Homeಮುಖಪುಟರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು 'ವಂಚನೆ' ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು...

ರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು ಸಿದ್ದತೆ

- Advertisement -
- Advertisement -

ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ನಿರ್ದೇಶಕ ಅನಿಲ್ ಅಂಬಾನಿ ಅವರನ್ನು ‘ವಂಚನೆ’ ಎಂದು ವರ್ಗೀಕರಿಸಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), ಈ ಕುರಿತು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ದೂರು ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ.

ರಿಸರ್ವ್ ಬ್ಯಾಂಕ್‌ನ ವಂಚನೆ ಅಪಾಯ ನಿರ್ವಹಣೆಯ ಕುರಿತಾದ ನಿರ್ದೇಶನಗಳು ಮತ್ತು ವಂಚನೆಗಳ ವರ್ಗೀಕರಣ, ವರದಿ ಹಾಗೂ ನಿರ್ವಹಣೆಯ ಕುರಿತಾದ ನೀತಿಗೆ ಅನುಗುಣವಾಗಿ ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ನಿರ್ದೇಶಕರನ್ನು ಜೂನ್ 13 ರಂದು ‘ವಂಚನೆ’ ಎಂದು ಎಸ್‌ಬಿಐ ವರ್ಗೀಕರಿಸಿದೆ. ಇದೀಗ ಸಿಬಿಐಗೆ ದೂರು ಸಲ್ಲಿಸಲು ಮುಂದಾಗಿದೆ ಎಂದು ಲೋಕಸಭೆಗೆ ನಿಡಿದ ಲಿಖಿತ ಉತ್ತರದಲ್ಲಿ ಪಂಕಜ್ ಚೌಧರಿ ತಿಳಿಸಿದ್ದಾರೆ.

ವಂಚನೆ ಎಂದು ವರ್ಗೀಕರಿಸಿರುವ ಕುರಿತು ಎಸ್‌ಬಿಐ ಜೂನ್ 24 ರಂದು ಆರ್‌ಬಿಐಗೆ ವರದಿ ಮಾಡಿದೆ. ಜುಲೈ 1 ರಂದು, ರಿಲಯನ್ಸ್ ಕಮ್ಯುನಿಕೇಷನ್ಸ್ ತನ್ನ ಬಹಿರಂಗಪಡಿಸುವಿಕೆಯ ಅನುಸರಣೆಯ ಭಾಗವಾಗಿ ವಂಚನೆ ವರ್ಗೀಕರಣದ ಬಗ್ಗೆ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ಗೆ ಮಾಹಿತಿ ನೀಡಿದೆ ಎಂದು ಸಚಿವ ಚೌಧರಿ ವಿವರಿಸಿದ್ದಾರೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ಗೆ ಎಸ್‌ಬಿಐ ನೀಡಿರುವ ಸಾಲದಲ್ಲಿ ಫಂಡ್-ಬೇಸ್ಡ್ ಪ್ರಿನ್ಸಿಪಲ್ ಬಾಕಿ 2,227.64 ಕೋಟಿ ರೂಪಾಯಿಗಳು. ಇದರ ಜೊತೆಗೆ, ಆಗಸ್ಟ್ 26, 2016 ರಿಂದ ಸಂಗ್ರಹವಾದ ಬಡ್ಡಿ ಮತ್ತು ಇತರ ವೆಚ್ಚಗಳು ಹಾಗೂ ನಾನ್-ಫಂಡ್ ಬೇಸ್ಡ್ ಬ್ಯಾಂಕ್ ಗ್ಯಾರಂಟಿ 786.52 ಕೋಟಿ ರೂಪಾಯಿ ಸೇರಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

2016ರ ದಿವಾಳಿತನ ಸಂಹಿತೆಯ ಅಡಿಯಲ್ಲಿ ಟೆಲಿಕಾಂ ಸಂಸ್ಥೆಯು ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಗೆ ಒಳಗಾಗುತ್ತಿದೆ ಎಂದು ತಿಳಿಸಿದ್ದಾರೆ.

