Homeಮುಖಪುಟಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವೆಬ್‌ಸೈಟ್‌ನಿಂದ ಡಿಲಿಟ್ ಮಾಡಿದ ಎಸ್‌ಬಿಐ

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವೆಬ್‌ಸೈಟ್‌ನಿಂದ ಡಿಲಿಟ್ ಮಾಡಿದ ಎಸ್‌ಬಿಐ

- Advertisement -
- Advertisement -

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ತನ್ನ ವೆಬ್‌ಸೈಟ್‌ನಿಂದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದ ದಾಖಲೆಗಳನ್ನು ಡಿಲಿಟ್ ಮಾಡಿದೆ (ಅಳಿಸಿ ಹಾಕಿದೆ). ಚುನಾವಣಾ ಬಾಂಡ್ ಕುರಿತು ಮಾಹಿತಿ ಒದಗಿಸಲು ಜೂನ್ 30ರವರೆಗೆ ಸಮಯ ವಿಸ್ತರಿಸುವಂತೆ ಕೋರಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ದಾನಿಗಳಿಗೆ ಕಾರ್ಯನಿರ್ವಹಣೆಯ ಮಾರ್ಗಸೂಚಿಗಳು ಮತ್ತು ಪದೇ ಪದೇ ಕೇಳಲಾಗುವ ಪ್ರಶ್ನೆಗಳನ್ನು (ಎಫ್‌ಎಕ್ಯೂ) ಎಸ್‌ಬಿಐ ತನ್ನ ವೆಬ್‌ಸೈಟ್‌ನಿಂದ್ ಡಿಲಿಟ್ ಮಾಡಿದೆ.

‘ದಾನಿಗಳಿಗಾಗಿ ಕಾರ್ಯನಿರ್ವಹಣೆಯ ಮಾರ್ಗಸೂಚಿಗಳು’ ಎಂಬ ಶೀರ್ಷಿಕೆಯ ದಾಖಲೆ ಜನವರಿ 2, 2018ರಂದು ಬಿಡುಗಡೆಯಾದ ಗೆಜೆಟ್ ಅಧಿಸೂಚನೆಯಾಗಿದೆ. ಇದರಲ್ಲಿ ಚುನಾವಣಾ ಬಾಂಡ್ ಅನ್ನು ಯಾರು ಖರೀದಿಸಬಹುದು?, ಬಾಂಡ್‌ಗಳು ಯಾವ ಕೆಟಗರಿಯಲ್ಲಿ ಲಭ್ಯವಿವೆ?, ಬಾಂಡ್ ಖರೀದಿಗೆ ಅಗತ್ಯವಿರುವ ದಾಖಲೆಗಳು ಯಾವುವು? ಬಾಂಡ್‌ಗಳನ್ನು ಖರೀದಿಸುವುದು ಹೇಗೆ? (ನೆಫ್ಟ್, ಆನ್‌ಲೈನ್ ವಹಿವಾಟು ಇತ್ಯಾದಿ) ಮತ್ತು ಬಾಂಡ್‌ಗಳ ಖರೀದಿಗೆ ಅಧಿಕಾರ ಹೊಂದಿರುವ ಎಸ್‌ಬಿಐ ಶಾಖೆಗಳು ಯಾವುವು? ಈ ಮಾಹಿತಿಗಳು ಒಳಗೊಂಡಿತ್ತು.

ಪದೇ ಪದೇ ಕೇಳಲಾಗುವ ಪ್ರಶ್ನೆಗಳ (ಎಫ್‌ಎಕ್ಯೂ) ದಾಖಲೆಯಲ್ಲಿ ಕೆವೈಸಿ ಅವಶ್ಯಕತೆಗಳು ಮತ್ತು ಬಾಂಡ್‌ಗಳ ಖರೀದಿಗೆ ಅಗತ್ಯವಿರುವ ಪೌರತ್ವ ಪುರಾವೆಗಳಂತಹ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಅಗತ್ಯ ಮಾಹಿತಿಗಳನ್ನು ಎಸ್‌ಬಿಐ ಒದಗಿಸಿತ್ತು.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ಫೆಬ್ರವರಿ 15,2024ರಂದು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿತ್ತು. ಈ ವೇಳೆ, ಏಪ್ರಿಲ್ 12,2019 ರಿಂದ ಫೆ.15ವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಕೊಡುಗೆಗಳನ್ನು ಪಡೆದ ರಾಜಕೀಯ ಪಕ್ಷಗಳ ವಿವರಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಮಾರ್ಚ್‌ 6ರೊಳಗೆ ಸಲ್ಲಿಸುವಂತೆ ಎಸ್‌ಬಿಐಗೆ ನಿರ್ದೇಶಿಸಿತ್ತು. ಅಲ್ಲದೆ, ಮಾರ್ಚ್‌ 13ರೊಳಗೆ ಎಸ್‌ಬಿಐ ನೀಡಿದ ಮಾಹಿತಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ಇತ್ತೀಚೆಗೆ ಮಾರಾಟ ಮಾಡಿರುವ ಬಾಂಡ್‌ಗಳು ಸೇರಿದಂತೆ ಒಟ್ಟು 16,518.11 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಎಸ್‌ಬಿಐ ಮಾರಾಟ ಮಾಡಿದೆ.

