Homeಮುಖಪುಟರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು 'ವಂಚನೆ' ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು...

ರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು ಸಿದ್ದತೆ

- Advertisement -
- Advertisement -

ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ನಿರ್ದೇಶಕ ಅನಿಲ್ ಅಂಬಾನಿ ಅವರನ್ನು ‘ವಂಚನೆ’ ಎಂದು ವರ್ಗೀಕರಿಸಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), ಈ ಕುರಿತು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ದೂರು ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ.

ರಿಸರ್ವ್ ಬ್ಯಾಂಕ್‌ನ ವಂಚನೆ ಅಪಾಯ ನಿರ್ವಹಣೆಯ ಕುರಿತಾದ ನಿರ್ದೇಶನಗಳು ಮತ್ತು ವಂಚನೆಗಳ ವರ್ಗೀಕರಣ, ವರದಿ ಹಾಗೂ ನಿರ್ವಹಣೆಯ ಕುರಿತಾದ ನೀತಿಗೆ ಅನುಗುಣವಾಗಿ ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ನಿರ್ದೇಶಕರನ್ನು ಜೂನ್ 13 ರಂದು ‘ವಂಚನೆ’ ಎಂದು ಎಸ್‌ಬಿಐ ವರ್ಗೀಕರಿಸಿದೆ. ಇದೀಗ ಸಿಬಿಐಗೆ ದೂರು ಸಲ್ಲಿಸಲು ಮುಂದಾಗಿದೆ ಎಂದು ಲೋಕಸಭೆಗೆ ನಿಡಿದ ಲಿಖಿತ ಉತ್ತರದಲ್ಲಿ ಪಂಕಜ್ ಚೌಧರಿ ತಿಳಿಸಿದ್ದಾರೆ.

ವಂಚನೆ ಎಂದು ವರ್ಗೀಕರಿಸಿರುವ ಕುರಿತು ಎಸ್‌ಬಿಐ ಜೂನ್ 24 ರಂದು ಆರ್‌ಬಿಐಗೆ ವರದಿ ಮಾಡಿದೆ. ಜುಲೈ 1 ರಂದು, ರಿಲಯನ್ಸ್ ಕಮ್ಯುನಿಕೇಷನ್ಸ್ ತನ್ನ ಬಹಿರಂಗಪಡಿಸುವಿಕೆಯ ಅನುಸರಣೆಯ ಭಾಗವಾಗಿ ವಂಚನೆ ವರ್ಗೀಕರಣದ ಬಗ್ಗೆ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ಗೆ ಮಾಹಿತಿ ನೀಡಿದೆ ಎಂದು ಸಚಿವ ಚೌಧರಿ ವಿವರಿಸಿದ್ದಾರೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ಗೆ ಎಸ್‌ಬಿಐ ನೀಡಿರುವ ಸಾಲದಲ್ಲಿ ಫಂಡ್-ಬೇಸ್ಡ್ ಪ್ರಿನ್ಸಿಪಲ್ ಬಾಕಿ 2,227.64 ಕೋಟಿ ರೂಪಾಯಿಗಳು. ಇದರ ಜೊತೆಗೆ, ಆಗಸ್ಟ್ 26, 2016 ರಿಂದ ಸಂಗ್ರಹವಾದ ಬಡ್ಡಿ ಮತ್ತು ಇತರ ವೆಚ್ಚಗಳು ಹಾಗೂ ನಾನ್-ಫಂಡ್ ಬೇಸ್ಡ್ ಬ್ಯಾಂಕ್ ಗ್ಯಾರಂಟಿ 786.52 ಕೋಟಿ ರೂಪಾಯಿ ಸೇರಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

2016ರ ದಿವಾಳಿತನ ಸಂಹಿತೆಯ ಅಡಿಯಲ್ಲಿ ಟೆಲಿಕಾಂ ಸಂಸ್ಥೆಯು ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಗೆ ಒಳಗಾಗುತ್ತಿದೆ ಎಂದು ತಿಳಿಸಿದ್ದಾರೆ.

