿದ್ದ ಒಂದು ದಿನ ಮುಂಚಿತವಾಗಿ ಈ ಅರ್ಜಿಯನ್ನು ಸಲ್ಲಿಸಿದೆ. ಮೂರು ದಿನಗಳ ಕಾಲ ಅವರು ಏನೂ ಮಾಡಲಿಲ್ಲ, ಮತ್ತು ಈಗ ಅವರು ಚುನಾವಣೆ ಕಳೆದ ಬಳಿಕ ಅಂದರೆ ಜೂನ್ 30ರವರೆಗೆ ವಿಸ್ತರಣೆಗೆ ಕೋರಿರುವುದು ಏಕೆ? ಏಕೆಂದರೆ ಸರ್ಕಾರ ಅವರನ್ನು ಈ ಅರ್ಜಿಯನ್ನು ಸಲ್ಲಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.

 

ಈ ಕುರಿತು ಪ್ರತಿಕ್ರಿಯಿಸಿದ ತನಿಖಾ ಪತ್ರಕರ್ತ ಸೌರವ್‌ ದಾಸ್‌, ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ಡೇಟಾವನ್ನು ಎಸ್‌ಬಿಐ ಸುಲಭವಾಗಿ ನಾಶಪಡಿಸಲು ಸಾಧ್ಯವಿದೆ ಎಂಬುದಕ್ಕೆ ಇದು ಪುರಾವೆಯಾಗಿದೆ. ಹೆಚ್ಚು ಸಮಯವನ್ನು ಕೇಳುವ ಮೂಲಕ ಅವರು ಸುಳ್ಳು ಸಾಕ್ಷಿ ಹೇಳುತ್ತಿದ್ದಾರೆಯೇ? ಸಂವಿಧಾನ ಪೀಠ ಈ ಬಗ್ಗೆ ಎಸ್ಬಿಐ ಮುಖ್ಯಸ್ಥರಿಗೆ ಸಮನ್ಸ್ ನೀಡಬೇಕು ಎಂದು ಹೇಳಿದ್ದಾರೆ. 

ಅತ್ಯಂತ ಚಿಕ್ಕ ಬ್ಯಾಂಕ್ ಕೂಡ ಕೆಲವು ವಾರಗಳಲ್ಲಿ ಮೂಲಭೂತ ಮಾಹಿತಿಯನ್ನು (ದಾನಿ ಮತ್ತು ಸ್ವೀಕರಿಸುವವರನ್ನು) ನೀಡಲು ಸಾಧ್ಯವಿಲ್ಲ ಎಂದು ಹೇಳಿದರೆ, ಅದರ ಬ್ಯಾಂಕಿಂಗ್ ಪರವಾನಗಿಯನ್ನು ಮೂಲ ದಾಖಲೆ ರಕ್ಷಣೆ ನಿಯಮಗಳ ಉಲ್ಲಂಘನೆಗೆ ರದ್ದುಗೊಳಿಸಲಾಗುತ್ತದೆ. ಇದು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯ ಅತಿದೊಡ್ಡ ಬ್ಯಾಂಕ್ ಆಗಿದೆ ಎಂದು ತಮಿಳುನಾಡಿನ ಸಚಿವ ತ್ಯಾಗರಾಜನ್‌ ಪೋಸ್ಟ್‌ ಮಾಡಿದ್ದಾರೆ.

 

ಈ ಕುರಿತು ಕಾಂಗ್ರೆಸ್‌ ನಾಯಕಿ ಸುಪ್ರಿಯಾ ಶ್ರೀನಾಟೆ ಪ್ರತಿಕ್ರಿಯಿಸಿದ್ದು, ಎಸ್‌ಬಿಐ ಚುನಾವಣಾ ಬಾಂಡ್‌ಗಳ ಮಾಲೀಕರ ವಿವರಗಳನ್ನು ಬಹಿರಂಗಪಡಿಸುವ 24 ಗಂಟೆಗಳ ಮೊದಲು, ಅವರ ಹೆಸರನ್ನು ಸಾರ್ವಜನಿಕಗೊಳಿಸಲು ಜೂನ್ 30, 2024 ರವರೆಗೆ ಸಮಯ ಕೇಳಿದೆ. ಕೇವಲ 22,217 ಎಲೆಕ್ಟೋರಲ್ ಬಾಂಡ್‌ಗಳ ವಿವರಗಳನ್ನು ನೀಡಲು ದೇಶದ ಅತಿದೊಡ್ಡ ಬ್ಯಾಂಕ್‌ಗೆ 5 ತಿಂಗಳ ಸಮಯ ಏಕೆ ಬೇಕು? ಬಿಜೆಪಿಗೆ ಯಾಕೆ ಇಷ್ಟೊಂದು ಭಯ? ಸಂಸ್ಥೆಗಳು ಬಿಜೆಪಿಗೆ ದೇಣಿಗೆ ನೀಡುವಂತೆ ಕಂಪನಿಗಳನ್ನು ಒತ್ತಾಯಿಸುತ್ತಿವೆಯೇ? ಇದು ವಿವರಗಳನ್ನು ಮರೆಮಾಚಲು ಪ್ರಧಾನಿ ಮೋದಿ ಮತ್ತು ಬಿಜೆಪಿಯ ಆದೇಶದ ಸ್ಪಷ್ಟ ಪ್ರಯತ್ನವಾಗಿದೆ. ಈ ಕೆಟ್ಟ ಸಂಚನ್ನು ಜನರು ನೋಡಬಹುದು. ಎಸ್‌ಬಿಐ ರಾಜಕೀಯ ಪಕ್ಷವೊಂದರ ಕೈಯಲ್ಲಿದ್ದು ಜೊತೆಗೆ ತನ್ನದೇ ಆದ ಖ್ಯಾತಿಯನ್ನು ಹಾಳುಮಾಡಿಕೊಳ್ಳುವುದರ ಜೊತೆಗೆ, ದೇಶದ ಅತಿದೊಡ್ಡ ಬ್ಯಾಂಕ್ ಸುಪ್ರೀಂಕೋರ್ಟ್‌ ಆದೇಶವನ್ನು ಉಲ್ಲಂಘಿಸುತ್ತಿದೆ ಎಂದು ಹೇಳಿದ್ದಾರೆ.

ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ನೀಡಲು ಜೂನ್ 30ರವರೆಗೆ ಗಡುವನ್ನು ವಿಸ್ತರಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಕಳೆದ ತಿಂಗಳು ಐತಿಹಾಸಿಕ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿತ್ತು ಮತ್ತು ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ (ಇಸಿ) ಬಾಂಡ್‌ಗಳ ಕುರಿತು ಮಾಹಿತಿ ನೀಡುವಂತೆ ಎಸ್‌ಬಿಐಗೆ ಸೂಚಿಸಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಮನೀಶ್‌ ತಿವಾರಿ, ಎಲೆಕ್ಟೋರಲ್ ಬಾಂಡ್‌ಗಳ ಮೇಲಿನ ವಂಚನೆಯಿಂದ ತಪ್ಪಿಸಿಕೊಳ್ಳಲು ಎಸ್‌ಬಿಐ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಅವಕಾಶ ನೀಡಬಾರದು. ಸಾರ್ವತ್ರಿಕ ಚುನಾವಣೆಯ ಮೊದಲು ಯಾರಿಂದ ಏನನ್ನು ಪಡೆದರು ಎಂಬುವುದನ್ನು ಜನರು ಅರಿಯಬೇಕು ಎಂದು ಹೇಳಿದ್ದಾರೆ.

ಚುನಾವಣಾ ಬಾಂಡ್:

ಜನ ಸಾಮಾನ್ಯರು, ಕಾರ್ಪೊರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ನೀಡುವ ಒಂದು ವಿಧದ ದೇಣಿಗೆ ಕ್ರಮವಾಗಿದೆ ಚುನಾವಣಾ ಬಾಂಡ್. ಜನರು 1,000 ರೂ, 10,000 ರೂ, 1 ಲಕ್ಷ ರೂ, 10 ಲಕ್ಷ ರೂ, 1 ಕೋಟಿ ರೂ ಇತ್ಯಾದಿ ಮುಖಬೆಲೆಗಳಲ್ಲಿ ಬಾಂಡ್​ಗಳನ್ನು ಖರೀದಿಸಬಹುದಿತ್ತು. ಈ ಬಾಂಡ್​ಗಳು ಅನಾಮಧೇಯವಾಗಿತ್ತು. ಅಂದರೆ, ಇದನ್ನು ಖರೀದಿಸಿದ ವ್ಯಕ್ತಿ ಅಥವಾ ಸಂಸ್ಥೆಯ ಹೆಸರು ಬಹಿರಂಗಗೊಳ್ಳುತ್ತಿರಲಿಲ್ಲ. ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ಕೊಡಲಾಗಿದೆ ಆ ಪಕ್ಷ ಹೆಸರೂ ಬಹಿರಂಗವಾಗುತ್ತಿರಲಿಲ್ಲ.

ಜನವರಿ 2,2018ರಂದು ಅಂದಿನ ಮೋದಿ ಸರ್ಕಾರ ಚುನಾವಣಾ ಬಾಂಡ್ ಯೋಜನೆಗೆ ಅಧಿಸೂಚನೆ ಹೊರಡಿಸಿತ್ತು. ಚುನಾವಣಾ ಬಾಂಡ್​ಗಳನ್ನು ಹಣಕಾಸು ಕಾಯ್ದೆ 2017ರ ತಿದ್ದುಪಡಿ ಮೂಲಕ ಜಾರಿಗೆ ತರಲಾಗಿತ್ತು. ಈ ಬಾಂಡ್​ಗಳನ್ನು ವರ್ಷಕ್ಕೆ ನಾಲ್ಕು ಬಾರಿ, ಅಂದರೆ ಜನವರಿ, ಏಪ್ರಿಲ್, ಜುಲೈ ಹಾಗೂ ಅಕ್ಟೋಬರ್​ನಲ್ಲಿ ನೀಡಲಾಗುತ್ತಿತ್ತು. ಜನರು ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಮೂಲಕ ಅಥವಾ ವೆಬ್​ಸೈಟ್​ನಲ್ಲಿ ಆನ್​ಲೈನ್​ನಲ್ಲಿ ಇದನ್ನು ಖರೀದಿಸಬಹುದಿತ್ತು.

ಇದನ್ನು ಓದಿ:  ನೀವು ಜೈ ಶ್ರೀರಾಮ್ ಘೋಷಣೆ ಕೂಗಬೇಕು, ಹಸಿವಿನಿಂದ ಸಾಯಬೇಕೆಂದು ಪ್ರಧಾನಿ ಬಯಸುತ್ತಾರೆ: ರಾಹುಲ್‌ ಗಾಂಧಿ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...