Homeಮುಖಪುಟಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ಚುನಾವಣೆಗೂ ಮುನ್ನ ಮೋದಿಯ ನಿಜಮುಖ ಮರೆ ಮಾಚಲು ಕೊನೆಯ ಪ್ರಯತ್ನ ಎಂದ ರಾಹುಲ್ ಗಾಂಧಿ

- Advertisement -
- Advertisement -

ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ನೀಡಲು ಜೂನ್ 30ರವರೆಗೆ ಗಡುವನ್ನು ವಿಸ್ತರಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಕಳೆದ ತಿಂಗಳು ಐತಿಹಾಸಿಕ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿತ್ತು ಮತ್ತು ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ (ಇಸಿ) ಬಾಂಡ್‌ಗಳ ಕುರಿತು ಮಾಹಿತಿ ನೀಡುವಂತೆ ಎಸ್‌ಬಿಐಗೆ ಸೂಚಿಸಿತ್ತು.

ಚುನಾವಣಾ ಬಾಂಡ್ ಅಸಂವಿಧಾನಿಕ. ಅನಾಮಧೇಯ ಬಾಂಡ್‌ಗಳು ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿತ್ತು. ರಾಜಕೀಯ ಪಕ್ಷಗಳಿಗೆ ಆರ್ಥಿಕ ಬೆಂಬಲ ನೀಡುವುದು ಖ್ವಿಡ್‌ ಪ್ರೊ ಪ್ರೊಗೆ (ಅಂದರೆ ಒಂದು ಸಹಾಯ ಮಾಡಿದ್ದಕ್ಕಾಗಿ ಇನ್ನೊಂದು ಪ್ರಯೋಜನ ಪಡೆಯುವುದು) ಕಾರಣವಾಗಬಹುದೆಂದೂ ಸುಪ್ರೀಂ ಕೋರ್ಟ್‌ ಹೇಳಿತ್ತು.

ತೀರ್ಪು ಪ್ರಕಟಿಸುವ ವೇಳೆ, ಚುನಾವಣಾ ಬಾಂಡ್‌ ನೀಡುವುದನ್ನು ನಿಲ್ಲಿಸುವಂತೆ ಮತ್ತು ಈ ರೀತಿಯಲ್ಲಿ ನೀಡಿದ ದೇಣಿಗೆಗಳ ವಿವರಗಳನ್ನು ಮಾರ್ಚ್‌ 6ರೊಳಗೆ ಚುನಾವಣಾ ಆಯೋಗಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಎಸ್‌ಬಿಐ ನೀಡಿದ ಮಾಹಿತಿಗಳನ್ನು ಮಾರ್ಚ್ 13 ರೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ಕೋರ್ಟ್‌ ಸೂಚಿಸಿತ್ತು.

ಐವರು ನ್ಯಾಯಾಧೀಶರ ಸಂವಿಧಾನ ಪೀಠ, ಕಾಳಧನ ನಿಯಂತ್ರಣಕ್ಕೆ ಚುನಾವಣಾ ಬಾಂಡ್‌ ಯೋಜನೆ ಒಂದೇ ಆಯ್ಕೆಯಲ್ಲ ಎಂದಿತ್ತು. ಕಾಳಧನ ನಿಯಂತ್ರಣವೆಂದು ಹೇಳಿಕೊಂಡು ಆರ್‌ಟಿಐ ಉಲ್ಲಂಘನೆಯಾಗಬಾರದು. ಕಾಳಧನ ನಿಯಂತ್ರಣಕ್ಕೆ ಇತರ ಪರ್ಯಾಯಗಳಿವೆ ಎಂದು ಹೇಳಿತ್ತು.

ಮೋದಿಯ ನಿಜಮುಖ ಮರೆ ಮಾಚಲು ಕೊನೆಯ ಪ್ರಯತ್ನ: ರಾಹುಲ್ ಗಾಂಧಿ

ಎಸ್‌ಬಿಐಯ ಅರ್ಜಿ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ನರೇಂದ್ರ ಮೋದಿಯವರು ದೇಣಿಗೆ ವ್ಯವಹಾರವನ್ನು ಮರೆಮಾಚಲು ತಮ್ಮ ಕೈಲಾದಷ್ಟು ಪ್ರಯತ್ನ ನಡೆಸುತ್ತಿದ್ದಾರೆ” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಚುನಾವಣಾ ಬಾಂಡ್‌ಗಳ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ದೇಶವಾಸಿಗಳ ಹಕ್ಕು ಎಂದು ಸುಪ್ರೀಂ ಕೋರ್ಟ್ ಹೇಳಿರುವಾಗ, ಎಸ್‌ಬಿಐ ಈ ಮಾಹಿತಿಯನ್ನು ಚುನಾವಣೆಯ ಮೊದಲು ಸಾರ್ವಜನಿಕಗೊಳಿಸಬಾರದು ಎಂದು ಏಕೆ ಬಯಸುತ್ತಿದೆ?” ಎಂದು ರಾಹುಲ್ ಪ್ರಶ್ನಿಸಿದ್ದಾರೆ.

