Homeಮುಖಪುಟಚುನಾವಣಾ ಬಾಂಡ್‌: ಎಸ್ಒಪಿ ಮಾಹಿತಿ ನೀಡಲು ಮತ್ತೆ ನಿರಾಕರಿಸಿದ ಎಸ್‌ಬಿಐ

ಚುನಾವಣಾ ಬಾಂಡ್‌: ಎಸ್ಒಪಿ ಮಾಹಿತಿ ನೀಡಲು ಮತ್ತೆ ನಿರಾಕರಿಸಿದ ಎಸ್‌ಬಿಐ

- Advertisement -
- Advertisement -

ದೇಶದಲ್ಲಿ ಭಾರೀ ಸದ್ದು ಮಾಡಿದ್ದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಎಸ್‌ಒಪಿ ಮಾಹಿತಿಯನ್ನು ನೀಡಲು ಭಾರತೀಯ ಸ್ಟೇಟ್‌ ಬ್ಯಾಂಕ್‌ ಮತ್ತೆ ನಿರಾಕರಿಸಿದ್ದು, ಕೇಂದ್ರ ಮಾಹಿತಿ ಆಯೋಗಕ್ಕೆ (ಸಿಐಸಿ) ನಿರಾಕರಣೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಮುಂದಾಗಿದ್ದಾರೆ.

ಮಾಹಿತಿ ಹಕ್ಕು ಕಾಯಿದೆಯಡಿ ಸಲ್ಲಿಸಲಾದ ಮೊದಲ ಮೇಲ್ಮನವಿಗೆ ಪ್ರತಿಕ್ರಿಯೆಯಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಚುನಾವಣಾ ಬಾಂಡ್‌ಗಳ ಮಾರಾಟ ಮತ್ತು ನಗದೀಕರಣ ಕುರಿತಂತೆ ಶಾಖೆಗಳಿಗೆ ನೀಡಿದ ಎಸ್ಒಪಿ (ಸ್ಟಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್) ಪ್ರತಿಯನ್ನು ಒದಗಿಸಲು ಮತ್ತೆ ನಿರಾಕರಿಸಿದೆ. ಮಾಹಿತಿ ಹಕ್ಕು ಕಾಯಿದೆಯಡಿ ಕೋರಲಾದ ಮಾಹಿತಿಯನ್ನು ಬ್ಯಾಂಕ್ “ಕಮರ್ಷಿಯಲ್ ಕಾನ್ಫಿಡೆನ್ಸ್” ಆಗಿ ಇರಿಸಿಕೊಂಡಿದೆ ಮತ್ತು ಅದು “ಬ್ಯಾಂಕ್‌ನ ಬೌದ್ಧಿಕ ಆಸ್ತಿ” ಎಂದು ಮಾಹಿತಿ ನಿರಾಕರಣೆಗೆ ಬ್ಯಾಂಕ್ ಕಾರಣ ನೀಡಿದೆ. ಮೇಲಾಗಿ ಆಂತರಿಕ ಮಾರ್ಗಸೂಚಿಗಳು ಚುನಾವಣಾ ಬಾಂಡ್ ಕುರಿತಂತೆ ಕಾರ್ಯನಿರ್ವಹಿಸುವ ಸಿಬ್ಬಂದಿಗಾಗಿ ಮಾತ್ರ ಆಗಿವೆ ಎಂದೂ ಬ್ಯಾಂಕ್ ಹೇಳಿದೆ.

ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಾಜ್, ಎಪ್ರಿಲ್ 2017ರಂದು ಬ್ಯಾಂಕ್ ಇದೀಗ ರದ್ದುಗೊಂಡಿರುವ ಬಾಂಡ್‌ಗಳ ಕುರಿತಂತೆ ಜಾರಿಗೊಳಿಸಲಾದ ಎಸ್ಒಪಿ ಕುರಿತು ಮಾಹಿತಿ ಕೋರಿದ್ದರು. ಮಾರ್ಚ್ 30ರಂದು ಬ್ಯಾಂಕ್ ಮಾಹಿತಿಯನ್ನು ನೀಡಲು ನಿರಾಕರಿಸಿದ ನಂತರ, ಅವರು ಎಸ್‌ಬಿಐನ ಮೇಲ್ಮನವಿ ಪ್ರಾಧಿಕಾರಕ್ಕೆ (ಎಫ್‌ಎಎ)ಗೆ ಮನವಿಯನ್ನು ಸಲ್ಲಿಸಿದ್ದರು. ಎಫ್‌ಎಎಯಿಂದ ಮೇ 17ರಂದು ಸ್ವೀಕರಿಸಿದ ಪ್ರತಿಕ್ರಿಯೆಯಿಂದ ಅತೃಪ್ತರಾಗಿರುವ ಭಾರದ್ವಾಜ್ ಈಗ ಕೇಂದ್ರ ಮಾಹಿತಿ ಆಯೋಗಕ್ಕೆ(ಸಿಐಸಿ) ನಿರಾಕರಣೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.

ಮೇ 17ರ ಆದೇಶದಲ್ಲಿ ಮಾಹಿತಿಯು ಬ್ಯಾಂಕ್‌ನ ಬೌದ್ಧಿಕ ಆಸ್ತಿಯಾಗಿದೆ. ಆದ್ದರಿಂದ RTI ಕಾಯಿದೆಯಡಿ ಸೆಕ್ಷನ್ 8(1)(d) ಅಡಿಯಲ್ಲಿ ಸರಿಯಾಗಿ ನಿರಾಕರಿಸಲಾಗಿದೆ. ವಾಣಿಜ್ಯ ವಿಶ್ವಾಸ, ವ್ಯಾಪಾರ ರಹಸ್ಯಗಳು ಅಥವಾ ಬೌದ್ಧಿಕ ಆಸ್ತಿ ಸೇರಿದಂತೆ ಮಾಹಿತಿ ಬಹಿರಂಗಪಡಿಸುವಿಕೆಯು ಮೂರನೇ ವ್ಯಕ್ತಿಯ ಸ್ಪರ್ಧಾತ್ಮಕ ಸ್ಥಾನಕ್ಕೆ ಹಾನಿಯುಂಟುಮಾಡುತ್ತದೆ ಎಂದು ಹೇಳಲಾಗಿದೆ.

ಎಸ್‌ಬಿಐ ಬಾಂಡ್‌ಗಳ ವಹಿವಾಟು ಡೇಟಾವನ್ನು ಹೇಗೆ ನಿರ್ವಹಿಸುತ್ತದೆ ಎಂಬುದರ ಕುರಿತು ಅಸ್ಪಷ್ಟತೆಯಿಂದಾಗಿ ಎಸ್‌ಒಪಿಗಳನ್ನು ವಿನಂತಿಸಲಾಗಿದೆ. ಬಾಂಡ್‌ಗಳ ಸಂಭಾವ್ಯ ಟ್ರ್ಯಾಕಿಂಗ್ ಬಗ್ಗೆ ಕಳವಳಗಳು ಇದ್ದವು. ಏಕೆಂದರೆ    ಎಸ್‌ಬಿಐ ಖರೀದಿದಾರ ಮತ್ತು ರಿಡೀಮರ್ ಇಬ್ಬರಿಗೂ ವಿಶಿಷ್ಟ ಸಂಖ್ಯೆಯನ್ನು ದಾಖಲಿಸಿದೆ. ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸಿದ ನಂತರ ಮತ್ತು ಎಲ್ಲಾ ವಿವರಗಳನ್ನು ಬಹಿರಂಗಪಡಿಸಲು ಆದೇಶಿಸಿದ ನಂತರವೂ, ಎಸ್‌ಬಿಐ ನಿರ್ಣಾಯಕ ಮಾಹಿತಿಯನ್ನು ತಡೆಹಿಡಿಯುವುದನ್ನು ಮುಂದುವರೆಸಿದೆ ಎಂದು ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...