ಬಾಂಡ್ ವಿವರಗಳನ್ನು ಚುನಾವಣಾ ಆಯೋಗಕ್ಕೆ ಒದಗಿಸಲು ಜೂನ್ 30ರವರೆಗೆ ಸಮಯ ವಿಸ್ತರಣೆ ಮಾಡುವಂತೆ ಎಸ್‌ಬಿಐ ಸುಪ್ರೀಂ ಕೋರ್ಟ್‌ನ್ನು ಕೋರಿದೆ. ರಾಜಕೀಯ ಪಕ್ಷಗಳಿಗೆ ಗುಟ್ಟಾಗಿ ದೇಣಿಗೆ ನೀಡಿದವರ ಮಾಹಿತಿ ಒದಗಿಸುವುದು ಕಷ್ಟದ ಕೆಲಸ ಎಂದಿದೆ. ಆ ಕೆಲಸ ತಿಂಗಳುಗಟ್ಟಲೆ ಸಮಯ ತೆಗೆದುಕೊಳ್ಳುತ್ತದೆ ಎಂಬುವುದು ಈಗ ಎಸ್‌ಬಿಐ ನ್ಯಾಯಾಲಯ ನೀಡುತ್ತಿರುವ ಸಬೂಬು.

ಆದರೆ, ಸಾಮಾಜಿಕ ಹೋರಾಟಗಾರ ಕೊಮೋಡೋರ್ ಲೋಕೇಶ್ ಬಾತ್ರಾ ಅವರು ‘ರಿಪೋರ್ಟರ್ಸ್ ಕಲೆಕ್ಟಿವ್‌’ ಜೊತೆ ಹಂಚಿಕೊಂಡ ದಾಖಲೆಗಳ ಪ್ರಕಾರ, ಸರ್ಕಾರಕ್ಕೆ ಎಸ್‌ಬಿಐ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಅತಿ ಕಡಿಮೆ ಸಮಯದಲ್ಲಿ, ಅಂದರೆ ಕೆಲವೊಮ್ಮೆ ಬರೀ 48 ಗಂಟೆಗಳಲ್ಲಿ ಒದಗಿಸಿರುವುದನ್ನು ಸಾಬೀತುಪಡಿಸುವ ಹಲವು ಪ್ರಮುಖ ಪುರಾವೆಗಳಿವೆ.

ಕೇಂದ್ರ ಹಣಕಾಸು ಸಚಿವಾಲಯದ ಸೂಚನೆಯ ಮೇರೆಗೆ ಎಸ್‌ಬಿಐ ಬಾಂಡ್‌ಗಳನ್ನು ನಗದುಗೊಳಿಸುವ ಗಡುವು ಮುಗಿದ 48 ಗಂಟೆಗಳ ಒಳಗೆ ದೇಶದಾದ್ಯಂತ ಚುನಾವಣಾ ಬಾಂಡ್‌ಗಳ ಡೇಟಾವನ್ನು ಒಟ್ಟುಗೂಡಿಸಿದ್ದಿದೆ ಎಂದು ದಾಖಲೆಗಳು ಬಹಿರಂಗಪಡಿಸುತ್ತವೆ.

ಇದನ್ನೂ ಓದಿ: ಚುನಾವಣಾ ಬಾಂಡ್ ವಿವರ: ಸುಪ್ರೀಂ ಕೋರ್ಟ್ ಕೇಳಿದರೆ ತಿಂಗಳುಗಳು ಬೇಕು, ಸರ್ಕಾರ ಕೇಳಿದರೆ ಗಂಟೆಗಳು ಸಾಕು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...