“ಒಂದೇ ಕ್ಲಿಕ್‌ನಲ್ಲಿ ಪಡೆಯಬಹುದಾದ ಮಾಹಿತಿಯನ್ನು ನೀಡಲು ಜೂನ್ 30ರವರೆಗೆ ಸಮಯ ಕೇಳುವುದು, ಅದರ ಹಿಂದಿನ ಉದ್ದೇಶವನ್ನು ತೋರಿಸುತ್ತದೆ. ದೇಶದ ಪ್ರತಿಯೊಂದು ಸ್ವತಂತ್ರ ಸಂಸ್ಥೆಗಳು ತಮ್ಮ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ‘ಮೋದಾನಿ’ ಕುಟುಂಬದ ಭಾಗವಾಗುತ್ತಿದೆ. ಚುನಾವಣೆಗೂ ಮುನ್ನ ಮೋದಿಯ ನಿಜಮುಖವನ್ನು ಮರೆ ಮಾಚಲು ಇದು ಕೊನೆಯ ಪ್ರಯತ್ನ” ಎಂದಿದ್ದಾರೆ.

ಏನಿದು ಚುನಾವಣಾ ಬಾಂಡ್ ?

ಜನ ಸಾಮಾನ್ಯರು, ಕಾರ್ಪೊರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ನೀಡುವ ಒಂದು ವಿಧದ ದೇಣಿಗೆ ಕ್ರಮವಾಗಿದೆ ಚುನಾವಣಾ ಬಾಂಡ್. ಜನರು 1,000 ರೂ, 10,000 ರೂ, 1 ಲಕ್ಷ ರೂ, 10 ಲಕ್ಷ ರೂ, 1 ಕೋಟಿ ರೂ ಇತ್ಯಾದಿ ಮುಖಬೆಲೆಗಳಲ್ಲಿ ಬಾಂಡ್​ಗಳನ್ನು ಖರೀದಿಸಬಹುದಿತ್ತು. ಈ ಬಾಂಡ್​ಗಳು ಅನಾಮಧೇಯವಾಗಿತ್ತು. ಅಂದರೆ, ಇದನ್ನು ಖರೀದಿಸಿದ ವ್ಯಕ್ತಿ ಅಥವಾ ಸಂಸ್ಥೆಯ ಹೆಸರು ಬಹಿರಂಗಗೊಳ್ಳುತ್ತಿರಲಿಲ್ಲ. ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ಕೊಡಲಾಗಿದೆ ಆ ಪಕ್ಷ ಹೆಸರೂ ಬಹಿರಂಗವಾಗುತ್ತಿರಲಿಲ್ಲ.

ಜನವರಿ 2,2018ರಂದು ಅಂದಿನ ಮೋದಿ ಸರ್ಕಾರ ಚುನಾವಣಾ ಬಾಂಡ್ ಯೋಜನೆಗೆ ಅಧಿಸೂಚನೆ ಹೊರಡಿಸಿತ್ತು. ಚುನಾವಣಾ ಬಾಂಡ್​ಗಳನ್ನು ಹಣಕಾಸು ಕಾಯ್ದೆ 2017ರ ತಿದ್ದುಪಡಿ ಮೂಲಕ ಜಾರಿಗೆ ತರಲಾಗಿತ್ತು. ಈ ಬಾಂಡ್​ಗಳನ್ನು ವರ್ಷಕ್ಕೆ ನಾಲ್ಕು ಬಾರಿ, ಅಂದರೆ ಜನವರಿ, ಏಪ್ರಿಲ್, ಜುಲೈ ಹಾಗೂ ಅಕ್ಟೋಬರ್​ನಲ್ಲಿ ನೀಡಲಾಗುತ್ತಿತ್ತು. ಜನರು ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಮೂಲಕ ಅಥವಾ ವೆಬ್​ಸೈಟ್​ನಲ್ಲಿ ಆನ್​ಲೈನ್​ನಲ್ಲಿ ಇದನ್ನು ಖರೀದಿಸಬಹುದಿತ್ತು.

ಇದನ್ನೂ ಓದಿ: ಸಂಸದ, ಶಾಸಕರ ಭ್ರಷ್ಟಾಚಾರ ಸಂಸದೀಯ ಪ್ರಜಾಪ್ರಭುತ್ವದ ಅಡಿಪಾಯವನ್ನೇ ನಾಶಪಡಿಸುತ್ತದೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...