ದಿವಾಳಿತನ ಪ್ರಕರಣಗಳನ್ನು ಪರಿಹರಿಸಲು ಮತ್ತು ನಿಷ್ಕ್ರಿಯ ಸ್ವತ್ತುಗಳನ್ನು ತ್ವರಿತವಾಗಿ ಬಿಡುಗಡೆ ಮಾಡಲು ಈ ಸಂಹಿತೆಯು ಕಾನೂನು ಚೌಕಟ್ಟನ್ನು ಒದಗಿಸುತ್ತದೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ಗೆ ಸಂಬಂಧಿಸಿದ ಸಾಲ ಪರಿಹಾರ ಯೋಜನೆಯನ್ನು (ರೆಸಲ್ಯೂಶನ್ ಪ್ಲಾನ್) ಕ್ರೆಡಿಟರ್‌ಗಳ ಸಮಿತಿಯು (ಕಮಿಟಿ ಆಫ್ ಕ್ರೆಡಿಟರ್ಸ್) ಅನುಮೋದಿಸಿದೆ ಎಂದು ಸಚಿವರು ತಿಳಿಸಿದ್ದು, ಈ ಯೋಜನೆಯನ್ನು ಮಾರ್ಚ್ 6, 2020 ರಂದು ಮುಂಬೈನ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್‌ಗೆ (ಎನ್‌ಸಿಎಲ್‌ಟಿ) ಸಲ್ಲಿಕೆ ಮಾಡಲಾಗಿದೆ. ಆದರೆ, ಈ ಯೋಜನೆಗೆ ಟ್ರಿಬ್ಯೂನಲ್‌ನಿಂದ ಇನ್ನೂ ಅನುಮೋದನೆ ಬಾಕಿಯಿದೆ ಎಂದಿದ್ದಾರೆ.

ಎಸ್‌ಬಿಐ ಈ ಹಿಂದೆ, ಅಂದರೆ ನವೆಂಬರ್ 2020 ರಲ್ಲಿ ಖಾತೆ ಮತ್ತು ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿತ್ತು ಮತ್ತು ಜನವರಿ 2021ರಲ್ಲಿ ಸಿಬಿಐಗೆ ದೂರು ಸಲ್ಲಿಸಿತ್ತು. ಆದಾಗ್ಯೂ, ಜನವರಿ 6, 2021ರಂದು ದೆಹಲಿ ಹೈಕೋರ್ಟ್ ನೀಡಿದ ‘ಯಥಾಸ್ಥಿತಿ’ ಆದೇಶದ ಹಿನ್ನೆಲೆಯಲ್ಲಿ ದೂರನ್ನು ಹಿಂತಿರುಗಿಸಲಾಗಿದೆ ಎಂದು ಸಚಿವ ಚೌಧರಿ ಹೇಳಿದ್ದಾರೆ.

ಸಾಲದಾತರು ಖಾತೆಗಳನ್ನು ವಂಚನೆ ಎಂದು ವರ್ಗೀಕರಿಸುವ ಮೊದಲು ಸಾಲಗಾರರಿಗೆ ತಮ್ಮನ್ನು ತಾವು ಪ್ರತಿನಿಧಿಸಲು ಅವಕಾಶವನ್ನು ಒದಗಿಸಬೇಕೆಂದು ಮಾರ್ಚ್ 2023ರಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದೇಶದ ಮೇರೆಗೆ, ಖಾತೆಯಲ್ಲಿನ ವಂಚನೆ ವರ್ಗೀಕರಣವನ್ನು ಸೆಪ್ಟೆಂಬರ್ 2023ರಲ್ಲಿ ಎಸ್‌ಬಿಐ ರದ್ದುಗೊಳಿಸಿತು ಎಂದು ಸಚಿವರು ಹೇಳಿದ್ದಾರೆ.

ಜುಲೈ 15, 2024 ರಂದು ಆರ್‌ಬಿಐ ಹೊರಡಿಸಿದ ಸುತ್ತೋಲೆಯ ಪ್ರಕಾರ, ವರ್ಗೀಕರಣ ಪ್ರಕ್ರಿಯೆಯನ್ನು ಪುನಃ ನಡೆಸಲಾಯಿತು ಮತ್ತು ಖಾತೆಯನ್ನು ಮತ್ತೊಮ್ಮೆ ‘ವಂಚನೆ’ ಎಂದು ವರ್ಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

2019ರಲ್ಲಿ, ರಿಲಯನ್ಸ್ ಕಮ್ಯುನಿಕೇಷನ್ಸ್‌ ಸುಮಾರು 45,000 ಕೋಟಿ ರೂ.ಗಳ ಸಾಲವನ್ನು ಪಾವತಿಸಲು ಆಸ್ತಿಗಳನ್ನು ಮಾರಾಟ ಮಾಡಲು ವಿಫಲವಾದ ನಂತರ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ ಮೂಲಕ ದಿವಾಳಿತನಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ ಎಂದು ಹೇಳಿತ್ತು.

ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...