Homeಮುಖಪುಟಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವೆಬ್‌ಸೈಟ್‌ನಿಂದ ಡಿಲಿಟ್ ಮಾಡಿದ ಎಸ್‌ಬಿಐ

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವೆಬ್‌ಸೈಟ್‌ನಿಂದ ಡಿಲಿಟ್ ಮಾಡಿದ ಎಸ್‌ಬಿಐ

- Advertisement -
- Advertisement -

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ತನ್ನ ವೆಬ್‌ಸೈಟ್‌ನಿಂದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದ ದಾಖಲೆಗಳನ್ನು ಡಿಲಿಟ್ ಮಾಡಿದೆ (ಅಳಿಸಿ ಹಾಕಿದೆ). ಚುನಾವಣಾ ಬಾಂಡ್ ಕುರಿತು ಮಾಹಿತಿ ಒದಗಿಸಲು ಜೂನ್ 30ರವರೆಗೆ ಸಮಯ ವಿಸ್ತರಿಸುವಂತೆ ಕೋರಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ದಾನಿಗಳಿಗೆ ಕಾರ್ಯನಿರ್ವಹಣೆಯ ಮಾರ್ಗಸೂಚಿಗಳು ಮತ್ತು ಪದೇ ಪದೇ ಕೇಳಲಾಗುವ ಪ್ರಶ್ನೆಗಳನ್ನು (ಎಫ್‌ಎಕ್ಯೂ) ಎಸ್‌ಬಿಐ ತನ್ನ ವೆಬ್‌ಸೈಟ್‌ನಿಂದ್ ಡಿಲಿಟ್ ಮಾಡಿದೆ.

‘ದಾನಿಗಳಿಗಾಗಿ ಕಾರ್ಯನಿರ್ವಹಣೆಯ ಮಾರ್ಗಸೂಚಿಗಳು’ ಎಂಬ ಶೀರ್ಷಿಕೆಯ ದಾಖಲೆ ಜನವರಿ 2, 2018ರಂದು ಬಿಡುಗಡೆಯಾದ ಗೆಜೆಟ್ ಅಧಿಸೂಚನೆಯಾಗಿದೆ. ಇದರಲ್ಲಿ ಚುನಾವಣಾ ಬಾಂಡ್ ಅನ್ನು ಯಾರು ಖರೀದಿಸಬಹುದು?, ಬಾಂಡ್‌ಗಳು ಯಾವ ಕೆಟಗರಿಯಲ್ಲಿ ಲಭ್ಯವಿವೆ?, ಬಾಂಡ್ ಖರೀದಿಗೆ ಅಗತ್ಯವಿರುವ ದಾಖಲೆಗಳು ಯಾವುವು? ಬಾಂಡ್‌ಗಳನ್ನು ಖರೀದಿಸುವುದು ಹೇಗೆ? (ನೆಫ್ಟ್, ಆನ್‌ಲೈನ್ ವಹಿವಾಟು ಇತ್ಯಾದಿ) ಮತ್ತು ಬಾಂಡ್‌ಗಳ ಖರೀದಿಗೆ ಅಧಿಕಾರ ಹೊಂದಿರುವ ಎಸ್‌ಬಿಐ ಶಾಖೆಗಳು ಯಾವುವು? ಈ ಮಾಹಿತಿಗಳು ಒಳಗೊಂಡಿತ್ತು.

ಪದೇ ಪದೇ ಕೇಳಲಾಗುವ ಪ್ರಶ್ನೆಗಳ (ಎಫ್‌ಎಕ್ಯೂ) ದಾಖಲೆಯಲ್ಲಿ ಕೆವೈಸಿ ಅವಶ್ಯಕತೆಗಳು ಮತ್ತು ಬಾಂಡ್‌ಗಳ ಖರೀದಿಗೆ ಅಗತ್ಯವಿರುವ ಪೌರತ್ವ ಪುರಾವೆಗಳಂತಹ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಅಗತ್ಯ ಮಾಹಿತಿಗಳನ್ನು ಎಸ್‌ಬಿಐ ಒದಗಿಸಿತ್ತು.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ಫೆಬ್ರವರಿ 15,2024ರಂದು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿತ್ತು. ಈ ವೇಳೆ, ಏಪ್ರಿಲ್ 12,2019 ರಿಂದ ಫೆ.15ವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಕೊಡುಗೆಗಳನ್ನು ಪಡೆದ ರಾಜಕೀಯ ಪಕ್ಷಗಳ ವಿವರಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಮಾರ್ಚ್‌ 6ರೊಳಗೆ ಸಲ್ಲಿಸುವಂತೆ ಎಸ್‌ಬಿಐಗೆ ನಿರ್ದೇಶಿಸಿತ್ತು. ಅಲ್ಲದೆ, ಮಾರ್ಚ್‌ 13ರೊಳಗೆ ಎಸ್‌ಬಿಐ ನೀಡಿದ ಮಾಹಿತಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ಇತ್ತೀಚೆಗೆ ಮಾರಾಟ ಮಾಡಿರುವ ಬಾಂಡ್‌ಗಳು ಸೇರಿದಂತೆ ಒಟ್ಟು 16,518.11 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಎಸ್‌ಬಿಐ ಮಾರಾಟ ಮಾಡಿದೆ.