ದಿವಾಳಿತನ ಪ್ರಕರಣಗಳನ್ನು ಪರಿಹರಿಸಲು ಮತ್ತು ನಿಷ್ಕ್ರಿಯ ಸ್ವತ್ತುಗಳನ್ನು ತ್ವರಿತವಾಗಿ ಬಿಡುಗಡೆ ಮಾಡಲು ಈ ಸಂಹಿತೆಯು ಕಾನೂನು ಚೌಕಟ್ಟನ್ನು ಒದಗಿಸುತ್ತದೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ಗೆ ಸಂಬಂಧಿಸಿದ ಸಾಲ ಪರಿಹಾರ ಯೋಜನೆಯನ್ನು (ರೆಸಲ್ಯೂಶನ್ ಪ್ಲಾನ್) ಕ್ರೆಡಿಟರ್‌ಗಳ ಸಮಿತಿಯು (ಕಮಿಟಿ ಆಫ್ ಕ್ರೆಡಿಟರ್ಸ್) ಅನುಮೋದಿಸಿದೆ ಎಂದು ಸಚಿವರು ತಿಳಿಸಿದ್ದು, ಈ ಯೋಜನೆಯನ್ನು ಮಾರ್ಚ್ 6, 2020 ರಂದು ಮುಂಬೈನ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್‌ಗೆ (ಎನ್‌ಸಿಎಲ್‌ಟಿ) ಸಲ್ಲಿಕೆ ಮಾಡಲಾಗಿದೆ. ಆದರೆ, ಈ ಯೋಜನೆಗೆ ಟ್ರಿಬ್ಯೂನಲ್‌ನಿಂದ ಇನ್ನೂ ಅನುಮೋದನೆ ಬಾಕಿಯಿದೆ ಎಂದಿದ್ದಾರೆ.

ಎಸ್‌ಬಿಐ ಈ ಹಿಂದೆ, ಅಂದರೆ ನವೆಂಬರ್ 2020 ರಲ್ಲಿ ಖಾತೆ ಮತ್ತು ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿತ್ತು ಮತ್ತು ಜನವರಿ 2021ರಲ್ಲಿ ಸಿಬಿಐಗೆ ದೂರು ಸಲ್ಲಿಸಿತ್ತು. ಆದಾಗ್ಯೂ, ಜನವರಿ 6, 2021ರಂದು ದೆಹಲಿ ಹೈಕೋರ್ಟ್ ನೀಡಿದ ‘ಯಥಾಸ್ಥಿತಿ’ ಆದೇಶದ ಹಿನ್ನೆಲೆಯಲ್ಲಿ ದೂರನ್ನು ಹಿಂತಿರುಗಿಸಲಾಗಿದೆ ಎಂದು ಸಚಿವ ಚೌಧರಿ ಹೇಳಿದ್ದಾರೆ.

ಸಾಲದಾತರು ಖಾತೆಗಳನ್ನು ವಂಚನೆ ಎಂದು ವರ್ಗೀಕರಿಸುವ ಮೊದಲು ಸಾಲಗಾರರಿಗೆ ತಮ್ಮನ್ನು ತಾವು ಪ್ರತಿನಿಧಿಸಲು ಅವಕಾಶವನ್ನು ಒದಗಿಸಬೇಕೆಂದು ಮಾರ್ಚ್ 2023ರಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದೇಶದ ಮೇರೆಗೆ, ಖಾತೆಯಲ್ಲಿನ ವಂಚನೆ ವರ್ಗೀಕರಣವನ್ನು ಸೆಪ್ಟೆಂಬರ್ 2023ರಲ್ಲಿ ಎಸ್‌ಬಿಐ ರದ್ದುಗೊಳಿಸಿತು ಎಂದು ಸಚಿವರು ಹೇಳಿದ್ದಾರೆ.

ಜುಲೈ 15, 2024 ರಂದು ಆರ್‌ಬಿಐ ಹೊರಡಿಸಿದ ಸುತ್ತೋಲೆಯ ಪ್ರಕಾರ, ವರ್ಗೀಕರಣ ಪ್ರಕ್ರಿಯೆಯನ್ನು ಪುನಃ ನಡೆಸಲಾಯಿತು ಮತ್ತು ಖಾತೆಯನ್ನು ಮತ್ತೊಮ್ಮೆ ‘ವಂಚನೆ’ ಎಂದು ವರ್ಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

2019ರಲ್ಲಿ, ರಿಲಯನ್ಸ್ ಕಮ್ಯುನಿಕೇಷನ್ಸ್‌ ಸುಮಾರು 45,000 ಕೋಟಿ ರೂ.ಗಳ ಸಾಲವನ್ನು ಪಾವತಿಸಲು ಆಸ್ತಿಗಳನ್ನು ಮಾರಾಟ ಮಾಡಲು ವಿಫಲವಾದ ನಂತರ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ ಮೂಲಕ ದಿವಾಳಿತನಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ ಎಂದು ಹೇಳಿತ್ತು.

ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...