ಬಾಂಡ್ ವಿವರಗಳನ್ನು ಚುನಾವಣಾ ಆಯೋಗಕ್ಕೆ ಒದಗಿಸಲು ಜೂನ್ 30ರವರೆಗೆ ಸಮಯ ವಿಸ್ತರಣೆ ಮಾಡುವಂತೆ ಎಸ್‌ಬಿಐ ಸುಪ್ರೀಂ ಕೋರ್ಟ್‌ನ್ನು ಕೋರಿದೆ. ರಾಜಕೀಯ ಪಕ್ಷಗಳಿಗೆ ಗುಟ್ಟಾಗಿ ದೇಣಿಗೆ ನೀಡಿದವರ ಮಾಹಿತಿ ಒದಗಿಸುವುದು ಕಷ್ಟದ ಕೆಲಸ ಎಂದಿದೆ. ಆ ಕೆಲಸ ತಿಂಗಳುಗಟ್ಟಲೆ ಸಮಯ ತೆಗೆದುಕೊಳ್ಳುತ್ತದೆ ಎಂಬುವುದು ಈಗ ಎಸ್‌ಬಿಐ ನ್ಯಾಯಾಲಯ ನೀಡುತ್ತಿರುವ ಸಬೂಬು.

ಆದರೆ, ಸಾಮಾಜಿಕ ಹೋರಾಟಗಾರ ಕೊಮೋಡೋರ್ ಲೋಕೇಶ್ ಬಾತ್ರಾ ಅವರು ‘ರಿಪೋರ್ಟರ್ಸ್ ಕಲೆಕ್ಟಿವ್‌’ ಜೊತೆ ಹಂಚಿಕೊಂಡ ದಾಖಲೆಗಳ ಪ್ರಕಾರ, ಸರ್ಕಾರಕ್ಕೆ ಎಸ್‌ಬಿಐ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಅತಿ ಕಡಿಮೆ ಸಮಯದಲ್ಲಿ, ಅಂದರೆ ಕೆಲವೊಮ್ಮೆ ಬರೀ 48 ಗಂಟೆಗಳಲ್ಲಿ ಒದಗಿಸಿರುವುದನ್ನು ಸಾಬೀತುಪಡಿಸುವ ಹಲವು ಪ್ರಮುಖ ಪುರಾವೆಗಳಿವೆ.

ಕೇಂದ್ರ ಹಣಕಾಸು ಸಚಿವಾಲಯದ ಸೂಚನೆಯ ಮೇರೆಗೆ ಎಸ್‌ಬಿಐ ಬಾಂಡ್‌ಗಳನ್ನು ನಗದುಗೊಳಿಸುವ ಗಡುವು ಮುಗಿದ 48 ಗಂಟೆಗಳ ಒಳಗೆ ದೇಶದಾದ್ಯಂತ ಚುನಾವಣಾ ಬಾಂಡ್‌ಗಳ ಡೇಟಾವನ್ನು ಒಟ್ಟುಗೂಡಿಸಿದ್ದಿದೆ ಎಂದು ದಾಖಲೆಗಳು ಬಹಿರಂಗಪಡಿಸುತ್ತವೆ.

ಇದನ್ನೂ ಓದಿ: ಚುನಾವಣಾ ಬಾಂಡ್ ವಿವರ: ಸುಪ್ರೀಂ ಕೋರ್ಟ್ ಕೇಳಿದರೆ ತಿಂಗಳುಗಳು ಬೇಕು, ಸರ್ಕಾರ ಕೇಳಿದರೆ ಗಂಟೆಗಳು ಸಾಕು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...